Tag: #anupama magazine

  • ಮಧ್ಯಾಹ್ನ ಊಟ ಮಾಡಿದ ಕೂಡಲೇ ನಿದ್ದೆ ಬರುತ್ತದೆಯೇ? ಕಾರಣ ಇಲ್ಲಿದೆ…!

    ಮಧ್ಯಾಹ್ನ ಊಟ ಮಾಡಿದ ಕೂಡಲೇ ನಿದ್ದೆ ಬರುತ್ತದೆಯೇ? ಕಾರಣ ಇಲ್ಲಿದೆ…!

    ಮಧ್ಯಾಹ್ನ ಅನ್ನ ತಿಂದ ನಂತರ ನಿದ್ದೆ ಮಾಡಲು ಇಷ್ಟಪಡದವರು ಯಾರಾದರೂ ಇದ್ದಾರೆಯೇ…? ವಿಶೇಷವಾಗಿ ನೀವು ಬಹಳಷ್ಟು ಅನ್ನ ತಿಂದಾಗ… ಕನ್ನಡಿಗರಾದ ನಮಗೆ ಮಧ್ಯಾಹ್ನ ಅನ್ನ ಸೇವಿಸದೇ ಇದ್ದರೆ ಆಗುವುದೇ ಇಲ್ಲ … ಅದರ ಗ್ಲೈಸೆಮಿಕ್ ಸೂಚ್ಯಂಕ ಅನ್ನ ತಿಂದಾಗ ಬೇಗನೆ ಹೊಟ್ಟೆ ತುಂಬಲು ಕಾರಣ ಹೆಚ್ಚಾಗಿರುತ್ತದೆ.

    ಅಕ್ಕಿಯಲ್ಲಿ ಹೆಚ್ಚಿನ ಕಾರ್ಬೋಹೈಡ್ರೇಟ್‌ಗಳಿವೆ. ನೀವು ಕಾರ್ಬೋಹೈಡ್ರೇಟ್‌ಗಳನ್ನು ಸೇವಿಸಿದಾಗಲೆಲ್ಲಾ ದೇಹವು ಅವುಗಳನ್ನು ಗ್ಲೂಕೋಸ್ ಆಗಿ ಪರಿವರ್ತಿಸುತ್ತದೆ. ಗ್ಲೂಕೋಸ್‌ಗೆ ಇನ್ಸುಲಿನ್ ಅಗತ್ಯವಿರುತ್ತದೆ. ಇನ್ಸುಲಿನ್ ಉತ್ಪಾದನೆ ಹೆಚ್ಚಾದಾಗ, ಅದು ಟ್ರಿಪ್ಟೊಫಾನ್ ಎಂಬ ಅಗತ್ಯವಾದ ಕೊಬ್ಬಿನಾಮ್ಲವನ್ನು ಮೆದುಳಿಗೆ ಸಾಗಿಸುತ್ತದೆ. ಟ್ರಿಪ್ಟೊಫಾನ್ ನಿದ್ರೆಯನ್ನು ಪ್ರೇರೇಪಿಸುವ ಹಾರ್ಮೋನ್ ಮೆಲಟೋನಿನ್ ಮತ್ತು ಸಿರೊಟೋನಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಅನ್ನ ತಿಂದ ನಂತರ ನಿದ್ರೆ ಬರುವುದು ಸಾಮಾನ್ಯ ಎಂದು ಪೌಷ್ಟಿಕತಜ್ಞರು ಹೇಳುತ್ತಾರೆ. ಇದು ದೇಹವನ್ನು ಶಾಂತಗೊಳಿಸುವ ಮತ್ತು ಜೀರ್ಣಕ್ರಿಯೆಯ ಪ್ರಕ್ರಿಯೆಯ ಮೇಲೆ ಕೇಂದ್ರೀಕರಿಸುವ ಸಾಮಾನ್ಯ ನರ ಪ್ರತಿಕ್ರಿಯೆಯಾಗಿದೆ.

    ಅನ್ನ ತಿಂದ ನಂತರ ನಿದ್ರೆ ಬರದಂತೆ ನೋಡಿಕೊಳ್ಳುವ ಮಾರ್ಗವೆಂದರೆ ನಿಮ್ಮ ಆಹಾರವನ್ನು ನಿಯಂತ್ರಿಸುವುದು. ನೀವು ಹೆಚ್ಚು ಆಹಾರವನ್ನು ಸೇವಿಸಿದಷ್ಟೂ ಅದು ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದು ಹೆಚ್ಚು ಆಯಾಸ ಮತ್ತು ಅರೆನಿದ್ರಾವಸ್ಥೆಗೆ ಕಾರಣವಾಗಬಹುದು.

    ಆದ್ದರಿಂದ, ಸಾಧ್ಯವಾದಷ್ಟು ಕಡಿಮೆ ಅನ್ನವನ್ನು ಸೇವಿಸುವುದು ಉತ್ತಮ ಮಾರ್ಗವಾಗಿದೆ. ಮಧ್ಯಾಹ್ನದ ಊಟವು 50% ತರಕಾರಿಗಳು, 25% ಪ್ರೋಟೀನ್ ಮತ್ತು 25% ಕಾರ್ಬೋಹೈಡ್ರೇಟ್‌ಗಳನ್ನು ಒಳಗೊಂಡಿರಬೇಕು ಎಂದು ತಜ್ಞರು ಹೇಳುತ್ತಾರೆ. ಕಡಿಮೆ ಅನ್ನ ಮತ್ತು ಹೆಚ್ಚು ತರಕಾರಿಗಳು ಮತ್ತು ಸಲಾಡ್‌ಗಳನ್ನು ತಿನ್ನುವುದರಿಂದ ಮಧ್ಯಾಹ್ನದ ಅರೆನಿದ್ರಾವಸ್ಥೆ ಕಡಿಮೆಯಾಗುತ್ತದೆ

  • ಎಚ್ಚರ! AI ಚಾಟ್‌ಬಾಟ್‌ಗಳೊಂದಿಗೆ ಈ 8 ವಿಷಯಗಳನ್ನು ಎಂದಿಗೂ ಹಂಚಿಕೊಳ್ಳಬೇಡಿ..!

    ಎಚ್ಚರ! AI ಚಾಟ್‌ಬಾಟ್‌ಗಳೊಂದಿಗೆ ಈ 8 ವಿಷಯಗಳನ್ನು ಎಂದಿಗೂ ಹಂಚಿಕೊಳ್ಳಬೇಡಿ..!

    ಇಂದಿನ ಡಿಜಿಟಲ್ ಯುಗದಲ್ಲಿ ಸ್ಮಾರ್ಟ್‌ಫೋನ್ ಮತ್ತು ಇಂಟರ್ನೆಟ್ ಬಳಕೆದಾರರಿಗೆ AI (ಕೃತಕ ಬುದ್ಧಿಮತ್ತೆ) ಚಾಟ್‌ಬಾಟ್‌ಗಳು ಅತ್ಯಂತ ಆಪ್ತ ಗೆಳೆಯನಂತಾಗಿವೆ. ಕೆಲಸದ ಒತ್ತಡವಿರಲಿ ಅಥವಾ ಓದಿನ ಗೊಂದಲವಿರಲಿ, ನಾವು ತಕ್ಷಣ ಮೊರೆ ಹೋಗುವುದು ಈ ಚಾಟ್‌ಬಾಟ್‌ಗಳಿಗೇ. ಆದರೆ, ನಮಗೆ ಅರಿವಿಲ್ಲದಂತೆ ನಾವು ಇವುಗಳ ಮೇಲೆ ಅತಿಯಾಗಿ ಅವಲಂಬಿತರಾಗುತ್ತಿದ್ದೇವೆ.

    ​ಇತ್ತೀಚಿನ ವರದಿಗಳ ಪ್ರಕಾರ, ಚಾಟ್‌ಬಾಟ್‌ಗಳೊಂದಿಗೆ ಅತಿಯಾದ ಮಾಹಿತಿ ಹಂಚಿಕೊಳ್ಳುವುದು ನಿಮ್ಮ ಖಾಸಗಿ ಜೀವನಕ್ಕೆ ಸಂಚಕಾರ ತರಬಹುದು. ಹಾಗಾದರೆ, ಸುರಕ್ಷತೆಯ ದೃಷ್ಟಿಯಿಂದ ನೀವು ಯಾವ ವಿಷಯಗಳನ್ನು ಗೌಪ್ಯವಾಗಿಡಬೇಕು? ಇಲ್ಲಿದೆ ಮಾಹಿತಿ.

