Tag: #anupama magazine

  • ಇಸ್ರೇಲಿನಿಂದ ಕೊಲ್ಲಲ್ಪಟ್ಟ ಗಾಝ ವರದಿಗಾರ ಅನಸ್: 
ಜಗತ್ತಿಗೆ ಮಾಡಿದ ಕೊನೆಯ ವಿನಂತಿಯೇನು?

    ಇಸ್ರೇಲಿನಿಂದ ಕೊಲ್ಲಲ್ಪಟ್ಟ ಗಾಝ ವರದಿಗಾರ ಅನಸ್: ಜಗತ್ತಿಗೆ ಮಾಡಿದ ಕೊನೆಯ ವಿನಂತಿಯೇನು?

    ಇತ್ತೀಚಿಗೆ ಸಾಮಾಜಿಕ ಜಾಲ ತಾಣಗಳಲ್ಲಿ ಮತ್ತು ವಾರ್ತಾ ಮಾಧ್ಯಮಗಳಲ್ಲಿ ಒಂದು ಟ್ವೀಟ್ ಸಂದೇಶ ಬಹಳ ವೈರಲ್ ಆಗಿದೆ. ಅದು ಗಾಝ ನಗರದಾದ್ಯಂತ ಇಸ್ರೇಲ್ ಎಂಬ ನರಹಂತಕರ ಬಾಂಬರ್ ಮತ್ತು ಮಿಸೈಲ್ ಆಕ್ರಮಣದ ಲೈವ್ ರಿಪೋರ್ಟ್ ಮಾಡುತ್ತಿದ್ದ ಅಲ್ ಜಝೀರ ಚಾನೆಲ್‌ನ ಅನಸ್ ಅಲ್ ಶರೀಫ್ ಅವರ ಬರಹ.

    ನಿರೀಕ್ಷೆಯಂತೆ ಏಕದೇವೋಪಾಸನೆಯನ್ನು ಉಚ್ಚರಿಸುತ್ತಾ ರಕ್ತದಾಹಿಗಳ ಮಿಸೈಲ್‌ಗಳಿಗೆ ತಲೆಯೊಡ್ಡಿ ವೀರ ಮರಣವನ್ನಪ್ಪಿದ ಅನಸ್ ಅಲ್ ಶರೀಫ್ ಅವರ ಹುತಾತ್ಮತೆಯು ಕಸ್ತೂರಿಯ ಪರಿಮಳದಂತೆ ಜಗತ್ತಿನಾದ್ಯಂತ ಪಸರಿಸಿದೆ. ಗಾಝ ನಗರದಾದ್ಯಂತ (ವಂಶಹತ್ಯೆಯ ರಣಭೂಮಿ) ಓಡಾಡುತ್ತಾ ಅಲ್ ಜಝೀರಾದ ಕ್ಯಾಮರ ಮತ್ತು ಮೈಕ್ ನೊಂದಿಗೆ ವಂಶಹತ್ಯೆಯ ದೃಶ್ಯವನ್ನು ಹೊರಜಗತ್ತಿಗೆ ತಿಳಿಸುತ್ತಿದ್ದ ಆ ಧೀರ ಯೋಧ ತನ್ನ ಸಂದೇಶವನ್ನು ಉಯಿಲು ಬರೆದು ಇನ್ನಿಲ್ಲದ ಲೋಕಕ್ಕೆ ಮರಳಿದ್ದಾರೆ.

    ಇದು ಅವರ ಟ್ವೀಟ್ ಸಂದೇಶದ ಸಾರಾಂಶ
    ಇದು ನನ್ನ ಕೊನೆಯ ಉಯಿಲು ಮತ್ತು ಸಂದೇಶ. ನನ್ನ ಈ ಮಾತು ನಿಮಗೆ ತಲುಪುವುದಿದ್ದರೆ ನನ್ನ ಶಬ್ದವನ್ನಡಗಿಸುವುದರಲ್ಲಿ ಮತ್ತು ನನ್ನನ್ನು ವಧಿಸುವುದರಲ್ಲಿ ಇಸ್ರೇಲ್ ಯಶಸ್ಸಿಯಾಗಿದೆ ಎಂದು ತಿಳಿಯಿರಿ. ಸರ್ವಶಕ್ತನ ಶಾಂತಿ ಮತ್ತು ಕರುಣೆ ನಿಮ್ಮ ಮೇಲಿರಲಿ. ಜಬಾಲಿಯ ಅಭಯಾರ್ಥಿ ಶಿಬಿರದಲ್ಲಿ ಮತ್ತು ಪರಿಸರದಲ್ಲಿ ನಾನು ಬದುಕಿಗೆ ಕಣ್ಣು ತೆರೆದಂದಿನಿAದ ನಾನು ನನ್ನ ಶಕ್ತಿ ಮತ್ತು ಸಾಮರ್ಥ್ಯಕ್ಕನುಸಾರ ಎಲ್ಲಾ ರೀತಿಯ ಕಠಿಣ ಪ್ರಯತ್ನ ಮತ್ತು ಸಹಕಾರ ನನ್ನ ಜನರಿಗೆ ನಾನು ನೀಡುತ್ತಾ ಬಂದಿದ್ದೇನೆ ಎಂದು ಸೃಷ್ಟಿಕರ್ತನಿಗೆ ಗೊತ್ತು. ನನ್ನ ಕುಟುಂಬ ಮತ್ತು ತಾಯ್ನಾಡಿನ ಜನತೆಯೊಂದಿಗೆ ನನ್ನ ಹುಟ್ಟೂರಾದ ಅಶ್ಕಲೋನಿಯಾಗೆ ಮರಳಲು ಸಾಧ್ಯವಾಗುವ ರೀತಿಯಲ್ಲಿ ನನ್ನ ಆಯಸ್ಸು ಹೆಚ್ಚಾಗಲಿ ಮತ್ತು ನನ್ನ ಮರಣ ಸಂಭವಿಸದಿರಲಿ ಎಂದು ನಾನು ಬಯಸಿದ್ದೆ. ಆದರೆ ವಿಧಿಯಾಟವನ್ನು ಬಲ್ಲವರಾರು. ಸೃಷ್ಟಿಕರ್ತನ ತೀರ್ಮಾನ ಬೇರೆಯೇ ಆಗಿತ್ತು. ಅವನ ಇಚ್ಛೆಯೇ ಅಂತಿಮ.

