Category: ದಿನನಿತ್ಯದ ಸುದ್ದಿ

  • ವಿದ್ಯಾರ್ಥಿಗಳೇ ಇಲ್ಲದ ಶಾಲೆಗಳಲ್ಲಿ 308 ಶಿಕ್ಷಕರು: 
ಸರಕಾರದ ಸಬೂಬು ಏನು?

    ವಿದ್ಯಾರ್ಥಿಗಳೇ ಇಲ್ಲದ ಶಾಲೆಗಳಲ್ಲಿ 308 ಶಿಕ್ಷಕರು: ಸರಕಾರದ ಸಬೂಬು ಏನು?

    ಕರ್ನಾಟಕದಲ್ಲಿ ವಿದ್ಯಾರ್ಥಿಗಳೇ ಇಲ್ಲದ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ 308ಕ್ಕೆ ಇಳಿದಿದೆ. ಕಳೆದ ಸಾಲಿನಲ್ಲಿ ಇಂತಹ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ 1,572 ಇತ್ತು.

    ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ 2024–24ನೇ ಸಾಲಿನ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ (ಯುಡೈಸ್‌) ವರದಿ ಪ್ರಕಾರ, ವಿದ್ಯಾರ್ಥಿಗಳ ದಾಖಲೆ ಹೆಚ್ಚಿರುವ ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದ್ದರೂ, ಸರ್ಕಾರ ವಿದ್ಯಾರ್ಥಿಗಳಿಲ್ಲದ ಶಾಲೆಗಳಲ್ಲಿ ಶಿಕ್ಷಕರನ್ನು ಉಳಿಸಿಕೊಂಡಿದೆ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಂಖ್ಯೆ ಕಡಿಮೆ ಇದೆ. ಹಾಗೆಯೇ, ಶೂನ್ಯ ದಾಖಲೆ ಹೊಂದಿದ್ದ ಶಾಲೆಗಳ ಸಂಖ್ಯೆ 1,078ರಿಂದ 270ಕ್ಕೆ ಇಳಿಕೆಯಾಗಿದೆ.

    ‘ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚಬಾರದು ಎಂಬ ಸರ್ಕಾರದ ನೀತಿಗೆ ಅನುಗುಣವಾಗಿ ಅಂತಹ ಶಾಲೆಗಳಲ್ಲಿ ಒಬ್ಬ ಶಿಕ್ಷಕರನ್ನು ಉಳಿಸಿಕೊಂಡಿದ್ದೇವೆ. ಶಿಕ್ಷಕರು ಇದ್ದಾರೆ ಎಂಬ ಕಾರಣಕ್ಕೆ ಪೋಷಕರು ಮಕ್ಕಳನ್ನು ಕಳುಹಿಸುವ ಸಾಧ್ಯತೆ ಇರುತ್ತದೆ. ಕೆಲವು ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿಗಾಗಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ’ ಎಂದು ವಿದ್ಯಾರ್ಥಿಗಳಿಲ್ಲದ ಶಾಲೆಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿದ ಕ್ರಮವನ್ನು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

    ವರದಿ ಪ್ರಕಾರ ಕರ್ನಾಟಕದಲ್ಲಿ 74,859 ಶಾಲೆಗಳಿದ್ದು, 1,17,80,251 ವಿದ್ಯಾರ್ಥಿಗಳು ಹಾಗೂ 4,52,602 ಶಿಕ್ಷಕರು ಇದ್ದಾರೆ. ಶೇ 69ರಷ್ಟು ಶಿಕ್ಷಕರು ಮಾತ್ರ ತರಬೇತಿ ಪಡೆದಿದ್ದಾರೆ. ಶೇ 63.7ರಷ್ಟು ಶಿಕ್ಷಕರು ವೃತ್ತಿಪರ ಅರ್ಹತೆ ಹೊಂದಿದ್ದಾರೆ. 2.23 ಲಕ್ಷ ವಿದ್ಯಾರ್ಥಿಗಳಿರುವ 7,349 ಏಕ ಶಿಕ್ಷಕರ ಶಾಲೆಗಳಿವೆ. ಕಳೆದ ವರ್ಷ 2,74,814 ವಿದ್ಯಾರ್ಥಿಗಳಿದ್ದ 7,821 ಏಕಶಿಕ್ಷಕರ ಶಾಲೆಗಳಿದ್ದವು.

  • ಸೋಲಿನ ಭಯಂಕರ ಭೀತಿಯಲ್ಲಿ ಮೋದಿ: 
6 ಕಾರಣಗಳೇನು?

    ಸೋಲಿನ ಭಯಂಕರ ಭೀತಿಯಲ್ಲಿ ಮೋದಿ: 6 ಕಾರಣಗಳೇನು?

    ನೀವು ಕೇಳ್ತಾ ಇರೋದು ಸರಿಯಾಗಿಯೇ ಇದೆ. ಬಹುಮತ ಇರುವ ಹೊರತಾಗಿಯೂ ಈ ಬಾರಿಯ ಉಪರಾಷ್ಟ್ರಪತಿ ಚುನಾವಣೆ ಮೋದಿಗೆ ಅಮಿತ್ ಶಾ ಗೆ ಉಲ್ಟಾ ಹೊಡೆಯುವ ಸಾಧ್ಯತೆಯ ವರದಿಗಳು ಬರ್ತಾ ಇವೆ. ಇದು ಇವರ ನಿದ್ದೆಗೆಡಿಸಿರುವ ಲಕ್ಷಣಗಳು ಕಾಣುತ್ತಿವೆ. ಇಂಡಿಯಾ ಮೈತ್ರಿಕೂಟ ಇವರ ಮೇಲೆ ಎಗರಿ ಬೀಳುವ ಚರ್ಚೆಗಳೂ ರಾಜಕೀಯ ವಲಯದಲ್ಲಿ ನಡೆಯುತ್ತಿವೆ.

    ಮಿತ್ರೋ, ಉಪರಾಷ್ಟ್ರಪತಿಯ ಚುನಾವಣೆ ತಮ್ಮಜೋಳಿಯಲ್ಲಿ ಇದೆ ಎಂದು ಮೋದಿಗೆ ಅನಿಸಿತ್ತು. ಹೀಗಿರುವಾಗಲೇ ಇಂಡಿಯಾ ಮೈತ್ರಿಕೂಟ ಆಡಿದ ಆಟ ಇಡೀ ಸಿಚುವೇಶನನ್ನೇ ಬದಲಿಸಿದಂತೆ ತೋರುತ್ತಿದೆ. ಮೋದಿ ಮತ್ತು ಅಮಿತ್ ಶಾ ರವರ ತಾಳ ಮಳ ಸ್ಪಷ್ಟವಾಗಿ ಗೋಚರಿಸುತ್ತಿದೆ.

    ಈ ತಳಮಳಕ್ಕೆ ಆರು ಕಾರಣಗಳಿವೆ, ಈ ಕಾರಣಗಳು ಈಗ ದೇಶದ ರಾಜಕೀಯದ ಪ್ರತಿ ಗಲ್ಲಿಯಲ್ಲೂ ಪ್ರತಿಧನಿಸುತ್ತಿದೆ. ಮೊದಲಕರಣ ಆಂಧ್ರಪ್ರದೇಶ. ಹೌದು ಈ ಆಂಧ್ರಪ್ರದೇಶದಲ್ಲಿ ಬಿಜೆಪಿಯೂ ಗಟ್ಟಿಯಾಗಿಲ್ಲ, ಕಾಂಗ್ರೆಸಿನ ನೆಲೆಯೂ ಇಲ್ಲ. ಇಲ್ಲಿಯ ಅಸಲಿ ತಾಕತ್ತು ಜಗನ್ ಮೋಹನ್ ರೆಡ್ಡಿ ಮತ್ತು ಚಂದ್ರ ಬಾಬು ನಾಯ್ಡು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ, ಮೋದಿಗೆ, ಅಮಿತ್ ಶಾರಿಗೆ ಶಾಕ್ ನೀಡಬಹುದಾದವರು ಇವ್ರೇ. ಚಂದ್ರ ಬಾಬು ನಾಯ್ಡು ಎನ್ಡಿಎ ಪರವಾಗಿ ನಿಂತರೆ ಜಗನ್ಮೋಹನ್ ರೆಡ್ಡಿ ಅದರ ಎದುರು ಅಭ್ಯರ್ಥಿಗೆ ಬೆಂಬಲಿಸುತ್ತಾರೆ. ಒಂದು ವೇಳೆ ಜಗನ್ ಬಿಜೆಪಿಗೆ ಸಪೋರ್ಟ್ ಮಾಡಿದರೆ ಚಂದ್ರು ಬಾಬು ನಾಯ್ಡು ಖಂಡಿತವಾಗಿಯೂ ಮುನಿಸಿಕೊಳ್ಳುತ್ತಾರೆ. ಮತ್ತು ಉಲ್ಟಾ ಹೊಡೆಯುತ್ತಾರೆ. ಉಪರಾಷ್ಟ್ರಪತಿಯ ಚುನಾವಣೆಯ ಆಟ ಸಿಲುಕಿರುವದೇ ಇಲ್ಲಿ.

    ಮೋದಿ ಮತ್ತು ಅಮಿತ್ ಶಾ ರವರ ತಳಮಳದ ಎರಡನೆಯ ಕಾರಣ ಉಪರಾಷ್ಟ್ರಪತಿ ಚುನಾವಣೆಯ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ. ರೆಡ್ಡಿ ಎಂಬ ತೆಲುಗು ಮೂಲದ ಅಡ್ಡ ಹೆಸರು ಹೈದರಾಬಾದ್ ಮತ್ತು ತೆಲಂಗಾಣ ಮಾತ್ರವಲ್ಲ ಲೋಕಸಭೆಯಲ್ಲಿ ಇರುವ 11 ಸಂಸದರನ್ನೂ ಸೆಳೆಯುತ್ತಿದೆ. ಭಾಷೆ ಮತ್ತು ಪ್ರಾದೇಶಿಕತೆ ಮತಗಳನ್ನು ಇಂಡಿಯಾ ಮೈತ್ರಿಕೂಟದತ್ತ ಜಾರಿಸುವ ಭಯ ಮೋಶಾರಿಗೆ ಕಾಡುತ್ತಿದೆ.

    ಮೂರನೆಯ ಕಾರಣ ಬಿಜೆಪಿಯ ಅಭ್ಯರ್ಥಿ ತಮಿಳುನಾಡು ಮೂಲದವರಾದರೆ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಆಂಧ್ರಪ್ರದೇಶದವರು. ಇಲ್ಲಿಯೂ ಕೆಲಸ ಮಾಡುವುದು ಭಾಷೆ ಮತ್ತು ಪ್ರಾದೇಶಿಕತೆ ತೆಲುಗು ಪ್ರದೇಶದವರು ಬಿಜೆಪಿಯ ತಮಿಳುನಾಡಿನ ಅಭ್ಯರ್ಥಿಗೆ ಮತ ಕೊಡುವರೇ ಎಂಬುದೊಂದು ಪ್ರಶ್ನೆ. ಇದರೊಂದಿಗೆ ಸಿಗುವ ಮತ್ತೊಂದು ಉತ್ತರ ತಮಿಳಿಗನಾಗಿದ್ದರೂ ಬಿಜೆಪಿಯ ಅಭ್ಯರ್ಥಿಗೆ ತಮಿಳಿಗರು ಮತ ಹಾಕಲ್ಲ.

    ನಾಲ್ಕನೆಯ ಕಾರಣ ಮಲ್ಲಿಕಾರ್ಜುನ ಖರ್ಗೆ. ಹೌದು, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಮಾತ್ರವಲ್ಲ ಅವರು ದಕ್ಷಿಣ ಭಾರತೀಯರು. ಗುಲ್ಬರ್ಗ ದವರಾಗಿರುವುದರಿಂದ ತೆಲುಗು ಕೂಡ ಬಲ್ಲವರಾಗಿದ್ದಾರೆ. ಇದರ ಬರ್ಪೂರ ಪ್ರಯೋಜನ ಪಡೆಯಲು ಅವರಿಗಾಗಲೇ ತೆಲುಗು ಮೂಲದ ಸಂಸದರನ್ನ ಭೇಟಿಯಾಗುತ್ತಿದ್ದಾರೆ. ಮೋದಿ ಮತ್ತು ಅಮಿತ್ ಶಾ ರ ಬಲೆಯಲ್ಲಿರುವ ವೈಎಸ್ಆರ್‌ಸಿಪಿ ಯ ಸಂಸದ ಮೇಘ ರಘುನಾಥ್ ರೆಡ್ಡಿ ಇವರನ್ನು ಕೂಡ ಭೇಟಿಯಾಗಿದ್ದಾರೆ. ಈ ಭೇಟಿ ಮತ್ತು ಮಾತುಕತೆ ಬಿಜೆಪಿಯವರ ಪಾಲಿಗೆ ಅಪಾಯದ ಕರೆಗಂಟೆ ಅಂತಿದೆ.

    ಐದನೆಯ ಕಾರಣ ಇಂಡಿಯಾ ಮೈತ್ರಿಕೂಟದ ರಣನೀತಿ, 2004ರಲ್ಲಿ ಎಪಿಜೆ ಅಬ್ದುಲ್ ಕಲಾಂ ರನ್ನು ಕಣಕ್ಕಿಳಿಸುವಾಗ ಯಾವ ರಣ ನೀತಿಯನ್ನ ಅನುಸರಿಸಲಾಗಿತ್ತೋ, ಅದನ್ನೇ ಇಲ್ಲಿಯೂ ಅನುಸರಿಸಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾವು ಬಿಜೆಪಿ ಅಭ್ಯರ್ಥಿಗೆ ಮತ ಹಾಕಲ್ಲ ಆದರೆ ಇಂಡಿಯಾ ಮೈತ್ರಿಕೂಟದಿಂದ ಯಾವುದೇ ಪಕ್ಷದೊಂದಿಗೆ ಇರದ ಅಭ್ಯರ್ಥಿ ಕಣಕ್ಕಿಳಿಯಲಿ ಎಂದು ಸಂದೇಶ ನೀಡಿದ್ದರು. ಯಾವುದೇ ಪಕ್ಷದಲ್ಲಿ ಇರದ ಸುದರ್ಶನ ರೆಡ್ಡಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.