    1. ಪಾಸ್‌ವರ್ಡ್ ಮತ್ತು ವೈಯಕ್ತಿಕ ಮಾಹಿತಿ

    ಚಾಟ್‌ಬಾಟ್‌ಗಳನ್ನು ಎಂದಿಗೂ ನಿಮ್ಮ ಪಾಸ್‌ವರ್ಡ್‌ ಅಥವಾ ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸುವ ಡೈರಿ ಎಂದು ಭಾವಿಸಬೇಡಿ. ನೀವು ರಸ್ತೆಯಲ್ಲಿ ನಿಂತು ಜೋರಾಗಿ ಕೂಗಲು ಇಷ್ಟಪಡದ ವೈಯಕ್ತಿಕ ಮಾಹಿತಿಯನ್ನು ಚಾಟ್‌ಬಾಟ್‌ನಲ್ಲಿ ಟೈಪ್ ಕೂಡ ಮಾಡಬೇಡಿ.

    2. ಬ್ಯಾಂಕಿಂಗ್ ಮತ್ತು ಹಣಕಾಸು ವಿವರಗಳು

    ಯಾವುದೇ ಕಾರಣಕ್ಕೂ ನಿಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಕ್ರೆಡಿಟ್ ಕಾರ್ಡ್ ವಿವರ ಅಥವಾ ಪಿನ್ (PIN) ಸಂಖ್ಯೆಗಳನ್ನು ಹಂಚಿಕೊಳ್ಳಬೇಡಿ. ಇದು ನಿಮ್ಮ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ದೂಡಬಹುದು.

    3. ನಿಮ್ಮ ಆಳದ ರಹಸ್ಯಗಳು

    ನಮ್ಮ ಮನಸ್ಸಿನ ರಹಸ್ಯಗಳನ್ನು ಯಾರೊಂದಿಗಾದರೂ ಹೇಳಿಕೊಂಡರೆ ಹಗುರಾಗುತ್ತದೆ ಎಂಬ ಭಾವನೆ ಇರುತ್ತದೆ. ಆದರೆ ಚಾಟ್‌ಬಾಟ್ ಮನುಷ್ಯನಲ್ಲ! ಅದಕ್ಕೆ ಭಾವನೆಗಳಿಲ್ಲ ಮತ್ತು ನಿಮ್ಮ ರಹಸ್ಯಗಳನ್ನು ಅದು ಸುರಕ್ಷಿತವಾಗಿರಿಸುತ್ತದೆ ಎಂಬ ಭರವಸೆಯೂ ಇಲ್ಲ.

    4. ತುರ್ತು ಸಂದರ್ಭದ ನಿರ್ಧಾರಗಳು

    ವಾಹನದ ಬ್ರೇಕ್ ಫೇಲ್ ಆದಾಗ ಅಥವಾ ಜೀವಕ್ಕೆ ಅಪಾಯವಿರುವ ತುರ್ತು ಪರಿಸ್ಥಿತಿಯಲ್ಲಿ ಚಾಟ್‌ಬಾಟ್ ಸಲಹೆಗಾಗಿ ಕಾಯಬೇಡಿ. ಅಂತಹ ಸಮಯದಲ್ಲಿ ನಿಮ್ಮ ಸ್ವಂತ ವಿವೇಚನೆ ಮತ್ತು ಸ್ಥಳೀಯ ಸಹಾಯವನ್ನು ಪಡೆಯುವುದು ಮುಖ್ಯ.

    5. ಬ್ರೇಕಿಂಗ್ ನ್ಯೂಸ್ ಮತ್ತು ಪ್ರಚಲಿತ ವಿದ್ಯಮಾನ

    ​AI ಚಾಟ್‌ಬಾಟ್‌ಗಳು ಪ್ರತಿ ಸೆಕೆಂಡಿನ ಸುದ್ದಿಯನ್ನು ಅಪ್‌ಡೇಟ್ ಮಾಡುವಂತೆ ನಿರ್ಮಿತವಾಗಿರುವುದಿಲ್ಲ. ಸ್ಟಾಕ್ ಮಾರುಕಟ್ಟೆ, ಪಂದ್ಯಗಳ ಸ್ಕೋರ್ ಅಥವಾ ಇತ್ತೀಚಿನ ಸುದ್ದಿಗಳಿಗಾಗಿ ಇವುಗಳನ್ನು ಅವಲಂಬಿಸುವ ಬದಲು ವಿಶ್ವಾಸಾರ್ಹ ಸುದ್ದಿ ಸಂಸ್ಥೆಗಳನ್ನು ಗಮನಿಸಿ.

    6. ಆರೋಗ್ಯದ ಸಮಸ್ಯೆಗಳು

    ​ಚಾಟ್‌ಬಾಟ್ ನಿಮಗೆ ಆರೋಗ್ಯದ ಬಗ್ಗೆ ಸಾಮಾನ್ಯ ಮಾಹಿತಿ ನೀಡಬಹುದು, ಆದರೆ ಅದು ವೈದ್ಯರಲ್ಲ. ಮಾನಸಿಕ ಅಥವಾ ದೈಹಿಕ ಆರೋಗ್ಯ ಸಮಸ್ಯೆಗಳಿಗೆ ಅರ್ಹ ವೈದ್ಯರನ್ನೇ ಭೇಟಿ ಮಾಡಿ. ತಪ್ಪು ಮಾಹಿತಿ ನೀಡುವ ಚಿಕಿತ್ಸೆಗಳು ಅಪಾಯಕಾರಿಯಾಗಬಲ್ಲವು.

    7. ಭಾವನಾತ್ಮಕ ಸಂಬಂಧಗಳು

    ​ಚಾಟ್‌ಬಾಟ್ ಕೇವಲ ಸಾಫ್ಟ್‌ವೇರ್ ಪ್ರೋಗ್ರಾಂ ಆಗಿದೆ. ಅದಕ್ಕೆ ಮಾನವ ಸಂಬಂಧಗಳ ಸಂಕೀರ್ಣತೆ ಅರ್ಥವಾಗುವುದಿಲ್ಲ. ಭಾವನಾತ್ಮಕ ಬೆಂಬಲಕ್ಕಾಗಿ ಅಥವಾ ಸಂಬಂಧಗಳ ನಿರ್ಧಾರಕ್ಕಾಗಿ ಮನುಷ್ಯರನ್ನೇ ಅವಲಂಬಿಸಿ.

    8. ಲೋಕಕ್ಕೆ ತಿಳಿಯಬಾರದು ಎನ್ನುವ ವಿಷಯಗಳು

    ​”ಜಗತ್ತಿನಲ್ಲಿ ಯಾರಿಗೂ ತಿಳಿಯಬಾರದು” ಎಂದು ನೀವು ಬಯಸುವ ಯಾವುದೇ ವಿಷಯವಿದ್ದರೂ ಅದನ್ನು ಚಾಟ್‌ಬಾಟ್ ಬಳಿ ಹಂಚಿಕೊಳ್ಳಬೇಡಿ. ಚಾಟ್‌ಬಾಟ್‌ನಲ್ಲಿ ನೀವು ಹಂಚಿಕೊಳ್ಳುವ ಮಾಹಿತಿ ಸೈಬರ್ ಲೋಕದ ಭಾಗವಾಗಿ ಉಳಿದುಬಿಡುತ್ತದೆ ಎಂಬುದನ್ನು ನೆನಪಿಡಿ

  • ನವವಧುಗಳ ಆತ್ಮಹತ್ಯೆ ಹೆಚ್ಚಳ: 
ಮದುವೆ ಮುನ್ನ ಕಡ್ಡಾಯ ಕೌನ್ಸಿಲಿಂಗ್‌ಗೆ ಸಂಸದ ಹ್ಯಾರಿಸ್ ಬೀರನ್ ಆಗ್ರಹ

    ನವವಧುಗಳ ಆತ್ಮಹತ್ಯೆ ಹೆಚ್ಚಳ: ಮದುವೆ ಮುನ್ನ ಕಡ್ಡಾಯ ಕೌನ್ಸಿಲಿಂಗ್‌ಗೆ ಸಂಸದ ಹ್ಯಾರಿಸ್ ಬೀರನ್ ಆಗ್ರಹ

    ​ದೇಶದಲ್ಲಿ ವಿವಾಹಿತ ಮಹಿಳೆಯರ ಆತ್ಮಹತ್ಯೆ ಪ್ರಮಾಣವು ಆತಂಕಕಾರಿಯಾಗಿ ಏರುತ್ತಿದ್ದು, ವಾರ್ಷಿಕವಾಗಿ 1.6 ಲಕ್ಷಕ್ಕೂ ಹೆಚ್ಚು ಮಹಿಳೆಯರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂಬ ಕಠೋರ ಸತ್ಯವನ್ನು ಸಂಸದ ಹ್ಯಾರಿಸ್ ಬೀರನ್ ರಾಜ್ಯಸಭೆಯಲ್ಲಿ ಬಿಚ್ಚಿಟ್ಟಿದ್ದಾರೆ. ಮದುವೆಯ ನಂತರದ ಕೌಟುಂಬಿಕ ಕಿರುಕುಳ ಮತ್ತು ಮಾನಸಿಕ ಸಂಘರ್ಷಗಳಿಂದಾಗಿ ಪ್ರತಿ ವರ್ಷ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮಹಿಳೆಯರು ಪ್ರಾಣ ಕಳೆದುಕೊಳ್ಳುತ್ತಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ನವವಧುಗಳ ಸುರಕ್ಷತೆಯನ್ನು ಖಚಿತಪಡಿಸಲು ವಿವಾಹದ ಕಾನೂನು ಪ್ರಕ್ರಿಯೆಯಲ್ಲಿ ಸಮೂಲ ಬದಲಾವಣೆ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