    ಬದುಕಿನ ಎಲ್ಲಾ ಸಂಕಟದಲ್ಲೂ ಮತ್ತು ಸಂಕಷ್ಟದಲ್ಲೂ ನಾನು ತುಂಬಾ ನೊಂದಿದ್ದೇನೆ. ಆದರೂ ನನ್ನ ವೃತ್ತಿಯಲ್ಲಿ ಯಾವುದೇ ಕಳಂಕ ಮತ್ತು ಅಸತ್ಯದ ಹಾದಿಯನ್ನು ನಾನು ಆಯ್ಕೆ ಮಾಡಿರಲಿಲ್ಲ. ಸತ್ಯವನ್ನು ಅದರ ನಿಜಾರ್ಥದಲ್ಲಿ ಜನರ ಮುಂದಿಡಲು ನಾನು ಹಿಂದೇಟು ಹಾಕಿರಲಿಲ್ಲ. ನಮ್ಮನ್ನು ನಿರ್ಮೂಲನ ಮಾಡಲು ಸಂಕಲ್ಪ ಮತ್ತು ಪ್ರತಿಜ್ಞೆ ಮಾಡಿದವರೊಂದಿಗೆ ಮೌನ ವಹಿಸಿದವರು, ಉಸಿರು ಬಿಗಿಹಿಡಿದವರು, ನಮ್ಮ ಮಕ್ಕಳು ಮತ್ತು ಸ್ತ್ರೀಯರ ಮಾರಣಹೋಮ ಮತ್ತು ಅವುಗಳ ಅವಶೇಷಗಳನ್ನು ನೋಡಿ ಹೃದಯ ಕಂಪಿಸದವರು, ಒಂದೂವರೆ ವರ್ಷಗಳಿಂದ ನಮ್ಮ ಜನತೆ ಅನುಭವಿಸುತ್ತಿರುವ ವಂಶಹತ್ಯೆಯನ್ನು ಮಾಡುವ ಮತ್ತು ಅದನ್ನು ಪ್ರೋತ್ಸಾಹಿಸುವವರ ವಿರುದ್ಧ ಸೃಷ್ಟಿಕರ್ತನು ಸಾಕ್ಷಿಯಾಗಲಿ.

    ಜಗತ್ತಿನ ಪ್ರತಿಯೊಬ್ಬ ವ್ಯಕ್ತಿಯ ಹೃದಯ ಮಿಡಿತವಾದ ಫೆಲೆಸ್ತೀನ್ ಅನ್ನು ನಾನು ನಿಮಗೆ ವಹಿಸುತ್ತಿದ್ದೇನೆ. ಸ್ವತಂತ್ರ ಫೆಲೆಸ್ತೀನಿನ ಕನಸು ಮತ್ತು ಸುರಕ್ಷಿತವಾಗಿ ಮತ್ತು ಶಾಂತಿ ಹಾಗೂ ಸಮಾಧಾನದಿಂದ ಬದುಕುವ ಅವಕಾಶವನ್ನು ನಿಷೇಧಿಸಲ್ಪಟ್ಟ ಫೆಲೆಸ್ತೀನ್ ಜನತೆಯ ಮತ್ತು ಪುಟ್ಟ ಮಕ್ಕಳ ಹಾಗೂ ಮರ್ದಿತರನ್ನು ನಾನು ನಿಮಗೆ ಬಿಟ್ಟು ಹೋಗುತ್ತಿದ್ದೇನೆ. ಅವರ ಪವಿತ್ರವಾದ ಶರೀರಗಳು ಮತ್ತು ಅವಶೇಷಗಳು ಗಾಝದ ಬಿರುಕುಬಿಟ್ಟ ಮತ್ತು ಹುಡಿ ಹುಡಿಯಾಗಿ ನೆಲಕ್ಕಪ್ಪಳಿಸಿದ ಕಟ್ಟಡಗಳ ರಾಶಿಗಳ ಮಧ್ಯೆ ಗುರುತು ಪತ್ತೆ ಹಚ್ಚಲ್ಪಡದ ರೀತಿಯಲ್ಲಿ ಅಪ್ಪಚ್ಚಿಯಾಗಿ ಬಿದ್ದುಹೋಗಿವೆ. ಗಡಿ ರೇಖೆಯಲ್ಲಿ ನಿರ್ಬಂಧಗಳ ಕಾರಣದಿಂದ ತಡೆಯಲ್ಪಡಬಾರದೆಂದೂ ನಿಯಂತ್ರಣದ ಕಾರಣದಿಂದ ಮೌನ ವಹಿಸಬಾರದೆಂದೂ ನಾನು ನಿಮಗೆ ಉಪದೇಶಿಸುತ್ತಿದ್ದೇನೆ.

    ನಮ್ಮ ಕೈಯಿಂದ ಕಿತ್ತು ತೆಗೆದ ಫೆಲೆಸ್ತೀನ್ ಎಂಬ ಮಾತೃಭೂಮಿಯ ಗೌರವ ಮತ್ತು ಅಭಿಮಾನ ಹಾಗೂ ಸ್ವಾತಂತ್ರ‍್ಯದ ಪ್ರಕಾಶವಾಗುವ ರೀತಿಯಲ್ಲಿ ನೀವು ಅದರ ವಿಮೋಚನೆಯ ವಾಹಕರಾಗಬೇಕು. ನನ್ನ ಕುಟುಂಬ ಮತ್ತು ನನ್ನ ಬದುಕಿನ ಕಣ್ಣು ಎಂದು ವಿಶ್ಲೇಷಿಸುವ ನನ್ನ ಮುದ್ದಿನ ಮಗಳು ಶಾಮ್ ಇದುವರೆಗೂ ಕನಸು ಕಾಣದಿದ್ದ ಅವಳನ್ನು ನಾನು ನಿಮ್ಮ ಕೈಗಿಡುತ್ತಿದ್ದೇನೆ. ನನ್ನ ಅಮ್ಮನನ್ನ ನಿಮಗೆ ವಹಿಸಿಕೊಡುತ್ತಿದ್ದೇನೆ. ಅವರ ಪ್ರಾರ್ಥನೆ ನನಗೆ ಅನುಗ್ರವಾದೀತು. ನನ್ನ ಪ್ರಿಯ ಪತ್ನಿ ಉಮ್ಮು ಸಲಾಹ್ ಬಯಾನ್ ಳನ್ನು ಕೂಡ ನಾನು ನಿಮಗೆ ವಹಿಸಿಕೊಡುತ್ತಿದ್ದೇನೆ. ಯುದ್ಧ ನಮ್ಮಿಬ್ಬರನ್ನು ತಿಂಗಳುಗಳ ಕಾಲ ಬೇರ್ಪಡಿಸಿತು. ಆದರೂ ಅವಳು ಸನ್ನಿವೇಶವನ್ನರಿತು ಓಲಿವ್ ವೃಕ್ಷದ ಹಾಗೆ ಗಟ್ಟಿಯಾಗಿ ನಿಂತಳು. ಸೃಷ್ಟಿಕರ್ತನ ಹೊರತಾಗಿ ನೀವು ಅವಳನ್ನು ಸುತ್ತುವರಿದು ಅವಳ ಸಂರಕ್ಷಣೆಯನ್ನು ವಹಿಸಿಕೊಳ್ಳಬೇಕಾಗಿ ವಿನಂತಿಸುತ್ತಿದ್ದೇನೆ.