    ಆರನೆಯ ಕಾರಣ ಮತಗಳ ಲೆಕ್ಕಾಚಾರ. ಏನ್ ಡಿ ಎ ಬಳಿ 422 ಮತಗಳು ಇವೆ, ಅಭ್ಯರ್ಥಿಗೆ ಗೆಲುವಿಗೆ ಬೇಕಾಗಿರುವುದು 392 ಮತಗಳು. ಇಂಡಿಯಾ ಮೈತ್ರಿಕೂಟದಲ್ಲಿ 360 ಸಂಸದರು ಇದ್ದಾರೆ. ಒಂದು ವೇಳೆ ನಾಯ್ಡು ಅವರ 18 ಮತ್ತು ಜಗನ್ ಮೋಹನ್ ರೆಡ್ಡಿ ಅವರ 11 ಸಂಸದರು ಬಿಜೆಪಿಯ ಸಕ್ಯ ತೊರೆದರೆ ಎನ್‌ಡಿಎ ಯ ಲೆಕ್ಕ ಉಲ್ಟಾಪಲ್ಟಾ ಆಗಲಿದೆ.

    ಇದು ಗೊತ್ತಾಗಿರುವುದರಿಂದಲೇ ಮೋದಿ ಮತ್ತು ಅಮಿತ್ ಶಾ ಬೇರೆಯದೇ ಆಟವನ್ನು ಆಡುತ್ತಿದ್ದಾರೆ. ಅದು ಚಂದ್ರ ಬಾಬು ನಾಯ್ಡು ರವರನ್ನು ಬೆದರಿಸುವುದು. ಈಗಾಗಲೇ ಜಾಮೀನಿನ ಮೇಲಿರುವ ಚಂದ್ರ ಬಾಬು ನಾಯ್ಡು ರವರ ಮೇಲೆ ಈಡಿ ಮತ್ತು ಸಿಬಿಐ ಅನ್ನುವ ಚೂ ಬಿಡುವ ಎಚ್ಚರಿಕೆ ನೀಡಿದ್ದಾರೆ. 30 ದಿನ ಜೈಲಿನಲ್ಲಿ ಇದ್ದರೆ ಮುಖ್ಯಮಂತ್ರಿಯ ಪಟ್ಟ ಕಿತ್ತುಕೊಳ್ಳುವ ಕಾನೂನಿನ ಕಡತಗಳನ್ನು ತೋರಿಸಿದ್ದಾರೆ. ಮುಂದೇನಾಗಲಿದೆ ಅದು ನಿಮಗೂ ಕಾಣಲಿದೆ.

    ಆರ್‌ ಎ ಲೋಹಾನಿ, ಮಳಗಿ
    ಸುದ್ದಿ ಸಂಪಾದಕ
    ಸನ್ಮಾರ್ಗ ನ್ಯೂಸ್‌ ಡಿಜಿಟಲ್‌ ಚಾನಲ್‌

  • ಗಾಝಾ ಮಕ್ಕಳ ಬಾಲ್ಯ ಭೀಕರ: 
ಗುಟುಕು ನೀರಿಗೂ ಹಾಹಾಕಾರ

    ಗಾಝಾ ಮಕ್ಕಳ ಬಾಲ್ಯ ಭೀಕರ: ಗುಟುಕು ನೀರಿಗೂ ಹಾಹಾಕಾರ

    ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷದಿಂದ ಗಾಜಾ ಪಟ್ಟಿಯ ಲಕ್ಷಾಂತರ ಮಕ್ಕಳ ಬದುಕು ಜರ್ಜರಿತವಾಗಿದೆ; ಸ್ವಲ್ಪ ಆಹಾರ, ಗುಟುಕು ನೀರಿಗಾಗಿ ಹಾಹಾಕಾರ ನಡೆಯುತ್ತಿದೆ. ಅನೇಕ ಮಕ್ಕಳಿಗೆ ಅವರ ಪೋಷಕರೇ ಉಳಿದಿಲ್ಲ. ಕಣ್ಣ ಮುಂದೆ ಪ್ರೀತಿಪಾತ್ರರ ಸಾವು, ಹಿಂಸಾಚಾರ, ಬಾಂಬ್, ಕ್ಷಿಪಣಿಗಳ ನಿರಂತರ ದಾಳಿ, ಯಾವ ಕ್ಷಣ ಏನಾಗುವುದೋ ಎನ್ನುವ ಭಯ, ಶಿಬಿರದಿಂದ ಶಿಬಿರಕ್ಕೆ ಅಲೆಯುವ ಬದುಕು; ಭೂಮಿಯ ಮೇಲೆ ಮನುಷ್ಯನಿಗೆ ಎದುರಾಗಬಹುದಾದ ಸಕಲ ಸವಾಲುಗಳನ್ನೂ, ಸಂಕಷ್ಟಗಳನ್ನೂ ಬಾಲ್ಯದಲ್ಲೇ ಅನುಭವಿಸುತ್ತಿರುವ, ಯುದ್ಧದ ಆತ್ಯಂತಿಕ ಪರಿಣಾಮಗಳಿಗೆ ಒಳಗಾಗಿರುವ ಗಾಜಾ ‍ಪಟ್ಟಿಯ ಮಕ್ಕಳ ದುರ್ಭರ ಪರಿಸ್ಥಿತಿಯನ್ನು ವಿವರಿಸಲು ಪದಗಳೇ ಲಭ್ಯವಿಲ್ಲ.

    ನಿನಗೆ ಕ್ರೆಯಾನ್‌ಗಳು ಬೇಕೋ, ಬ್ರೆಡ್ ಬೇಕೋ ಎಂದು ಕೇಳಿದರೆ, ನನ್ನ ಆಯ್ಕೆ ಬ್ರೆಡ್’ –

    ಇದು ಗಾಜಾ ಪಟ್ಟಿಯ 12 ವರ್ಷದ ರಹ್ಮಾ ಅಬು ಅಬೆದ್‌ಳ ಮಾತು. ಆಟ ಎಂದರೆ ಊಟ, ನಿದ್ದೆ ಎಲ್ಲವನ್ನೂ ಮರೆಯುವ ಮಕ್ಕಳ ನಡುವೆ ರಹ್ಮಾಳ ಉತ್ತರ ವಿಚಿತ್ರ ಅನ್ನಿಸಬಹುದು. ಆದರೆ, ರಹ್ಮಾಳ ಮಾತಿನಲ್ಲಿ ಗಾಜಾ ಪಟ್ಟಿಯ ಮಕ್ಕಳ ಭೀಕರ ಚಿತ್ರಣವಿದೆ.

    ಇಸ್ರೇಲ್–ಪ್ಯಾಲೆಸ್ಟೀನ್ ನಡುವಿನ ಸಂಘರ್ಷದಲ್ಲಿ ದಕ್ಷಿಣ ಗಾಜಾದಲ್ಲಿದ್ದ ರಹ್ಮಾಳ ಮನೆ ನೆಲಕಚ್ಚಿದೆ. ತನ್ನ ಐವರು ಒಡಹುಟ್ಟಿದವರು ಮತ್ತು ಪೋಷಕರೊಂದಿಗೆ ಆಕೆ ಮೀನುಗಾರಿಕಾ ಉಪಕರಣಗಳ ಶೆಡ್‌ನಲ್ಲಿ ವಾಸವಾಗಿದ್ದಾಳೆ. ರಹ್ಮಾ ಅವರಂತೆಯೇ ಅನೇಕ ನಿರಾಶ್ರಿತ ಕುಟುಂಬಗಳೂ ಅಲ್ಲಿ ಆಶ್ರಯ ಪಡೆದಿವೆ. ದಿನಕ್ಕೆ ಒಂದು ಹೊತ್ತು ಮಾತ್ರ ಊಟ ಮಾಡುವ ರಹ್ಮಾ, ದಿನದ ಬಹುಸಮಯವನ್ನು ಹತ್ತಿರದ ಸಮುದ್ರತೀರದಲ್ಲಿ ಕಳೆಯುತ್ತಾಳೆ. ಒಳ್ಳೆಯ ಬಟ್ಟೆ, ಒಳ್ಳೆಯ ಊಟ ಎಂದರೆ ಹೇಗಿರುತ್ತವೆ ಎನ್ನುವುದರ ನೆನಪೂ ಆಕೆಗೆ ಉಳಿದಿಲ್ಲ. ಮಾಂಸ ತಿನ್ನುವುದು ಅವಳಿಗೀಗ ಒಂದು ಕನಸು.

    ಇದು ರಹ್ಮಾ ಒಬ್ಬಳ ಸ್ಥಿತಿ ಅಲ್ಲ; ಗಾಜಾ ಪಟ್ಟಿಯಲ್ಲಿರುವ 11 ಲಕ್ಷ ಮಕ್ಕಳ ದಾರುಣ ಪರಿಸ್ಥಿತಿ. 22 ತಿಂಗಳುಗಳಿಂದ ನಡೆಯುತ್ತಿರುವ ಸಂಘರ್ಷದಿಂದ ಗಾಜಾದಲ್ಲಿ ಬಾಲ್ಯ ಎನ್ನುವ ಪದಕ್ಕೆ ಅರ್ಥವೇ ಇಲ್ಲದಂತಾಗಿದೆ. ಇಲ್ಲಿನ ಬಹುತೇಕ ಮಕ್ಕಳು ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಂಡಿಲ್ಲ. ಈ ಭಾಗದ ಶೇ 90ರಷ್ಟು ಶಾಲೆಗಳು ನೆಲಕ್ಕುರುಳಿದ್ದರೆ, ಅಳಿದುಳಿದ ಶಾಲೆಗಳು ನಿರಾಶ್ರಿತ ಶಿಬಿರಗಳಾಗಿ ಮಾರ್ಪಟ್ಟಿವೆ.

    ಮಕ್ಕಳಿಗೆ ಹೊಟ್ಟೆತುಂಬ ಊಟ, ಮೈಮುಚ್ಚುವಷ್ಟು ಬಟ್ಟೆ, ದಾಹ ತೀರುವಷ್ಟು ಕುಡಿಯುವ ನೀರು ಕೂಡ ದುರ್ಲಭವಾಗಿವೆ; ಹಸಿವು, ಪದೇ ಪದೇ ಆಶ್ರಯ ಶಿಬಿರಗಳ ಬದಲಾವಣೆ, ಬಾಂಬ್, ಕ್ಷಿಪಣಿ ದಾಳಿಗಳಿಂದ ಅವರು ತೀವ್ರ ದೈಹಿಕ ಮತ್ತು ಮಾನಸಿಕ ಕ್ಷೋಭೆಗೆ ಒಳಗಾಗಿದ್ದು, ಅವರಿಗೆ ತಕ್ಷಣ ವೈದ್ಯಕೀಯ ನೆರವು ಬೇಕಾಗಿದೆ. ಯುದ್ಧದ ಭೀಕರತೆ, ‌ಹಿಂಸಾಚಾರ, ಪ್ರೀತಿಪಾತ್ರರ ಸಾವು, ಭಯ ಮತ್ತು ಮೂಲಸೌಕರ್ಯಗಳ ಕೊರತೆಯಿಂದ ಇಲ್ಲಿನ ಮಕ್ಕಳು ಜೀವಚ್ಛವಗಳಾಗಿದ್ದಾರೆ.

    ಮಹಿಳೆಯರು, ಅದರಲ್ಲೂ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಗಾಜಾ ಪಟ್ಟಿಯಲ್ಲಿ ನಿರ್ಮಾಣವಾಗಿರುವ ಮಾನವೀಯ ಬಿಕ್ಕಟ್ಟಿನ ಮೊದಲ ಬಲಿಪಶುಗಳಾಗಿದ್ದಾರೆ. ಈಗಾಗಲೇ ಸಾವಿರಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ಅದಕ್ಕಿಂತ ಹೆಚ್ಚು ಮಂದಿ ಗಾಯಾಳುಗಳಾಗಿ ಸರಿಯಾದ ಚಿಕಿತ್ಸೆಯೂ ಸಿಗದೇ ನರಳುತ್ತಿದ್ದಾರೆ. ಯುದ್ಧದಿಂದ ನೇರವಾಗಿ ಸತ್ತವರಂತೆಯೇ ಊಟ ಸಿಗದೇ ಸತ್ತವರು, ಕಾಯಿಲೆಗಳಿಂದ ಸತ್ತ ಮಕ್ಕಳ ಸಂಖ್ಯೆಯೂ ಗಣನೀಯವಾಗಿದೆ. ಏರುತ್ತಿರುವ ಉಷ್ಣಾಂಶ ಕೂಡ ಅವರಿಗೆ ಶಾ‍ಪವಾಗಿ ಪರಿಣಮಿಸಿದೆ. ಸುಮಾರು 17 ಸಾವಿರ ಮಕ್ಕಳು ತಮ್ಮ ಪೋಷಕರಿಂದ ದೂರವಾಗಿದ್ದಾರೆ. ಇಸ್ರೇಲ್ 11 ತಿಂಗಳು ಆಹಾರ ಪದಾರ್ಥಗಳ ಸಾಗಣೆಯನ್ನು ನಿರ್ಬಂಧಿಸಿದ್ದರಿಂದ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತೀವ್ರ ಅಪೌಷ್ಟಿಕತೆಯ ಅಪಾಯ ಎದುರಿಸುತ್ತಿದ್ದಾರೆ.

    ಆಹಾರ ಪದಾರ್ಥಗಳ ಲಭ್ಯತೆಯೇ ದೊಡ್ಡ ಸಮಸ್ಯೆಯಾಗಿದೆ. ಬೇಕರಿಗಳನ್ನು ಮುಚ್ಚಲಾಗಿದೆ. ಆಹಾರ ಧಾನ್ಯಗಳ ಬೆಲೆ ಶೇ 700ರಷ್ಟು ಹೆಚ್ಚಾಗಿದ್ದು, ಹಸಿವಿನ ವಿರಾಟ್ ಸ್ವರೂಪವು ಇಲ್ಲಿ ಕಂಡುಬರುತ್ತಿದೆ. ದಿನಕ್ಕೆ ಒಂದು ಹೊತ್ತು ಕೂಡ ಊಟ ಸಿಗದವರ ಸಂಖ್ಯೆ ದೊಡ್ಡದಿದೆ. ಹಸಿವು ತಾಳಲಾಗದೇ ಮಕ್ಕಳು ಆಕ್ರಂದನ ಮಾಡುವುದು, ‍ಪೋಷಕರು ತಮ್ಮ ಮಕ್ಕಳಿಗಾಗಿ ಹಿಡಿ ಅನ್ನ ನೀಡುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುವುದು ಇಲ್ಲಿ ಸಾಮಾನ್ಯ ದೃಶ್ಯಗಳಾಗಿವೆ.