    ​ಮದುವೆ ನೋಂದಣಿ ಸಮಯದಲ್ಲಿ ಅಥವಾ ಮ್ಯಾರೇಜ್ ಸರ್ಟಿಫಿಕೇಟ್ ಪಡೆಯುವ ಮೊದಲು ದಂಪತಿಗಳಿಗೆ ‘ವಿವಾಹಪೂರ್ವ ಕೌನ್ಸಿಲಿಂಗ್’ ಅನ್ನು ಕಡ್ಡಾಯಗೊಳಿಸಬೇಕು ಎಂಬುದು ಸಂಸದರ ಪ್ರಮುಖ ಬೇಡಿಕೆಯಾಗಿದೆ. ಕೌಟುಂಬಿಕ ಒತ್ತಡ ಮತ್ತು ಹೊಂದಾಣಿಕೆಯ ಸಮಸ್ಯೆಗಳನ್ನು ನಿಭಾಯಿಸಲು ಈ ಕೌನ್ಸಿಲಿಂಗ್ ದಂಪತಿಗಳಿಗೆ ಮಾನಸಿಕ ಬಲ ನೀಡುತ್ತದೆ. ಕೇವಲ ಅಪರಾಧ ನಡೆದ ನಂತರ ಕಾನೂನು ಕ್ರಮ ಕೈಗೊಳ್ಳುವ ಬದಲು, ಮುನ್ನೆಚ್ಚರಿಕೆಯಾಗಿ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಶಾಸನಬದ್ಧಗೊಳಿಸುವುದರಿಂದ ಲಕ್ಷಾಂತರ ಮಹಿಳೆಯರ ಜೀವ ಉಳಿಸಬಹುದು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ನವವಧುಗಳ ಜೀವ ಉಳಿಸಲು ಮತ್ತು ಸುಭದ್ರ ಕುಟುಂಬ ವ್ಯವಸ್ಥೆಯನ್ನು ನಿರ್ಮಿಸಲು ಇಂತಹ ಕಾನೂನು ಸುಧಾರಣೆಗಳು ಕಾಲದ ಅಗತ್ಯವಾಗಿದೆ.

  • ಫುಡ್ ಪ್ಯಾಕೆಟ್ ಮೇಲೆ ಇನ್ಮುಂದೆ ‘ಹೈಡ್ ಅಂಡ್ ಸೀಕ್’ ಆಟ ನಡೆಯಲ್ಲ: 
ಗ್ರಾಹಕರಿಗಾಗಿ ಬದಲಾಗಲಿದೆ ನಿಯಮ!

    ಫುಡ್ ಪ್ಯಾಕೆಟ್ ಮೇಲೆ ಇನ್ಮುಂದೆ ‘ಹೈಡ್ ಅಂಡ್ ಸೀಕ್’ ಆಟ ನಡೆಯಲ್ಲ: ಗ್ರಾಹಕರಿಗಾಗಿ ಬದಲಾಗಲಿದೆ ನಿಯಮ!

    ಆಹಾರ ಪದಾರ್ಥಗಳ ಪ್ಯಾಕೆಟ್‌ಗಳ ಮೇಲೆ ಪೌಷ್ಟಿಕಾಂಶದ ವಿವರಗಳನ್ನು ಅತ್ಯಂತ ಸ್ಪಷ್ಟವಾಗಿ ಮತ್ತು ಮುಂಭಾಗದಲ್ಲೇ ಪ್ರದರ್ಶಿಸಬೇಕು ಎಂದು ಸಂಸದೀಯ ಸಮಿತಿಯು ಕೇಂದ್ರ ಸರ್ಕಾರಕ್ಕೆ ಪ್ರಮುಖ ಶಿಫಾರಸು ಮಾಡಿದೆ. ಪ್ರಸ್ತುತ ಹೆಚ್ಚಿನ ಕಂಪನಿಗಳು ಪೌಷ್ಟಿಕಾಂಶದ ಮಾಹಿತಿಯನ್ನು ಪ್ಯಾಕೆಟ್‌ನ ಹಿಂಭಾಗದಲ್ಲಿ ಅತ್ಯಂತ ಸಣ್ಣ ಅಕ್ಷರಗಳಲ್ಲಿ ನೀಡುತ್ತಿದ್ದು, ಇದು ಸಾಮಾನ್ಯ ಗ್ರಾಹಕರಿಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಕಷ್ಟಕರವಾಗಿದೆ.

    ಆದ್ದರಿಂದ, ಗ್ರಾಹಕರು ತಾವು ಸೇವಿಸುವ ಆಹಾರದಲ್ಲಿ ಸಕ್ಕರೆ, ಉಪ್ಪು ಮತ್ತು ಕೊಬ್ಬಿನಂಶ ಎಷ್ಟು ಪ್ರಮಾಣದಲ್ಲಿದೆ ಎಂಬುದನ್ನು ಸುಲಭವಾಗಿ ಗುರುತಿಸಲು ಅನುಕೂಲವಾಗುವಂತೆ ‘ಫ್ರಂಟ್ ಆಫ್ ಪ್ಯಾಕೇಜ್ ಲೇಬಲಿಂಗ್'(FOPL) ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಸಮಿತಿ ಒತ್ತಿ ಹೇಳಿದೆ.

    ​ಜೀವನಶೈಲಿ ಸಂಬಂಧಿತ ಕಾಯಿಲೆಗಳಾದ ಮಧುಮೇಹ ಮತ್ತು ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿರುವ ಇಂದಿನ ಕಾಲದಲ್ಲಿ, ಜನರು ತಾವು ಖರೀದಿಸುವ ಆಹಾರದ ಬಗ್ಗೆ ಸರಿಯಾದ ಮಾಹಿತಿ ಹೊಂದಿರುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ, ಬಣ್ಣಗಳ ಸಂಕೇತ ಅಥವಾ ಎಚ್ಚರಿಕೆ ಚಿಹ್ನೆಗಳನ್ನು ಬಳಸಿ ಆಹಾರದ ಗುಣಮಟ್ಟವನ್ನು ಪ್ಯಾಕೆಟ್ ಮುಂಭಾಗದಲ್ಲೇ ಗುರುತಿಸುವುದರಿಂದ ಗ್ರಾಹಕರು ಆರೋಗ್ಯಕರ ಆಯ್ಕೆಗಳನ್ನು ಮಾಡಲು ಸಾಧ್ಯವಾಗುತ್ತದೆ.

    ಈ ಬದಲಾವಣೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಮಿತಿಯು ತನ್ನ ವರದಿಯಲ್ಲಿ ಸೂಚಿಸಿದೆ. ಇದು ಕೇವಲ ಗ್ರಾಹಕರಲ್ಲಿ ಜಾಗೃತಿ ಮೂಡಿಸುವುದಲ್ಲದೆ, ಆಹಾರ ತಯಾರಿಕಾ ಕಂಪನಿಗಳು ಹೆಚ್ಚು ಪೌಷ್ಟಿಕಾಂಶಯುಕ್ತ ಉತ್ಪನ್ನಗಳನ್ನು ತಯಾರಿಸುವಂತೆ ಪ್ರೇರೇಪಿಸುತ್ತದೆ.

  • ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ವೈದ್ಯೆಯ ನಕಾಬ್ ಎಳೆದಿರುವ ಘಟನೆ ಅತ್ಯಂತ ಖಂಡನೀಯ: 
ಫಾರ್ವರ್ಡ್ ಟ್ರಸ್ಟ್

    ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ವೈದ್ಯೆಯ ನಕಾಬ್ ಎಳೆದಿರುವ ಘಟನೆ ಅತ್ಯಂತ ಖಂಡನೀಯ: ಫಾರ್ವರ್ಡ್ ಟ್ರಸ್ಟ್

    ಬೆಂಗಳೂರು: ಪಟ್ನಾದಲ್ಲಿ ಡಿಸೆಂಬರ್ 15, 2025ರಂದು ನಡೆದ ಆಯುಷ್ ವೈದ್ಯರ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ಮಹಿಳಾ ವೈದ್ಯರೊಬ್ಬರ ನಿಖಾಬ್ ಅನ್ನು ಎಳೆದ ಘಟನೆಯು ಅತ್ಯಂತ ಖಂಡನೀಯವಾಗಿದೆ.

    ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ಧಾರ್ಮಿಕ ಸ್ವಾತಂತ್ರ್ಯ, ವೈಯಕ್ತಿಕ ಘನತೆ ಮತ್ತು ಗೌರವವನ್ನು ಖಾತರಿಪಡಿಸಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಮಹಿಳೆಯ ಧಾರ್ಮಿಕ ಆಚರಣೆ ಅಥವಾ ವೈಯಕ್ತಿಕ ಆಯ್ಕೆಯನ್ನು ಸಾರ್ವಜನಿಕವಾಗಿ ಉಲ್ಲಂಘಿಸುವುದು ಸಂವಿಧಾನದ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ಮಾತ್ರವಲ್ಲ ಈ ಕೃತ್ಯವು ಮಹಿಳೆಯರ ಘನತೆ, ಸುರಕ್ಷತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ.

    ಈ ದೇಶದ ಸಂವಿಧಾನವು ಎಲ್ಲ ನಾಗರಿಕರಿಗೂ ಗೌರವಯುತ, ಘನತೆಯುತ ಮತ್ತು ಸಮಾನ ಜೀವನವನ್ನು ಭರವಸೆ ನೀಡುತ್ತದೆ. ಒಂದು ಕಡೆ ದೇಶವನ್ನು ತಾಯಿಯೆಂದು ಪೂಜಿಸುತ್ತೇವೆ ಮತ್ತೊಂದು ಕಡೆ ಈ ದೇಶದ ಮಹಿಳೆಯರ ಮೇಲೆ ಈ ರೀತಿಯ ದಾಳಿಗಳು ನಿರಂತರವಾಗಿ ನಡೆಯುತ್ತಿರುವುದು ದುರಾದೃಷ್ಟಕರ.

    ಈ ಕೃತ್ಯವನ್ನು ಫಾರ್ವರ್ಡ್ ಟ್ರಸ್ಟ್ ತೀವ್ರವಾಗಿ ಖಂಡಿಸುತ್ತದೆ ಮತ್ತು ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತದೆ ಹಾಗೂ ಎಲ್ಲ ಮಹಿಳೆಯರ ಧಾರ್ಮಿಕ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಆಯ್ಕೆಯನ್ನು ರಕ್ಷಿಸಲು ಸೂಕ್ತ ಕಾನೂನುಗಳು ಮತ್ತು ನೀತಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸುತ್ತದೆ.

    ಫಾರ್ವರ್ಡ್ ಟ್ರಸ್ಟ್

  • ವಿಶ್ವದ ಅತ್ಯಂತ ರುಚಿಕರ ಆಹಾರಗಳ ಪಟ್ಟಿಯಲ್ಲಿ ಭಾರತದ ಈ ನಗರವೇ ಫಸ್ಟ್!

    ವಿಶ್ವದ ಅತ್ಯಂತ ರುಚಿಕರ ಆಹಾರಗಳ ಪಟ್ಟಿಯಲ್ಲಿ ಭಾರತದ ಈ ನಗರವೇ ಫಸ್ಟ್!

    ಭಾರತೀಯ ಖಾದ್ಯಗಳ ರುಚಿಗೆ ಮನಸೋಲದವರೇ ಇಲ್ಲ. ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ಭಾರತದ ಘಮಘಮಿಸುವ ಮಸಾಲೆ ಮತ್ತು ವೈವಿಧ್ಯಮಯ ಖಾದ್ಯಗಳು ಜನರನ್ನು ತನ್ನತ್ತ ಸೆಳೆಯುತ್ತವೆ.

    ಭಾರತದ ರುಚಿಕರ ನಗರಗಳು ಎಂದ ಕೂಡಲೇ ನಮಗೆ ನೆನಪಾಗುವುದು ಹೈದರಾಬಾದಿನ ಬಿರಿಯಾನಿ ಅಥವಾ ದೆಹಲಿಯ ಚಾಟ್ಸ್. ಆದರೆ ಇವೆಲ್ಲವನ್ನೂ ಹಿಂದಿಕ್ಕಿ ಈಗ ಭಾರತದ ಮತ್ತೊಂದು ನಗರ ಜಾಗತಿಕ ಮಟ್ಟದಲ್ಲಿ ದೊಡ್ಡ ಸಾಧನೆ ಮಾಡಿದೆ. ವಿಶ್ವಪ್ರಸಿದ್ಧ ‘ಟೇಸ್ಟ್ ಅಟ್ಲಾಸ್’ ಇತ್ತೀಚೆಗೆ ಬಿಡುಗಡೆ ಮಾಡಿದ ವಿಶ್ವದ ಅತ್ಯುತ್ತಮ ಆಹಾರದ ನಗರಗಳ ಪಟ್ಟಿಯಲ್ಲಿ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಅಚ್ಚರಿಯ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.

    ​ಈ ಜಾಗತಿಕ ಪಟ್ಟಿಯಲ್ಲಿ ಕೋಲ್ಕತ್ತಾ 24ನೇ ಸ್ಥಾನವನ್ನು ಅಲಂಕರಿಸುವ ಮೂಲಕ ಭಾರತದ ಅತ್ಯಂತ ರುಚಿಕರ ಆಹಾರದ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂಬೈ, ಹೈದರಾಬಾದ್ ಮತ್ತು ದೆಹಲಿಯಂತಹ ನಗರಗಳನ್ನು ಕೆಳಕ್ಕೆ ತಳ್ಳಿ ಕೋಲ್ಕತ್ತಾ ಈ ಗೌರವ ಪಡೆದಿರುವುದು ಆಹಾರ ಪ್ರೇಮಿಗಳಲ್ಲಿ ಸಂಭ್ರಮ ತಂದಿದೆ. ಇಲ್ಲಿನ ಸಿಹಿ ತಿಂಡಿಗಳಾದ ರಸಗುಲ್ಲಾ ಮತ್ತು ಮಿಸ್ಟಿ ದೋಯ್ ಮಾತ್ರವಲ್ಲದೆ, ಕಟಿಕಾಬಾಬ್ ಮತ್ತು ಅಲ್ಲಿನ ವಿಶಿಷ್ಟ ಶೈಲಿಯ ಬಿರಿಯಾನಿ ವಿಶ್ವದಾದ್ಯಂತ ಇರುವ ಆಹಾರ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿದೆ.

    ​ಕೋಲ್ಕತ್ತಾದ ಜೊತೆಗೆ ಮುಂಬೈ 35ನೇ ಸ್ಥಾನ, ಹೈದರಾಬಾದ್ 39ನೇ ಸ್ಥಾನ ಹಾಗೂ ದೆಹಲಿ ಮತ್ತು ಚೆನ್ನೈ ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ವಿಶ್ವದಾದ್ಯಂತ ಇರುವ ಲಕ್ಷಾಂತರ ಪ್ರವಾಸಿಗರ ರೇಟಿಂಗ್ ಮತ್ತು ಸ್ಥಳೀಯ ಖಾದ್ಯಗಳ ರುಚಿಯ ಆಧಾರದ ಮೇಲೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಇಟಲಿಯ ರೋಮ್ ನಗರ ಜಗತ್ತಿನಲ್ಲೇ ನಂಬರ್ ಒನ್ ಆಹಾರದ ನಗರವಾಗಿ ಹೊರಹೊಮ್ಮಿದೆ. ಭಾರತದ ನಗರವೊಂದು ಜಾಗತಿಕ ಮಟ್ಟದಲ್ಲಿ ಟಾಪ್ 25ರೊಳಗೆ ಸ್ಥಾನ ಪಡೆದಿರುವುದು ನಮ್ಮ ದೇಶದ ಶ್ರೀಮಂತ ಆಹಾರ ಪದ್ಧತಿಗೆ ಸಂದ ಗೌರವವಾಗಿದೆ

  • ಬಂಧನ: ಕಥೆ

    ಬಂಧನ: ಕಥೆ

    ಇವತ್ತು ಗುರುವಾರ. ನನಗೆ ಅಲ್ಲಿಗೆ ಹೋಗಬೇಕಮ್ಮಾ… ಮಗಳು ಶಾಲೆಯಿಂದ ಬೇಗ ಬಂದರೆ… ಎಂದಿನಂತೇ ಏನಾದರೂ ಕಾರಣ ಹೇಳಿ ಬಿಡು ಅಮ್ಮಾ. ಅವಳಿಗಿಷ್ಟದ ತಿಂಡಿ ಮಾಡಿದ್ದೇನೆ…

    ಸಾಯಿರಾ ಸಿಂಗರಿಸಿಕೊAಡು ಬುರ್ಖಾ ಧರಿಸಿ ಹೊರಟಾಗ ತಾಯಿ ಫಾತೀಮಾ ಟಿಫಿನ್ ಬಾಕ್ಸ್ನ್ನು ಮಗಳ ಕೈಗೆ ಕೊಡುತ್ತಾ ಇದರಲ್ಲಿ ಶೇವಿಗೆ ಪಾಯಸ ಇದೆ, ಆತನಿಗೆ ತುಂಬಾ ಇಷ್ಟ ತಾನೆ… ಕೊಡು.. ಎಂದರು ನಗುತ್ತಾ, ಅಂಗಳದಲ್ಲಿಟ್ಟ ಸ್ಕೂಟರ್ ಹತ್ತಿ ಆಕೆ ಕೈಯಾಡಿಸಿದಳು.