    ನನಗೆ ತಪ್ಪು ಸಂಭವಿಸಿದ್ದರೆ ನೀವು ನನಗೆ ಕ್ಷಮಿಸಬೇಕು. ನಾನು ನನ್ನ ಕರಾರನ್ನು ಪಾಲಿಸಿದ್ದೇನೆ. ನಾನು ವಹಿಸಿರುವ ದೌತ್ಯವನ್ನು ಚೆನ್ನಾಗಿ ನಿಭಾಯಿಸಿದೆನೆಂಬ ಸಂತೃಪ್ತಿ ನನಗಿದೆ. ಗಾಝವನ್ನು ನೀವೆಂದೂ ಮರೆಯಬಾರದು. ಅದರ ವಿಮೋಚನೆಗಾಗಿ ಮತ್ತು ಸ್ವತಂತ್ರ ಫೆಲೆಸ್ತೀನ್ ಗಾಗಿ ಹಾಗೂ ಫೆಲೆಸ್ತೀನ್ ಜನತೆ ನೆಮ್ಮದಿಯಿಂದ ಬದುಕು ಸಾಗಿಸಲು ಸಾಧ್ಯವಾಗುವ ನಿಟ್ಟಿನಲ್ಲಿ ನಿಮ್ಮ ಪ್ರಯತ್ನ ನಿರಂತರವಾಗಿ ಸಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.

    ಸುಮಾರು ಒಂದುವರೆ ವರ್ಷದಿಂದ ಫೆಲೆಸ್ತೀನ್ ಜನತೆ ಇಸ್ರೇಲಿನ ವಂಶಹತ್ಯೆ, ಆಹಾರೋತ್ಪನ್ನಗಳ ತಡೆ, ನಿರಂತರ ಮರ್ದನ, ಲೈಂಗಿಕ ದೌರ್ಜನ್ಯಗಳಿಂದ ಕಂಗೆಟ್ಟು ಹೋಗಿದ್ದಾರೆ. ವಿಶ್ವಸಂಸ್ಥೆ ಮತ್ತು ವಿಶ್ವ ಮಾನವ ಹಕ್ಕು ಹೋರಾಟಗಾರರು ಅಸಾಹಾಯಕರಾಗಿದ್ದಾರೆ. ಇಸ್ರೇಲ್ ಮತ್ತು ಅದಕ್ಕೆ ಬೆನ್ನೆಲುಬಾಗಿ ನಿಂತ ಅಮೇರಿಕ ವಂಶಹತ್ಯೆಯನ್ನು ಪ್ರೋತ್ಸಾಹಿಸುತ್ತಿದ್ದಾರೆ. ಇವೆಲ್ಲವನ್ನೂ ಮೂಕವಾಗಿ ನೋಡುತ್ತಿರುವ ಜಗತ್ತಿನ ಇತರೆಲ್ಲಾ ಸ್ವತಂತ್ರ ರಾಷ್ತ್ರಗಳು ಮೌನವಹಿಸಿವೆ. ಗಾಝ ನಗರದಲ್ಲಿ ಇನ್ನು ಬಾಂಬ್ ವರ್ಷಿಸಲು ಸ್ಥಳವೇ ಇಲ್ಲ ಎಂಬಷ್ಟರ ಮಟ್ಟಿಗೆ ನಶಿಸಿ ಹೋಗಿವೆ.

    ಗಾಝದ ಜನರಿಗೆ ಪತ್ರಕರ್ತರೆಂದರೆ ಎಲ್ಲಿಲ್ಲದ ಸಿಟ್ಟು. ಆದಕ್ಕೆ ಕಾರಣವೂ ಇದೆ. ಸುಳ್ಳು ಸುದ್ಧಿ ಮತ್ತು ಇಸ್ರೇಲ್ ಕಿರಾತಕರು ನಿರಂತರವಾಗಿ ಸುರಿಸುವ ಬಾಂಬರ್‌ಗಳು ಮತ್ತು ಮಿಸೈಲ್‌ಗಳಿಂದ ಸಂಕಷ್ಟದಿAದ ಬದುಕು ಮುನ್ನಡೆಸುತ್ತಿರುವ ಫೆಲೆಸ್ತೀನಿಯರಿಗೆ ಆಹಾರದ ಅಲಭ್ಯತೆಯನ್ನು ಕೂಡ ಸರಿಯಾದ ರೀತಿಯಲ್ಲಿ ವಾರ್ತೆ ನೀಡದಿರುವುದೇ ಅದಕ್ಕೆ ಕಾರಣ. ಮಾತ್ರವಲ್ಲ ಅವರನ್ನು ಭಯೋತ್ಪಾದಕರಂತೆ ಬಿಂಬಿಸುತ್ತಾ ಮಹಿಳೆಯರ ಮತ್ತು ಮಕ್ಕಳ ವಂಶ ಹತ್ಯೆಯನ್ನು ವಿಜೃಂಭಿಸುವ ಪತ್ರಕರ್ತರನ್ನು ಅವರಿಗೆ ಕಂಡರಾಗದು. ಆದರೆ ಅನಸ್ ಇವೆಲ್ಲದಕ್ಕಿಂತಲೂ ವಿಭಿನ್ನ. ಅವರು ಸತ್ಯದ ವಾಹಕರು. ಫೆಲೆಸ್ತೀನಿ ಜನತೆಯನ್ನು ಹತ್ತಿರದಿಂದ ತಿಳಿದವರು ಹಾಗೂ ತನ್ನವರಿಗಾಗಿ ಸದಾ ಮಿಡಿಯುವ ಹೃದಯವಂತರು.

