Category: ದಿನನಿತ್ಯದ ಸುದ್ದಿ

  • ನವವಧುಗಳ ಆತ್ಮಹತ್ಯೆ ಹೆಚ್ಚಳ: 
ಮದುವೆ ಮುನ್ನ ಕಡ್ಡಾಯ ಕೌನ್ಸಿಲಿಂಗ್‌ಗೆ ಸಂಸದ ಹ್ಯಾರಿಸ್ ಬೀರನ್ ಆಗ್ರಹ

    ನವವಧುಗಳ ಆತ್ಮಹತ್ಯೆ ಹೆಚ್ಚಳ: ಮದುವೆ ಮುನ್ನ ಕಡ್ಡಾಯ ಕೌನ್ಸಿಲಿಂಗ್‌ಗೆ ಸಂಸದ ಹ್ಯಾರಿಸ್ ಬೀರನ್ ಆಗ್ರಹ

    ​ದೇಶದಲ್ಲಿ ವಿವಾಹಿತ ಮಹಿಳೆಯರ ಆತ್ಮಹತ್ಯೆ ಪ್ರಮಾಣವು ಆತಂಕಕಾರಿಯಾಗಿ ಏರುತ್ತಿದ್ದು, ವಾರ್ಷಿಕವಾಗಿ 1.6 ಲಕ್ಷಕ್ಕೂ ಹೆಚ್ಚು ಮಹಿಳೆಯರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂಬ ಕಠೋರ ಸತ್ಯವನ್ನು ಸಂಸದ ಹ್ಯಾರಿಸ್ ಬೀರನ್ ರಾಜ್ಯಸಭೆಯಲ್ಲಿ ಬಿಚ್ಚಿಟ್ಟಿದ್ದಾರೆ. ಮದುವೆಯ ನಂತರದ ಕೌಟುಂಬಿಕ ಕಿರುಕುಳ ಮತ್ತು ಮಾನಸಿಕ ಸಂಘರ್ಷಗಳಿಂದಾಗಿ ಪ್ರತಿ ವರ್ಷ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮಹಿಳೆಯರು ಪ್ರಾಣ ಕಳೆದುಕೊಳ್ಳುತ್ತಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ನವವಧುಗಳ ಸುರಕ್ಷತೆಯನ್ನು ಖಚಿತಪಡಿಸಲು ವಿವಾಹದ ಕಾನೂನು ಪ್ರಕ್ರಿಯೆಯಲ್ಲಿ ಸಮೂಲ ಬದಲಾವಣೆ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

    ​ಮದುವೆ ನೋಂದಣಿ ಸಮಯದಲ್ಲಿ ಅಥವಾ ಮ್ಯಾರೇಜ್ ಸರ್ಟಿಫಿಕೇಟ್ ಪಡೆಯುವ ಮೊದಲು ದಂಪತಿಗಳಿಗೆ ‘ವಿವಾಹಪೂರ್ವ ಕೌನ್ಸಿಲಿಂಗ್’ ಅನ್ನು ಕಡ್ಡಾಯಗೊಳಿಸಬೇಕು ಎಂಬುದು ಸಂಸದರ ಪ್ರಮುಖ ಬೇಡಿಕೆಯಾಗಿದೆ. ಕೌಟುಂಬಿಕ ಒತ್ತಡ ಮತ್ತು ಹೊಂದಾಣಿಕೆಯ ಸಮಸ್ಯೆಗಳನ್ನು ನಿಭಾಯಿಸಲು ಈ ಕೌನ್ಸಿಲಿಂಗ್ ದಂಪತಿಗಳಿಗೆ ಮಾನಸಿಕ ಬಲ ನೀಡುತ್ತದೆ. ಕೇವಲ ಅಪರಾಧ ನಡೆದ ನಂತರ ಕಾನೂನು ಕ್ರಮ ಕೈಗೊಳ್ಳುವ ಬದಲು, ಮುನ್ನೆಚ್ಚರಿಕೆಯಾಗಿ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಶಾಸನಬದ್ಧಗೊಳಿಸುವುದರಿಂದ ಲಕ್ಷಾಂತರ ಮಹಿಳೆಯರ ಜೀವ ಉಳಿಸಬಹುದು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ನವವಧುಗಳ ಜೀವ ಉಳಿಸಲು ಮತ್ತು ಸುಭದ್ರ ಕುಟುಂಬ ವ್ಯವಸ್ಥೆಯನ್ನು ನಿರ್ಮಿಸಲು ಇಂತಹ ಕಾನೂನು ಸುಧಾರಣೆಗಳು ಕಾಲದ ಅಗತ್ಯವಾಗಿದೆ.

  • ಫುಡ್ ಪ್ಯಾಕೆಟ್ ಮೇಲೆ ಇನ್ಮುಂದೆ ‘ಹೈಡ್ ಅಂಡ್ ಸೀಕ್’ ಆಟ ನಡೆಯಲ್ಲ: 
ಗ್ರಾಹಕರಿಗಾಗಿ ಬದಲಾಗಲಿದೆ ನಿಯಮ!

    ಫುಡ್ ಪ್ಯಾಕೆಟ್ ಮೇಲೆ ಇನ್ಮುಂದೆ ‘ಹೈಡ್ ಅಂಡ್ ಸೀಕ್’ ಆಟ ನಡೆಯಲ್ಲ: ಗ್ರಾಹಕರಿಗಾಗಿ ಬದಲಾಗಲಿದೆ ನಿಯಮ!

    ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ಪೌಷ್ಟಿಕಾಂಶದ ವಿವರಗಳನ್ನು ಅತ್ಯಂತ ಸ್ಪಷ್ಟವಾಗಿ ಮತ್ತು ಮುಂಭಾಗದಲ್ಲೇ ಪ್ರದರ್ಶಿಸಬೇಕು ಎಂದು ಸಂಸದೀಯ ಸಮಿತಿಯು ಕೇಂದ್ರ ಸರ್ಕಾರಕ್ಕೆ ಪ್ರಮುಖ ಶಿಫಾರಸು ಮಾಡಿದೆ. ಪ್ರಸ್ತುತ ಹೆಚ್ಚಿನ ಕಂಪನಿಗಳು ಪೌಷ್ಟಿಕಾಂಶದ ಮಾಹಿತಿಯನ್ನು ಪ್ಯಾಕೆಟ್‌ನ ಹಿಂಭಾಗದಲ್ಲಿ ಅತ್ಯಂತ ಸಣ್ಣ ಅಕ್ಷರಗಳಲ್ಲಿ ನೀಡುತ್ತಿದ್ದು, ಇದು ಸಾಮಾನ್ಯ ಗ್ರಾಹಕರಿಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಕಷ್ಟಕರವಾಗಿದೆ.

    ಆದ್ದರಿಂದ, ಗ್ರಾಹಕರು ತಾವು ಸೇವಿಸುವ ಆಹಾರದಲ್ಲಿ ಸಕ್ಕರೆ, ಉಪ್ಪು ಮತ್ತು ಕೊಬ್ಬಿನಂಶ ಎಷ್ಟು ಪ್ರಮಾಣದಲ್ಲಿದೆ ಎಂಬುದನ್ನು ಸುಲಭವಾಗಿ ಗುರುತಿಸಲು ಅನುಕೂಲವಾಗುವಂತೆ ‘ಫ್ರಂಟ್ ಆಫ್ ಪ್ಯಾಕೇಜ್ ಲೇಬಲಿಂಗ್'(FOPL) ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಸಮಿತಿ ಒತ್ತಿ ಹೇಳಿದೆ.

    ​ಜೀವನಶೈಲಿ ಸಂಬಂಧಿತ ಕಾಯಿಲೆಗಳಾದ ಮಧುಮೇಹ ಮತ್ತು ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿರುವ ಇಂದಿನ ಕಾಲದಲ್ಲಿ, ಜನರು ತಾವು ಖರೀದಿಸುವ ಆಹಾರದ ಬಗ್ಗೆ ಸರಿಯಾದ ಮಾಹಿತಿ ಹೊಂದಿರುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ, ಬಣ್ಣಗಳ ಸಂಕೇತ ಅಥವಾ ಎಚ್ಚರಿಕೆ ಚಿಹ್ನೆಗಳನ್ನು ಬಳಸಿ ಆಹಾರದ ಗುಣಮಟ್ಟವನ್ನು ಪ್ಯಾಕೆಟ್ ಮುಂಭಾಗದಲ್ಲೇ ಗುರುತಿಸುವುದರಿಂದ ಗ್ರಾಹಕರು ಆರೋಗ್ಯಕರ ಆಯ್ಕೆಗಳನ್ನು ಮಾಡಲು ಸಾಧ್ಯವಾಗುತ್ತದೆ.

    ಈ ಬದಲಾವಣೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯು ತನ್ನ ವರದಿಯಲ್ಲಿ ಸೂಚಿಸಿದೆ. ಇದು ಕೇವಲ ಗ್ರಾಹಕರಲ್ಲಿ ಜಾಗೃತಿ ಮೂಡಿಸುವುದಲ್ಲದೆ, ಆಹಾರ ತಯಾರಿಕಾ ಕಂಪನಿಗಳು ಹೆಚ್ಚು ಪೌಷ್ಟಿಕಾಂಶಯುಕ್ತ ಉತ್ಪನ್ನಗಳನ್ನು ತಯಾರಿಸುವಂತೆ ಪ್ರೇರೇಪಿಸುತ್ತದೆ.

  • ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ವೈದ್ಯೆಯ ನಕಾಬ್ ಎಳೆದಿರುವ ಘಟನೆ ಅತ್ಯಂತ ಖಂಡನೀಯ: 
ಫಾರ್ವರ್ಡ್ ಟ್ರಸ್ಟ್

    ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ವೈದ್ಯೆಯ ನಕಾಬ್ ಎಳೆದಿರುವ ಘಟನೆ ಅತ್ಯಂತ ಖಂಡನೀಯ: ಫಾರ್ವರ್ಡ್ ಟ್ರಸ್ಟ್

    ಬೆಂಗಳೂರು: ಪಟ್ನಾದಲ್ಲಿ ಡಿಸೆಂಬರ್ 15, 2025ರಂದು ನಡೆದ ಆಯುಷ್ ವೈದ್ಯರ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ಮಹಿಳಾ ವೈದ್ಯರೊಬ್ಬರ ನಿಖಾಬ್ ಅನ್ನು ಎಳೆದ ಘಟನೆಯು ಅತ್ಯಂತ ಖಂಡನೀಯವಾಗಿದೆ.

    ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ಧಾರ್ಮಿಕ ಸ್ವಾತಂತ್ರ್ಯ, ವೈಯಕ್ತಿಕ ಘನತೆ ಮತ್ತು ಗೌರವವನ್ನು ಖಾತರಿಪಡಿಸಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಮಹಿಳೆಯ ಧಾರ್ಮಿಕ ಆಚರಣೆ ಅಥವಾ ವೈಯಕ್ತಿಕ ಆಯ್ಕೆಯನ್ನು ಸಾರ್ವಜನಿಕವಾಗಿ ಉಲ್ಲಂಘಿಸುವುದು ಸಂವಿಧಾನದ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ಮಾತ್ರವಲ್ಲ ಈ ಕೃತ್ಯವು ಮಹಿಳೆಯರ ಘನತೆ, ಸುರಕ್ಷತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ.

    ಈ ದೇಶದ ಸಂವಿಧಾನವು ಎಲ್ಲ ನಾಗರಿಕರಿಗೂ ಗೌರವಯುತ, ಘನತೆಯುತ ಮತ್ತು ಸಮಾನ ಜೀವನವನ್ನು ಭರವಸೆ ನೀಡುತ್ತದೆ. ಒಂದು ಕಡೆ ದೇಶವನ್ನು ತಾಯಿಯೆಂದು ಪೂಜಿಸುತ್ತೇವೆ ಮತ್ತೊಂದು ಕಡೆ ಈ ದೇಶದ ಮಹಿಳೆಯರ ಮೇಲೆ ಈ ರೀತಿಯ ದಾಳಿಗಳು ನಿರಂತರವಾಗಿ ನಡೆಯುತ್ತಿರುವುದು ದುರಾದೃಷ್ಟಕರ.

    ಈ ಕೃತ್ಯವನ್ನು ಫಾರ್ವರ್ಡ್ ಟ್ರಸ್ಟ್ ತೀವ್ರವಾಗಿ ಖಂಡಿಸುತ್ತದೆ ಮತ್ತು ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತದೆ ಹಾಗೂ ಎಲ್ಲ ಮಹಿಳೆಯರ ಧಾರ್ಮಿಕ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಆಯ್ಕೆಯನ್ನು ರಕ್ಷಿಸಲು ಸೂಕ್ತ ಕಾನೂನುಗಳು ಮತ್ತು ನೀತಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸುತ್ತದೆ.

    ಫಾರ್ವರ್ಡ್ ಟ್ರಸ್ಟ್

  • ವಿಶ್ವದ ಅತ್ಯಂತ ರುಚಿಕರ ಆಹಾರಗಳ ಪಟ್ಟಿಯಲ್ಲಿ ಭಾರತದ ಈ ನಗರವೇ ಫಸ್ಟ್!

    ವಿಶ್ವದ ಅತ್ಯಂತ ರುಚಿಕರ ಆಹಾರಗಳ ಪಟ್ಟಿಯಲ್ಲಿ ಭಾರತದ ಈ ನಗರವೇ ಫಸ್ಟ್!

    ಭಾರತೀಯ ಖಾದ್ಯಗಳ ರುಚಿಗೆ ಮನಸೋಲದವರೇ ಇಲ್ಲ. ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ಭಾರತದ ಘಮಘಮಿಸುವ ಮಸಾಲೆ ಮತ್ತು ವೈವಿಧ್ಯಮಯ ಖಾದ್ಯಗಳು ಜನರನ್ನು ತನ್ನತ್ತ ಸೆಳೆಯುತ್ತವೆ.

    ಭಾರತದ ರುಚಿಕರ ನಗರಗಳು ಎಂದ ಕೂಡಲೇ ನಮಗೆ ನೆನಪಾಗುವುದು ಹೈದರಾಬಾದಿನ ಬಿರಿಯಾನಿ ಅಥವಾ ದೆಹಲಿಯ ಚಾಟ್ಸ್. ಆದರೆ ಇವೆಲ್ಲವನ್ನೂ ಹಿಂದಿಕ್ಕಿ ಈಗ ಭಾರತದ ಮತ್ತೊಂದು ನಗರ ಜಾಗತಿಕ ಮಟ್ಟದಲ್ಲಿ ದೊಡ್ಡ ಸಾಧನೆ ಮಾಡಿದೆ. ವಿಶ್ವಪ್ರಸಿದ್ಧ ‘ಟೇಸ್ಟ್ ಅಟ್ಲಾಸ್’ ಇತ್ತೀಚೆಗೆ ಬಿಡುಗಡೆ ಮಾಡಿದ ವಿಶ್ವದ ಅತ್ಯುತ್ತಮ ಆಹಾರದ ನಗರಗಳ ಪಟ್ಟಿಯಲ್ಲಿ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಅಚ್ಚರಿಯ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.

    ​ಈ ಜಾಗತಿಕ ಪಟ್ಟಿಯಲ್ಲಿ ಕೋಲ್ಕತ್ತಾ 24ನೇ ಸ್ಥಾನವನ್ನು ಅಲಂಕರಿಸುವ ಮೂಲಕ ಭಾರತದ ಅತ್ಯಂತ ರುಚಿಕರ ಆಹಾರದ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂಬೈ, ಹೈದರಾಬಾದ್ ಮತ್ತು ದೆಹಲಿಯಂತಹ ನಗರಗಳನ್ನು ಕೆಳಕ್ಕೆ ತಳ್ಳಿ ಕೋಲ್ಕತ್ತಾ ಈ ಗೌರವ ಪಡೆದಿರುವುದು ಆಹಾರ ಪ್ರೇಮಿಗಳಲ್ಲಿ ಸಂಭ್ರಮ ತಂದಿದೆ. ಇಲ್ಲಿನ ಸಿಹಿ ತಿಂಡಿಗಳಾದ ರಸಗುಲ್ಲಾ ಮತ್ತು ಮಿಸ್ಟಿ ದೋಯ್ ಮಾತ್ರವಲ್ಲದೆ, ಕಟಿಕಾಬಾಬ್ ಮತ್ತು ಅಲ್ಲಿನ ವಿಶಿಷ್ಟ ಶೈಲಿಯ ಬಿರಿಯಾನಿ ವಿಶ್ವದಾದ್ಯಂತ ಇರುವ ಆಹಾರ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದೆ.

    ​ಕೋಲ್ಕತ್ತಾದ ಜೊತೆಗೆ ಮುಂಬೈ 35ನೇ ಸ್ಥಾನ, ಹೈದರಾಬಾದ್ 39ನೇ ಸ್ಥಾನ ಹಾಗೂ ದೆಹಲಿ ಮತ್ತು ಚೆನ್ನೈ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ವಿಶ್ವದಾದ್ಯಂತ ಇರುವ ಲಕ್ಷಾಂತರ ಪ್ರವಾಸಿಗರ ರೇಟಿಂಗ್ ಮತ್ತು ಸ್ಥಳೀಯ ಖಾದ್ಯಗಳ ರುಚಿಯ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಇಟಲಿಯ ರೋಮ್ ನಗರ ಜಗತ್ತಿನಲ್ಲೇ ನಂಬರ್ ಒನ್ ಆಹಾರದ ನಗರವಾಗಿ ಹೊರಹೊಮ್ಮಿದೆ. ಭಾರತದ ನಗರವೊಂದು ಜಾಗತಿಕ ಮಟ್ಟದಲ್ಲಿ ಟಾಪ್ 25ರೊಳಗೆ ಸ್ಥಾನ ಪಡೆದಿರುವುದು ನಮ್ಮ ದೇಶದ ಶ್ರೀಮಂತ ಆಹಾರ ಪದ್ಧತಿಗೆ ಸಂದ ಗೌರವವಾಗಿದೆ

  • “ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): 
ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

    “ಅರಿವು: ಮಾನವೀಯತೆಯ ಜಾಗೃತಿ” ಅಭಿಯಾನ (ಅ. 2 – 12): ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕ

    ಬೆಂಗಳೂರು: ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್ (GIO) ಕರ್ನಾಟಕದ ವತಿಯಿಂದ ನಗರದ ಕ್ವೀನ್ಸ್‌ರೋಡ್‌ನ ಬಿಫ್ಟ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ‘ಅರಿವು – ಮಾನವೀಯತೆಯ ಜಾಗೃತಿ” ಅಭಿಯಾನದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ, ರಾಜ್ಯಾದ್ಯಂತ ಅಭಿಯಾನದ ಅಂಗವಾಗಿ ನಡೆಯಲಿರುವ ಕಾರ್ಯಚಟುವಟಿಕೆಗಳ ಕುರಿತು ದೃಶ್ಯ ಮತ್ತು ಪತ್ರಿಕಾ ಮಾಧ್ಯಮದವರೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲಾಯಿತು.