    ಶಾಂತ ಲಾಡ್ಜ್’ನೊಳಗೆ ಸಾಯಿರಾ ಬಂದಾಗ ವಾಚ್‌ಮ್ಯಾನ್ ಪರಿಚಯದ ನಗೆ ಬೀರಿ ಸಲಾಮ್ ಹೇಳಿದ. ಸಾರ್… ಬಂದಿದ್ದರಾ? ಸಾಯಿರಾ ಕೇಳಿದಾಗ, ವಾಚ್‌ಮ್ಯಾನ್ ನಸುನಗುತ್ತಾ ಹೌದು ಮ್ಯಾಡಮ್… ಅವರು ಬಂದು ಆದಾಗಲೇ ಅರ್ಧ ಗಂಟೆ ಆಗಿರಬಹುದು. ಸಾಯಿರಾ ಅವಸರದಲ್ಲಿ ಲಿಫ್ಟ್ನೊಳಗೆ ನುಸುಳಿಕೊಂಡು ಉಸಿರು ಬಿಟ್ಟಳು. ರೂಮ್ ನಂಬರ್ ನೂರಹನ್ನೊಂದರ ಮುಂದೆ ನಿಂತ ಸಾಯಿರಾ ಮೆಲ್ಲನೆ ಬಾಗಿಲು ತಟ್ಟಿದಳು. ಮೆಲ್ಲನೆ ಬಾಗಿಲು ತೆರೆಯಿತು. ಸಾಯಿರಾ ನಸು ನಗುತ್ತಾ ತನ್ನೆದುರು ನಿಂತವನನ್ನು ನೋಡಿದಳು. ಸಲಾಮ್ ಹೇಳಿದ ಆತ ಅವಳನ್ನು ಬರಸೆಳೆದುಕೊಳ್ಳುತ್ತಾ, “ಯಾಕಿಷ್ಟು ತಡ ಮಾಡಿದೆ ಚಿನ್ನಾ?” ಎಂದ ನಸು ಮುನಿಸು ತೋರಿಸುತ್ತಾ. ಸ್ಸಾರೀ… ಮಗಳನ್ನು ಶಾಲೆಗೆ ಕಳುಹಿಸಿ ಬರಬೇಕಲ್ಲವೇ? ಬೇಸರ ಮಾಡಬೇಡಿ… ಬರುವ ವಾರ ನಿಮಗಿಂತಲೂ ಮುಂಚೆ ನಾನೇ ಬಂದು ನಿಮ್ಮನ್ನು ಕಾಯುತ್ತೇನೆ… ಸರಿನಾ? ಅಂದಹಾಗೆ ಅಮ್ಮ ನಿಮಗೆ ಪಾಯಸ ಕೊಟ್ಟು ಕಳುಹಿಸಿದ್ದಾಳೆ. ನೀವು ನಿಮ್ಮ ಬಾಹುಗಳ ಬಿಗಿತವನ್ನು ಸಡಲಿಸಿದರೆ… ನಾನು ಟಿಫಿನ್ ಬಿಚ್ಚಬಹುದೂ… ಸಾಯಿರಾ ತುಂಟ ನೋಟದೊಂದಿಗೆ ಹೇಳಿದಾಗ ಅವನು ಆಕೆಯ ಸೊಂಟದಿಂದ ಕೈ ತೆಗೆದ.

    ವಾಹ್! ಅತ್ತೆಯ ಕೈ ರುಚಿ ಅದ್ಭುತ! ನನ್ನ ಅಮ್ಮನೂ ಇದೇ ರೀತಿ ಪಾಯಸ ಮಾಡುತ್ತಿದ್ದರು… ಪಾಯಸವನ್ನು ಚಪ್ಪರಿಸುತ್ತಾ ಪತಿ ಹೇಳಿದಾಗ ಸಾಯಿರಾ ಖುಶಿಗೊಂಡಳು. ಹನೀಫ್ ತಾನು ತಂದ ಮಲ್ಲಿಗೆಯನ್ನು ಪತ್ನಿಯ ತಲೆಗೆ ತಾನೇ ಮುಡಿಸುತ್ತಾ, “ನೀನು ಸದಾ ಮದುಮಗಳಂತೇ ನನ್ನ ಮುಂದೆ ಇರಬೇಕು ಸಾಯಿರಾ, ನಿನ್ನ ಮಗಳ ಹುಟ್ಟಿದ ಹಬ್ಬ ನಾಳೆ ತಾನೆ. ನನಗೆ ದಾರಿಯಲ್ಲಿ ಬರುತ್ತಿರಬೇಕಾದರೆ ನೆನಪಾಯಿತು. ಹೋದ ವರ್ಷ ಅವಳಿಗೆ ಕಾಲಿನ ಗೆಜ್ಜೆ ನೀಡಿದ್ದೆ. ಈ ಬಾರಿ ನಾನು ಏನು ಖರೀದಿಸಲಿ…” ಎಂದು ಚಿಂತಿಸುತ್ತಿದ್ದಾಗ ಸುಂದರವಾದ ಡ್ರೆಸ್ ಶೋಕೇಸ್‌ನಲ್ಲಿ ಕಂಡು ಬಂತು. ಅದನ್ನೇ ಉಡುಗೊರೆಯಾಗಿ ತಂದೆ. ನೀವು… ಅವಳನ್ನು ಪ್ರೀತಿಸುತ್ತೀರಿ… ಆದರೆ… ಆಕೆಗೆ ನಿಮ್ಮ ಪರಿಚಯವೂ ಇಲ್ಲ! ಅವಳ ಶಾಲೆಯ ಫೀಸ್, ಆಕೆಗೆ ವಸ್ತ್ರ, ಉಡುಗೊರೆ ಎಲ್ಲವನ್ನೂ ನೀವು ಕೊಡುತ್ತಿದ್ದೀರಿ, ಅವಳಿಗೆ ಅದನ್ನೆಲ್ಲಾ ನೀಡುತ್ತಿರುವ ವ್ಯಕ್ತಿಯ ಕುರಿತು ಏನೂ ತಿಳಿದಿಲ್ಲ. ನಾನು ಏನು ಮಾಡಲಿ ಹನೀಫ್? ಯಾವಾಗ ಅವಳಿಗೆ ತಿಳಿಸುವುದು? ಆಕೆಯ ಅಮ್ಮನ ಬದುಕಲ್ಲಿ ಪತಿ’ ಎಂಬ ಓರ್ವನಿದ್ದಾನೆ… ಆಕೆಗೆ ಮಲ ತಂದೆ ಇದ್ದಾರೆಂದು ಹೇಗೆ ತಿಳಿಸಲಿ?