    ಇತ್ತೀಚಿಗೆ ವರದಿ ಮಾಡುತ್ತಿದ್ದ ವೇಳೆ ಅನಸ್ ಬಳಲಿ ತನ್ನ ಕ್ಯಾಮಾರದೊಂದಿಗೆ ಕೆಳಗೆ ಬಿದ್ದಾಗ ಜನರು ಈ ರೀತಿ ಆಡುತ್ತಿದ್ದರು. ಅನಸ್ ಎದೆಗುಂದದಿರು, ಸ್ಥೆöÊರ್ಯದಿಂದಿರು. ಧೀರವಾಗಿ ಮುನ್ನುಗ್ಗಿ ದೌತ್ಯವನ್ನು ನಿರ್ವಹಿಸು. ಅನಸ್ ನಂತಹ ನೂರಾರು ಅನಸ್‌ಗಳು ಫೆಲೆಸ್ತೀನ್‌ನಲ್ಲಿ ಹುಟ್ಟಿ ಬರಬಹುದು ಆದರೆ ಅವರಾರು ಅನಸ್‌ಗಳಾಗಲು ಸಾಧ್ಯವಿಲ್ಲ. ಏಕೆಂದರೆ ಅನಸ್‌ರ ವ್ಯಕ್ತಿತ್ವ, ಆತ್ಮ ಸ್ಥೆöÊರ್ಯ ಹಾಗೂ ವೀರಾವೇಶದಿಂದ ತನ್ನ ಕೆಲಸವನ್ನು ನಿರ್ವಹಿಸುವ ಶೈಲಿ ಅದ್ಭುತವಾಗಿತ್ತು.

    ಜನವರಿ ತಿಂಗಳಲ್ಲಿ ಕದನ ವಿರಾಮ ಘೋಷಿಸಲಾಗಿತ್ತು. ಆದರೆ ಇಸ್ರೇಲ್ ಅದನ್ನು ಉಲ್ಲಂಘಿಸಿ ನಿರಂತರವಾಗಿ ಬಾಂಬ್ ಗಳನ್ನು ಸುರಿದ ಪರಿಣಾಮ ಅನಸ್ ಮತ್ತು ಅವರ ಸ್ನೇಹಿತರು ಸೇರಿದಂತೆ ಒಟ್ಟು ಐದು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಅವರಲ್ಲಿ 28 ವರ್ಷ ಪ್ರಾಯದ ಅನಸ್ ಗಾಝದ ಹೆಸರಾಂತ ಪತ್ರಕರ್ತನಾಗಿದ್ದು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ನಿಷೇಧ ಹೇರಿದ್ದರೂ ಬಹಳ ಅಚ್ಚುಕಟ್ಟಾಗಿ ಧೈರ್ಯದಿಂದ ಅನಸ್ ತನ್ನ ದೌತ್ಯವನ್ನು ನಿರ್ವಹಿಸುತ್ತಿದ್ದರು. ಅವರ ವಧೆ ಇಡೀ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಂದು ಪ್ರತಿಭಟನೆಗೆ ಕಾರಣವಾಗಿದೆ.

    ಇಂದಿನ ಜಗತ್ತು ರಕ್ತದಾಹಿಗಳ ರಣಭೂಮಿಯಾಗಿದೆ, ಯುದ್ಧ ಸರಕು ಮತ್ತು ಆಯುಧ ವ್ಯಾಪಾರಿಗಳ ಮಾರುಕಟ್ಟೆಯಾಗಿದೆ. ಮಾನವೀಯತೆ ನಶಿಸಿ ಹೋದ, ವಂಶಹತ್ಯೆಯನ್ನೇ ಬಂಡವಾಳವಾಗಿಸಿದ ದುರುಳರು ಇಂದು ಜಗತ್ತನ್ನು ಆಳುತ್ತಿದ್ದಾರೆ. ಅದನ್ನು ನೋಡುತ್ತಾ ಮೌನ ಸಮ್ಮತಿಯನ್ನು ನೀಡುವವರು ಅದಕ್ಕಿಂತಲೂ ನೀಚರು. ಅಸಹಾಯಕರಾದ ಬಡಪಾಯಿಗಳನ್ನು ನಿಷ್ಕಾರುಣ್ಯವಾಗಿ ವಧಿಸುವ ವ್ಯಾಘ್ರರಿಗೆ ಗಾಝದ ಜನತೆ ತಕ್ಕ ಪಾಠ ಕಲಿಸುವಂತಾಗಲಿ ಮತ್ತು ಅದಕ್ಕಾಗಿ ಲಕ್ಷಾಂತರ ಅನಸ್‌ಗಳು ಜನ್ಮ ತಾಳಲಿ. ತನ್ನ ಹೊಣೆಗಾರಿಕೆಯನ್ನು ನಿಭಾಯಿಸಿ ವೀರ ಮರಣವನ್ನಪ್ಪಿದ ಹುತಾತ್ಮತೆಯ ಉತ್ತುಂಗಕ್ಕೇರಿದ ಅನಸ್‌ರಂತಹ ಮುತ್ತುರತ್ನಗಳು ಸಮಾಜಕ್ಕೆ ಮಾದರಿಯಾಗಲಿ ಎಂಬ ಹಾರೈಕೆ.