    ‘ಅರಿವು’ ಕರ್ನಾಟಕದಾದ್ಯಂತ ಅಕ್ಟೋಬರ್ 2 ರಿಂದ ಅಕ್ಟೋಬರ್ 12ರವರೆಗೆ ನಡೆಯುವ ಅಭಿಯಾನವಾಗಿದ್ದು, ವಿಭಿನ್ನ ಸಮುದಾಯಗಳಲ್ಲಿ ದಯೆ, ಸಹಾನುಭೂತಿ ಮತ್ತು ಏಕತೆಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶ ಹೊಂದಿದೆ.

    “ಅರಿವು” ಕೇವಲ ಒಂದು ಅಭಿಯಾನವಲ್ಲ –ಇದು ಪರಸ್ಪರ ಮಾನವೀಯತೆಯನ್ನು ಅಳವಡಿಸಿಕೊಳ್ಳಲಿಕ್ಕಾಗಿ ಒಂದು ಕರೆಯಾಗಿದೆ,” ಎಂದು GIO ಕರ್ನಾಟಕದ ರಾಜ್ಯಾಧ್ಯಕ್ಷೆ ನವೀದಾ ಅಸ್ಸಾದಿ ಹೇಳಿದರು.
    “ಯಾವುದೇ ಭೇದಭಾವಗಳಿಲ್ಲದೆ ಪರಸ್ಪರರ ಕಾಳಜಿವಹಿಸುದರಲ್ಲಿ ನಿಜವಾದ ಶಕ್ತಿಯಿದೆ ಎಂದು ನಾವು ನಂಬುತ್ತೇವೆ.”

    ಅವರು ಕುರ್‌ಆನ್‌ನ ಸೂಕ್ತವನ್ನು ಉಲ್ಲೇಖಿಸುತ್ತಾ ಅಭಿಯಾನದ ತತ್ತ್ವವನ್ನು ವಿವರಿಸಿದರು: “ಜನರೇ! ನಾವು ನಿಮ್ಮನ್ನು ಒಬ್ಬ ಪುರುಷ ಮತ್ತು ಒಬ್ಬ ಸ್ತ್ರೀಯಿಂದ ಉಂಟು ಮಾಡಿದೆವು, ತರುವಾಯ ನೀವು ಪರಸ್ಪರ ಪರಿಚಯ ಪಟ್ಟುಕೊಳ್ಳಲಿಕ್ಕಾಗಿ ನಿಮ್ಮ ಜನಾಂಗಗಳನ್ನು ಮತ್ತು ಗೋತ್ರಗಳನ್ನು ಮಾಡಿದೆವು.” (ಕುರ್‌ಆನ್- 49: 13)
    “ಅರಿವು” ಇಂದಿನ ಅಸಹಿಷ್ಣುತೆ, ಭಿನ್ನತೆ ಮತ್ತು ಹಿಂಸೆಯ ಸವಾಲುಗಳಿಗೆ ಉತ್ತರವಾಗಿ ಚಿಂತನೆ, ಸುಧಾರಣೆ ಮತ್ತು ಸೇವೆಗಳನ್ನು ಉತ್ತೇಜಿಸುತ್ತದೆ.

    “ಅಂತರ್ಧರ್ಮೀಯ ಸಂವಾದವನ್ನು ಉತ್ತೇಜಿಸುವುದು, ಮಾನವೀಯ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಪ್ರಯತ್ನಿಸುವುದು., ಸಂವಾದ, ಬೆಂಬಲ ಮತ್ತು ಸಾಮಾಜಿಕ ಗುಣಮುಖತೆಗೆ ಸಮಗ್ರ ವೇದಿಕೆಗಳನ್ನು ಒದಗಿಸುವುದು, ಮಾನವೀಯತೆಯ ಕಾರ್ಯಗಳ ಮೂಲಕ ಇಸ್ಲಾಂ ನ ಸಂದೇಶವನ್ನು ಸಾಕಾರ ಗೊಳಿಸುವ ಉದ್ದೇಶಗಳನ್ನು ಈ ಅಭಿಯಾನ ಹೊಂದಿದೆ” ಎಂದವರು ತಿಳಿಸಿದರು.

    “ಅಭಿಯಾನದ ಅಂಗವಾಗಿ ವಿವಿಧ ಸಮಾಜ ಸೇವಾ ಚಟುವಟಿಕೆಗಳಾದ ,ಅಂತರ್ಧರ್ಮೀಯ ಸಂವಾದಗಳು ಮತ್ತು ಶಾಂತಿ ವಲಯಗಳು (Peace Circles), ಮಾನಸಿಕ ಆರೋಗ್ಯ ಕಾರ್ಯಾಗಾರಗಳು, ಕಲೆ,ಕವನ ಮತ್ತು ಪೋಸ್ಟರ್ ಸ್ಪರ್ಧೆಗಳು, ಸಾಮಾಜಿಕ ಮಾಧ್ಯಮ ರೀಲ್ಸ್ ಗಳು ಮತ್ತು ಜಾಗೃತಿ ವಿಡಿಯೋಗಳು, ಮಾಹಿತಿ ಪುಸ್ತಕ ಮತ್ತು ಕರಪತ್ರಗಳ ವಿತರಣೆ, ಮನೆಮನೆಗೆ ಜಾಗೃತಿ ಭೇಟಿ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ” ಎಂದು ತಿಳಿಸಿದರು.

    ಇಸ್ಲಾಮಿನ ಬೋಧನೆಗಳಿಂದ ಪ್ರೇರಣೆ ಪಡೆದ ‘ಅರಿವು’:

    “ಯಾರಾದರು ಒಬ್ಬ ಮನುಷ್ಯನನ್ನು ವಧಿಸಿದರೆ , ಅವನು ಸಕಲ ಮಾನವಕೋಟಿಯನ್ನೇ ವಧಿಸಿದಂತೆ. ಮತ್ತು ಒಬ್ಬನು ಇನ್ನೊಬ್ಬನಿಗೆ ಜೀವದಾನ ಮಾಡಿದರೆ ಅವನು ಸಕಲ ಮಾನವ ಕೋಟಿಗೇ ಜೀವದಾನ ಮಾಡಿದಂತೆ.” (ಕುರ್‌ಆನ್ 5:32) ಎಂಬ ಸಂದೇಶವನ್ನು ನೀಡಿದರು.

    “GIO ಕರ್ನಾಟಕವು ದೈವಿಕ ಮಾರ್ಗದರ್ಶನದ ಬೆಳಕಿನಲ್ಲಿ ಯುವತಿಯರು ಮತ್ತು ವಿದ್ಯಾರ್ಥಿನಿಯರ ವೈಯಕ್ತಿಕ ಶ್ರೇಷ್ಠತೆ ಮತ್ತು ಸಮಾಜದ ಬದಲಾವಣೆಗೆ ಮೀಸಲಾಗಿರುವ ಸೈದ್ಧಾಂತಿಕ ಸಂಘಟನೆಯಾಗಿದೆ. ನಾವು ಸರ್ವ ಧರ್ಮದ ಮತ್ತು ಸಮುದಾಯದ ಜನರನ್ನು ನಮ್ಮೊಂದಿಗೆ ಸೇರಲು ಆಹ್ವಾನಿಸುತ್ತೇವೆ,” ಎಂದು ನವೀದಾ ಅಸ್ಸಾದಿ ಹೇಳಿದರು.

    “ನಾವು ದಯೆಯನ್ನು ಪುನಃ ನಮ್ಮ ಸುತ್ತಮುತ್ತಲೂ ಸ್ಥಾಪಿಸೋಣ ಮತ್ತು ಮುಂದಿನ ಪೀಳಿಗೆಗಳಿಗೆ ಮಾದರಿಯಾಗೋಣ” ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಲೋಗೋವನ್ನು ಬಿಡುಗಡೆ ಮಾಡಲಾಯಿತು.
    ಈ ಸಂದರ್ಭದಲ್ಲಿ ಅಭಿಯಾನದ ಸಂಯೋಜಕಿ ಅಫ್ರಾ ಫತೀನ್, GIO ಕರ್ನಾಟಕದ ಉಪಾಧ್ಯಕ್ಷೆ ಅನೀಸ್ ಫಾತಿಮಾ, JIH ಕರ್ನಾಟಕ ಕಾರ್ಯದರ್ಶಿ ತಶ್ಕೀಲ್ ಖಾನಂ, ಅನುಪಮಾ ಮಾಸಪತ್ರಿಕೆಯ ಉಪಸಂಪಾದಕಿ ಕುಲ್ಸೂಮ್ ಅಬೂಬಕ್ಕರ್ ಉಪಸ್ಥಿತರಿದ್ದರು.