    ಅವಳ ಅಪ್ಪ ಆಕ್ಸಿಡೆಂಟ್‌ನಲ್ಲಿ ತೀರಿ ಹೋದ ನಂತರ ನಾನು ಬೇರೆ ಮದುವೆನೇ ಆಗಲಾರೆ ಎಂದು ನಿರ್ಧಾರ ಮಾಡಿದ್ದೆ. “ಅಮ್ಮಾ… ನಿಮ್ಮನ್ನು ನಾನೇ ಸಾಕುತ್ತೇನೆ, ನಾನು ಕಲಿತು ಉದ್ಯೋಗ ಮಾಡ್ತೇನೆ, ಅಪ್ಪನನ್ನು ನೆನೆದು ಕಣ್ಣೀರು ಹಾಕುತ್ತಿರಬೇಡಿ…!” ಎಂದು ನನ್ನನ್ನು ಅಂದು ಸಂತೈಯಿಸಿದಾಗ ಪಿಂಕಿಗೆ ಎಂಟು ವರ್ಷ. ಈಗ ಹದಿನಾಲ್ಕು ವರ್ಷಕ್ಕೆ ಕಾಲಿಡುತ್ತಿದ್ದಾಳೆ. ನಿಮ್ಮನ್ನು ಮದುವೆ ಆಗಿ ಎರಡು ವರ್ಷ ಆಯಿತು. ಪಿಂಕಿಗೆ ಅವಳ ಅಮ್ಮನ ಬದುಕಲ್ಲಿ ಬೇರೊಬ್ಬ ಬರುವುದೇ ಇಷ್ಟವಿಲ್ಲ ಎಂಬ ಸತ್ಯ ನನಗೆ ತಿಳಿದಿತ್ತು. ಅಮ್ಮನ ಬಲವಂತ ಹಾಗೂ ತನ್ನ ಭವಿಷ್ಯದ ಚಿಂತೆ ಮಾಡಿಕೊಂಡು ನಾನು ಮರು ವಿವಾಹಕ್ಕೆ ಮನಸ್ಸು ಮಾಡಿದ್ದೆ. ಇಪ್ಪತೆಂಟರ ಹರೆಯಕ್ಕೇ ನಾನು ಗಂಡನನ್ನು ಕಳೆದುಕೊಂಡಾಗ ಮಗಳಿಗಾಗಿ ಮಾತ್ರ ಅಂದು ಬದುಕಿದ್ದೆ. ವರ್ಷ ಕಳೆದಂತೇ ರಾತ್ರಿಯು ನನ್ನನ್ನು ನಿದ್ರಾಹೀನಳನ್ನಾಗಿಸಿತು. ಬಯಕೆಗಳನ್ನು ತಡೆದುಕೊಳ್ಳಲು ನಾನು ಬಚ್ಚಲು ಕೋಣೆಯೊಳಗೆ ಹೊಕ್ಕು ತಣ್ಣೀರನ್ನು ತಲೆಮೇಲೆ ಹೊಯ್ದುಕೊಳ್ಳುತ್ತಿದ್ದೆ. ಉಪವಾಸ ವ್ರತ ಮಾಡುತ್ತಿದ್ದೆ. ಯಾರೊಂದಿಗು ಹೇಳಲಾಗದ ಈ ಒಂಟಿಯಾತನೆಯಲ್ಲಿ ನಾನು ಬೆಂದು ಹೋಗುತ್ತಿದ್ದಾಗ ನನ್ನ ದೊಡ್ಡಪ್ಪನನ್ನು ಭೇಟಿ ಆಗಲು ನೀವು ಮನೆಗೆ ಬಂದಿರಿ. ನನ್ನನ್ನು ನೋಡಿದಿರಿ. ನನ್ನ ಕಥೆಯೆಲ್ಲಾ ನಿಮಗೆ ತಿಳಿಯಿತು. ಪಿಂಕಿಗೆ ಈಗ ತಿಳಿಯುವುದೇ ಬೇಡಾ, ಪ್ರಾಯಕ್ಕೆ ಬಂದಾಗ ತಿಳಿದೇ ತಿಳಿಯುತ್ತದೆ… ಎಂದೆಲ್ಲಾ ಅಮ್ಮ ಸಮಧಾನಿಸಿ ನಿಮ್ಮೊಂದಿಗೆ ಮದುವೆಗೆ ಒಪ್ಪಿಸಿದರು. ನಾವಿಂದು ಗುಟ್ಟಾಗಿ ದಾಂಪತ್ಯ ನಡೆಸುತ್ತಿದೇವೆ… ಇನ್ನು ಎಷ್ಟು ಸಮಯ ಹನೀಫ್…? ಈ ರೀತಿ ಗುಟ್ಟು ಇಡುವುದು? ಪ್ರತೀ ಗುರುವಾಗ ನಾನು ಎಲ್ಲಿಗೆ ಹೋಗುತ್ತಿದ್ದೇನೆಂದು ಪ್ರಶ್ನಿಸುತ್ತಿದ್ದಾಳೆ ಮಗಳು. ಸುಳ್ಳು ಹೇಳಿ ಬರುವುದೇ ಕಷ್ಟವಾಗುತ್ತಿದೆ. ನಾನು ನಿಮ್ಮೊಂದಿಗೆ ಮೊಬೈಲ್‌ನಲ್ಲಿ ಹರಟುತ್ತಿದ್ದರೆ ಸಂಶಯದಿಂದ ನೋಟ ಹರಿಸುತ್ತಿದ್ದಾಳೆ. ಅವಳಿಗೆ ಸತ್ಯ ತಿಳಿಸಿ ಬಿಡಬೇಕು ಎಂದು ಈಗೀಗ ಅನಿಸುತ್ತಿದೆ. ಆಕೆ ದೊಡ್ಡವಳಾಗಿದ್ದಾಳೆ… ಅರ್ಥ ಮಾಡಿಕೊಳ್ಳಬಹುದೂ…

    ಸಾಯಿರಾಳ ಮಾತುಗಳನ್ನು ಮೌನವಾಗಿ ಆಲಿಸುತ್ತಿದ್ದ ಹನೀಫ್ ಪತ್ನಿಯನ್ನು ಸಮಧಾನಿಸಿದ. ಪಿಂಕಿಗೆ ಮದುವೆ ಸಮಯ ಬಂದಾಗ ನಾನು ಮುಂದೆ ಬರಲೇಬೇಕಲ್ಲವೇ? ಸಹನೆ ವಹಿಸು.. ಅವಳು ಈ ಸತ್ಯವನ್ನು ಒಪ್ಪಿಕೊಳ್ಳುವಳು. ಸಾಯಿರಾ ಅವನ ಎದೆಗೆ ಮುಖ ಒತ್ತಿ ಕಣ್ಣು ಮುಚ್ಚಿದಳು. ಪುರುಷನ ಆಸರೆ ಇಲ್ಲದೇ ಬದುಕುವುದೇ ಕಷ್ಟ… ನಿಮ್ಮಂತಹ ಒಳ್ಳೆಯ ಸಂಗಾತಿಯನ್ನು ನಾನು ಪಡೆದುಕೊಂಡದ್ದು ನನ್ನ ಪುಣ್ಯ. ಮನಸ್ಸಲ್ಲೇ ಪಿಸುಗುಟ್ಟಿಕೊಂಡಳು.

    ಮಮ್ತಾಜ್ ಮಲಗಿದ್ದಲ್ಲಿಂದಲೇ ಮೊಬೈಲ್‌ಗೆ ಕರೆ ಮಾಡಿದಳು. ಪತ್ನಿಯ ನಂಬರ್ ನೋಡಿ ಹನೀಫ್ ಆತುರದಿಂದ ರಿಸೀವ್ ಮಾಡಿದ.

    ರೀ… ನೀವು ಬರುವಾಗ ನನಗೆ ಎರಡು ನೈಟ್ ಡ್ರೆಸ್ ತನ್ನಿ. ಮಂಗಳೂರಿನಲ್ಲಿ ಒಳ್ಳೆಯ ನೈಟಿ ಸಿಗುತ್ತದೆ. ಬರಲು ತುಂಬಾ ತಡಮಾಡ ಬೇಡಿ… ನನ್ನ ಮಾತ್ರೆಗಳನ್ನೂ ಮರೆಯದೇ ತಂದು ಬಿಡಿ.
    ಓ.ಕೆ… ಮಮ್ತಾ, ಡ್ರೆಸ್ ರ‍್ತೇನೆ. ಬೇರೆ ಏನಾದರೂ ಬೇಕಾ? ಊಟ ಮಾಡು… ನನ್ನನ್ನು ಕಾಯುತ್ತಾ ಕುಳಿತಿರಬೇಡಾ… ಹನೀಫ್ ಪತ್ನಿಗೆ ಹೇಳುತ್ತಿರುವುದನ್ನು ಕೇಳಿ ಸಾಯಿರಾ ಶಬ್ದವಾಗದಂತೇ ಕುಳಿತಳು.
    ಹನೀಫ್ ಸಾಯಿರಾಳತ್ತ ತಿರುಗಿ, “ಚಿನ್ನಾ… ನನಗೆ ಎರಡು ನೈಟ್ ಡ್ರೆಸ್ ಖರೀದಿ ಮಾಡಬೇಕು ನಿನಗೆ ತಿಳಿದಿರುತ್ತದೆ… ಹೆಂಗಸರು ಯಾವ ರೀತಿಯ ಡ್ರೆಸ್ ಹಾಕುವುದೆಂದೂ…”
    ನಿಮ್ಮ ಪತ್ನಿ ತುಂಬಾ ದಪ್ಪದ ಹೆಂಗಸಾ? ಸಾಯಿರಾ ಕೇಳಿದಳು.