    ಕೆಲವು ಸ್ವಯಂ ಸೇವಾ ಸಂಸ್ಥೆಗಳು, ಅಂತರರಾಷ್ಟ್ರೀಯ ಸಂಘ ಸಂಸ್ಥೆಗಳು ಇಲ್ಲಿ ಉದ್ಭವಿಸಿರುವ ಮಾನವೀಯ ಬಿಕ್ಕಟ್ಟನ್ನು ಶಮನ ಮಾಡಲು ಒಂದಿಷ್ಟು ಪ್ರಯತ್ನ ನಡೆಸುತ್ತಿವೆ. ಅದಕ್ಕಾಗಿ ಹಲವು ದೇಶಗಳು ಧನಸಹಾಯ ಮಾಡುತ್ತಿವೆ. ಆದರೆ, ಇಲ್ಲಿನ ಪರಿಸ್ಥಿತಿಯ ತೀವ್ರತೆಗೆ ತಕ್ಕಂತೆ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ರಕ್ಷಣಾ ಕಾರ್ಯದಲ್ಲಿ, ಆರೋಗ್ಯ ಸೇವೆಗಳಲ್ಲಿ ತೊಡಗಿರುವ ಸಿಬ್ಬಂದಿಯೂ ಹಸಿದ ಹೊಟ್ಟೆಯಲ್ಲಿಯೇ ಕೆಲಸ ಮಾಡಬೇಕಾದ ಸ್ಥಿತಿ ಇದೆ. ಆಹಾರ ಪದಾರ್ಥ, ಪರಿಹಾರ ಸಾಮಗ್ರಿಯನ್ನು ಹೊತ್ತ ಟ್ರಕ್‌ಗಳು ಆಗಮಿಸುತ್ತಿದ್ದಂತೆಯೇ ಜನ ಅವುಗಳನ್ನು ಮುತ್ತಿಕೊಳ್ಳುವ, ನಿರಾಶ್ರಿತರಿಗೆ ಪೂರೈಸಲಾಗುವ ಆಹಾರಕ್ಕಾಗಿ ಪೈಪೋಟಿ ನಡೆಸುವ ಚಿತ್ರಗಳು, ವಿಡಿಯೊಗಳು ಅಲ್ಲಿನ ಪರಿಸ್ಥಿತಿಯ ತೀವ್ರತೆಯನ್ನು ಹೇಳುತ್ತಿವೆ.

    ಆಹಾರಕ್ಕಾಗಿ, ಜೀವ ಉಳಿಸುವಂಥ ಮಾನವೀಯ ನೆರವಿಗಾಗಿ ಆಸೆಯಿಂದ ಎದುರುನೋಡುತ್ತಿರುವ, ಎಲುಬಿನ ಹಂದರವಾಗಿರುವ ಮಕ್ಕಳ ದೈನ್ಯ, ನೋವು ತುಂಬಿದ ಕಣ್ಣುಗಳು ಗಾಜಾ ಪಟ್ಟಿಯ ಪರಿಸ್ಥಿತಿಗೆ, ಮನುಷ್ಯ ನಿರ್ಮಿತ ಬಿಕ್ಕಟ್ಟಿನ ತೀವ್ರತೆಗೆ, ದೇಶ–ದೇಶಗಳ ನಡುವಿನ ಯುದ್ಧ, ಅಸಹನೆ, ಆಕ್ರಮಣಗಳಿಂದ ಉಂಟಾಗುವ ಪರಿಣಾಮಗಳಿಗೆ ಸಂಕೇತದಂತಿವೆ.

    ನೆರವು ತಡೆಯುತ್ತಿರುವ ಇಸ್ರೇಲ್‌

    ಗಾಜಾ ಪಟ್ಟಿಯ ಶೇ 86ರಷ್ಟು ಭೂಭಾಗದ ಮೇಲೆ ನಿಯಂತ್ರಣ ಹೊಂದಿರುವ ಇಸ್ರೇಲ್‌, ಹಸಿವಿನಿಂದ ಬಳಲುತ್ತಿರುವ ನಿರಾಶ್ರಿತ ಪ್ಯಾಲೆಸ್ಟೀನಿಯನ್ನರಿಗೆ ಆಹಾರ ವಸ್ತುಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ಪೂರೈಸುವುದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘಟಕ ಆರೋಪಿಸಿದೆ. ಕಳೆದ ಕೆಲವು ವಾರಗಳಿಂದ ಗಾಜಾ ಪಟ್ಟಿಗೆ ಸ್ವಲ್ಪ ಪ್ರಮಾಣದಲ್ಲಿ ನೆರವು ತಲುಪುವುದಕ್ಕೆ ಮಾತ್ರ ಇಸ್ರೇಲ್‌ ಅವಕಾಶ ನೀಡಿದೆ. ಆದರೆ, ಅಲ್ಲಿ ಹೆಚ್ಚುತ್ತಿರುವ ಹಸಿವನ್ನು ತಡೆಯಲು ಇದು ಸಾಕಾಗುತ್ತಿಲ್ಲ ಎಂದು ಅದು ಹೇಳಿದೆ. ಯುದ್ಧ ಆರಂಭವಾದ, 2023ರ ಅಕ್ಟೋಬರ್‌ 7ಕ್ಕೂ ಮೊದಲು ಪ್ರತಿ ದಿನ 500 ಟ್ರಕ್‌ಗಳು ಗಾಜಾವನ್ನು ಪ್ರವೇಶಿಸುತ್ತಿದ್ದವು. ಅಂದರೆ ಪ್ರತಿ ತಿಂಗಳು 15 ಸಾವಿರದಷ್ಟು ಟ್ರಕ್‌ಗಳು ನೆರವಿನ ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿದ್ದವು. ಯುದ್ಧದ ನಂತರ ಇದಕ್ಕೆ ಇಸ್ರೇಲ್‌ ತಡೆಯೊಡ್ಡಿತ್ತು. ಕಡಿಮೆ ಸಂಖ್ಯೆಯ ಟ್ರಕ್‌ಗಳಿಗಷ್ಟೇ ಅವಕಾಶ ನೀಡುತ್ತಿತ್ತು.

    ಈಗ ಅಂತರರಾಷ್ಟ್ರೀಯ ಒತ್ತಡದ ಬಳಿಕ ಆಹಾರ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳಿಗೆ ಗಾಜಾದತ್ತ ತೆರಳಲು ಮತ್ತು ವಿಮಾನ, ಹೆಲಿಕಾಪ್ಟರ್‌ಗಳ ಮೂಲಕ ಅಗತ್ಯ ವಸ್ತುಗಳನ್ನು ನಿರಾಶ್ರಿತ ಶಿಬಿರಗಳ ವ್ಯಾಪ್ತಿಯಲ್ಲಿ ಹಾಕಲು ಇಸ್ರೇಲ್‌ ಅವಕಾಶ ನೀಡಿದೆ ಎಂದು ವರದಿಯಾಗಿದೆ.

    ಚಿಕಿತ್ಸೆಗಾಗಿ ಬ್ರಿಟನ್‌ಗೆ

    ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿರುವ ಮತ್ತು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 30ರಿಂದ 50 ಮಕ್ಕಳನ್ನು ಮುಂದಿನ ವಾರಗಳಲ್ಲಿ ಗಾಜಾದಿಂದ ಬ್ರಿಟನ್‌ಗೆ ಕರೆದುಕೊಂಡು ಬಂದು ಸರ್ಕಾರ ಚಿಕಿತ್ಸೆ ನೀಡಲಿದೆ ಎಂದು ಬಿಬಿಸಿ ವರದಿ ಮಾಡಿದೆ.

    ಹಮಾಸ್‌ ನೇತೃತ್ವದ ಆರೋಗ್ಯ ಸಚಿವಾಲಯದ ವೈದ್ಯರು ಆಯ್ಕೆ ಮಾಡಿದ ಮಕ್ಕಳನ್ನು ಕರೆದುಕೊಂಡು ಬಂದು ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಮಕ್ಕಳ ಪ್ರಯಾಣದ ಸಮನ್ವಯವನ್ನು ವಿಶ್ವ ಆರೋಗ್ಯ ಸಂಸ್ಥೆ ಮಾಡಲಿದೆ. 

    ಅಮೆರಿಕದ ಮೌನಕ್ಕೆ ಅತೃಪ್ತಿ

    ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಉಕ್ರೇನ್‌ ಸೈನಿಕರು ಹಾಗೂ ಜನರು ಸಾಯುತ್ತಿರುವುದರ ಬಗ್ಗೆ ಮಾತನಾಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಗಾಜಾದಲ್ಲಿನ ಮಾನವೀಯ ಬಿಕ್ಕಟ್ಟಿನ ಬಗ್ಗೆ ಮೌನ ತಾಳಿದ್ದಾರೆ. ಬದಲಿಗೆ, ಅಮೆರಿಕ ಸರ್ಕಾರ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವುದು ಪ್ಯಾಲೆಸ್ಟೀನ್‌ನ ಬೆಂಬಲಕ್ಕೆ ನಿಂತಿರುವ ರಾಷ್ಟ್ರಗಳು ಹಾಗೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

    ಆಧಾರ: ಇಂಟರ್‌ನ್ಯಾಷನಲ್ ರೆಸ್ಕ್ಯೂಕಮಿಟಿ, ಬಿಬಿಸಿ, ರಾಯಿಟರ್ಸ್‌, ವಿಶ್ವಸಂಸ್ಥೆಯ ವರದಿಗಳು, ದಿ ನ್ಯೂಯಾರ್ಕ್‌ ಟೈಮ್ಸ್‌

  • ಗಾಝಾ ಮಕ್ಕಳ ಬಾಲ್ಯ ಭೀಕರ: 
ಗುಟುಕು ನೀರಿಗೂ ಹಾಹಾಕಾರ

    ಗಾಝಾ ಮಕ್ಕಳ ಬಾಲ್ಯ ಭೀಕರ: ಗುಟುಕು ನೀರಿಗೂ ಹಾಹಾಕಾರ

    ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷದಿಂದ ಗಾಜಾ ಪಟ್ಟಿಯ ಲಕ್ಷಾಂತರ ಮಕ್ಕಳ ಬದುಕು ಜರ್ಜರಿತವಾಗಿದೆ; ಸ್ವಲ್ಪ ಆಹಾರ, ಗುಟುಕು ನೀರಿಗಾಗಿ ಹಾಹಾಕಾರ ನಡೆಯುತ್ತಿದೆ. ಅನೇಕ ಮಕ್ಕಳಿಗೆ ಅವರ ಪೋಷಕರೇ ಉಳಿದಿಲ್ಲ. ಕಣ್ಣ ಮುಂದೆ ಪ್ರೀತಿಪಾತ್ರರ ಸಾವು, ಹಿಂಸಾಚಾರ, ಬಾಂಬ್, ಕ್ಷಿಪಣಿಗಳ ನಿರಂತರ ದಾಳಿ, ಯಾವ ಕ್ಷಣ ಏನಾಗುವುದೋ ಎನ್ನುವ ಭಯ, ಶಿಬಿರದಿಂದ ಶಿಬಿರಕ್ಕೆ ಅಲೆಯುವ ಬದುಕು; ಭೂಮಿಯ ಮೇಲೆ ಮನುಷ್ಯನಿಗೆ ಎದುರಾಗಬಹುದಾದ ಸಕಲ ಸವಾಲುಗಳನ್ನೂ, ಸಂಕಷ್ಟಗಳನ್ನೂ ಬಾಲ್ಯದಲ್ಲೇ ಅನುಭವಿಸುತ್ತಿರುವ, ಯುದ್ಧದ ಆತ್ಯಂತಿಕ ಪರಿಣಾಮಗಳಿಗೆ ಒಳಗಾಗಿರುವ ಗಾಜಾ ‍ಪಟ್ಟಿಯ ಮಕ್ಕಳ ದುರ್ಭರ ಪರಿಸ್ಥಿತಿಯನ್ನು ವಿವರಿಸಲು ಪದಗಳೇ ಲಭ್ಯವಿಲ್ಲ.

    ನಿನಗೆ ಕ್ರೆಯಾನ್‌ಗಳು ಬೇಕೋ, ಬ್ರೆಡ್ ಬೇಕೋ ಎಂದು ಕೇಳಿದರೆ, ನನ್ನ ಆಯ್ಕೆ ಬ್ರೆಡ್’ –

    ಇದು ಗಾಜಾ ಪಟ್ಟಿಯ 12 ವರ್ಷದ ರಹ್ಮಾ ಅಬು ಅಬೆದ್‌ಳ ಮಾತು. ಆಟ ಎಂದರೆ ಊಟ, ನಿದ್ದೆ ಎಲ್ಲವನ್ನೂ ಮರೆಯುವ ಮಕ್ಕಳ ನಡುವೆ ರಹ್ಮಾಳ ಉತ್ತರ ವಿಚಿತ್ರ ಅನ್ನಿಸಬಹುದು. ಆದರೆ, ರಹ್ಮಾಳ ಮಾತಿನಲ್ಲಿ ಗಾಜಾ ಪಟ್ಟಿಯ ಮಕ್ಕಳ ಭೀಕರ ಚಿತ್ರಣವಿದೆ.