    ಹೆಚ್ಚಿನ ಮಾಹಿತಿಗಾಗಿ ಅಥವಾ ಅಭಿಯಾನದಲ್ಲಿ ಪಾಲ್ಗೊಳ್ಳಲು:

    ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಷನ್, ಕರ್ನಾಟಕ
    ಶಾಂತಿ ಸದನ್, #52, 2ನೇ ಮೆೈನ್, 1ನೇ ಬ್ಲಾಕ್, ಆರ್‌ಟಿ ನಗರ, ಬೆಂಗಳೂರು – 560032
    ✉️ ಇಮೇಲ್: giokarnataka@anupamamasikagmail-com

    ಅಭಿಯಾನ ಸಂಯೋಜಕಿ:
    ಅಫ್ರಾ ಫತೀನ್, ಸಲಹಾ ಸಮಿತಿ ಸದಸ್ಯೆ, GIO ಕರ್ನಾಟಕ

  • ‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

    ‘ಬೂಕರ್’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಮಹೋತ್ಸವಕ್ಕೆ ಚಾಲನೆ

    ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ‘ಬುಕರ್‌’ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ಅವರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

    ನಗರದ ಚಾಮುಂಡಿ ಬೆಟ್ಟದಲ್ಲಿ ಸೋಮವಾರ ಉದ್ಘಾಟನೆಗೊಂಡ ನಾಡಹಬ್ಬ ದಸರಾ ಉತ್ಸವವು, ರಾಜ್ಯದಲ್ಲಿ ಕೋಮು ಸೌಹಾರ್ದ, ಧಾರ್ಮಿಕ ಸಹಿಷ್ಣತೆ ಮತ್ತು ಭಾಷಾ ಸಾಮರಸ್ಯದ ಅಗತ್ಯವನ್ನು ಮತ್ತೊಮ್ಮೆ ಸಾರಿ ಹೇಳಿತು. ‘ಜೈ ಹಿಂದ್ ,‌ ‘ಜೈ ಕರ್ನಾಟಕ’ ದ ಜೊತೆಗೆ ‘ಜೈ ಸಂವಿಧಾನ’ ಎಂಬ ಘೋಷಣೆಯೂ ಮೊಳಗಿತು.
    ಕುವೆಂಪು‌ ಅವರ ನಾಡಗೀತೆಯ ‘ಸರ್ವ ಜನಾಂಗದ ಶಾಂತಿಯ ತೋಟ’ ನುಡಿ ಸಾಲು ಕಾರ್ಯಕ್ರಮದ ಆರಂಭದಿಂದ ಕೊನೆವರೆಗೂ ಅನುರಣಿಸಿತು. ದಸರಾ ಎಲ್ಲ‌ ಜಾತಿ,‌ ಧರ್ಮಗಳ‌ ಜನರ‌ ಹಬ್ಬ ಎಂಬ ಸಂದೇಶವನ್ನೂ ಕೊಟ್ಟಿತು.

    ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಳಿಕ ದಸರಾ ಉದ್ಘಾಟಿಸಲು ಆಯ್ಕೆಯಾದ ದಿನದಿಂದಲೂ ನಾಡಿನಾದ್ಯಂತ ಗಮನ ಸೆಳೆದು, ವಿರೋಧಿಗಳಿಗೆ ಸಂವಿಧಾನದ ಪ್ರಸ್ತಾವನೆಯನ್ನು ಸುಪ್ರೀಂ ಕೋರ್ಟ್‌ ನೆನಪಿಸುವ ಸನ್ನಿವೇಶಕ್ಕೂ ಕಾರಣವಾಗಿದ್ದ ಲೇಖಕಿ ಬಾನು ಮುಷ್ತಾಕ್‌, ಉತ್ಸವಕ್ಕೆ ಚಾಲನೆ ನೀಡಿದರು.

    ನವರಾತ್ರಿ ಆಚರಣೆಯ ಮೊದಲ‌ ದಿನದ ಬಣ್ಣವಾದ ಹಳದಿ ಸೀರೆಯನ್ನು ಉಟ್ಟಿದ್ದ ಅವರು ತಮ್ಮ ಪ್ರತಿ ಮಾತಿನಲ್ಲೂ ಸಾಮರಸ್ಯದ ಕುರಿತು ಒತ್ತಿ ಹೇಳಿದರು. ಮುಖ್ಯಮಂತ್ರಿ‌ ಸಿದ್ದರಾಮಯ್ಯ ಆದಿಯಾಗಿ ಮಾತನಾಡಿದ ಎಲ್ಲರೂ ಸೌಹಾರ್ದವನ್ನೇ ಪ್ರತಿಪಾದಿಸಿದರು.

    ಮಾತು ಆರಂಭಿಸಿದ‌ ಬಾನು ಮುಷ್ತಾಕ್, “ಸರ್ವ ಜನಾಂಗದ ತೋಟವಾದ ನಾಡಿನಲ್ಲಿ ಪ್ರತಿ ಹೂ ತನ್ನ‌ ಬಣ್ಣದಲ್ಲೆ ಅರಳಲಿ, ತನ್ನ ಸುವಾಸನೆಯನ್ನೇ ಬೀರಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ. ಆದರೆ ಎಲ್ಲವೂ ಒಟ್ಟಾದಾಗ ಸೌಹಾರ್ದದ ಹಾಡಾಗಲಿ” ಎಂದು ಆಶಿಸಿದರು.

    “ನಾವೆಲ್ಲರೂ ಒಂದೇ ಗಗನದ ಅಡಿಯ ಪಯಣಿಗರು. ಆಕಾಶ ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿಯು ಯಾರನ್ನೂ ಹೊರತಳ್ಳುವುದಿಲ್ಲ. ಆದರೆ ಮನುಷ್ಯರು ಮಾತ್ರ ಗಡಿಗಳನ್ನು ಸೃಷ್ಟಿಸುತ್ತಾರೆ” ಎಂದು‌ ವಿಷಾದಿಸಿದ ಅವರು, ಸೌಹಾರ್ದ, ಸಮಾನತೆಗಾಗಿ ಶ್ರಮಿಸಿದ ಜಯಚಾಮರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಉಲ್ಲೇಖಿಸಿ ಗಮನ ಸೆಳೆದರು.

    “ದಸರೆ ಎಂದರೆ ಹಬ್ಬವಷ್ಟೇ ಅಲ್ಲ. ನಾಡಿನ ನಾಡಿ ಮಿಡಿತ, ಸಂಸ್ಕೃತಿಯ ಉತ್ಸವ. ಇದು ಎಲ್ಲರನ್ನೂ ಒಳಗೊಳ್ಳುವ ಘಳಿಗೆ.‌ ಸಮನ್ವಯ ಮೇಳ. ವಿವಿಧತೆಯಲ್ಲಿ ಏಕತೆ ಇರುವ ಸುಗಂಧ” ಎಂದು‌ ಬಣ್ಣಿಸಿದರು.
    “ನವರಾತ್ರಿಯಲ್ಲಿ ಉರ್ದು ಭಾಷಿಕರು ತಮ್ಮ ಗುರುತನ್ನು ಕೊಟ್ಟಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳದಲ್ಲಿ ವಾಸವಿದ್ದ ನನ್ನ ಆಪ್ತ ಸಂಬಂಧಿ ಮೊಹಮದ್ ಗೌಸ್ ಎಂಬುವವರು ಮೈಸೂರು ಮಹಾರಾಜರ ಅಂಗರಕ್ಷಕ‌ ಪಡೆಯ ಸೈನಿಕರಾಗಿದ್ದರು. ಅಂಥ ಹಲವರು ಅಂಗರಕ್ಷಕ ಪಡೆಯಲ್ಲಿದ್ದರು. ಜಯಚಾಮರಾಜೇಂದ್ರ ಒಡೆಯರ್ ಮುಸ್ಲಿಮರನ್ನು ನಂಬಿ ಅಂಗರಕ್ಷಕ ಪಡೆಗೆ ನೇಮಿಸಿಕೊಂಡಿದ್ದರು. ಇದು‌ ಅವಿಸ್ಮರಣೀಯವಾದ ಹೆಮ್ಮೆ” ಎಂದು ಸ್ಮರಿಸಿದರು.
    “ನಮ್ಮ ಸಂಸ್ಕೃತಿಯು ಹೃದಯಗಳನ್ನು ಒಂದುಗೂಡಿಸುವಂಥದ್ದು, ದ್ವೇಷಗಳನ್ನು ಬೆಳೆಸುವಂಥದ್ದಲ್ಲ, ಪ್ರೀತಿಯನ್ನು ಹರಡುವಂಥದ್ದು” ಎಂದು‌ ಪ್ರತಿಪಾದಿಸಿದರು.
    “ಪ್ರಜಾಪ್ರಭುತ್ವ ಒಂದು ವ್ಯವಸ್ಥೆಯಲ್ಲ.‌ ಅದೊಂದು ಮೌಲ್ಯ. ಅದನ್ನು ಗೌರವಿಸೋಣ. ಈ ನೆಲದಲ್ಲಿ ಸೌಹಾರ್ದದ ಕುರುಹುಗಳಿವೆ. ಇಲ್ಲಿನ‌ ಬಿಸಿಲು ಕೂಡ ಮಾನವೀಯತೆಯ ಪ್ರತೀಕವಾಗಿದೆ. ‌ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಯನ್ನು ನಾಶ ಮಾಡಲಿ” ಎಂದು ಆಶಿಸಿದರು.
    “ದಸರಾ ಮೈಸೂರು ನಗರ, ನಾಡು ಹಾಗೂ ದೇಶಕ್ಕಷ್ಟೇ ಸೀಮಿತವಾಗದೆ, ಇಡೀ ಜಗತ್ತಿನಾದ್ಯಂತ ಶಾಂತಿ, ಸೌಹಾರ್ದ, ಪ್ರೀತಿಯ ದೀಪವಾಗಿ ನೆಲೆ ಕಂಡುಕೊಳ್ಳಲಿ” ಎಂದರು.
    “ನನ್ನ ಬದುಕು ನನಗೆ ಹಲವು ಪಾಠಗಳನ್ನು ಕಲಿಸಿದೆ. ವ್ಯಷ್ಟಿಯಿಂದ ಸಮಷ್ಟಿಯತ್ತ ಸಾಗುವುದೇ ನಿಜವಾದ ದಾರಿ ಎಂಬುದು ಅದರಲ್ಲೊಂದು. ನನ್ನ ಧಾರ್ಮಿಕ ನಂಬಿಕೆ, ಜೀವನ‌ದರ್ಶನ ಜೀವಪರವಾಗಿದೆ.‌ ಅದು ಮರದ‌ ನೆರಳಂತೆ, ತಂಪಾದ ನದಿಯಂತೆ. ಅಸ್ತ್ರದ ಬದಲು ಅಕ್ಷರದಿಂದ, ಹಗೆಯ ಬದಲು ಪ್ರೀತಿಯಿಂದ ಗೆಲ್ಲುವಂಥದ್ದು” ಎಂದು ಪ್ರತಿಪಾದಿಸಿದರು.

