Tag: ಮಲಯಾಳಿ ಸನ್ಯಾಸಿನಿ

  • “ರಸ್ತೆಗಿಳಿದು ಪ್ರತಿಭಟಿಸದ ಕಾರಣದಿಂದಾಗಿ ಕ್ರೈಸ್ತರ ಮೇಲೆ ದೌರ್ಜನ್ಯ” ಪ್ರತಿಭಟನೆ ವಿಡಿಯೋ

    “ರಸ್ತೆಗಿಳಿದು ಪ್ರತಿಭಟಿಸದ ಕಾರಣದಿಂದಾಗಿ ಕ್ರೈಸ್ತರ ಮೇಲೆ ದೌರ್ಜನ್ಯ” ಪ್ರತಿಭಟನೆ ವಿಡಿಯೋ

    ಛತ್ತೀಸ್‌ ಗಢದಲ್ಲಿ ಇಬ್ಬರು ಮಲಯಾಳಿ ಸನ್ಯಾಸಿನಿಯರನ್ನು ಬಂಧಿಸಲಾಗಿದ್ದು, ಇದಕ್ಕೆ ಕೇರಳದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಹುಲ್ ಗಾಂಧಿ ಸೇರಿದಂತೆ ರಾಜಕೀಯ ಪಕ್ಷಗಳ ನಾಯಕರು ಬಂಧನವನ್ನು ಖಂಡಿಸಿದ್ದಾರೆ. ಈ ಕುರಿತಂತೆ ಪ್ರತಿಭಟನೆಗಳು ನಡೆದಿವೆ. ಮುಖ್ಯಮಂತ್ರಿ ಪಿಣರಾಜಿ ವಿಜಯನ್, ತಕ್ಷಣ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಇದು ಸಂಘ ಪರಿವಾರದ ಬೂಟಾಟಿಕೆಗಳ ಭಾಗವಾಗಿದೆ ಎಂದು ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿಡಿ ಸತೀಶನ್ ಹೇಳಿದ್ದಾರೆ.

    ಮಂಗಳೂರು : ಸುಳ್ಳು ಆರೋಪ ಹೊರಿಸಿ ಕ್ರೈಸ್ತ ಸನ್ಯಾಸಿನಿಯರನ್ನು ಬಂಧಿಸಿ ಜೈಲಿಗಟ್ಟಿದ ಛತ್ತೀಸ್‌ಗಢ ಸರಕಾರದ ಫ್ಯಾಸಿಸ್ಟ್ ಸರಕಾರದ ರಾಜಕಾರಣವನ್ನು ವಿರೋಧಿಸಿ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ನೇತೃತ್ವದಲ್ಲಿ ಸೋಮವಾರ ಮಂಗಳೂರಿನ ಮಿನಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಧಾರ್ಮಿಕ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಫಾ. ಡೊಮಿನಿಕ್ ವಾಸ್ ಅವರು ಭಾರತದ ಕ್ರೈಸ್ತರು ಈ ಮಣ್ಣಿನ ಮಕ್ಕಳು, ದೇಶಭಕ್ತರು. ಮತಾಂಧರಲ್ಲ. ಒಂದು ಕೈಯಲ್ಲಿ ಬೈಬಲ್ ಹಿಡಿದುಕೊಂಡು ಮತ್ತು ಇನ್ನೊಂದು ಕೈಯಲ್ಲಿ ಸಂವಿಧಾನವನ್ನು ಹಿಡಿದು ಈ ದೇಶವನ್ನು ಅಪಾರವಾಗಿ ಪ್ರೀತಿಸುವರು ಎಂದು ಹೇಳಿದರು.