    ಇಸ್ರೇಲ್–ಪ್ಯಾಲೆಸ್ಟೀನ್ ನಡುವಿನ ಸಂಘರ್ಷದಲ್ಲಿ ದಕ್ಷಿಣ ಗಾಜಾದಲ್ಲಿದ್ದ ರಹ್ಮಾಳ ಮನೆ ನೆಲಕಚ್ಚಿದೆ. ತನ್ನ ಐವರು ಒಡಹುಟ್ಟಿದವರು ಮತ್ತು ಪೋಷಕರೊಂದಿಗೆ ಆಕೆ ಮೀನುಗಾರಿಕಾ ಉಪಕರಣಗಳ ಶೆಡ್‌ನಲ್ಲಿ ವಾಸವಾಗಿದ್ದಾಳೆ. ರಹ್ಮಾ ಅವರಂತೆಯೇ ಅನೇಕ ನಿರಾಶ್ರಿತ ಕುಟುಂಬಗಳೂ ಅಲ್ಲಿ ಆಶ್ರಯ ಪಡೆದಿವೆ. ದಿನಕ್ಕೆ ಒಂದು ಹೊತ್ತು ಮಾತ್ರ ಊಟ ಮಾಡುವ ರಹ್ಮಾ, ದಿನದ ಬಹುಸಮಯವನ್ನು ಹತ್ತಿರದ ಸಮುದ್ರತೀರದಲ್ಲಿ ಕಳೆಯುತ್ತಾಳೆ. ಒಳ್ಳೆಯ ಬಟ್ಟೆ, ಒಳ್ಳೆಯ ಊಟ ಎಂದರೆ ಹೇಗಿರುತ್ತವೆ ಎನ್ನುವುದರ ನೆನಪೂ ಆಕೆಗೆ ಉಳಿದಿಲ್ಲ. ಮಾಂಸ ತಿನ್ನುವುದು ಅವಳಿಗೀಗ ಒಂದು ಕನಸು.

    ಇದು ರಹ್ಮಾ ಒಬ್ಬಳ ಸ್ಥಿತಿ ಅಲ್ಲ; ಗಾಜಾ ಪಟ್ಟಿಯಲ್ಲಿರುವ 11 ಲಕ್ಷ ಮಕ್ಕಳ ದಾರುಣ ಪರಿಸ್ಥಿತಿ. 22 ತಿಂಗಳುಗಳಿಂದ ನಡೆಯುತ್ತಿರುವ ಸಂಘರ್ಷದಿಂದ ಗಾಜಾದಲ್ಲಿ ಬಾಲ್ಯ ಎನ್ನುವ ಪದಕ್ಕೆ ಅರ್ಥವೇ ಇಲ್ಲದಂತಾಗಿದೆ. ಇಲ್ಲಿನ ಬಹುತೇಕ ಮಕ್ಕಳು ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಂಡಿಲ್ಲ. ಈ ಭಾಗದ ಶೇ 90ರಷ್ಟು ಶಾಲೆಗಳು ನೆಲಕ್ಕುರುಳಿದ್ದರೆ, ಅಳಿದುಳಿದ ಶಾಲೆಗಳು ನಿರಾಶ್ರಿತ ಶಿಬಿರಗಳಾಗಿ ಮಾರ್ಪಟ್ಟಿವೆ.

    ಮಕ್ಕಳಿಗೆ ಹೊಟ್ಟೆತುಂಬ ಊಟ, ಮೈಮುಚ್ಚುವಷ್ಟು ಬಟ್ಟೆ, ದಾಹ ತೀರುವಷ್ಟು ಕುಡಿಯುವ ನೀರು ಕೂಡ ದುರ್ಲಭವಾಗಿವೆ; ಹಸಿವು, ಪದೇ ಪದೇ ಆಶ್ರಯ ಶಿಬಿರಗಳ ಬದಲಾವಣೆ, ಬಾಂಬ್, ಕ್ಷಿಪಣಿ ದಾಳಿಗಳಿಂದ ಅವರು ತೀವ್ರ ದೈಹಿಕ ಮತ್ತು ಮಾನಸಿಕ ಕ್ಷೋಭೆಗೆ ಒಳಗಾಗಿದ್ದು, ಅವರಿಗೆ ತಕ್ಷಣ ವೈದ್ಯಕೀಯ ನೆರವು ಬೇಕಾಗಿದೆ. ಯುದ್ಧದ ಭೀಕರತೆ, ‌ಹಿಂಸಾಚಾರ, ಪ್ರೀತಿಪಾತ್ರರ ಸಾವು, ಭಯ ಮತ್ತು ಮೂಲಸೌಕರ್ಯಗಳ ಕೊರತೆಯಿಂದ ಇಲ್ಲಿನ ಮಕ್ಕಳು ಜೀವಚ್ಛವಗಳಾಗಿದ್ದಾರೆ.

    ಮಹಿಳೆಯರು, ಅದರಲ್ಲೂ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಗಾಜಾ ಪಟ್ಟಿಯಲ್ಲಿ ನಿರ್ಮಾಣವಾಗಿರುವ ಮಾನವೀಯ ಬಿಕ್ಕಟ್ಟಿನ ಮೊದಲ ಬಲಿಪಶುಗಳಾಗಿದ್ದಾರೆ. ಈಗಾಗಲೇ ಸಾವಿರಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ಅದಕ್ಕಿಂತ ಹೆಚ್ಚು ಮಂದಿ ಗಾಯಾಳುಗಳಾಗಿ ಸರಿಯಾದ ಚಿಕಿತ್ಸೆಯೂ ಸಿಗದೇ ನರಳುತ್ತಿದ್ದಾರೆ. ಯುದ್ಧದಿಂದ ನೇರವಾಗಿ ಸತ್ತವರಂತೆಯೇ ಊಟ ಸಿಗದೇ ಸತ್ತವರು, ಕಾಯಿಲೆಗಳಿಂದ ಸತ್ತ ಮಕ್ಕಳ ಸಂಖ್ಯೆಯೂ ಗಣನೀಯವಾಗಿದೆ. ಏರುತ್ತಿರುವ ಉಷ್ಣಾಂಶ ಕೂಡ ಅವರಿಗೆ ಶಾ‍ಪವಾಗಿ ಪರಿಣಮಿಸಿದೆ. ಸುಮಾರು 17 ಸಾವಿರ ಮಕ್ಕಳು ತಮ್ಮ ಪೋಷಕರಿಂದ ದೂರವಾಗಿದ್ದಾರೆ. ಇಸ್ರೇಲ್ 11 ತಿಂಗಳು ಆಹಾರ ಪದಾರ್ಥಗಳ ಸಾಗಣೆಯನ್ನು ನಿರ್ಬಂಧಿಸಿದ್ದರಿಂದ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತೀವ್ರ ಅಪೌಷ್ಟಿಕತೆಯ ಅಪಾಯ ಎದುರಿಸುತ್ತಿದ್ದಾರೆ.

    ಆಹಾರ ಪದಾರ್ಥಗಳ ಲಭ್ಯತೆಯೇ ದೊಡ್ಡ ಸಮಸ್ಯೆಯಾಗಿದೆ. ಬೇಕರಿಗಳನ್ನು ಮುಚ್ಚಲಾಗಿದೆ. ಆಹಾರ ಧಾನ್ಯಗಳ ಬೆಲೆ ಶೇ 700ರಷ್ಟು ಹೆಚ್ಚಾಗಿದ್ದು, ಹಸಿವಿನ ವಿರಾಟ್ ಸ್ವರೂಪವು ಇಲ್ಲಿ ಕಂಡುಬರುತ್ತಿದೆ. ದಿನಕ್ಕೆ ಒಂದು ಹೊತ್ತು ಕೂಡ ಊಟ ಸಿಗದವರ ಸಂಖ್ಯೆ ದೊಡ್ಡದಿದೆ. ಹಸಿವು ತಾಳಲಾಗದೇ ಮಕ್ಕಳು ಆಕ್ರಂದನ ಮಾಡುವುದು, ‍ಪೋಷಕರು ತಮ್ಮ ಮಕ್ಕಳಿಗಾಗಿ ಹಿಡಿ ಅನ್ನ ನೀಡುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುವುದು ಇಲ್ಲಿ ಸಾಮಾನ್ಯ ದೃಶ್ಯಗಳಾಗಿವೆ.

    ಕೆಲವು ಸ್ವಯಂ ಸೇವಾ ಸಂಸ್ಥೆಗಳು, ಅಂತರರಾಷ್ಟ್ರೀಯ ಸಂಘ ಸಂಸ್ಥೆಗಳು ಇಲ್ಲಿ ಉದ್ಭವಿಸಿರುವ ಮಾನವೀಯ ಬಿಕ್ಕಟ್ಟನ್ನು ಶಮನ ಮಾಡಲು ಒಂದಿಷ್ಟು ಪ್ರಯತ್ನ ನಡೆಸುತ್ತಿವೆ. ಅದಕ್ಕಾಗಿ ಹಲವು ದೇಶಗಳು ಧನಸಹಾಯ ಮಾಡುತ್ತಿವೆ. ಆದರೆ, ಇಲ್ಲಿನ ಪರಿಸ್ಥಿತಿಯ ತೀವ್ರತೆಗೆ ತಕ್ಕಂತೆ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ರಕ್ಷಣಾ ಕಾರ್ಯದಲ್ಲಿ, ಆರೋಗ್ಯ ಸೇವೆಗಳಲ್ಲಿ ತೊಡಗಿರುವ ಸಿಬ್ಬಂದಿಯೂ ಹಸಿದ ಹೊಟ್ಟೆಯಲ್ಲಿಯೇ ಕೆಲಸ ಮಾಡಬೇಕಾದ ಸ್ಥಿತಿ ಇದೆ. ಆಹಾರ ಪದಾರ್ಥ, ಪರಿಹಾರ ಸಾಮಗ್ರಿಯನ್ನು ಹೊತ್ತ ಟ್ರಕ್‌ಗಳು ಆಗಮಿಸುತ್ತಿದ್ದಂತೆಯೇ ಜನ ಅವುಗಳನ್ನು ಮುತ್ತಿಕೊಳ್ಳುವ, ನಿರಾಶ್ರಿತರಿಗೆ ಪೂರೈಸಲಾಗುವ ಆಹಾರಕ್ಕಾಗಿ ಪೈಪೋಟಿ ನಡೆಸುವ ಚಿತ್ರಗಳು, ವಿಡಿಯೊಗಳು ಅಲ್ಲಿನ ಪರಿಸ್ಥಿತಿಯ ತೀವ್ರತೆಯನ್ನು ಹೇಳುತ್ತಿವೆ.

    ಆಹಾರಕ್ಕಾಗಿ, ಜೀವ ಉಳಿಸುವಂಥ ಮಾನವೀಯ ನೆರವಿಗಾಗಿ ಆಸೆಯಿಂದ ಎದುರುನೋಡುತ್ತಿರುವ, ಎಲುಬಿನ ಹಂದರವಾಗಿರುವ ಮಕ್ಕಳ ದೈನ್ಯ, ನೋವು ತುಂಬಿದ ಕಣ್ಣುಗಳು ಗಾಜಾ ಪಟ್ಟಿಯ ಪರಿಸ್ಥಿತಿಗೆ, ಮನುಷ್ಯ ನಿರ್ಮಿತ ಬಿಕ್ಕಟ್ಟಿನ ತೀವ್ರತೆಗೆ, ದೇಶ–ದೇಶಗಳ ನಡುವಿನ ಯುದ್ಧ, ಅಸಹನೆ, ಆಕ್ರಮಣಗಳಿಂದ ಉಂಟಾಗುವ ಪರಿಣಾಮಗಳಿಗೆ ಸಂಕೇತದಂತಿವೆ.

    ನೆರವು ತಡೆಯುತ್ತಿರುವ ಇಸ್ರೇಲ್‌

    ಗಾಜಾ ಪಟ್ಟಿಯ ಶೇ 86ರಷ್ಟು ಭೂಭಾಗದ ಮೇಲೆ ನಿಯಂತ್ರಣ ಹೊಂದಿರುವ ಇಸ್ರೇಲ್‌, ಹಸಿವಿನಿಂದ ಬಳಲುತ್ತಿರುವ ನಿರಾಶ್ರಿತ ಪ್ಯಾಲೆಸ್ಟೀನಿಯನ್ನರಿಗೆ ಆಹಾರ ವಸ್ತುಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ಪೂರೈಸುವುದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘಟಕ ಆರೋಪಿಸಿದೆ. ಕಳೆದ ಕೆಲವು ವಾರಗಳಿಂದ ಗಾಜಾ ಪಟ್ಟಿಗೆ ಸ್ವಲ್ಪ ಪ್ರಮಾಣದಲ್ಲಿ ನೆರವು ತಲುಪುವುದಕ್ಕೆ ಮಾತ್ರ ಇಸ್ರೇಲ್‌ ಅವಕಾಶ ನೀಡಿದೆ. ಆದರೆ, ಅಲ್ಲಿ ಹೆಚ್ಚುತ್ತಿರುವ ಹಸಿವನ್ನು ತಡೆಯಲು ಇದು ಸಾಕಾಗುತ್ತಿಲ್ಲ ಎಂದು ಅದು ಹೇಳಿದೆ. ಯುದ್ಧ ಆರಂಭವಾದ, 2023ರ ಅಕ್ಟೋಬರ್‌ 7ಕ್ಕೂ ಮೊದಲು ಪ್ರತಿ ದಿನ 500 ಟ್ರಕ್‌ಗಳು ಗಾಜಾವನ್ನು ಪ್ರವೇಶಿಸುತ್ತಿದ್ದವು. ಅಂದರೆ ಪ್ರತಿ ತಿಂಗಳು 15 ಸಾವಿರದಷ್ಟು ಟ್ರಕ್‌ಗಳು ನೆರವಿನ ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿದ್ದವು. ಯುದ್ಧದ ನಂತರ ಇದಕ್ಕೆ ಇಸ್ರೇಲ್‌ ತಡೆಯೊಡ್ಡಿತ್ತು. ಕಡಿಮೆ ಸಂಖ್ಯೆಯ ಟ್ರಕ್‌ಗಳಿಗಷ್ಟೇ ಅವಕಾಶ ನೀಡುತ್ತಿತ್ತು.

    ಈಗ ಅಂತರರಾಷ್ಟ್ರೀಯ ಒತ್ತಡದ ಬಳಿಕ ಆಹಾರ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳಿಗೆ ಗಾಜಾದತ್ತ ತೆರಳಲು ಮತ್ತು ವಿಮಾನ, ಹೆಲಿಕಾಪ್ಟರ್‌ಗಳ ಮೂಲಕ ಅಗತ್ಯ ವಸ್ತುಗಳನ್ನು ನಿರಾಶ್ರಿತ ಶಿಬಿರಗಳ ವ್ಯಾಪ್ತಿಯಲ್ಲಿ ಹಾಕಲು ಇಸ್ರೇಲ್‌ ಅವಕಾಶ ನೀಡಿದೆ ಎಂದು ವರದಿಯಾಗಿದೆ.