    ಹತ್ತು‌ ವರ್ಷದ ಹಿಂದೆ ಬರೆದ ‘ಬಾಗಿನ’ ಕವಿತೆಯನ್ನು ಭಾಷಣದ ಕೊನೆಗೆ ಓದಿದ ಅವರು,‌ ಬಾಗಿನ ಪಡೆದ ಮುಸ್ಲಿಂ‌ ಮಹಿಳೆಯಲ್ಲಿ ಮೂಡುವ ಭಾವನೆಗಳನ್ನು ಬಣ್ಣಿಸಿದರು.

    ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ‌ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಬಾನು ಮುಷ್ತಾಕ್ ಅವರ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಸಿದ್ದವರ ಅರ್ಜಿಯನ್ನು ವಜಾಗೊಳಿಸುವ ವೇಳೆಯಲ್ಲಿ, ಸುಪ್ರೀಂ ಕೋರ್ಟ್ ಸಂವಿಧಾನದ ಪ್ರಸ್ತಾವನೆಯನ್ನು ಓದುವಂತೆ ಅರ್ಜಿದಾರರಿಗೆ ಹೇಳಿದ್ದನ್ನು ಉಲ್ಲೇಖಿಸಿದರು. “ರಾಜ್ಯ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಸಂವಿಧಾನದ ಪರವಾಗಿಯೇ ಇದೆ. ಎಲ್ಲರೂ ಸಂವಿಧಾನಕ್ಕೆ ಮಾತ್ರ ಉತ್ತರದಾಯಿಗಳು ಎಂದು ಪ್ರತಿಪಾದಿಸಿದರು. ಶಾಸಕ ಜಿ.ಟಿ.ದೇವೇಗೌಡ ಅವರೂ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡರು.

    ‘ಓಲೈಕೆ ರಾಜಕಾರಣ ಬೇಡ; ಸಿದ್ದರಾಮಯ್ಯ
    “ಯಾರನ್ನೋ ಓಲೈಸಿ, ರಾಜಕಾರಣ ಮಾಡಲು ನಾಡಹಬ್ಬವನ್ನು ವಿರೋಧಿಸುವುದು ಸಂವಿಧಾನಕ್ಕೆ, ದೇಶಕ್ಕೆ ಮಾಡುವ ಅಪಚಾರ, ಅಕ್ಷಮ್ಯ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.

    ಎಂದಿಗಿಂತ ಹೆಚ್ಚಿನ ಉತ್ಸಾಹದಲ್ಲಿ ಮಾತನಾಡಿ ಸಭಿಕರನ್ನು ಹಿಡಿದಿಟ್ಟ ಅವರು, “ರಾಜಕಾರಣ ಮಾಡಲು ಬೇರೆ ಸ್ಥಳ,‌ ಸಂದರ್ಭಗಳಿವೆ.‌ ಗೋಡಾ ಹೈ,‌ ಮೈದಾನ್ ಹೈ. ಚುನಾವಣೆ ಸಂದರ್ಭದಲ್ಲಿ ರಾಜಕಾರಣ ಮಾಡಬೇಕೇ ಹೊರತು, ದಸರೆಯಂಥ ಉತ್ಸವದಲ್ಲಿ ಅಲ್ಲ” ಎಂದರು.
    “ಬಾನು ಮುಷ್ತಾಕ್‌ ಅವರು ದಸರೆ ಉದ್ಘಾಟಿಸಿದ್ದು ಸರಿಯಾಗಿಯೇ ಇದೆ” ಮತ್ತೊಮ್ಮೆ ಸಮರ್ಥಿಸಿಕೊಂಡರು. ಬಾನು ಅವರ ಕತೆಗಳ ಅನುವಾದಕಿ ದೀಪಾ ಭಾಸ್ತಿಯವರನ್ನೂ ಉಲ್ಲೇಖಿಸಿದರು.

    ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.

    ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಕುರಿತು ಬಿಜೆಪಿ ಹಾಗೂ ಹಿಂದುತ್ವದ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರತಿಭಟನೆಯ ಸಮಯದಲ್ಲಿ ‘ಮುಖ್ಯಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’ ಎಂಬ ಹೇಳಿಕೆ ನೀಡಿದ್ದರು. ಇದರ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬೆಟ್ಟಕ್ಕೆ ಹೆಚ್ಚುವರಿ ಭದ್ರತೆ ಒದಗಿಸಿದೆ. ಕ್ಷಿಪ್ರ ಕಾರ್ಯಾಚರಣಾ ಪಡೆಯನ್ನೂ ನಿಯೋಜಿಸಲಾಗಿದೆ.

  • “ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” 
ರಾಹುಲ್ ಗಾಂಧಿ Press Meet

    “ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

    ‘ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗಿದ್ದು, ಮತಗಳ್ಳರು ಮತ್ತು ಪ್ರಜಾಪ್ರಭುತ್ವ ನಾಶಪಡಿಸುವವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

    ಇಂದಿರಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಚುನಾವಣಾ ಆಯೋಗವು ಇದನ್ನು ಮೊದಲು ನಿಲ್ಲಿಸಬೇಕು. ಮತದಾರರ ಹೆಸರು ಅಳಿಸಿಹಾಕಿದ್ದರ ಕುರಿತು ಕರ್ನಾಟಕ ಸಿಐಡಿ ಕೇಳಿರುವ ಮಾಹಿತಿಯನ್ನು ಚುನಾವಣಾ ಆಯೋಗವು ತಕ್ಷಣ ಒದಗಿಸಬೇಕು’ ಎಂದು ಆಗ್ರಹಿಸಿದರು.

    ‘ದೇಶದಲ್ಲಿ ಹೇಗೆ ಚುನಾವಣಾ ಅಕ್ರಮಗಳು ನಡೆಯುತ್ತವೆ ಎಂಬುದನ್ನು ಅರಿಯಲು ಇಂದಿನ ಯುವ ಸಮುದಾಯಕ್ಕೆ ಇದೊಂದು ಮಹತ್ವದ ಉದಾಹರಣೆಯಾಗಿದೆ. ನಾನು ಈ ಹಿಂದೆ ಭರವಸೆ ನೀಡಿದ ‘ಹೈಡ್ರೊಜೆನ್ ಬಾಂಬ್’ ಇದಲ್ಲ. ಅದು ಅತಿ ಶೀಘ್ರದಲ್ಲಿ ಬರಲಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ‘ಕರ್ನಾಟಕದ ಅಳಂದದಲ್ಲಿ 2023ರ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಅಳಿಸಿಹಾಕುವ ಯತ್ನ ನಡೆದಿದೆ. ಮತ್ತೊಂದೆಡೆ ಮಹಾರಾಷ್ಟ್ರದ ರಾಜುರಾ ಕ್ಷೇತ್ರದಲ್ಲಿ ಸ್ವಯಂಚಾಲಿತ ತಂತ್ರಾಂಶ ಬಳಸಿ ಕುತಂತ್ರದಿಂದ ಮತಗಳನ್ನು ಸೇರಿಸುವ ಪ್ರಯತ್ನ ನಡೆದಿದೆ. ಈ ಎಲ್ಲಾ ಕೃತ್ಯಗಳಿಗೂ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಾನು ಗಂಭೀರ ಆರೋಪ ಮಾಡುತ್ತಿದ್ದೇನೆ. ಇದನ್ನು ಹಗುರವಾಗಿ ಪರಿಗಣಿಸಬೇಡಿ. ಚುನಾವಣಾ ಆಯೋಗವು ಮತಗಳ್ಳರನ್ನು ರಕ್ಷಿಸುತ್ತಿದೆ. ಈ ಕಳ್ಳರೇ ಭಾರತದ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ’ ಎಂದು ರಾಹುಲ್ ಆರೋಪಿಸಿದ್ದಾರೆ.

    CID 18 ಬಾರಿ ಕೇಳಿದ ಐಪಿ ವಿಳಾಸ, ಒಟಿಪಿ ಏಕೆ ನೀಡಿಲ್ಲ…?: ರಾಹುಲ್‘

    ಭಾರತದಲ್ಲಿ ಲಕ್ಷಾಂತರ ಮತದಾರರನ್ನು ಮತಪಟ್ಟಿಯಿಂದ ಅಳಿಸಿಹಾಕಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕನಾಗಿರುವ ನಾನು ಶೇ 100ರಷ್ಟು ಪುರಾವೆಗಳಿಲ್ಲದೆ ಏನನ್ನೂ ಹೇಳುವುದಿಲ್ಲ. ಅಳಂದದಲ್ಲಿ 6,018 ಮತಗಳನ್ನು ಅಳಿಸಿಹಾಕಲು ಯಾರೋ ಪ್ರಯತ್ನಿಸಿದ್ದರು. ಆದರೆ ಕಾಕತಾಳೀಯ ಎಂಬಂತೆ ಸಿಕ್ಕಿಬಿದ್ದರು. ತಮ್ಮ ಚಿಕ್ಕಪ್ಪನ ಹೆಸರೇ ಪಟ್ಟಿಯಲ್ಲಿ ಇಲ್ಲದಿರುವುದನ್ನು ಬೂತ್ ಮಟ್ಟದ ಅಧಿಕಾರಿ ಗಮನಿಸಿದ್ದಾರೆ. ಆದರೆ ಇದರ ಹಿಂದೆ ಬೇರೆ ಯಾವುದೋ ‘ಶಕ್ತಿ’ ಇದೆ’ ಎಂದಿದ್ದಾರೆ.