    ಅಬ್ದುಸ್ಸಲಾಮ್ ದೇರಳಕಟ್ಟೆ

  • ಬೆಂಗಳೂರು ಮಹದೇವಪುರ ಕ್ಷೇತ್ರ `ಮತಗಳ್ಳತನ’: 
ಸುಪ್ರೀಮ್ ಕೋರ್ಟ್ ಮಧ್ಯೆ ಪ್ರವೇಶಿಸಲಿ

    ಬೆಂಗಳೂರು ಮಹದೇವಪುರ ಕ್ಷೇತ್ರ `ಮತಗಳ್ಳತನ’: ಸುಪ್ರೀಮ್ ಕೋರ್ಟ್ ಮಧ್ಯೆ ಪ್ರವೇಶಿಸಲಿ

    ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ, ಸಂಪೂರ್ಣ ಜವಾಬ್ದಾರಿ ಮತ್ತು ಪುರಾವೆಗಳೊಂದಿಗೆ ಚುನಾವಣಾ ಆಯೋಗದ ವಿರುದ್ಧ “ಮತದಾನದಲ್ಲಿ ಅಕ್ರಮ ನಡೆದಿದೆ” ಎಂದು ನೀಡಿರುವ ದೂರಿಗೆ, ಚುನಾವಣಾ ಆಯೋಗವು ನೀಡಿರುವ ಪ್ರತಿಕ್ರಿಯೆಯು ಅನುಮಾನಗಳನ್ನು ಹುಟ್ಟು ಹಾಕುವಂತಿದೆ. ಆಯೋಗದ ಸ್ವಂತ ದಾಖಲೆಗಳು ಮತ್ತು ದತ್ತಾಂಶಗಳನ್ನು ಪರಿಶೀಲಿಸಿ ಆರು ತಿಂಗಳ ಬಳಿಕ ಪತ್ರಿಕಾಗೋಷ್ಠಿಯ ಮೂಲಕ ವಿವರವಾದ ವರದಿಯನ್ನು ರಾಷ್ಟ್ರಕ್ಕೆ ಮಂಡಿಸಿರುವ ರಾಹುಲ್ ಗಾಂಧಿಯವರಿಗೆ ಅಫಿದಾವಿತ್‌ನಲ್ಲಿ ನೀಡುವಂತೆ ಆಯೋಗ ನಿರ್ದೇಶಿಸಿದೆ. ರಾಹುಲ್ ಹೇಳಿದ್ದು ತಪ್ಪು ಎಂದು ಹೇಳಲು ಅಥವಾ ವಿವರಿಸಲು ಆಯೋಗ ಸಿದ್ದವಿಲ್ಲ. ಅನಗತ್ಯ ವಾದಗಳನ್ನು ಮುಂದಿರಿಸಿ ಅದನ್ನು ಎದುರಿಸುವಷ್ಟು ಆರೋಪಗಳು ಕ್ಷುಲ್ಲಕವಲ್ಲ. ಆಯೋಗವು ಮತದಾರ ಪಟ್ಟಿಯನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ನೀಡದ ಕಾರಣ ಮುದ್ರಿತ ಪುಟಗಳ ಭಂಡಾರವನ್ನೇ ಪರಿಶೀಲಿಸಬೇಕಾಯಿತು. ಆದ್ದರಿಂದ ಹೆಚ್ಚಿನ ತಪಾಸಣೆಯನ್ನು ಕರ್ನಾಟಕದ ಬೆಂಗಳೂರು ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಸಲ್ಲಿಸಲು ಸಾಧ್ಯವಾಗಿದೆ. ಇದರಲ್ಲಿ ಬಹಿರಂಗಗೊAಡಿರುವ ಅಕ್ರಮಗಳು ಇತರ ಹಲವು ಕ್ಷೇತ್ರಗಳಲ್ಲಿ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭಾ ಚುನಾವಣೆಗಳಲ್ಲಿ ನಡೆದಿರಲು ಸಾಧ್ಯತೆ ಇದೆ ಎಂದು ರಾಹುಲ್ ಗಮನ ಸೆಳೆದಿದ್ದಾರೆ.

    ಮಹದೇವಪುರ ಕ್ಷೇತ್ರದ ಆರೂವರೆ ಲಕ್ಷ ಮತಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಮತಗಳು ನಕಲಿ. ನಕಲಿ ಹೆಸರುಗಳು, ವಿಳಾಸಗಳು ಮತ್ತು ಫೋಟೋಗಳು ಮುಂತಾದ ವಿವಿಧ ಕುಶಲತೆಯ ಮೂಲಕ ಮತದಾರರ ಪಟ್ಟಿಯನ್ನು ಉಬ್ಬಿಸಲಾಗಿದೆ. ಪರಿಶೀಲಿಸಿದರೆ ಇತರ ಹಲವು ಕ್ಷೇತ್ರಗಳಲ್ಲಿ ಇಂತಹ ಕ್ರಿಮಿನಲ್ ಭ್ರಷ್ಟಾಚಾರ ಬಯಲಾಗುತ್ತದೆ. ದಾಖಲೆಗಳು ಡಿಜಿಟಲ್ ರೂಪದಲ್ಲಿ ಇರಬೇಕೆಂದು ರಾಹುಲ್ ಒತ್ತಾಯಿಸುತ್ತಾರೆ. ಈ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡದೆ ಮೌನವಾಗಿದೆ. ಆರೋಪಗಳು ಚುನಾವಣಾ ಆಯೋಗದ ಅಧಿಕೃತ ದಾಖಲೆಗಳನ್ನು ಆಧರಿಸಿವೆ. ಮಾತ್ರವಲ್ಲದೆ ಅವು ಇದ್ದಕ್ಕಿದ್ದಂತೆ ಹೊರಹೊಮ್ಮಿದ ದೂರುಗಳಲ್ಲ. ಸಂವಿಧಾನವು ಚುನಾವಣಾ ಆಯೋಗವನ್ನು ಸರಕಾರದ ನಿಯಂತ್ರಣದಿಂದ ಸ್ವತಂತ್ರವಾದ ಮತ್ತು ಸ್ವಾಯತ್ತ ಸಂಸ್ಥೆಯಾಗಿ ರೂಪಿಸಿದೆ. ಆದರೂ ಪ್ರಸಕ್ತ ಸರಕಾರವು ಅದರ ಸ್ವತಂತ್ರ ರೂಪವನ್ನು ನಾಶಪಡಿಸಿದೆ. ಕೇಂದ್ರ ಸರಕಾರದ ಪರವಾಗಿರುವ ಮತ್ತು ಅಧೀನ ಅಧಿಕಾರಗಳಲ್ಲಿ ಆಯುಕ್ತರಾಗಿ ನೇಮಿಸಲು ಸಾಧ್ಯವಾಗುವ ರೀತಿಯಲ್ಲಿ ಸರಕಾರವು ನೇಮಕಾತಿ ನಿಯಮಗಳನ್ನು ಬದಲಿಸಿದೆ.