    ಚಿಕಿತ್ಸೆಗಾಗಿ ಬ್ರಿಟನ್‌ಗೆ

    ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿರುವ ಮತ್ತು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 30ರಿಂದ 50 ಮಕ್ಕಳನ್ನು ಮುಂದಿನ ವಾರಗಳಲ್ಲಿ ಗಾಜಾದಿಂದ ಬ್ರಿಟನ್‌ಗೆ ಕರೆದುಕೊಂಡು ಬಂದು ಸರ್ಕಾರ ಚಿಕಿತ್ಸೆ ನೀಡಲಿದೆ ಎಂದು ಬಿಬಿಸಿ ವರದಿ ಮಾಡಿದೆ.

    ಹಮಾಸ್‌ ನೇತೃತ್ವದ ಆರೋಗ್ಯ ಸಚಿವಾಲಯದ ವೈದ್ಯರು ಆಯ್ಕೆ ಮಾಡಿದ ಮಕ್ಕಳನ್ನು ಕರೆದುಕೊಂಡು ಬಂದು ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಮಕ್ಕಳ ಪ್ರಯಾಣದ ಸಮನ್ವಯವನ್ನು ವಿಶ್ವ ಆರೋಗ್ಯ ಸಂಸ್ಥೆ ಮಾಡಲಿದೆ. 

    ಅಮೆರಿಕದ ಮೌನಕ್ಕೆ ಅತೃಪ್ತಿ

    ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಉಕ್ರೇನ್‌ ಸೈನಿಕರು ಹಾಗೂ ಜನರು ಸಾಯುತ್ತಿರುವುದರ ಬಗ್ಗೆ ಮಾತನಾಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಗಾಜಾದಲ್ಲಿನ ಮಾನವೀಯ ಬಿಕ್ಕಟ್ಟಿನ ಬಗ್ಗೆ ಮೌನ ತಾಳಿದ್ದಾರೆ. ಬದಲಿಗೆ, ಅಮೆರಿಕ ಸರ್ಕಾರ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವುದು ಪ್ಯಾಲೆಸ್ಟೀನ್‌ನ ಬೆಂಬಲಕ್ಕೆ ನಿಂತಿರುವ ರಾಷ್ಟ್ರಗಳು ಹಾಗೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

    ಆಧಾರ: ಇಂಟರ್‌ನ್ಯಾಷನಲ್ ರೆಸ್ಕ್ಯೂಕಮಿಟಿ, ಬಿಬಿಸಿ, ರಾಯಿಟರ್ಸ್‌, ವಿಶ್ವಸಂಸ್ಥೆಯ ವರದಿಗಳು, ದಿ ನ್ಯೂಯಾರ್ಕ್‌ ಟೈಮ್ಸ್‌

  • ಕೈಬರಹದ ಕುರ್‌ಆನ್ ಅನಾವರಣಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ: 
ಪೂರ್ಣಗೊಳಿಸಲು ತೆಗೆದುಕೊಂಡ ವರ್ಷಗಳೆಷ್ಟು..?

    ಕೈಬರಹದ ಕುರ್‌ಆನ್ ಅನಾವರಣಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ: ಪೂರ್ಣಗೊಳಿಸಲು ತೆಗೆದುಕೊಂಡ ವರ್ಷಗಳೆಷ್ಟು..?

    ಪುತ್ತೂರು (ದಕ್ಷಿಣ ಕನ್ನಡ): ಶಾಯಿಯಲ್ಲಿ ಅದ್ದುವ ಪೆನ್ ಬಳಸಿ, ಕುರ್‌ ಆನ್‌ ಬರೆದು ತಾಲ್ಲೂಕಿನ ಕುಂಬ್ರದ ಮರ್ಕಝುಲ್ ಹುದಾ ಮಹಿಳಾ ಕಾಲೇಜು ವಿದ್ಯಾರ್ಥಿನಿ ಗಮನ ಸೆಳೆದಿದ್ದಾರೆ.

    ಕುಂಬ್ರ ಮರ್ಕಝುಲ್‌ ಹುದಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸಜ್‌ಲ ಇಸ್ಮಾಯಿಲ್‌ ಅವರು ಪವಿತ್ರ ಕುರ್‌ಆನ್‌ನ 30 ಕಾಂಡಗಳನ್ನು ಕೈಯಲ್ಲಿ ಬರೆಯುವ ಮೂಲಕ ಸಾಧನೆ ಮಾಡಿದ್ದಾರೆ.

    ಈ ಸಾಧನೆಯ ಹಿಂದೆ ಸುಮಾರು 5 ವರ್ಷಗಳ ನಿರಂತರ ಪರಿಶ್ರಮವಿದೆ. ಪುತ್ತೂರು ತಾಲೂಕಿನ ಬೈತಡ್ಕದ ಇಸ್ಮಾಯಿಲ್‌ ಹಾಜಿ ಮತ್ತು ಝಹ್‌ರಾ ಜಾಸ್ಮಿನ್‌ ದಂಪತಿಯ ಪುತ್ರಿಯಾಗಿರುವ ಸಜ್‌ಲ ಅವರು ಕುರ್‌ಆನ್‌ ಬರವಣಿಗೆಯನ್ನು 2021ರ ಜನವರಿಯಲ್ಲಿ ಆರಂಭಿಸಿದ್ದರು. ಆಗ ಅವರು ಇದೇ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಪ್ರಸ್ತುತ ಹಳೆವಿದ್ಯಾರ್ಥಿಯಾಗಿದ್ದು, 2025ರ ಆಗಸ್ಟ್‌ನಲ್ಲಿ ಬರವಣಿಗೆ ಪೂರ್ಣಗೊಂಡಿದೆ.

    ಪ್ರವಾದಿ ಕಾಲದಲ್ಲಿ ಅವತೀರ್ಣಗೊಂಡ ಕುರ್‌ಆನ್‌ ಅನ್ನು ಆ ಕಾಲದ ಪಂಡಿತ ಶಿರೋಮಣಿಗಳು ಕೈ ಬರಹದ ಮೂಲಕ ಬರೆದು ಪರಸ್ಪರ ಹಂಚಿಕೊಳ್ಳುತ್ತಿದ್ದರು. ಪ್ರಸ್ತುತ ಮುದ್ರಣ ಸೌಲಭ್ಯ ಇದ್ದರೂ ಸಜ್‌ಲ ಅವರು ಕೈಯಲ್ಲಿ ಸ್ಫುಟವಾಗಿ ಬರೆದಿರುವುದು ಸಾಧನೆ ಎನಿಸಿದೆ. ಈ ಕೃತಿಯನ್ನು ಶನಿವಾರ ಕುಂಬ್ರದ ಮರ್ಕಝುಲ್‌ ಹುದಾ ಮಹಿಳಾ ಕಾಲೇಜಿನಲ್ಲಿ ಕೇರಳದ ಮರ್ಕಝ್ ನಾಲೇಜ್‌ ಸಿಟಿಯ ಮುರ್‌ ರಿಸ್‌ ಯಾಸೀನ್‌ ಸಖಾಫಿ ಅಲ್‌ ಅಝ್ಹರಿ ಅವರು ಲೋಕಾರ್ಪಣೆಗೊಳಿಸಿದರು.

    ಮರ್ಕಝುಲ್‌ ಹುದಾ ಮಹಿಳಾ ಕಾಲೇಜು ಅಧ್ಯಕ್ಷ ಅರಿಯಡ್ಕ ಅಬ್ದುಲ್‌ ರಹಿಮಾನ್‌ ಹಾಜಿ, ಷರೀಅತ್‌ ವಿಭಾಗದ ಪ್ರಾಂಶುಪಾಲ ವಳವೂರು ಮುಹಮ್ಮದ್‌ ಸಅದಿ, ಪದವಿ ವಿಭಾಗದ ಪ್ರಾಂಶುಪಾಲ ಮಹಮ್ಮದ್‌ ಮನ್ಸೂರ್‌ ಕಡಬ, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

    ಒಟ್ಟು 604 ಪುಟಗಳ ಈ ಕೃತಿಗೆ ಬಿಳಿ, ತಿಳಿನೀಲಿ, ತಿಳಿ ಹಸುರು ಬಣ್ಣದ ಕಾಗದವನ್ನು ಬಳಸಿಕೊಳ್ಳಲಾಗಿದೆ. ಅಕರ್ಷಕವಾದ ಕೆಂಪು ಮತ್ತು ಸ್ವರ್ಣ ವರ್ಣದ ಹೊರ ಕವಚವನ್ನು ಹೊದೆ ಸಲಾಗಿದೆ. ಬರೆದು ಮುಗಿಸಲು ಅವರು ಒಟ್ಟು 303 ದಿನಗಳನ್ನು ತೆಗೆದುಕೊಂಡಿದ್ದಾರೆ. ಒಂದು ಪುಟ ಬರೆಯಲು 4 ಗಂಟೆ ಬೇಕಿತ್ತು. ಕೆಲವು ದಿನಗಳಲ್ಲಿ 8 ಗಂಟೆ ಬಳಸಿ 2 ಪುಟಗಳನ್ನು ಬರೆದಿದ್ದಾರೆ. ಒಟ್ಟಾರೆ ಬರೆದು ಮುಗಿಸಲು 2,416 ಗಂಟೆ ಬಳಕೆಯಾಗಿದೆ ಎಂದು ಸಜ್‌ಲ ತಿಳಿಸಿದ್ದಾರೆ.

  • ನಾಲ್ಕು ವರ್ಷದ ಬಾಲಕಿಯನ್ನು ಹಿಂಸಿಸಿ ಕೊಂದ ಚಿಕ್ಕಪ್ಪ-ಚಿಕ್ಕಮ್ಮ.! 
ವರ್ಷಗಳ ಬಳಿಕ ತಿಳಿದು ಬಂದದ್ದು ಹೇಗೆ..?

    ನಾಲ್ಕು ವರ್ಷದ ಬಾಲಕಿಯನ್ನು ಹಿಂಸಿಸಿ ಕೊಂದ ಚಿಕ್ಕಪ್ಪ-ಚಿಕ್ಕಮ್ಮ.! ವರ್ಷಗಳ ಬಳಿಕ ತಿಳಿದು ಬಂದದ್ದು ಹೇಗೆ..?

    ಕಾಣೆಯಾಗಿದ್ದ ನಾಲ್ಕು ವರ್ಷದ ಬಾಲಕಿಯನ್ನು ಸಂಬಂಧಿಗಳೇ ಕೊಲೆ ಮಾಡಿ ಮೃತದೇಹವನ್ನು ಹಾಸಿಗೆಯಲ್ಲಿ ಸುತ್ತಿ ನಿರ್ಜನ ಪ್ರದೇಶದಲ್ಲಿ ಎಸೆದ ಪ್ರಕರಣವನ್ನು ಮಹಾರಾಷ್ಟ್ರದ ರಾಯಗಢ ಪೊಲೀಸರು ಒಂದು ವರ್ಷಗಳ ಬಳಿಕ ಭೇದಿಸಿದ್ದಾರೆ.

    ಸದ್ಯ ಮೃತ ಬಾಲಕಿಯ ತಲೆಬುರುಡೆಯನ್ನು ಪತ್ತೆ ಮಾಡಿರುವ ಪೊಲೀಸರು ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಮೃತ ಬಾಲಕಿಯ ತಂದೆ ರಾಹುಲ್‌ ಘಡ್ಜೆ ಜೈಲು ಸೇರಿದ್ದರು. ಆ ಬಳಿಕ ಬಾಲಕಿಯನ್ನು ಪೋಷಣೆ ಮಾಡಲು ಯಾರೂ ಇಲ್ಲದ ಪರಿಸ್ಥಿತಿಯಲ್ಲಿ, ಚಿಂಚವಾಲಿ ಗ್ರಾಮದಲ್ಲಿದ್ದ ಬಾಲಕಿಯ ಚಿಕ್ಕಮ್ಮ ಅಪರ್ಣಾ ಅನಿಲ್‌ ಮಕ್ವಾನಾ ಅಲಿಯಾಸ್‌ ಅಪರ್ಣಾ ಪ್ರಥಮೇಶ್ ಕಂಬ್ರಿ ಮತ್ತು ಆಕೆಯ ಪತಿ ಪ್ರಥಮೇಶ್ ಪ್ರವೀಣ್ ಕಂಬ್ರಿ ನೋಡಿಕೊಳ್ಳುತ್ತಿದ್ದರು.

    ಬಾಲಕಿಯನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದೆವು ಎಂದು ದಂಪತಿ ಹೇಳಿದ್ದರು. ಆದರೆ ವಾಸ್ತವವಾಗಿ ಬಾಲಕಿಗೆ ಹಿಂಸೆ ಮಾಡುತ್ತಿದ್ದರು, ಆಕೆ ಮಾಡಿದ ಸಣ್ಣ ತಪ್ಪಿಗಾಗಿ ಚಿಕ್ಕಪ್ಪ ಥಳಿಸಿದ್ದ. ಇದರಿಂದಾಗಿ ಬಾಲಕಿ ಮೃತಪಟ್ಟಿದ್ದಳು.