    ‘ಮತದಾರರಂತೆ ನಟಿಸಿ 6,018 ಅರ್ಜಿಗಳನ್ನು ಸಲ್ಲಿಸಲಾಗಿದೆ. ಕರ್ನಾಟಕಕ್ಕೆ ಸೇರದ ಮೊಬೈಲ್ ಸಂಖ್ಯೆಗಳನ್ನು ಬಳಸಿಕೊಂಡು ಈ ಅರ್ಜಿಗಳು ಸ್ವಯಂಚಾಲಿತ ತಂತ್ರಾಂಶದ ಮೂಲಕ ದಾಖಲಿಸಿಕೊಳ್ಳಲಾಗಿದೆ’ ಎಂದ ರಾಹುಲ್ ಗಾಂಧಿ, ಮತಪಟ್ಟಿಯಿಂದ ಹೆಸರು ಕೈಬಿಟ್ಟವರನ್ನು ವೇದಿಕೆಗೆ ಕರೆದರು.

    ‘ಕಳೆದ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ ಸಿಐಡಿಯು 18 ಪತ್ರಗಳನ್ನು ಕಳುಹಿಸಿದೆ. ಯಾವ ಪ್ರದೇಶದಿಂದ ಈ ಮತದಾರರ ಹೆಸರು ನೋಂದಣಿಯಾಗಿದೆ ಎಂಬುದಕ್ಕೆ ಪೂರಕವಾದ ಐಪಿ ವಿಳಾಸ ಹಾಗೂ ಅದಕ್ಕೆ ಬಳಸಿದ ಒಟಿಪಿ ಮಾಹಿತಿ ನೀಡುವಂತೆ ಸಿಐಡಿ ಆಯೋಗವನ್ನು ಕೇಳಿದೆ. ಆದರೆ ಆಯೋಗವು ಅದನ್ನು ಏಕೆ ನೀಡುತ್ತಿಲ್ಲ. ಏಕೆಂದರೆ ಒಂದೊಮ್ಮೆ ಆಯೋಗ ಅದನ್ನು ನೀಡಿದರೆ, ಈ ಕೃತ್ಯದ ಹಿಂದಿರುವ ವ್ಯಕ್ತಿಯ ಮನೆಬಾಗಿಲಿಗೆ ಪೊಲೀಸರನ್ನು ಕರೆದೊಯ್ದು ನಿಲ್ಲಿಸುತ್ತದೆ ಎಂಬುದು ಅವರಿಗೂ ಗೊತ್ತು’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ‘ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರು ಅಳಿಸುವುದು ಹಾಗೂ ಸೇರಿಸುವುದನ್ನು ಯಾರು ಮಾಡುತ್ತಿದ್ದಾರೆ ಎಂದು ಆಯೋಗಕ್ಕೆ ಗೊತ್ತಿದೆ. ಭಾರತದ ಪ್ರತಿಯೊಬ್ಬ ಯುವಕರೂ ಇದನ್ನು ತಿಳಿಯಬೇಕು ಎಂದು ನಾನು ಬಯಸುತ್ತೇನೆ. ಕೇಳಿದ ಮಾಹಿತಿಯನ್ನು ಅವರು ನೀಡುತ್ತಿಲ್ಲವೆಂದರೆ ಅವರು ಪ್ರಜಾಪ್ರಭುತ್ವದ ಕೊಲೆಗಾರರನ್ನು ರಕ್ಷಿಸುತ್ತಿದ್ದಾರೆ ಎಂದೇ ಅರ್ಥ’ ಎಂದು ಆರೋಪಿಸಿದ್ದಾರೆ.

  • “ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” 
ರಾಹುಲ್ ಗಾಂಧಿ Press Meet

    “ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

    ‘ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗಿದ್ದು, ಮತಗಳ್ಳರು ಮತ್ತು ಪ್ರಜಾಪ್ರಭುತ್ವ ನಾಶಪಡಿಸುವವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

    ಇಂದಿರಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಚುನಾವಣಾ ಆಯೋಗವು ಇದನ್ನು ಮೊದಲು ನಿಲ್ಲಿಸಬೇಕು. ಮತದಾರರ ಹೆಸರು ಅಳಿಸಿಹಾಕಿದ್ದರ ಕುರಿತು ಕರ್ನಾಟಕ ಸಿಐಡಿ ಕೇಳಿರುವ ಮಾಹಿತಿಯನ್ನು ಚುನಾವಣಾ ಆಯೋಗವು ತಕ್ಷಣ ಒದಗಿಸಬೇಕು’ ಎಂದು ಆಗ್ರಹಿಸಿದರು.

    ‘ದೇಶದಲ್ಲಿ ಹೇಗೆ ಚುನಾವಣಾ ಅಕ್ರಮಗಳು ನಡೆಯುತ್ತವೆ ಎಂಬುದನ್ನು ಅರಿಯಲು ಇಂದಿನ ಯುವ ಸಮುದಾಯಕ್ಕೆ ಇದೊಂದು ಮಹತ್ವದ ಉದಾಹರಣೆಯಾಗಿದೆ. ನಾನು ಈ ಹಿಂದೆ ಭರವಸೆ ನೀಡಿದ ‘ಹೈಡ್ರೊಜೆನ್ ಬಾಂಬ್’ ಇದಲ್ಲ. ಅದು ಅತಿ ಶೀಘ್ರದಲ್ಲಿ ಬರಲಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ‘ಕರ್ನಾಟಕದ ಅಳಂದದಲ್ಲಿ 2023ರ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಅಳಿಸಿಹಾಕುವ ಯತ್ನ ನಡೆದಿದೆ. ಮತ್ತೊಂದೆಡೆ ಮಹಾರಾಷ್ಟ್ರದ ರಾಜುರಾ ಕ್ಷೇತ್ರದಲ್ಲಿ ಸ್ವಯಂಚಾಲಿತ ತಂತ್ರಾಂಶ ಬಳಸಿ ಕುತಂತ್ರದಿಂದ ಮತಗಳನ್ನು ಸೇರಿಸುವ ಪ್ರಯತ್ನ ನಡೆದಿದೆ. ಈ ಎಲ್ಲಾ ಕೃತ್ಯಗಳಿಗೂ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಾನು ಗಂಭೀರ ಆರೋಪ ಮಾಡುತ್ತಿದ್ದೇನೆ. ಇದನ್ನು ಹಗುರವಾಗಿ ಪರಿಗಣಿಸಬೇಡಿ. ಚುನಾವಣಾ ಆಯೋಗವು ಮತಗಳ್ಳರನ್ನು ರಕ್ಷಿಸುತ್ತಿದೆ. ಈ ಕಳ್ಳರೇ ಭಾರತದ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ’ ಎಂದು ರಾಹುಲ್ ಆರೋಪಿಸಿದ್ದಾರೆ.

    ಸಿಐಡಿ 18 ಬಾರಿ ಕೇಳಿದ ಐಪಿ ವಿಳಾಸ, ಒಟಿಪಿ ಏಕೆ ನೀಡಿಲ್ಲ…?: ರಾಹುಲ್‘

    ಭಾರತದಲ್ಲಿ ಲಕ್ಷಾಂತರ ಮತದಾರರನ್ನು ಮತಪಟ್ಟಿಯಿಂದ ಅಳಿಸಿಹಾಕಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕನಾಗಿರುವ ನಾನು ಶೇ 100ರಷ್ಟು ಪುರಾವೆಗಳಿಲ್ಲದೆ ಏನನ್ನೂ ಹೇಳುವುದಿಲ್ಲ. ಅಳಂದದಲ್ಲಿ 6,018 ಮತಗಳನ್ನು ಅಳಿಸಿಹಾಕಲು ಯಾರೋ ಪ್ರಯತ್ನಿಸಿದ್ದರು. ಆದರೆ ಕಾಕತಾಳೀಯ ಎಂಬಂತೆ ಸಿಕ್ಕಿಬಿದ್ದರು. ತಮ್ಮ ಚಿಕ್ಕಪ್ಪನ ಹೆಸರೇ ಪಟ್ಟಿಯಲ್ಲಿ ಇಲ್ಲದಿರುವುದನ್ನು ಬೂತ್ ಮಟ್ಟದ ಅಧಿಕಾರಿ ಗಮನಿಸಿದ್ದಾರೆ. ಆದರೆ ಇದರ ಹಿಂದೆ ಬೇರೆ ಯಾವುದೋ ‘ಶಕ್ತಿ’ ಇದೆ’ ಎಂದಿದ್ದಾರೆ.

    ‘ಮತದಾರರಂತೆ ನಟಿಸಿ 6,018 ಅರ್ಜಿಗಳನ್ನು ಸಲ್ಲಿಸಲಾಗಿದೆ. ಕರ್ನಾಟಕಕ್ಕೆ ಸೇರದ ಮೊಬೈಲ್ ಸಂಖ್ಯೆಗಳನ್ನು ಬಳಸಿಕೊಂಡು ಈ ಅರ್ಜಿಗಳು ಸ್ವಯಂಚಾಲಿತ ತಂತ್ರಾಂಶದ ಮೂಲಕ ದಾಖಲಿಸಿಕೊಳ್ಳಲಾಗಿದೆ’ ಎಂದ ರಾಹುಲ್ ಗಾಂಧಿ, ಮತಪಟ್ಟಿಯಿಂದ ಹೆಸರು ಕೈಬಿಟ್ಟವರನ್ನು ವೇದಿಕೆಗೆ ಕರೆದರು.