    ಚುನಾವಣಾ ಆಯೋಗವು ಮುದ್ರಣಕ್ಕೆ ಎಷ್ಟು ಶ್ರಮ ಮತ್ತು ವೆಚ್ಚವನ್ನು ವಹಿಸಿರಬಹುದು? ತಪಾಸಣೆಯನ್ನು ತಡೆಯಲು ಆಯೋಗವು ಇಷ್ಟೊಂದು ತೊಂದರೆಯನ್ನು ಅನುಭವಿಸುವ ನಿರ್ಧಾರದ ಹಿಂದಿನ ಉದ್ದೇಶವೇನು? ಮುಂತಾದ ವಿಷಯದಲ್ಲಿ ಪಾರದರ್ಶಕತೆ ತರಲು ಒಂದೇ ಒಂದು ಮಾರ್ಗವಿದೆ. ಅದು ಸುಪ್ರೀಂ ಕೋರ್ಟ್ ಹಸ್ತಕ್ಷೇಪ ನಡೆಸುವುದಾಗಿದೆ. ಚುನಾವಣಾ ಬಾಂಡ್‌ಗಳ ಬೃಹತ್ ಭ್ರಷ್ಟಾಚಾರವನ್ನು ನ್ಯಾಯಾಲಯ ಹಸ್ತಕ್ಷೇಪದ ಮೂಲಕ ತೆಗೆಯಲಾಯಿತು. ಈಗ ಚುನಾವಣೆಯಲ್ಲಿ ಗಮನಾರ್ಹ ವಂಚನೆ ನಡೆದಿದೆ ಎಂಬುದಕ್ಕೆ ಆಯೋಗದ ದಾಖಲೆಗಳಿಂದ ಪುರಾವೆಗಳು ಲಭ್ಯವಾಗಿವೆ. ದೇಶ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಸ್ವಯಂ ಪ್ರೇರಿತ ತನಿಖೆ ನಡೆಸುವುದು ಸುಪ್ರೀಂಕೋರ್ಟಿನ ಕರ್ತವ್ಯವಾಗಿದೆ .ನ್ಯಾಯಾಂಗವು ಹಾಗೆ ಮಾಡುವ ಅಧಿಕಾರ ಮತ್ತು ಹಕ್ಕು ಮಾತ್ರವಲ್ಲ ಬಾಧ್ಯತೆಯನ್ನು ಸಹ ಹೊಂದಿದೆ..

    ಕರ್ನಾಟಕದಲ್ಲಿ ಪ್ರಜ್ವಲ್ ರೇವಣ್ಣ ಗೌಡ ದುರಂತವು ಯುವ ನಾಯಕರಿಗೆ ಪಾಠವಾಗಬೇಕಾಗಿದೆ. ಖಾಸಗಿ ಕೋಣೆಯೊಳಗೆ ಒಪ್ಪಿತ ಅನೈತಿಕ ಲೈಂಗಿಕ ಸಂಬಂಧವನ್ನು ಗುಟ್ಟಾಗಿ ಚಿತ್ರೀಕರಿಸಿ ಅವರನ್ನು ಬ್ಲಾಕ್ ಮೇಲ್ ಮಾಡುವುದು ಮಹಾ ಅಪರಾಧವಾಗಿದೆ. ಪ್ರಜ್ವಲ್ ಪ್ರಕರಣ ಬಹಳ ಭಿನ್ನವಾದದ್ದು ಮಾತ್ರವಲ್ಲ ಆಘಾತಕಾರಿಯಾದದ್ದು .ಇಲ್ಲಿ ನಡೆದಿರುವುದು ಒಪ್ಪಿತ ಲೈಂಗಿಕ ಕ್ರಿಯೆಗಳಲ್ಲ. ಬದಲಿಗೆ ಅತ್ಯಾಚಾರ ಎನ್ನುವುದು ಮೊದಲ ಆರೋಪ. ಎರಡನೆಯದು ಈ ಅಕ್ರಮಗಳನ್ನು ಸೆರೆಹಿಡಿದಿರುವುದು ಯಾರೋ ವಿರೋಧ ಪಕ್ಷದ ನಾಯಕರ ಜನರಲ್ಲ. ಸ್ವತಹ ಪ್ರಜ್ವಲನೇ ಮಹಿಳೆಯರ ಅಶ್ಲೀಲ ದೃಶ್ಯಗಳನ್ನು ಸೆರೆಹಿಡಿದು ತನ್ನ ಮೊಬೈಲ್ ನಲ್ಲಿ ಸಂಗ್ರಹಿಸಿ ಇಟ್ಟುಕೊಂಡಿದ್ದ. ತನ್ನ ಕೆಲಸದ ಅಳುಗಳ ಜೊತೆ, ಪಕ್ಷದ ಕಾರ್ಯಕರ್ತೆಯ ಜೊತೆ ಅತ್ಯಂತ ಕೀಳಾಗಿ ವರ್ತಿಸಿದ ದೃಶ್ಯಗಳು ಆತನ ಮೊಬೈಲ್‌ನಲ್ಲಿ ಇದ್ದವು. ಜೊತೆಗೆ ಅದನ್ನು ಆತ ಪೆನ್ ಡ್ರೈವ್ನಲ್ಲಿ ತೆಗೆದಿಟ್ಟುಕೊಂಡಿದ್ದ. ಈ ಪೆನ್‌ಡ್ರೆöÊವ್‌ಗಳನ್ನು ಮುಂದಿಟ್ಟು ಮಹಿಳೆಯರನ್ನು ಬ್ಲ್ಯಾಕ್ ಮೇಲ್ ಮಾಡಿರುವ ಸಾಧ್ಯತೆಗಳು ಇವೆ. ಆತನ ಕೃತ್ಯಗಳಲ್ಲಿ ಒಬ್ಬ ಸೈಕೋಪಾತ್‌ನ ಲಕ್ಷಣಗಳಿದ್ದವು. ತನ್ನ ನೀಚ ಕೃತ್ಯವನ್ನು ಕುಟುಂಬ ಬಲ, ಜಾತಿ, ಹಣಬಲಗಳಿಂದ ಆತ ಧಕ್ಕಿಸಿಕೊಂಡಿದ್ದ. ಆದರೆ ಇದೀಗ ಪ್ರಜ್ವಲ್ ತಾನು ಮಾಡಿದ ಕರ್ಮಕ್ಕೆ ಶಿಕ್ಷೆ ಅನುಭವಿಸುತ್ತಿರುವನು. ಇದು ನ್ಯಾಯಾಂಗದ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಮತ್ತಷ್ಟು ಬಲಪಡಿಸಿದೆ. ಜೊತೆಗೆ ಯುವ ನಾಯಕರಿಗೆ ಪಾಠವಾಗಿದೆ.

  • ಹೃದಯದ ಮಾತು: 
ಶಹನಾಝ್ ಎಂ.

    ಹೃದಯದ ಮಾತು: ಶಹನಾಝ್ ಎಂ.