    ಕಳೆದ ವರ್ಷ ಬಾಲಕಿಯ ಸಂಬಂಧಿ ಜ್ಯೋತಿ ಎನ್ನುವವರು ಬಾಲಕಿಯನ್ನು ಅಪರ್ಣಾ ದಂಪತಿ ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ. 2024ರ ಅಕ್ಟೋಬರ್‌ 06ರಂದು ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದರು. ಅಪರ್ಣಾ ದಂಪತಿಯ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು, ಕಳೆದ ಸೋಮವಾರ ಚಿಂಚವಾಲಿಯಲ್ಲಿರುವ ಅವರ ಮನೆಗೆ ಭೇಟಿ ನೀಡಿ ಅವರನ್ನು ವಶಕ್ಕೆ ಪಡೆದಿದ್ದರು, ಬಳಿಕ ತೀವ್ರವಾದ ವಿಚಾರಣೆ ನಡೆಸಿದಾಗ ದಂಪತಿ ಬಾಲಕಿಯನ್ನು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

    ಚಿಕ್ಕಪ್ಪ ಹೊಡೆದ ಪೆಟ್ಟಿನಿಂದಾಗಿ ಬಾಲಕಿ ಮೃತಪಟ್ಟಿದ್ದು, ಮೃತದೇಹವನ್ನು ಹಾಸಿಗೆಯಲ್ಲಿ ಸುತ್ತಿ ನಿರ್ಜನ ಪ್ರದೇಶದಲ್ಲಿ ಎಸೆದಿರುವುದಾಗಿ ಹೇಳಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಅತುಲ್‌ ಝೆಂಡೆ ತಿಳಿಸಿದ್ದಾರೆ. ಸದ್ಯ ಪತ್ತೆ ಮಾಡಿದ ತಲಬುರುಡೆಯನ್ನು ವಿಧಿವಿಜ್ಞಾನ ಕೇಂದ್ರಕ್ಕೆ ರವಾನಿಸಲಾಗಿದ್ದು, ದಂಪತಿಯನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

  • “ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” 
‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?

    “ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” ‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?

    ‘ಮುಸ್ಲಿಂ ಹೆಣ್ಣು ಮಕ್ಕಳ ವಿವಾಹದ ಬಗ್ಗೆ ಅವರ ಅಪ್ಪ ಅಮ್ಮ, ಜಮಾತ್‌ನವರು ಚಿಂತಿಸುತ್ತಾರೆ. ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಈ ಚಿಂತೆ ಬೇಡ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ ತಿರುಗೇಟು ನೀಡಿದೆ.

    ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಅಶ್ರಫ್ ಕಲ್ಲೇಗ, ಮುಸ್ಲಿಂ ಯುವತಿಯನ್ನು ವಿವಾಹವಾದ ಹಿಂದೂ ಯುವಕನಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದು. ಮುಸ್ಲಿಂ ಸಮುದಾಯದ ಖಬರ್‌ಸ್ಥಾನಗಳ ಬಗ್ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಹೇಳಿಕೆ ನೀಡಿರುವುದು ಖಂಡನೀಯ ಎಂದು ಹೇಳಿದರು.

    ‘ಧರ್ಮಸ್ಥಳ ಪ್ರಕರಣದಲ್ಲಿ ದೂರು ನೀಡಿರುವ ಸಾಕ್ಷಿ ದೂರುದಾರ ಮುಸ್ಲಿಂ ಸಮಾಜಕ್ಕೆ ಸೇರಿದವನು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಸುಳ್ಳು ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಪಿಎಫ್ಐ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಷೇಧಿತ ಸಂಘಟನೆ ಪಿಎಫ್ಐ ಕೈವಾಡದ ಬಗ್ಗೆ ಮಾಹಿತಿ ಇದ್ದರೆ ಅವರದೇ ಕೇಂದ್ರ ಸರ್ಕಾರದ ಮೂಲಕ ತನಿಖೆ ಕೈಗೊಳ್ಳಲಿ’ ಎಂದು ಸವಾಲು ಹಾಕಿದರು.

    ‘ಧರ್ಮಸ್ಥಳ ವಿಚಾರವಾಗಿ ಮುಸ್ಲಿಂ ಸಮುದಾಯ ಯಾವೊಬ್ಬ ಪ್ರಮುಖರು ಮಾತನಾಡಿಲ್ಲ. ಮುಸ್ಲಿಂ ಸಮುದಾಯದ ಬಗ್ಗೆ ಹೆಗ್ಗಡೆಯವರಿಗೆ ಪ್ರೀತಿ ಇದೆ. ಅಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ. ಆದರೆ ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕು ಎಂದು ಈ ಹಿಂದೆ ಯತ್ನಿಸಿ ಅದಕ್ಕೆ ಪರ್ಯಾಯವಾಗಿ ಕನ್ಯಾಡಿ ಕ್ಷೇತ್ರದ ಆರಂಭಕ್ಕೆ ಕಾರಣರಾದ ಜನಾರ್ದನ ಪೂಜಾರಿ ಅವರಿಗೆ ಈಗ ಧರ್ಮಸ್ಥಳದ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ. ಅದಕ್ಕಾಗಿ ಅವರು ಈ ರೀತಿಯ ಹೇಳಿಕೆ ನೀಡಲು ಆರಂಭಿಸಿದ್ದಾರೆ’ ಎಂದು ಅವರು ದೂರಿದರು.

    ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಕೋಶಾಧಿಕಾರಿ ಅಶ್ರಫ್ ಬಾವು ಪಡೀಲ್, ಪ್ರಧಾನ ಕಾರ್ಯದರ್ಶಿ ನೌಷದ್ ಬೊಳುವಾರು, ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಮುಖಂಡ ಹಂಝ ಕಬಕ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

  • ಲಭ್ಯವಾಗದ ಕಲ್ಲು-ಮರಳು, ದುಡಿಮೆಯಿಲ್ಲದ ಮೇಸ್ತ್ರಿಗಳು: 
ಹೀಗಾಗಲು ಸರಕಾರದ ನಿರ್ಬಂಧವೇನು ಗೊತ್ತೇ?

    ಲಭ್ಯವಾಗದ ಕಲ್ಲು-ಮರಳು, ದುಡಿಮೆಯಿಲ್ಲದ ಮೇಸ್ತ್ರಿಗಳು: ಹೀಗಾಗಲು ಸರಕಾರದ ನಿರ್ಬಂಧವೇನು ಗೊತ್ತೇ?

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿಗೆ ಆಮೆ ನಡಿಗೆ ಗತಿ
    ಹಲವು ವಲಯಗಳಿಗೆ ಪೆಟ್ಟು
    ಊರುಗಳಿಗೆ ಮರಳಿರುವ ಕೂಲಿ ಕೆಲಸಗಾರರು

    ಕೆಂಪು ಕಲ್ಲು ಸಿಗದ ಕಾರಣ ಅರ್ಧಕ್ಕೆ ನಿಂತಿರುವ ಕೆಲಸ

    ಮಂಗಳೂರು: ನಗರ ಹೊರವಲಯದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಿಸಲು ಅಡಿಗಲ್ಲು ಹಾಕಿದ್ದು ಕಳೆದ ವರ್ಷ ಮಾರ್ಚ್‌ನಲ್ಲಿ. ಹಳೆಯ ಮನೆಯ ಸಮೀಪದಲ್ಲೇ ಹೊಸ ಮನೆ ನಿರ್ಮಿಸುವ ಉದ್ದೇಶ. ತುರ್ತು ಏನೂ ಇರಲಿಲ್ಲ. ಆದ್ದರಿಂದ ಅಳೆದು– ತೂಗಿ ಒಂದೊಂದೇ ಹಂತದ ಕೆಲಸಗಳನ್ನು ಮುಗಿಸುತ್ತಿದ್ದರು. ಮುಂದಿನ ವರ್ಷ ಜನವರಿಯಲ್ಲಿ ಗೃಹಪ್ರವೇಶ ಮಾಡಲು ದಿನವೂ ನಿಗದಿ ಆಗಿದೆ. ಜೂನ್ ಅರಂಭದ ವರೆಗೂ ಎಲ್ಲವೂ ಅಂದುಕೊಂಡಂತೆಯೇ ನಡೆದಿತ್ತು. ನಂತರ ಯೋಜನೆ ತಲೆಕಳೆಗಾಯಿತು. ಕಲ್ಲು ಮತ್ತು ಮರಳು ಸಾಕಷ್ಟು ಪ್ರಮಾಣದಲ್ಲಿ ಸಿಗದೇ ಇದ್ದ ಕಾರಣ ಕೆಲಸ ನಿಧಾನವಾಯಿತು. ಅಲ್ಲಿಲ್ಲಿ ಬಿದ್ದದ್ದ 20ರಷ್ಟು ಕಲ್ಲುಗಳನ್ನು ತಂದು ಅರ್ಧ ದಿನದ ಕೆಲಸ ಮಾಡಿಸಲಾಯಿತು. ನಂತರ ಕಲ್ಲುಗಳಿಗೆ ಕಾದಿದ್ದೇ ಬಂತು.

    ಉಳ್ಳಾಲ ತಾಲ್ಲೂಕಿನ ಕುಂಪಲದಲ್ಲಿ ಮನೆಯೊಂದರ ನಿರ್ಮಾಣ ಅರಂಭವಾಗಿತ್ತು. ಎರಡು ತಿಂಗಳಿಂದ ಕೆಲಸ ಸಂಪೂರ್ಣ ನಿಂತಿದೆ. ಬಂಟ್ವಾಳ ತಾಲ್ಲೂಕಿನ ಫರಿಂಗಿಪೇಟೆಯಲ್ಲಿ ಮೂರು ತಿಂಗಳ ಹಿಂದೆ ಕಾಮಗಾರಿ ಆರಂಭವಾದ ಎರಡು ಮಹಡಿಯ ಮನೆಯ ಕೆಲಸ ಒಂದೂವರೆ ತಿಂಗಳಿಂದ ಮುಂದುವರಿಯುತ್ತಿಲ್ಲ. ಉಳ್ಳಾಲ ತಾಲ್ಲೂಕಿನ ನಾಟೆಕಲ್ಲಿನಲ್ಲಿ 5 ಸಾವಿರ ಚದರ ಅಡಿಯ ಕಟ್ಟದ ನಿರ್ಮಾಣ ಆರಂಭಿಸುವಾಗಲೇ ಉದ್ಘಾಟನೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ನೆಲಮಹಡಿಯ ಸೆಂಟ್ರಿಂಗ್ ಕೆಲಸ ಮುಗಿದ ನಂತರ ಕಲ್ಲು– ಮರಳು ಸಿಗದ್ದರಿಂದ ಅದರ ಮಾಲೀಕರ ಯೋಜನೆಗಳೆಲ್ಲ ಉಲ್ಟಾ– ಪಲ್ಟ ಆಗಿವೆ.

    ಇವು ಕೆಲವೇ ಉದಾಹರಣೆಗಳು. ಕಲ್ಲು ಮತ್ತು ಮರಳು ಸಿಗದ ಕಾರಣ ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿಗಳು ಬಹುತೇಕ ನಿಂತೇ ಹೋಗಿವೆ. ಇದರ ಪ್ರತ್ಯಕ್ಷ ಮತ್ತು ಪರೋಕ್ಷ ಪರಿಣಾಮ ಎದುರಿಸುತ್ತಿರುವವರ ಸಂಖ್ಯೆ ಸಾವಿರಾರು. ಗುತ್ತಿಗೆದಾರರಿಂದ ಹಿಡಿದು ಕೆಲಸಗಾರರವರೆಗೆ, ನಿರ್ಮಾಣ ಸಾಮಗ್ರಿ ಮಾರಾಟಗಾರರಿಂದ ಹಿಡಿದು ಸಣ್ಣ ಹೋಟೆಲ್, ಬೀಡಿ ಅಂಗಡಿಯವರ ವರೆಗೆ, ಸಾಮಗ್ರಿಗಳನ್ನು ಸಾಗಿಸುವ ಟೆಂಪೊದವರಿಂದ ಹಿಡಿದು ಫರ್ನಿಚರ್ ಅಂಗಡಿಯವರ ವರೆಗೆ ವ್ಯವಹಾರ, ಕೆಲಸ, ವ್ಯಾಪಾರ ಇಲ್ಲದೆ ಸಮಸ್ಯೆ ಅನುಭವಿಸುತ್ತಿರುವವರು ಇಂದು– ನಾಳೆ ಎಂದು ಕಾಯುತ್ತ ದಿನದೂಡುತ್ತಿದ್ದಾರೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ಬಂದಿದ್ದ ಕೂಲಿಕಾರ್ಮಿಕರ ಪೈಕಿ ಬಹುತೇಕರು ಮಂಗಳೂರು ಬಿಟ್ಟು ಹೋಗಿದ್ದಾರೆ ಎಂದು ಗುತ್ತಿಗೆದಾರರನೇಕರು ತಿಳಿಸಿದರು.

    ಅಕ್ರಮವಾಗಿ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ತಡೆಯಲು ಕೈಗೊಂಡಿರುವ ಕ್ರಮದ ಬಗ್ಗೆ ಎಲ್ಲರಿಗೂ ಸಹಮತವಿದೆ. ಆದರೆ ಅದರಿಂದಾಗುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿತ್ತು, ಬದಲಿ ವ್ಯವಸ್ಥೆ ಮಾಡಬೇಕಿತ್ತು ಎಂಬುದು ಬಹುತೇಕರ ಅನಿಸಿಕೆ. ಮರಳು ಗಣಿಗಾರಿಕೆಗೆ ನಿಷೇಧ ಇರುವುದು ನಿಜ. ಆದರೆ ಈಗಾಗಲೇ ಸಂಗ್ರಹಿಸಿರುವ ಮರಳನ್ನು ವ್ಯವಸ್ಥಿತವಾಗಿ ವಿತರಿಸಬೇಕೆಂದೂ ಪರವಾನಗಿ ಪಡೆದುಕೊಂಡು ಕಲ್ಲು ಗಣಿಗಾರಿಕೆ ನಡೆಸುವವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದೂ ಅಭಿಪ್ರಾಯಪಡುತ್ತಾರೆ ಹೆಚ್ಚಿನವರು. ಎಂ– ಸ್ಯಾಂಡ್‌ ಇಲ್ಲಿನ ಹವಾಮಾನಕ್ಕೆ ಸೂಕ್ತವಲ್ಲ ಎಂಬ ಅನಿಸಿಕೆಯಿಂದಾಗಿ ಯಾರೂ ಅದನ್ನು ಬಳಸಲು ಮುಂದಾಗುತ್ತಿಲ್ಲ. ಕಲ್ಲಿಗೆ ಬದಲಾಗಿ ಇಟ್ಟಿಗೆ, ಬ್ಲಾಕ್‌ಗಳನ್ನು ಬಳಸುವ ಪದ್ಧತಿ ಇನ್ನೂ ಇಲ್ಲಿ ಶುರುವಾಗಲಿಲ್ಲ. ಹೀಗಿರುವಾಗ ಮರಳಿಗೆ ಮರಳೇ ಬೇಕು, ಕೆಂಪುಕಲ್ಲಿಗೆ ಬದಲು ಕೆಂಪುಕಲ್ಲೇ ಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

    ‘ಎರಡು ತಿಂಗಳಿಂದ ಕೆಲಸ ಇಲ್ಲ. ನನ್ನ ಕೈಕೆಳಗೆ ಏಳೆಂಟು ಜನರು ಕೆಲಸ ಮಾಡುತ್ತಿದ್ದರು. ಕೆಲವರು ಊರಿಗೆ ಹೋದರು. ಇನ್ನು ಕೆಲವರು ಬೇರೆ ಯಾವುದೋ ಕೆಲಸ ಹುಡುಕಿಕೊಂಡು ಹೋಗಿದ್ದಾರೆ. ಕಲ್ಲು ಸಿಗುತ್ತಿದ್ದಾಗ ಕೆಲಸ ಇತ್ತು. ಜೀವನ ಸರಿಯಾಗಿ ನಡೀತಿತ್ತು. ಒಂದಿಷ್ಟು ಉಳಿತಾಯವೂ ಆಗುತ್ತಿತ್ತು. ಹಾಗೆ ಉಳಿಸಿದ ಹಣದಲ್ಲಿ ಈಗ ಜೀವನ ಸಾಗುತ್ತಿದೆ. ಅದು ಮುಗಿದ ನಂತರ ರಾಜಕಾರಣಿಗಳ ಮನೆ ಮುಂದೆ ಹೋಗಿ ಕುಳಿತುಕೊಳ್ಳಬೇಕಾದೀತೇನೋ…’ ಎಂದರು ದಾವಣಗೆರೆಯಿಂದ ಬಂದು ಮಂಗಳೂರಿನಲ್ಲಿ ಗುತ್ತಿಗೆದಾರರಾಗಿರುವ ದುರ್ಗೇಶ್.