    ‘ಕಳೆದ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ ಸಿಐಡಿಯು 18 ಪತ್ರಗಳನ್ನು ಕಳುಹಿಸಿದೆ. ಯಾವ ಪ್ರದೇಶದಿಂದ ಈ ಮತದಾರರ ಹೆಸರು ನೋಂದಣಿಯಾಗಿದೆ ಎಂಬುದಕ್ಕೆ ಪೂರಕವಾದ ಐಪಿ ವಿಳಾಸ ಹಾಗೂ ಅದಕ್ಕೆ ಬಳಸಿದ ಒಟಿಪಿ ಮಾಹಿತಿ ನೀಡುವಂತೆ ಸಿಐಡಿ ಆಯೋಗವನ್ನು ಕೇಳಿದೆ. ಆದರೆ ಆಯೋಗವು ಅದನ್ನು ಏಕೆ ನೀಡುತ್ತಿಲ್ಲ. ಏಕೆಂದರೆ ಒಂದೊಮ್ಮೆ ಆಯೋಗ ಅದನ್ನು ನೀಡಿದರೆ, ಈ ಕೃತ್ಯದ ಹಿಂದಿರುವ ವ್ಯಕ್ತಿಯ ಮನೆಬಾಗಿಲಿಗೆ ಪೊಲೀಸರನ್ನು ಕರೆದೊಯ್ದು ನಿಲ್ಲಿಸುತ್ತದೆ ಎಂಬುದು ಅವರಿಗೂ ಗೊತ್ತು’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ‘ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರು ಅಳಿಸುವುದು ಹಾಗೂ ಸೇರಿಸುವುದನ್ನು ಯಾರು ಮಾಡುತ್ತಿದ್ದಾರೆ ಎಂದು ಆಯೋಗಕ್ಕೆ ಗೊತ್ತಿದೆ. ಭಾರತದ ಪ್ರತಿಯೊಬ್ಬ ಯುವಕರೂ ಇದನ್ನು ತಿಳಿಯಬೇಕು ಎಂದು ನಾನು ಬಯಸುತ್ತೇನೆ. ಕೇಳಿದ ಮಾಹಿತಿಯನ್ನು ಅವರು ನೀಡುತ್ತಿಲ್ಲವೆಂದರೆ ಅವರು ಪ್ರಜಾಪ್ರಭುತ್ವದ ಕೊಲೆಗಾರರನ್ನು ರಕ್ಷಿಸುತ್ತಿದ್ದಾರೆ ಎಂದೇ ಅರ್ಥ’ ಎಂದು ಆರೋಪಿಸಿದ್ದಾರೆ.

  • ವಿದ್ಯಾರ್ಥಿಗಳೇ ಇಲ್ಲದ ಶಾಲೆಗಳಲ್ಲಿ 308 ಶಿಕ್ಷಕರು: 
ಸರಕಾರದ ಸಬೂಬು ಏನು?

    ವಿದ್ಯಾರ್ಥಿಗಳೇ ಇಲ್ಲದ ಶಾಲೆಗಳಲ್ಲಿ 308 ಶಿಕ್ಷಕರು: ಸರಕಾರದ ಸಬೂಬು ಏನು?

    ಕರ್ನಾಟಕದಲ್ಲಿ ವಿದ್ಯಾರ್ಥಿಗಳೇ ಇಲ್ಲದ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ 308ಕ್ಕೆ ಇಳಿದಿದೆ. ಕಳೆದ ಸಾಲಿನಲ್ಲಿ ಇಂತಹ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ 1,572 ಇತ್ತು.

    ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ 2024–24ನೇ ಸಾಲಿನ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ (ಯುಡೈಸ್‌) ವರದಿ ಪ್ರಕಾರ, ವಿದ್ಯಾರ್ಥಿಗಳ ದಾಖಲೆ ಹೆಚ್ಚಿರುವ ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದರೂ, ಸರ್ಕಾರ ವಿದ್ಯಾರ್ಥಿಗಳಿಲ್ಲದ ಶಾಲೆಗಳಲ್ಲಿ ಶಿಕ್ಷಕರನ್ನು ಉಳಿಸಿಕೊಂಡಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಕಡಿಮೆ ಇದೆ. ಹಾಗೆಯೇ, ಶೂನ್ಯ ದಾಖಲೆ ಹೊಂದಿದ್ದ ಶಾಲೆಗಳ ಸಂಖ್ಯೆ 1,078ರಿಂದ 270ಕ್ಕೆ ಇಳಿಕೆಯಾಗಿದೆ.

    ‘ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚಬಾರದು ಎಂಬ ಸರ್ಕಾರದ ನೀತಿಗೆ ಅನುಗುಣವಾಗಿ ಅಂತಹ ಶಾಲೆಗಳಲ್ಲಿ ಒಬ್ಬ ಶಿಕ್ಷಕರನ್ನು ಉಳಿಸಿಕೊಂಡಿದ್ದೇವೆ. ಶಿಕ್ಷಕರು ಇದ್ದಾರೆ ಎಂಬ ಕಾರಣಕ್ಕೆ ಪೋಷಕರು ಮಕ್ಕಳನ್ನು ಕಳುಹಿಸುವ ಸಾಧ್ಯತೆ ಇರುತ್ತದೆ. ಕೆಲವು ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿಗಾಗಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ’ ಎಂದು ವಿದ್ಯಾರ್ಥಿಗಳಿಲ್ಲದ ಶಾಲೆಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿದ ಕ್ರಮವನ್ನು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

    ವರದಿ ಪ್ರಕಾರ ಕರ್ನಾಟಕದಲ್ಲಿ 74,859 ಶಾಲೆಗಳಿದ್ದು, 1,17,80,251 ವಿದ್ಯಾರ್ಥಿಗಳು ಹಾಗೂ 4,52,602 ಶಿಕ್ಷಕರು ಇದ್ದಾರೆ. ಶೇ 69ರಷ್ಟು ಶಿಕ್ಷಕರು ಮಾತ್ರ ತರಬೇತಿ ಪಡೆದಿದ್ದಾರೆ. ಶೇ 63.7ರಷ್ಟು ಶಿಕ್ಷಕರು ವೃತ್ತಿಪರ ಅರ್ಹತೆ ಹೊಂದಿದ್ದಾರೆ. 2.23 ಲಕ್ಷ ವಿದ್ಯಾರ್ಥಿಗಳಿರುವ 7,349 ಏಕ ಶಿಕ್ಷಕರ ಶಾಲೆಗಳಿವೆ. ಕಳೆದ ವರ್ಷ 2,74,814 ವಿದ್ಯಾರ್ಥಿಗಳಿದ್ದ 7,821 ಏಕಶಿಕ್ಷಕರ ಶಾಲೆಗಳಿದ್ದವು.

  • ಸೋಲಿನ ಭಯಂಕರ ಭೀತಿಯಲ್ಲಿ ಮೋದಿ: 
6 ಕಾರಣಗಳೇನು?

    ಸೋಲಿನ ಭಯಂಕರ ಭೀತಿಯಲ್ಲಿ ಮೋದಿ: 6 ಕಾರಣಗಳೇನು?

    ನೀವು ಕೇಳ್ತಾ ಇರೋದು ಸರಿಯಾಗಿಯೇ ಇದೆ. ಬಹುಮತ ಇರುವ ಹೊರತಾಗಿಯೂ ಈ ಬಾರಿಯ ಉಪರಾಷ್ಟ್ರಪತಿ ಚುನಾವಣೆ ಮೋದಿಗೆ ಅಮಿತ್ ಶಾ ಗೆ ಉಲ್ಟಾ ಹೊಡೆಯುವ ಸಾಧ್ಯತೆಯ ವರದಿಗಳು ಬರ್ತಾ ಇವೆ. ಇದು ಇವರ ನಿದ್ದೆಗೆಡಿಸಿರುವ ಲಕ್ಷಣಗಳು ಕಾಣುತ್ತಿವೆ. ಇಂಡಿಯಾ ಮೈತ್ರಿಕೂಟ ಇವರ ಮೇಲೆ ಎಗರಿ ಬೀಳುವ ಚರ್ಚೆಗಳೂ ರಾಜಕೀಯ ವಲಯದಲ್ಲಿ ನಡೆಯುತ್ತಿವೆ.

    ಮಿತ್ರೋ, ಉಪರಾಷ್ಟ್ರಪತಿಯ ಚುನಾವಣೆ ತಮ್ಮಜೋಳಿಯಲ್ಲಿ ಇದೆ ಎಂದು ಮೋದಿಗೆ ಅನಿಸಿತ್ತು. ಹೀಗಿರುವಾಗಲೇ ಇಂಡಿಯಾ ಮೈತ್ರಿಕೂಟ ಆಡಿದ ಆಟ ಇಡೀ ಸಿಚುವೇಶನನ್ನೇ ಬದಲಿಸಿದಂತೆ ತೋರುತ್ತಿದೆ. ಮೋದಿ ಮತ್ತು ಅಮಿತ್ ಶಾ ರವರ ತಾಳ ಮಳ ಸ್ಪಷ್ಟವಾಗಿ ಗೋಚರಿಸುತ್ತಿದೆ.