    ಇಂದಿನ ಆಧುನಿಕ ಶೈಕ್ಷಣಿಕವಾಗಿ ಮುಂದುವರಿದ ಸಮಾಜದಲ್ಲೂ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಮೌಢ್ಯಗಳು ನೆಲೆಸಿದೆ ಎಂದರೆ ನಾಚಿಗೆಕೇಡು. ನಮ್ಮ ಮಹಾರಾಷ್ಟçದಲ್ಲಿ ಶಾಲೆಯ ಶೌಚಾಲಯದಲ್ಲಿ ಹೆಣ್ಣಿನ ಮಾಸಿಕ ಮುಟ್ಟುವಿನ ರಕ್ತದ ಕಲೆಗಳು ಕಾಣಿಸಿದಕ್ಕಾಗಿ ಶಿಕ್ಷಕನೋರ್ವ ವಿದ್ಯಾರ್ಥಿನಿಯರ ವಸ್ತç ಬಿಚ್ಚಿಸಿ ತನಿಖೆ ಮಾಡಿದರಂತೆ! ಮಹಿಳಾ ಸಮೂಹಕ್ಕೇ ಇದು ಅವಮಾನದ ಸಂಗತಿ. ಹೆಣ್ಣಿಗೆ ತಾನು ಯಾವ ದಿನಕ್ಕೆ ಮುಟ್ಟಾಗುತ್ತೇನೆಂದು ಸರಿಯಾಗಿ ತಿಳಿಯದೇ ಇರುವ ಪರಿಸ್ಥಿತಿಯಲ್ಲಿರುವಾಗ ಶಾಲೆಯಲ್ಲಿ ರಕ್ತಸ್ರಾವ ಆದಾಗ ಏನು ಮಾಡಬೇಕು? ಹಾರ್ಮೋನಿನ ಏರುಪೇರಿನಿಂದ ಯಾವಾಗಬೇಕಾದರೂ ರಕ್ತ ಕಾಣಿಸಬಹುದು. ಅಂತಹ ಸಮಯದಲ್ಲಿ ಈ ಹೆಣ್ಣಿಗೆ ಸಾಂತ್ವನ, ನೆರವು ನೀಡಬೇಕಾದದ್ದು ಹತ್ತಿರ ಇರುವವರ ಧರ್ಮ. ಶಾಲೆಗಳಲ್ಲಿ, ಕಾಲೇಜಿನಲ್ಲಿ, ಆಫೀಸ್, ಕಚೇರಿಗಳಲ್ಲಿ, ರೈಲ್ವೇ ನಿಲ್ದಾಣಗಳಲ್ಲಿ, ಬಸ್‌ಸ್ಟಾಂಡ್‌ಗಳಲ್ಲಿ ಇಂತಹ ತುರ್ತು ಸಮಯಕ್ಕಾಗಿ ಅಲ್ಪದರದಲ್ಲಿ ಕೈಗೆಟುಕುವಂತೆಪ್ಯಾಡ್’ಗಳು ಸುಲಭವಾಗಿ ಸಿಗುವಂತೆ ಏರ್ಪಾಡು ಇರಬೇಕು. ಶಾಲೆಯಲ್ಲಿ ಇದು ಬಹಳ ಮುಖ್ಯ. ಆ ಸಮಯದಲ್ಲಿ ಮಾನಸಿಕವಾಗಿ ಖಿನ್ನತೆಗೆ ಒಳಪಡುವ ಹದಿಹರೆಯದ ಹುಡುಗಿಯರಿಗೆ ಶಿಕ್ಷಕರಿಂದ ಸಾಂತ್ವನ ಮುಖ್ಯ. ಇಂತಹ ಮೂರ್ಖ ಶಿಕ್ಷಕನಿಗೆ ಅಮಾನತು ಮಾಡುವುದೇ ಉತ್ತಮ ಶಿಕ್ಷೆ.

    ಭಾರತದಲ್ಲಿ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ, ಅವಮಾನಗಳ ಬಗ್ಗೆ ಪತ್ರಿಕೆಯಲ್ಲಿ ಓದುವಾಗ ಮೈ ಉರಿಯುತ್ತದೆ. ಯಾಕೆ ದಲಿತರು ಇನ್ನೂ ಮೌನ ಆಗಿದ್ದಾರೆ! ಒಗ್ಗಟ್ಟಾಗಿ ಈ ಅನ್ಯಾಯ, ಅಸ್ಪೃಶ್ಯತೆಯ ವಿರುದ್ಧ ಬೀದಿಗೆ ಇಳಿದು ಹೋರಾಟ ನಡೆಸಬಾರದೇಕೆ! ಮೌನ'ವೇ ಇವರ ದುರಂತಕ್ಕೆ ಕಾರಣವಲ್ಲವೇ? ಮೈಸೂರಿನ ಶಾಲೆ ಒಂದರಲ್ಲಿ ಬಿಸಿ ಊಟಕ್ಕೆ ಓರ್ವ ದಲಿತ ಮಹಿಳೆಯನ್ನು ನೇಮಿಸಿದಕ್ಕೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಗೈರು ಹಾಜರಿಯಾಗಿ ಒಬ್ಬನೇ ವಿದ್ಯಾರ್ಥಿ ಉಳಿದನೆಂದು ಸುದ್ದಿ ಓದಿದೆ. ಇದೆಂತಹಾ ಮನಃಸ್ಥಿತಿ! ಕರುವನ್ನು ಮಾರಲು ಬಂದ ದಲಿತರಿಬ್ಬರ ತಲೆ ಬೋಳಿಸಿ ಅವರ ಬಾಯಲ್ಲಿ ಹುಲ್ಲು ತುಂಬಿ ಮೊಣಕಾಲಿನಲ್ಲಿ ತೆವಳಿಸಿಕೊಂಡು ದೌರ್ಜನ್ಯ ನಡೆಸಿದರು ಮೇಲು ಜಾತಿಯವರು. ದಲಿತರ ಓಟು ಈ ದೇಶದ ರಾಜಕೀಯ ಪಕ್ಷಕ್ಕೆ ಅತೀ ಮುಖ್ಯ. ಅವರ ಸಹವಾಸ ಬೇಡ. ಇವರನ್ನು ಉ. ಭಾರತದಲ್ಲಿ ಎಷ್ಟು ಹೀನಾಯವಾಗಿ ನಡೆಸಿಕೊಳ್ಳುತ್ತಾರೆಂದರೆ ದಲಿತ ಯುವತಿಯರನ್ನು ಅತ್ಯಾಚಾರ ಮಾಡಿ ಕೊಂದು ಮರಗಳಲ್ಲಿ ನೇತು ಹಾಕುತ್ತಾರೆ. ಅವರೂ ಮನುಷ್ಯರೇ ಅಲ್ಲವೇ? ಮಾನವರೆಲ್ಲರೂ ಒಂದೇ ತಂದೆ-ತಾಯಿಯ ಮಕ್ಕಳೆಂದು ಹೇಳುತ್ತದೆ ಧರ್ಮ. ಬಿಳಿಯನೂ-ಕರಿಯನೂ ಸಮಾನರೆಂದು, ಶ್ರೀಮಂತ-ಬಡನೂ ಸಮಾನರೆಂದೂ ಬೋಧಿಸುತ್ತದೆ ಇಸ್ಲಾಮ್. ಅನ್ಯಾಯವನ್ನು ಮೌನವಾಗಿ ಸಹಿಸುವುದೂ ಒಂದು ಅಪರಾಧವೇ ಆಗಿದೆ. ಇನ್ನಾದರೂ ದಲಿತರು ಧ್ವನಿ ಎತ್ತುವಂತಾಗಲಿ. ಭಾರತಕ್ಕೆ ಸ್ವಾತಂತ್ರö್ಯ ಲಭಿಸಿ ಎಪ್ಪತ್ತೆಂಟನೇ ವರ್ಷ. ದಲಿತರಿಗೆ, ಅಲ್ಪಸಂಖ್ಯಾತರಿಗೆ ಸ್ವಾತಂತ್ರö್ಯ ಲಭಿಸಿದೆಯೇ?! ಕೋಮುದ್ವೇಷಿ ರಾಜಕೀಯ ನಮ್ಮನ್ನು ಇಂದು ಬ್ರಿಟಿಷರ ಕಾಲಕ್ಕೆ ದೂಡಿ ಬಿಟ್ಟಿದೆ. ನಾವಿಂದು ಹೋರಾಡ ಬೇಕಾಗಿದೆ ಈಶತ್ರು’ಗಳ ವಿರುದ್ಧ.