    ‘ಅಕ್ರಮ ತಡೆಯಲೇಬೇಕು. ಅದರಿಂದ ಎಲ್ಲರಿಗೂ ಒಳಿತು. ಆದರೆ ನಿಯಮಗಳನ್ನು ಪಾಲಿಸಿಕೊಂಡು ಮಾಡುವವರಿಗೆ ಪರವಾನಗಿ ಕೊಡಬೇಕು. ಸಮಸ್ಯೆಗೆ ಪರಿಹಾರ ಹುಡುಕುವುದು ಬಿಟ್ಟು ಎಲ್ಲವನ್ನೂ ಒಮ್ಮೆಲೇ ನಿಲ್ಲಿಸಿಬಿಟ್ಟರೆ ಹೇಗೆ’ ಎಂದು ಪ್ರಶ್ನಿಸುವ ದುರ್ಗೇಶ್‌ ‘ಎಂ–ಸ್ಯಾಂಡ್ ಬಳಸಲು 10 ಶೇಕಡ ಮಂದಿ ಒಪ್ಪಬಹುದು, ಅದು ಕೂಡ ಒಲ್ಲದ ಮನಸ್ಸಿನಿಂದ. ಮರಳು ಸಂಗ್ರಹ ಮಾಡಿಟ್ಟುಕೊಳ್ಳಲು ಆಗುವುದರಿಂದ ಸ್ವಲ್ಪ ಹೆಚ್ಚು ಹಣ ಕೊಟ್ಟರೂ ಸಿಗಬಹುದು. ಆದರೆ ಕಲ್ಲು ಸಂಗ್ರಹ ಮಾಡಿ ಇಡಲು ಆಗುವುದಿಲ್ಲ. ಅದಕ್ಕೆ ಜಾಗ ತುಂಬ ಬೇಕು. ಆದ್ದರಿಂದ ಒಂದೆರಡು ಲೋಡ್ ಕಲ್ಲು ತಂದು ಅಷ್ಟು ಕೆಲಸ ಮುಗಿದ ನಂತರವೇ ಮತ್ತೊಮ್ಮೆ ತರುವುದು. ಹೀಗಾಗಿ ಕಲ್ಲು ಇಲ್ಲದೆ ಈಗ ಎಲ್ಲ ಕೆಲಸವೂ ನಿಂತಿದೆ’ ಎನ್ನುತ್ತಾರೆ.

    ‘ಎಂ–ಸ್ಯಾಂಡ್‌, ಬ್ಲಾಕ್‌, ಇಟ್ಟಿಗೆ ಇತ್ಯಾದಿಗಳನ್ನು ಬಳಸಲು ಇಲ್ಲಿ ಯಾರೂ ಒಪ್ಪುವುದಿಲ್ಲ. ಬ್ಲಾಕ್‌ಗಳನ್ನು ಬಳಸಿ ನಿರ್ಮಿಸಿದ ನಗರದ ಪ್ರಮುಖ ಅಪಾರ್ಟ್‌ಮೆಂಟ್ ಒಂದರಲ್ಲಿ ನೀರು ಜಿನುಗುತ್ತಿರುವುದರಿಂದ ಐದನೇ ಮಹಡಿಯಿಂದ ವಾಟರ್ ಪ್ರೂಫ್ ಹಾಕುತ್ತಿದ್ದಾರೆ. ಇಲ್ಲಿ ಕಟ್ಟಡಗಳಿಗೆ ಕೆಂಪು ಕಲ್ಲು ಬಳಸುವುದೇ ಸಂಪ್ರದಾಯವಾಗಿ ಮುಂದುವರಿದಿದೆ. ಅದು ಬೇಸಿಗೆಗೂ ಮಳೆಗಾಲಕ್ಕೂ ಸೂಕ್ತ ಎಂಬ ಭಾವನೆ ಎಲ್ಲರಲ್ಲೂ ಇದೆ. ಎಷ್ಟು ಭಾರವನ್ನಾದರೂ ತಡೆದುಕೊಳ್ಳುವ ಸಾಮರ್ಥ್ಯ ಇರುವುದರಿಂದ ಗುತ್ತಿಗೆದಾರರು ಕೂಡ ಅದಕ್ಕೇ ಮೊರೆ ಹೋಗುತ್ತಾರೆ. ಕಲ್ಲನ್ನು ಅಕ್ರಮವಾಗಿ ತಂದು ಕಟ್ಟಡ ನಿರ್ಮಿಸಿ ಕೊಡು ಎಂದು ಯಾರೂ ಹೇಳುವುದಿಲ್ಲ. ನಿಯಮಗಳನ್ನು ಪಾಲಿಸಿಕೊಂಡೇ ಗಣಿಗಾರಿಕೆ ಮಾಡಿ ಕಲ್ಲು ಸಿಗುವಂತೆ ಮಾಡಲಿ. ಅದಕ್ಕೆ ವೆಚ್ಚ ಸ್ವಲ್ಪ ಹೆಚ್ಚಾದರೂ ಕೊಡಲು ಜನರು ಹಿಂಜರಿಯುವುದಿಲ್ಲ’ ಎಂಬುದು ಗುತ್ತಿಗೆದಾರ ದಯಾನಂದ ಅವರ ಅಭಿಪ್ರಾಯ.ಅನೇಕ ಮೇಸ್ತ್ರಿಗಳು ಸೆಂಟ್ರಿಂಗ್‌ ಮತ್ತು ಇತರ ಕೆಲಸದ ಸಾಮಗ್ರಿಗಳನ್ನು ನನ್ನ ವಾಹನದಲ್ಲೇ ಸಾಗಿಸುತ್ತಿದ್ದರು. ಈಗ ಬಾಡಿಗೆಗೆ ಕರೆಯುವುದು ಕಡಿಮೆಯಾಗಿದೆ. ಆದ್ದರಿಂದ ಕೆಲಸವೇ ಇಲ್ಲ. ಬೇರೆ ಕೆಲಸ ಗೊತ್ತೂ ಇಲ್ಲ. ಸಚಿನ್ ಟೆಂಪೊ ಚಾಲಕ ಪಾಣೆಮಂಗಳೂರುಸ್ಯಾಂಡ್ ಬಜಾರ್ ಅ್ಯಾಪ್‌ ಮೂಲಕ ತರಿಸಿದ ಮರಳನ್ನು ಗಾಳಿಸಿಯೇ ಬಳಸಬೇಕಾದ ಪರಿಸ್ಥಿತಿ ಎಂದು ದೂರಲಾಗಿದೆ

    ಎಲ್ಲವನ್ನೂ ಕಾನೂನುಬದ್ಧಗೊಳಿಸಲು ಪ್ರಯತ್ನ ನಡೆಯುತ್ತಿದೆ. ಸರ್ಕಾರದ ಮಟ್ಟದಲ್ಲೇ ಇದು ಆಗಬೇಕು. ಹೀಗಾಗಿ ಇನ್ನೂ ಸುಮಾರು ಒಂದು ತಿಂಗಳ ವರೆಗೆ ಪರಿಸ್ಥಿತಿ ಹೀಗೆಯೇ ಮುಂದುವರಿಯುವ ಸಾಧ್ಯತೆ ಇದೆ.
    ರಾಜು ಹೆಚ್ಚುವರಿ ಜಿಲ್ಲಾಧಿಕಾರಿ

    ಸ್ಯಾಂಡ್ ಬಜಾರ್‌ನಲ್ಲಿ ಸಿಗುವ ಮರಳಿನ ಗುಣಮಟ್ಟ ಚೆನ್ನಾಗಿಲ್ಲ. ಆದ್ದರಿಂದ ಗಾಳಿಸಿದ ನಂತರ ಸಿಗುವುದು ಅಲ್ಪಪ್ರಮಾಣ. ಗಾಳಿಸಲು ಎರಡು ದಿನ ಇಬ್ಬರಿಗೆ ಕೂಲಿ ಕೊಡಬೇಕು. ನಾವು ಹೇಳಿದ ಸಮಯದಲ್ಲಿ ತಂದು ಹಾಕುವುದೂ ಇಲ್ಲ.
    ಲತೀಫ್‌ ಗುತ್ತಿಗೆದಾರ ತುಂಬೆ

    ಅನೇಕ ಮೇಸ್ತ್ರಿಗಳು ಸೆಂಟ್ರಿಂಗ್‌ ಮತ್ತು ಇತರ ಕೆಲಸದ ಸಾಮಗ್ರಿಗಳನ್ನು ನನ್ನ ವಾಹನದಲ್ಲೇ ಸಾಗಿಸುತ್ತಿದ್ದರು. ಈಗ ಬಾಡಿಗೆಗೆ ಕರೆಯುವುದು ಕಡಿಮೆಯಾಗಿದೆ. ಆದ್ದರಿಂದ ಕೆಲಸವೇ ಇಲ್ಲ. ಬೇರೆ ಕೆಲಸ ಗೊತ್ತೂ ಇಲ್ಲ.
    ಸಚಿನ್ ಟೆಂಪೊ ಚಾಲಕ, ಪಾಣೆಮಂಗಳೂರು

    ವಾಸ್ತವದಲ್ಲಿ ಹಣ ಮಾಡಿಕೊಂಡರು ಈಗ ಖುಷಿಯಲ್ಲಿದ್ದಾರೆ. ಹಲವರು ಈಗಾಗಲೇ ಕುಟುಂಬ ಸಮೇತರಾಗಿ ಪ್ರವಾಸಕ್ಕೆ ಹೋಗಿದ್ದಾರೆ. ನಿತ್ಯ ದುಡಿದು ತಿನ್ನುವವರಿಗೆ ಮತ್ತು ಸಣ್ಣ ಗುತ್ತಿಗೆದಾರರಿಗೆ ಸಮಸ್ಯೆಯಾಗಿದೆ.
    ದಯಾನಂದ ಗುತ್ತಿಗೆದಾರ ಮಂಗಳೂರು

    ಒಂದೆಡೆ ನಿರ್ಬಂಧ ಮತ್ತೊಂದೆಡೆ ನಿಷೇಧ

    ಕರಾವಳಿ ನಿರ್ಬಂಧಿತ ಪ್ರದೇಶದಲ್ಲಿ (ಸಿಆರ್‌ಝಡ್‌) 2022ರಿಂದ ಮರಳು ಗಣಿಗಾರಿಕೆಗೆ ನಿಷೇಧವಿದೆ. ನಾನ್‌ ಸಿಆರ್‌ಝಡ್‌ನಲ್ಲಿ ಜೂನ್ 5ರಿಂದ ಅಕ್ಟೋಬರ್‌ 15ರ ವರೆಗೆ ಮರಳು ಗಣಿಗಾರಿಕೆಗೆ ನಿಷೇಧವಿದೆ. ಆದ್ದರಿಂದ ಈಗ ಸಂಗ್ರಹ ಮಾಡಿಟ್ಟಿರುವ ಮರಳನ್ನೇ ಆಶ್ರಯಿಸಬೇಕಾಗಿದೆ. ಅಂಥ ಮರಳು ಪ್ರತಿ ವರ್ಷ ಸಾಕಷ್ಟು ಸಿಗುತ್ತದೆ. ಇದಲ್ಲದೆ ಜಿಲ್ಲಾಡಳಿತದ ಬ್ಲಾಕ್‌ಗಳಲ್ಲಿ ಇರುವ ಮರಳು ಸ್ಯಾಂಡ್ ಬಜಾರ್ ಆ್ಯಪ್‌ನಲ್ಲಿ ಲಭ್ಯವಿದೆ. ಅಕ್ರಮವಾಗಿ ಬ್ಲ್ಯಾಕ್‌ಮಾರ್ಕೆಟ್‌ನಲ್ಲೂ ಮರಳು ಸಿಗತ್ತಿದೆ. ಆದ್ದರಿಂದ ಸಮಸ್ಯೆ ಇರುವುದು ಕಲ್ಲಿನದೇ. ಸಿಆರ್‌ಝಡ್‌ನಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ಇಲ್ಲ. ಸಾಂಪ್ರದಾಯಿಕ ಸಮುದಾಯಗಳಿಗೆ ಇದರಿಂದ ದೋಣಿ ನಡೆಸಲು ಸಮಸ್ಯೆಯಾಗುತ್ತದೆ ಎಂಬ ದೂರಿನ ನಂತರ 2011ರಲ್ಲಿ ಈ ನಿಷೇಧವನ್ನು ತೆಗೆದು ಹಾಕಲಾಗಿತ್ತು. ಆದರೆ 2022ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಲಯ ನೀಡಿದ ಆದೇಶದಂತೆ ಈಗ ಮೂರು ಜಿಲ್ಲೆಗಳ ಸಿಆರ್‌ಝಡ್‌ನಲ್ಲಿ ಮರಳು ಗಣಿಗಾರಿಕೆಗೆ ನಿಷೇಧವಿದೆ. ಇದರ ವಿರುದ್ಧ ಹೋರಾಟಗಳು ನಡೆಯುತ್ತಿವೆ’ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಸಂದೀಪ್ತಿ ತಿಳಿಸಿದರು.