    ಈ ತಳಮಳಕ್ಕೆ ಆರು ಕಾರಣಗಳಿವೆ, ಈ ಕಾರಣಗಳು ಈಗ ದೇಶದ ರಾಜಕೀಯದ ಪ್ರತಿ ಗಲ್ಲಿಯಲ್ಲೂ ಪ್ರತಿಧನಿಸುತ್ತಿದೆ. ಮೊದಲಕರಣ ಆಂಧ್ರಪ್ರದೇಶ. ಹೌದು ಈ ಆಂಧ್ರಪ್ರದೇಶದಲ್ಲಿ ಬಿಜೆಪಿಯೂ ಗಟ್ಟಿಯಾಗಿಲ್ಲ, ಕಾಂಗ್ರೆಸಿನ ನೆಲೆಯೂ ಇಲ್ಲ. ಇಲ್ಲಿಯ ಅಸಲಿ ತಾಕತ್ತು ಜಗನ್ ಮೋಹನ್ ರೆಡ್ಡಿ ಮತ್ತು ಚಂದ್ರ ಬಾಬು ನಾಯ್ಡು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ, ಮೋದಿಗೆ, ಅಮಿತ್ ಶಾರಿಗೆ ಶಾಕ್ ನೀಡಬಹುದಾದವರು ಇವ್ರೇ. ಚಂದ್ರ ಬಾಬು ನಾಯ್ಡು ಎನ್ಡಿಎ ಪರವಾಗಿ ನಿಂತರೆ ಜಗನ್ಮೋಹನ್ ರೆಡ್ಡಿ ಅದರ ಎದುರು ಅಭ್ಯರ್ಥಿಗೆ ಬೆಂಬಲಿಸುತ್ತಾರೆ. ಒಂದು ವೇಳೆ ಜಗನ್ ಬಿಜೆಪಿಗೆ ಸಪೋರ್ಟ್ ಮಾಡಿದರೆ ಚಂದ್ರು ಬಾಬು ನಾಯ್ಡು ಖಂಡಿತವಾಗಿಯೂ ಮುನಿಸಿಕೊಳ್ಳುತ್ತಾರೆ. ಮತ್ತು ಉಲ್ಟಾ ಹೊಡೆಯುತ್ತಾರೆ. ಉಪರಾಷ್ಟ್ರಪತಿಯ ಚುನಾವಣೆಯ ಆಟ ಸಿಲುಕಿರುವದೇ ಇಲ್ಲಿ.

    ಮೋದಿ ಮತ್ತು ಅಮಿತ್ ಶಾ ರವರ ತಳಮಳದ ಎರಡನೆಯ ಕಾರಣ ಉಪರಾಷ್ಟ್ರಪತಿ ಚುನಾವಣೆಯ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ. ರೆಡ್ಡಿ ಎಂಬ ತೆಲುಗು ಮೂಲದ ಅಡ್ಡ ಹೆಸರು ಹೈದರಾಬಾದ್ ಮತ್ತು ತೆಲಂಗಾಣ ಮಾತ್ರವಲ್ಲ ಲೋಕಸಭೆಯಲ್ಲಿ ಇರುವ 11 ಸಂಸದರನ್ನೂ ಸೆಳೆಯುತ್ತಿದೆ. ಭಾಷೆ ಮತ್ತು ಪ್ರಾದೇಶಿಕತೆ ಮತಗಳನ್ನು ಇಂಡಿಯಾ ಮೈತ್ರಿಕೂಟದತ್ತ ಜಾರಿಸುವ ಭಯ ಮೋಶಾರಿಗೆ ಕಾಡುತ್ತಿದೆ.

    ಮೂರನೆಯ ಕಾರಣ ಬಿಜೆಪಿಯ ಅಭ್ಯರ್ಥಿ ತಮಿಳುನಾಡು ಮೂಲದವರಾದರೆ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಆಂಧ್ರಪ್ರದೇಶದವರು. ಇಲ್ಲಿಯೂ ಕೆಲಸ ಮಾಡುವುದು ಭಾಷೆ ಮತ್ತು ಪ್ರಾದೇಶಿಕತೆ ತೆಲುಗು ಪ್ರದೇಶದವರು ಬಿಜೆಪಿಯ ತಮಿಳುನಾಡಿನ ಅಭ್ಯರ್ಥಿಗೆ ಮತ ಕೊಡುವರೇ ಎಂಬುದೊಂದು ಪ್ರಶ್ನೆ. ಇದರೊಂದಿಗೆ ಸಿಗುವ ಮತ್ತೊಂದು ಉತ್ತರ ತಮಿಳಿಗನಾಗಿದ್ದರೂ ಬಿಜೆಪಿಯ ಅಭ್ಯರ್ಥಿಗೆ ತಮಿಳಿಗರು ಮತ ಹಾಕಲ್ಲ.

    ನಾಲ್ಕನೆಯ ಕಾರಣ ಮಲ್ಲಿಕಾರ್ಜುನ ಖರ್ಗೆ. ಹೌದು, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಮಾತ್ರವಲ್ಲ ಅವರು ದಕ್ಷಿಣ ಭಾರತೀಯರು. ಗುಲ್ಬರ್ಗ ದವರಾಗಿರುವುದರಿಂದ ತೆಲುಗು ಕೂಡ ಬಲ್ಲವರಾಗಿದ್ದಾರೆ. ಇದರ ಬರ್ಪೂರ ಪ್ರಯೋಜನ ಪಡೆಯಲು ಅವರಿಗಾಗಲೇ ತೆಲುಗು ಮೂಲದ ಸಂಸದರನ್ನ ಭೇಟಿಯಾಗುತ್ತಿದ್ದಾರೆ. ಮೋದಿ ಮತ್ತು ಅಮಿತ್ ಶಾ ರ ಬಲೆಯಲ್ಲಿರುವ ವೈಎಸ್ಆರ್‌ಸಿಪಿ ಯ ಸಂಸದ ಮೇಘ ರಘುನಾಥ್ ರೆಡ್ಡಿ ಇವರನ್ನು ಕೂಡ ಭೇಟಿಯಾಗಿದ್ದಾರೆ. ಈ ಭೇಟಿ ಮತ್ತು ಮಾತುಕತೆ ಬಿಜೆಪಿಯವರ ಪಾಲಿಗೆ ಅಪಾಯದ ಕರೆಗಂಟೆ ಅಂತಿದೆ.

    ಐದನೆಯ ಕಾರಣ ಇಂಡಿಯಾ ಮೈತ್ರಿಕೂಟದ ರಣನೀತಿ, 2004ರಲ್ಲಿ ಎಪಿಜೆ ಅಬ್ದುಲ್ ಕಲಾಂ ರನ್ನು ಕಣಕ್ಕಿಳಿಸುವಾಗ ಯಾವ ರಣ ನೀತಿಯನ್ನ ಅನುಸರಿಸಲಾಗಿತ್ತೋ, ಅದನ್ನೇ ಇಲ್ಲಿಯೂ ಅನುಸರಿಸಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾವು ಬಿಜೆಪಿ ಅಭ್ಯರ್ಥಿಗೆ ಮತ ಹಾಕಲ್ಲ ಆದರೆ ಇಂಡಿಯಾ ಮೈತ್ರಿಕೂಟದಿಂದ ಯಾವುದೇ ಪಕ್ಷದೊಂದಿಗೆ ಇರದ ಅಭ್ಯರ್ಥಿ ಕಣಕ್ಕಿಳಿಯಲಿ ಎಂದು ಸಂದೇಶ ನೀಡಿದ್ದರು. ಯಾವುದೇ ಪಕ್ಷದಲ್ಲಿ ಇರದ ಸುದರ್ಶನ ರೆಡ್ಡಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.

    ಆರನೆಯ ಕಾರಣ ಮತಗಳ ಲೆಕ್ಕಾಚಾರ. ಏನ್ ಡಿ ಎ ಬಳಿ 422 ಮತಗಳು ಇವೆ, ಅಭ್ಯರ್ಥಿಗೆ ಗೆಲುವಿಗೆ ಬೇಕಾಗಿರುವುದು 392 ಮತಗಳು. ಇಂಡಿಯಾ ಮೈತ್ರಿಕೂಟದಲ್ಲಿ 360 ಸಂಸದರು ಇದ್ದಾರೆ. ಒಂದು ವೇಳೆ ನಾಯ್ಡು ಅವರ 18 ಮತ್ತು ಜಗನ್ ಮೋಹನ್ ರೆಡ್ಡಿ ಅವರ 11 ಸಂಸದರು ಬಿಜೆಪಿಯ ಸಕ್ಯ ತೊರೆದರೆ ಎನ್‌ಡಿಎ ಯ ಲೆಕ್ಕ ಉಲ್ಟಾಪಲ್ಟಾ ಆಗಲಿದೆ.

    ಇದು ಗೊತ್ತಾಗಿರುವುದರಿಂದಲೇ ಮೋದಿ ಮತ್ತು ಅಮಿತ್ ಶಾ ಬೇರೆಯದೇ ಆಟವನ್ನು ಆಡುತ್ತಿದ್ದಾರೆ. ಅದು ಚಂದ್ರ ಬಾಬು ನಾಯ್ಡು ರವರನ್ನು ಬೆದರಿಸುವುದು. ಈಗಾಗಲೇ ಜಾಮೀನಿನ ಮೇಲಿರುವ ಚಂದ್ರ ಬಾಬು ನಾಯ್ಡು ರವರ ಮೇಲೆ ಈಡಿ ಮತ್ತು ಸಿಬಿಐ ಅನ್ನುವ ಚೂ ಬಿಡುವ ಎಚ್ಚರಿಕೆ ನೀಡಿದ್ದಾರೆ. 30 ದಿನ ಜೈಲಿನಲ್ಲಿ ಇದ್ದರೆ ಮುಖ್ಯಮಂತ್ರಿಯ ಪಟ್ಟ ಕಿತ್ತುಕೊಳ್ಳುವ ಕಾನೂನಿನ ಕಡತಗಳನ್ನು ತೋರಿಸಿದ್ದಾರೆ. ಮುಂದೇನಾಗಲಿದೆ ಅದು ನಿಮಗೂ ಕಾಣಲಿದೆ.

    ಆರ್‌ ಎ ಲೋಹಾನಿ, ಮಳಗಿ
    ಸುದ್ದಿ ಸಂಪಾದಕ
    ಸನ್ಮಾರ್ಗ ನ್ಯೂಸ್‌ ಡಿಜಿಟಲ್‌ ಚಾನಲ್‌