    ಹೌದೂ… ಇದೀಗ ದಪ್ಪ ಆಗಿರುವುದು, ಪಕ್ಷವಾತಕ್ಕೆ ಈಡಾದ ಬಳಿಗೆ ಹಾಸಿಗೆಯ ರೋಗಿಯಾಗಿ ಮಲಗಿದ್ದಲ್ಲೇ ಇದ್ದಾಗ ವ್ಯಾಯಾಮ ಇಲ್ಲ… ದಪ್ಪ ಆಗುತ್ತಾ ಹೋದಳು. ಮೂರು ವರ್ಷದಿಂದ ನಾನೇ ಅವಳ ಸೇವೆ ಮಾಡುತ್ತಿರುವುದು. ಮಗ ಸೊಸೆ ಅಮೇರಿಕಾದಿಂದ ಎಂದಾದರೂ ಬಂದಾಗ ತುಂಬಾ ಖುಶಿಯಲ್ಲಿರುತ್ತಾಳೆ. ಈಗ ನಾನು ಅವಳ ಕಣ್ಣ ಮುಂದೆನೇ ಇರಬೇಕು. ಅದಕ್ಕೇ ಎಲ್ಲಾ ವ್ಯಾಪಾರವನ್ನು ತಮ್ಮಂದಿರಿಗೆ ವಹಿಸಿ ಅವಳೊಂದಿಗೆ ಇರುವುದು. ಗುರುವಾರದ ದಿನ ಮಾತ್ರ ಮಂಗಳೂರಿನಲ್ಲಿ ಕೆಲಸ ಇದೆಯೆಂದು ಹೇಳಿ ಬರುತ್ತೇನೆ. ನಿನ್ನನ್ನು ಒಮ್ಮೆ ನಮ್ಮ ಕಾರ್ಕಳದ ಮನೆಗೆ ಕರೆದೊಯ್ಯ ಬೇಕೆಂದು ಆಸೆ ಇದೆ. ಆದ್ರೆ… ಮಮ್ತಾಳಿಗೆ ನಿನ್ನನ್ನು ಏನೆಂದು ಪರಿಚಯಿಸುವುದು? ಅವಳ ಪತಿ ಎಂದಿಗೂ ಇನ್ನೊಂದು ಹೆಂಗಸಿನತ್ತ ನೋಡದಂತಹ ಏಕಪತ್ನೀ ವ್ರತನಾಗಿರಬೇಕೆಂದು ಅವಳು ಬಯಸುತ್ತಾಳೆ. ನಮ್ಮ ದಾಂಪತ್ಯ ಮಧುರವಾಗಿದೆ. ನಾನು ಹೆಣ್ಣಿನ ಸಂಗ ಇಲ್ಲದೇ ಹೇಗೆ ಜೀವಿಸುತ್ತಿದ್ದೇನೆಂದು ಅವಳು ಯೋಚಿಸುವುದೇ ಇಲ್ಲ. ಅವಳ ಮಟ್ಟಿಗೆ ನಾನು ಐವತ್ತರ ಪ್ರಾಯದವನು ನನಗೆ ಸೆಕ್ಸ್ನ ಅಗತ್ಯವಿಲ್ಲ ಎಂದು ತಿಳಿದರಲೂ ಬಹುದು. ಅವಳಿಗೆ ಶುಗರ್, ಬಿ.ಪಿ. ಕೂಡಾ ಇದೆ. ಆದರಿಂದ ನಾನು ಅವಳಿಗೆ ಯಾವುದೇ ಮಾನಸಿಕ ನೋವು ಕೊಡದೇ ಸತ್ಯವನ್ನು ಮುಚ್ಚಿಟ್ಟು ಬಿಟ್ಟೆ. ಕೆಲವು ವೇಳೆ ಒಬ್ಬರ ಸುಳ್ಳು ಮುಚ್ಚುಮರೆಯ ಇನ್ನೋರ್ವರಿಗೆ ಬದುಕಲ್ಲಿ ಸಂತಸ ನೀಡುತ್ತದೆ. ಅವಳು ಆಕೆಯ ನಂಬಿಕೆಯಲ್ಲಿ ನೆಮ್ಮದಿಯಲ್ಲಿದ್ದಾಳೆ ಎಂದಾದರೂ ತಿಳಿಯಬಹುದೂ… ನೋಡುವ.

    ಪಿಂಕಿ ಹದಿಹರೆಯಕ್ಕೆ ಕಾಲಿಟ್ಟಳು. ಹನೀಫ್‌ನ ಗೆಳೆಯನ ಮಗ ಇಂಜಿನಿಯರ್ ತನ್ನ ಮಲ ಮಗಳಾದ ಪಿಂಕಿಯ ಫೋಟೋವನ್ನು ಹನೀಫ್ ತೋರಿಸಿದಾಗ ಖುಶಿಯಿಂದಲೇ ವಧುವನ್ನು ಒಪ್ಪಿಕೊಂಡ. ಹೆಣ್ಣು ನೋಡುವ ಶಾಸ್ತçವೂ ಮುಗಿದು ಮದುವೆಗೆ ದಿನ ನಿಗದಿಯಾಯಿತು. ಮಲ ಮಗಳ ಮದುವೆಯ ಎಲ್ಲಾ ಜವಾಬ್ದಾರಿಯನ್ನು ಹನೀಫ್ ವಹಿಸಿಕೊಂಡಿದ್ದ. ಮದುವೆಯ ಕಾಗದ ಪ್ರಿಂಟ್ ಆಗಲು ಬಾಕಿ ಇತ್ತು. ಪಿಂಕಿ ತಾನೇ ಮದುವೆ ಕಾಗದದ ರೂಪರೇಖೆಯನ್ನು ಸಿದ್ಧಪಡಿಸಿ ಅಮ್ಮನ ಕೈಗೆ ನೀಡಿದಳು.

    ಅಮ್ಮಾ… ಇದರಲ್ಲಿ ಬರೆದಂತೇ ಪ್ರಿಂಟ್ ಆಗಲಿ. ನನ್ನ ಗೆಳತಿಯರೆಲ್ಲಾ ಬರುತ್ತಾರೆ. ನಾವು ಹೆಚ್ಚು ಜನರನ್ನು ಆಮಂತ್ರಿಸುವುದು ಬೇಡಾ. ಮದುವೆಗೆ ಬಹಳ ಖರ್ಚು ಆಗುತ್ತಾ ಇದೆ. ಈಗಲೇ ನನ್ನ ಬಂಗಾರ, ವಸ್ತçಕ್ಕೆಂದೇ ಎರಡುವರೆ ಲಕ್ಷ ಖರ್ಚು ಮಾಡಿದ್ದಿ. ಅದ್ಧೂರಿ ಮದುವೆ ಬೇಡಾ…

    ಮಗಳು ಹೇಳಿದಾಗ ಸಾಯಿರಾ ಮದುವೆಯ ಕಾಗದತ್ತ ಕಣ್ಣು ಹಾಯಿಸಿದಳು. ಪಿಂಕಿ ಹಾಗೂ ವರನ ಹೆಸರಿನ ಕೆಳಗೆ ಮಿಸ್ಟರ್ ಹನೀಫ್ ಮಿಸೆಸ್ ಸಾಯಿರಾ ಎಂದು ಪ್ರಿಂಟಾಗಿರುವ ಅಕ್ಷರಗಳನ್ನು ನೋಡಿ ಸಾಯಿರಾ ದಿಗ್ಭçಮೆಯಿಂದ ಮಗಳತ್ತ ನೋಡಿದಳು.

    ಯಾಕಮ್ಮಾ… ಈ ರೀತಿ ಹೆದರಿ ಬಿಟ್ಟೆ! ನನಗೆ ಎಲ್ಲಾ ಗೊತ್ತಾಗಿದೆ. ನನ್ನನ್ನು ಬೆನ್ನ ಹಿಂದೆ ನಿಂತು ಪೋಷಿಸುವ ಓರ್ವ ಅಪ್ಪ ಇರುವುದು ನೀನು ತಿಳಿಸದೇ ಹೋದ್ರೂ ನಾನು ಪತ್ತೆ ಹಚ್ಚಿದೆ. ಇಂದು ನಾನು ವಿದ್ಯಾವಂತಳಾಗಿ ನಿಂತು, ಒಳ್ಳೆಯ ಗಂಡು ನನ್ನನ್ನು ಮದುವೆ ಆಗಲು ಸಿದ್ಧವಾದದ್ದು ನನ್ನ ಮದುವೆಯ ಜವಾಬ್ದಾರಿ ಎಲ್ಲವನ್ನೂ ನಿರ್ವಹಿಸಿದ ಆ ಪುಣ್ಯಾತ್ಮ ನನಗೆ ಜನ್ಮ ನೀಡದ ತಂದೆ ಆಗಿರಬಹುದೂ… ಆದ್ರೆ ನನ್ನ ಅಮ್ಮನ ಬದುಕಿಗೆ ಆಸರೆಯಾಗಿ ನಿಂತ ಅವರು ನನಗೆ ತಂದೆ ಸಮಾನ ತಾನೆ? ನಾನು ಅಜ್ಜಿಯೊಂದಿಗೆ ಎಲ್ಲಾ ಕೇಳಿ ತಿಳಿದುಕೊಂಡೆ. ನಾನು ಎಷ್ಟು ಸ್ವಾರ್ಥಿ ಮಗಳಲ್ಲಾ… ಅಮ್ಮಾ… ಬುದ್ಧಿ ಇಲ್ಲದ ವಯಸ್ಸಲ್ಲಿ ನಾನು ಏನೋ ಅಂದಿದ್ದಕ್ಕೆ ನೀನು ನನ್ನ ಮುಂದೆ ರಹಸ್ಯ ಬಾಯಿ ಬಿಡಲಿಲ್ಲ. ಅಮ್ಮಾ… ನಾನು ಅವರನ್ನು ಅಪ್ಪಾ’ ಎಂದು ಕರೆಯಬಹುದೇ? ಸಾಯಿರಾ ಕುಳಿತಲ್ಲಿಂದ ಒಮ್ಮೆಲೇ ಎದ್ದು ನಿಂತು ಮಗಳನ್ನು ಬಿಗಿಯಾಗಿ ಅಪ್ಪಿ ಹಿಡಿದು ಬಿಕ್ಕಳಿಸಿದಳು. ಅಮ್ಮಾ… ನನಗೆ ನೆಮ್ಮದಿಯಾಯಿತು. ನಾನು ವಿವಾಹ ಆಗಿ ಹೋದ ನಂತರ ನೀನು ಒಂಟಿಯಾಗಿರಲಾರೆ. ನನಗೆ ಅವರನ್ನು ನೋಡಬೇಕಮ್ಮಾ… ಸಾಯಿರಾಳ ಮೊಬೈಲ್ ರಿಂಗಾಯಿತು. ಹನೀಫ್‌ನ ನಂಬರ್ ನೋಡಿ ಖುಶಿಯಿಂದ ಸಾಯಿರಾ ಮಗಳತ್ತ ನೋಡಿ, “ನೀನು ಕೇಳುವಾಗಲೇ ನಿನ್ನ ಅಪ್ಪನ ಕರೆ ಬಂತು… ಮಾತನಾಡು ಮಗಳೇ…” ಎಂದು ಮೊಬೈಲ್ ನೀಡಿದಳು. ಪಿಂಕಿ ನಡುಗುವ ಕೈಯಿಂದ ಮೊಬೈಲ್ ತಗೊಂಡು ಕಿವಿಗೆ ಒತ್ತಿಕೊಂಡಳು.