    ಮರಳು ಸಾಕಷ್ಟು ಇದೆ

    ನಾನ್ ಸಿಆರ್‌ಝಡ್‌ನಲ್ಲಿ ಸಾಕಷ್ಟು ಮರಳು ಸಂಗ್ರಹ ಇದೆ. ಒಟ್ಟು 29 ಬ್ಲಾಕ್‌ಗಳ ಪೈಕಿ 16 ಕಾರ್ಯನಿರ್ವಹಿಸುತ್ತಿದ್ದು 3 ಲಕ್ಷ 34 ಸಾವಿರ ಟನ್ ಮರಳು ಇದೆ. ಮೀನುಗಳ ವಂಶಾಭಿವೃದ್ಧಿಗಾಗಿ ಈಗ ಮರಳು ಗಣಿಗಾರಿಕೆ ಮೇಲೆ ನಿಷೇಧವಿದೆ. ಮಳೆಗಾಲದಲ್ಲಿ ಹೆಚ್ಚು ನೀರು ಇರುವಾಗ ಮರಳು ತೆಗೆಯಬಾರದು ಎಂಬ ನಿಯಮವೂ ಜಾರಿಯಲ್ಲಿದೆ. ಆದರೆ 11 ಸಾವಿರ ಟನ್ ಮರಳು ದಾಸ್ತಾನು ಇದೆ. ಅದನ್ನು ಸ್ಯಾಂಡ್ ಬಜಾರ್‌ ಮೂಲಕ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ವಿವಿಧ ಸಂದರ್ಭಗಳಲ್ಲಿ ವಶಪಡಿಸಿಕೊಂಡ ಮರಳೂ ಇದೆ. ಅದನ್ನು ಹರಾಜು ಹಾಕಬೇಕಾದರೆ ತುಂಬ ಸಮಯ ಕಾಯಬೇಕು. ಆದ್ದರಿಂದ ಸುಲಭವಾಗಿ ಜನರಿಗೆ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲು ಮರಳು ನಿರ್ವಹಣಾ ಸಮಿತಿಯ ನಿರ್ಧಾರಕ್ಕೆ ಬಿಡಲಾಗಿದೆ.

    ಸಂದೀಪ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ

  • ಭೂಮಿಯಂತಹ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! 
ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

    ಭೂಮಿಯಂತಹ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

    ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಇರಬಹುದಾದ ಗ್ರಹವನ್ನು ನಾಸಾದ ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕ (JWST) ಇತ್ತೀಚೆಗೆ ಪತ್ತೆ ಹಚ್ಚಿದೆ.

    ಈ ವಿಷಯವನ್ನು ನಾಸಾದ ವೆಬ್‌ಸೈಟ್‌ science.nasa.gov ದಲ್ಲಿ ಪ್ರಕಟಿಸಲಾಗಿದೆ.
    ಭೂಮಿಯಿಂದ ಕೇವಲ 4 ಜ್ಯೋತಿರ್ವಷ್ರಗಳ (light-years) ಅಂತರದಲ್ಲಿರುವ ‘ಆಲ್ಫಾ ಸೆಂಟೌರಿ’ ಎಂಬ ನಕ್ಷತ್ರ ಸಮೂಹದಲ್ಲಿನ ಸೂರ್ಯನಂತ ನಕ್ಷತ್ರವೊಂದನ್ನು ಭೂಮಿಯಂಥಹ ಗ್ರಹವೊಂದು ಸುತ್ತುತ್ತಿದೆ ಎಂದು ದೂರದರ್ಶಕ ಕಂಡುಕೊಂಡಿದೆ.

    ಆಲ್ಫಾ ಸೆಂಟೌರಿ ನಕ್ಷತ್ರ ಸಮೂಹದಲ್ಲಿ ಕೇವಲ ಮೂರು ನಕ್ಷತ್ರಗಳಿವೆ. ಆ ಸಮೂದಲ್ಲಿ ‘ಆಲ್ಫಾ ಸೆಂಟೌರಿ-ಎ’, ‘ಆಲ್ಫಾ ಸೆಂಟೌರಿ– ಬಿ’ ಮತ್ತು ‘ಪ್ರಾಕ್ಸಿಮಾ ಸೆಂಟೌರಿ’ ಎಂಬ ಮೂರು ನಕ್ಷತ್ರಗಳಿವೆ. ಸದ್ಯ ಸೂರ್ಯನಿಗೆ ಅತಿ ಹತ್ತಿರದ ನಕ್ಷತ್ರ ಎಂದು ‘ಪ್ರಾಕ್ಸಿಮಾ ಸೆಂಟೌರಿ’ಯನ್ನು ಗುರುತಿಸಲಾಗುತ್ತದೆ. ಇದು ಒಂದು ಕೆಂಪು ಕುಬ್ಬ ನಕ್ಷತ್ರವಾಗಿದ್ದು ಇಷ್ಟು ದಿನ ನಡೆದ ಸಂಶೋಧನೆಗಳು ಈ ನಕ್ಷತ್ರಕ್ಕೆ ಸಂಬಂಧಿಸಿದಂತೆ ಮೂರು ಗ್ರಹಗಳು ಇರಬಹುದು ಎಂಬುದನ್ನು ಕಂಡುಕೊಂಡಿವೆಯಾದರೂ ಅವು ವಾಸಯೋಗ್ಯ ಎಂಬುದನ್ನು ಪತ್ತೆಹಚ್ಚಲಾಗಿಲ್ಲ.

    ಆದರೆ, ವಿಜ್ಞಾನಿಗಳಿಗೆ ಅಭೂತಪೂರ್ವ ಯಶಸ್ಸು ಎಂಬಂತೆ JWST ಈಗ ಫಲಿತಾಂಶ ನೀಡಿದೆ. ದೂರದರ್ಶಕದ ಇತ್ತೀಚಿನ ಫಲಿತಾಂಶಗಳ ಪ್ರಕಾರ, ‘ಆಲ್ಫಾ ಸೆಂಟೌರಿ-ಎ’ ನಕ್ಷತ್ರದ ಗ್ರಹವಾಗಿ ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಗ್ರಹ ಕಂಡು ಬಂದಿದೆ. ಸದ್ಯ ಆ ಗ್ರಹಕ್ಕೆ ‘ಎಸ್ 1’ ಎಂದು ಹೆಸರಿಡಲಾಗಿದೆ. ಅದು ಒಂದು ಅನಿಲ ದೈತ್ಯ ಎಂದು ತಿಳಿದು ಬಂದಿದೆ. JWST ಮಿಡ್-ಇನ್ಸಾರೆಡ್ ಇಸ್ಟ್ಯುಮೆಂಟ್ (MIRI) ನಿಂದ ತಿಳಿದು ಬಂದಿರುವ ಸಂಗತಿ ಏನೆಂದರೆ, ಎಸ್1 ಗ್ರಹದಲ್ಲಿ ಸದ್ಯ ಜೀವಿಗಳು ಇರಬಹುದಾದ ಅನುಮಾನಗಳು ಮೂಡಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

    ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕವನ್ನು ಅತ್ಯಾಧುನಿಕವಾದ ಹಾಗೂ ವಿಶ್ವದ ಶಕ್ತಿಶಾಲಿ ದೂರದರ್ಶಕ ಎಂದು ಕರೆಯಲಾಗುತ್ತದೆ. ಗ್ಯಾಲಕ್ಸಿ, ನಕ್ಷತ್ರಗಳು ಹಾಗೂ ಹೊಸ ವಾಸಯೋಗ್ಯ ಗ್ರಹಗಳು ಇರಬಹುದಾದ ಅವಕಾಶಗಳನ್ನು ಪರಿಶೀಲಿಸಲು ಈ ದೊಡ್ಡ ದೂರದರ್ಶಕ ಬಳಕೆಯಾಗುತ್ತಿದೆ. JWST ಅನ್ನು 2021 ರಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ. ಇನ್ನೂ 15 ವರ್ಷ ಅಧ್ಯಯನ ಮಾಡಲಿದೆ.

  • ಭೂಮಿಯಂತೆ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! 
ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

    ಭೂಮಿಯಂತೆ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

    ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಇರಬಹುದಾದ ಗ್ರಹವನ್ನು ನಾಸಾದ ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕ (JWST) ಇತ್ತೀಚೆಗೆ ಪತ್ತೆ ಹಚ್ಚಿದೆ.

    ಈ ವಿಷಯವನ್ನು ನಾಸಾದ ವೆಬ್‌ಸೈಟ್‌ science.nasa.gov ದಲ್ಲಿ ಪ್ರಕಟಿಸಲಾಗಿದೆ.
    ಭೂಮಿಯಿಂದ ಕೇವಲ 4 ಜ್ಯೋತಿರ್ವಷ್ರಗಳ (light-years) ಅಂತರದಲ್ಲಿರುವ ‘ಆಲ್ಫಾ ಸೆಂಟೌರಿ’ ಎಂಬ ನಕ್ಷತ್ರ ಸಮೂಹದಲ್ಲಿನ ಸೂರ್ಯನಂತ ನಕ್ಷತ್ರವೊಂದನ್ನು ಭೂಮಿಯಂಥಹ ಗ್ರಹವೊಂದು ಸುತ್ತುತ್ತಿದೆ ಎಂದು ದೂರದರ್ಶಕ ಕಂಡುಕೊಂಡಿದೆ.

    ಆಲ್ಫಾ ಸೆಂಟೌರಿ ನಕ್ಷತ್ರ ಸಮೂಹದಲ್ಲಿ ಕೇವಲ ಮೂರು ನಕ್ಷತ್ರಗಳಿವೆ. ಆ ಸಮೂದಲ್ಲಿ ‘ಆಲ್ಫಾ ಸೆಂಟೌರಿ-ಎ’, ‘ಆಲ್ಫಾ ಸೆಂಟೌರಿ– ಬಿ’ ಮತ್ತು ‘ಪ್ರಾಕ್ಸಿಮಾ ಸೆಂಟೌರಿ’ ಎಂಬ ಮೂರು ನಕ್ಷತ್ರಗಳಿವೆ.

    ಸದ್ಯ ಸೂರ್ಯನಿಗೆ ಅತಿ ಹತ್ತಿರದ ನಕ್ಷತ್ರ ಎಂದು ‘ಪ್ರಾಕ್ಸಿಮಾ ಸೆಂಟೌರಿ’ಯನ್ನು ಗುರುತಿಸಲಾಗುತ್ತದೆ. ಇದು ಒಂದು ಕೆಂಪು ಕುಬ್ಬ ನಕ್ಷತ್ರವಾಗಿದ್ದು ಇಷ್ಟು ದಿನ ನಡೆದ ಸಂಶೋಧನೆಗಳು ಈ ನಕ್ಷತ್ರಕ್ಕೆ ಸಂಬಂಧಿಸಿದಂತೆ ಮೂರು ಗ್ರಹಗಳು ಇರಬಹುದು ಎಂಬುದನ್ನು ಕಂಡುಕೊಂಡಿವೆಯಾದರೂ ಅವು ವಾಸಯೋಗ್ಯ ಎಂಬುದನ್ನು ಪತ್ತೆಹಚ್ಚಲಾಗಿಲ್ಲ.
    ಆದರೆ, ವಿಜ್ಞಾನಿಗಳಿಗೆ ಅಭೂತಪೂರ್ವ ಯಶಸ್ಸು ಎಂಬಂತೆ JWST ಈಗ ಫಲಿತಾಂಶ ನೀಡಿದೆ.

    ದೂರದರ್ಶಕದ ಇತ್ತೀಚಿನ ಫಲಿತಾಂಶಗಳ ಪ್ರಕಾರ, ‘ಆಲ್ಫಾ ಸೆಂಟೌರಿ-ಎ’ ನಕ್ಷತ್ರದ ಗ್ರಹವಾಗಿ ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಗ್ರಹ ಕಂಡು ಬಂದಿದೆ. ಸದ್ಯ ಆ ಗ್ರಹಕ್ಕೆ ‘ಎಸ್ 1’ ಎಂದು ಹೆಸರಿಡಲಾಗಿದೆ. ಅದು ಒಂದು ಅನಿಲ ದೈತ್ಯ ಎಂದು ತಿಳಿದು ಬಂದಿದೆ.

    JWST ಮಿಡ್-ಇನ್ಸಾರೆಡ್ ಇಸ್ಟ್ಯುಮೆಂಟ್ (MIRI) ನಿಂದ ತಿಳಿದು ಬಂದಿರುವ ಸಂಗತಿ ಏನೆಂದರೆ, ಎಸ್1 ಗ್ರಹದಲ್ಲಿ ಸದ್ಯ ಜೀವಿಗಳು ಇರಬಹುದಾದ ಅನುಮಾನಗಳು ಮೂಡಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

    ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕವನ್ನು ಅತ್ಯಾಧುನಿಕವಾದ ಹಾಗೂ ವಿಶ್ವದ ಶಕ್ತಿಶಾಲಿ ದೂರದರ್ಶಕ ಎಂದು ಕರೆಯಲಾಗುತ್ತದೆ. ಗ್ಯಾಲಕ್ಸಿ, ನಕ್ಷತ್ರಗಳು ಹಾಗೂ ಹೊಸ ವಾಸಯೋಗ್ಯ ಗ್ರಹಗಳು ಇರಬಹುದಾದ ಅವಕಾಶಗಳನ್ನು ಪರಿಶೀಲಿಸಲು ಈ ದೊಡ್ಡ ದೂರದರ್ಶಕ ಬಳಕೆಯಾಗುತ್ತಿದೆ.

    JWST ಅನ್ನು 2021 ರಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ.
    ಇನ್ನೂ 15 ವರ್ಷ ಅಧ್ಯಯನ ಮಾಡಲಿದೆ.