    ಹಲೋ… ಆಚೆಯಿಂದ ಧನಿ ಕೇಳಿ ಬಂತು. ಪಿಂಕಿ ಹೆದರುತ್ತಲೇ… “ಹಲೋ ಅಸ್ಸಾಲಾಮ್ ಅಲೈಕುಮ್ ಡ್ಯಾಡ್… ನಾನು ಪಿಂಕಿ ಮಾತನಾಡುವುದೂ…” ಎಂದಳು. ಏನೆAದೇ…! ಡ್ಯಾಡ್!? ಇನ್ನೊಮ್ಮೆ ಹೇಳೂ ಪಿಂಕೀ… ಹನೀಫ್‌ನ ಧ್ವನಿ ಭಾರವಾಗಿ ಗದ್ಗದಿತವಾಗಿತ್ತು. ಹಾಯ್… ಡ್ಯಾಡ್! ಹೌ ಆರ್ ಯೂ? ನನಗೆ ಎಲ್ಲಾ ವಿಷಯ ತಿಳಿದಿದೆ. ನಿಮ್ಮನ್ನು ಭೇಟಿ ಆಗಲು ಕಾತುರಿಸುತ್ತಿದ್ದೇನೆ ಡ್ಯಾಡ್… ಥ್ಯಾಂಕ್ಸ್, ಅಲ್‌ಹಮ್ದುಲಿಲ್ಲಾಹ್! ನನ್ನ ಎದೆಯ ಭಾರ ಕಡಿಮೆ ಆಯಿತು. ಅಂದಹಾಗೇ… ಒಂದು ವಿಷಯ ಹೇಳಲು ಕಾಲ್ ಮಾಡಿದ್ದೆ, ಅರ್ಜೆಂಟ್… ಅಮ್ಮನಿಗೆ ಸೆಲ್ ನೀಡೂ… ಬೇಗಾ… ಎಂದರು ಆತುರದಿಂದ. ಅಮ್ಮಾ… ಅಪ್ಪನಿಗೆ ಏನೋ ಅರ್ಜೆಂಟ್ ಮಾತನಾಡಬೇಕಂತೇ ನಿನ್ನ ಬಳಿ… ಹಲೋ… ಏ… ಏನೂರೀ…? ಸಾಯಿರಾ ಗಾಬರಿಯಿಂದ ಕೇಳಿದಳು. ನೀನು ಬೇಗನೇ ಹೊರಟು ಸಿಟಿ ಆಸ್ಪತ್ರೆಗೆ ಬಾ. ಮಮ್ತಾಜ್ ಸೀರಿಯಸ್ ಆಗಿದ್ದಾಳೆ. ಒಮ್ಮೆ ಅವಳನ್ನು ನೋಡು, ಡಾಕ್ಟರ್ ಭರವಸೆ ಬಿಟ್ಟಿದ್ದಾರೆ. ನಿಮ್ಮವರಿಗೆ ಸುದ್ಧಿ ಮುಟ್ಟಿಸಲು ಹೇಳಿದ್ರು… ನೀನು ಪಿಂಕಿ ಒಟ್ಟಿಗೇ ಬೇಗನೇ ಬಂದು ಬಿಡು. ಸಾಯಿರಾ

    ಮಗಳೊಂದಿಗೆ ಆಸ್ಪತ್ರೆಗೆ ಬಂದಾಗ ಐ.ಸಿ. ರೂಮಲ್ಲಿ ಹನೀಫ್ ಅಳುತ್ತಾ ಮಮ್ತಾಜ್‌ನ ಪಕ್ಕ ನಿಂತಿದ್ದರು. ಸಾಯಿರಾ ಮೆಲ್ಲನೇ ಮಮ್ತಾಜ್‌ನ ಹತ್ತಿರ ನಡುಗುತ್ತಾ ನಿಂತಳು. ಮಮ್ತಾಜ್‌ನ ಕಣ್ಣು ನಿರೀಕ್ಷಿಸುತ್ತಿತ್ತು… ಆಕೆಯನ್ನೂ ಸಾಯಿರಾಳನ್ನು ಸನ್ನೆಯಿಂದ ಹತ್ತಿರ ಕರೆದಳು. ನೀನೂ.. ಸಾ…ಯಿ…ರಾ… ತಾನೆ? ಆಕೆಯ ಕೈಗಳನ್ನು ಮೆಲ್ಲನೇ ಮೇಲೆತ್ತಿ ಕೇಳಿದಳು. ನನಗೆ ಗೊತ್ತಿದೇ… ಹನೀಫ್‌ನತ್ತ ಕೈ ತೋರಿಸಿ ಆಕೆ ನಸು ನಗು ಬೀರಿದಳು. ಮೊಬೈಲ್‌ನಲ್ಲಿತ್ತು ನಿನ್ನ ಹೆಸರು. ತುಂಬಾ ಒಳ್ಳೆಯವರು ನನ್ನ ಗಂಡ. ಅವರನ್ನು ಕೈ ಬಿಡಬೇಡಾ… ಒಂದು ವರುಷದಿಂದ ನಿನ್ನನ್ನು ನೋಡಲು ಬಯಸುತ್ತಿದ್ದೆ… ಇಂದು ಕೊನೆಗಳಿಗೆಯಲ್ಲಿ ಕಾಣುವಂತಾಯಿತೂ… ನನ್ನ ಮಗ… ಸಲ್ಮಾನ್‌ಗೆ ನೀನುಅಮ್ಮ’ ಆಗಬೇಕೂ… ನನ್ನ ಮನೆಯಲ್ಲಿ… ಇರಬೇಕೂ… ಮಮ್ತಾಜ್ ಏದುರಿಸಿರು ಬಿಡ ತೊಡಗಿದಳು. ಕಣ್ಣುಗಳು ನೋಟ ನೆಟ್ಟಿರುವಂತೇ ದೇಹ ತಟಸ್ಥವಾಯಿತು.

    ಸಾಯಿರಾಳ ಕೈಯನ್ನು ಬಿಗಿಯಾಗಿ ಹಿಡಿದು ಮಮ್ತಾಜ್‌ಳ ತೆರೆದ ಕಣ್ಣನ್ನು ಮುಚ್ಚಿದ ಸಾಯಿರಾ ಕಂಬನಿ ಒರೆಸಿಕೊಂಡು ಪತಿಯತ್ತ ನೋಡಿದಳು. ದುಃಖದಿಂದ ಕುಸಿದ ಹನೀಫ್‌ರನ್ನು ಪಿಂಕಿ ಹಿಡಿದುಕೊಂಡು ಸಂತೈಯಿಸುತ್ತಿರುವುದು ಕಾಣಿಸಿತೂ… ಡ್ಯಾಡ್… ಧೈರ್ಯ ವಹಿಸಿಕೊಳ್ಳಿ… ಮಗಳ ಮಾತುಗಳು ಅವರ ಮನಸ್ಸಿಗೆ ಹಾಯೆನಿಸಿದವು.

    ಶಹನಾಝ್ ಎಂ.