  • ಶೀಘ್ರ ತೂಕ ಇಳಿಸುವ ಡಯೆಟ್ ಆರೋಗ್ಯಕ್ಕೆ ಅಪಾಯಕಾರಿ: 
ಅಡ್ಡ ಪರಿಣಾಮಗಳೇನು? 
ಡಾ। ಲೀನಾ ಸಾಜು

    ಶೀಘ್ರ ತೂಕ ಇಳಿಸುವ ಡಯೆಟ್ ಆರೋಗ್ಯಕ್ಕೆ ಅಪಾಯಕಾರಿ: ಅಡ್ಡ ಪರಿಣಾಮಗಳೇನು? ಡಾ। ಲೀನಾ ಸಾಜು

    ಸಮೀಕೃತ ಆಹಾರವನ್ನು ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳು

    ಶಾರೀರಿಕ ಚಟುವಟಿಕೆಗಳಿಗೆ ಹೆಚ್ಚು ಶಕ್ತಿ ಸಿಗುತ್ತದೆ.

    ಶರೀರ ಭಾರವನ್ನು ನಿಯಂತ್ರಿಸುವುದಕ್ಕೆ ಹೆಚ್ಚು ಸುಲಭವಾಗುತ್ತದೆ.

    ಮಧುಮೇಹ, ಹೃದ್ರೋಗ ಮುಂತಾದ ಜೀವನಶೈಲಿ ರೋಗಗಳ ಸಾಧ್ಯತೆ ಕಡಿಮೆಯಾಗುತ್ತದೆ.

    ಮನಸ್ಸಿಗೆ ಹೆಚ್ಚು ಉಲ್ಲಾಸ ಉಂಟಾಗುತ್ತದೆ.

    ಪಥ್ಯದ (ಡಯಟ್) ಅಡ್ಡಪರಿಣಾಮಗಳು:

    ಅನಾರೋಗ್ಯಕರವಾದ ಆಹಾರಕ್ರಮಗಳು ಅಥವಾ ಕೊಬ್ಬಿರುವ ಆಹಾರವು ದೇಹಭಾರವು ಹೆಚ್ಚಾಗಲು ಮತ್ತು ದೀರ್ಘಕಾಲ ರೋಗಗಳಿಗೆ ಕಾರಣವಾಗುತ್ತದೆ. ಜನರು ತ್ವರಿತ. ಫಲಿತಾಂಶ ಬಯಸುವವರಾಗಿರುತ್ತಾರೆ. ಹೊಸ ಡಯಟ್ ಪ್ಲಾನ್‌ಗಳು ಅವರನ್ನು ಶೀಘ್ರ ಆಕರ್ಷಿಸುತ್ತದೆ. ಅವರು ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳ ಬಗ್ಗೆ ಗಮನಹರಿಸುವುದಿಲ್ಲ. ಆದುದರಿಂದ ಸೆಲೆಬ್ರಿಟಿಗಳ ಸಾಮಾಜಿಕ ಜಾಲತಾಣಗಳಲ್ಲಿ, ಆನ್‌ಲೈನ್ ಫ್ಲಾಟ್‌ಫಾರ್ಮ್ಗಳಲ್ಲಿ ಕಾಣಿಸುವ ಆಹಾರ ಪಥ್ಯಗಳನ್ನು ಅನುಕರಿಸಲು ಪ್ರಯತ್ನಿಸುತ್ತಾರೆ. ಇದು ಪ್ರಯೋಜನಕ್ಕಿಂತ ಹೆಚ್ಚು ದುಷ್ಪರಿಣಾಮಗಳನ್ನುಂಟು ಮಾಡುತ್ತದೆ.

    ವೇಗವಾಗಿ ಶರೀರ ಭಾರತವನ್ನು ಇಳಿಸಲಿಕ್ಕಿರುವ ಪಥ್ಯಗಳು ದೇಹದ ಆರೋಗ್ಯಕ್ಕೆ ಬಹಳ ಹಾನಿಕರ. ವೇಗವಾಗಿ ಶರೀರ ಭಾರವನ್ನು ಕಡಿಮೆ ಮಾಡಲು ಹೊರಟರೆ ಪಿತ್ತಕೋಶದಲ್ಲಿ ಕಲ್ಲುಗಳುಂಟಾಗುವ ಸಾಧ್ಯತೆ ಹೆಚ್ಚಾಗುತ್ತದೆ. ಧಾನ್ಯಗಳು, ಹಸಿರು ತರಕಾರಿಗಳು, ಹಣ್ಣುಗಳು, ಹಾಲು ಮುಂತಾದ ಕಾರ್ಬೋ ಹೈಡ್ರೇಡ್‌ಗಳು ಇರುವ ಆಹಾರವನ್ನು ಬಿಟ್ಟು ಬಿಟ್ಟರೆ ಮಲಬದ್ಧತೆ, ಬಲಹೀನತೆ, ಆಯಾಸ, ಕೂದಲು ಉದುರುವುದು, ಎಲುಬಿನ ಸಾಂಧ್ಯತೆಯು ಕಡಿಮೆಯಾಗುವುದು. ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದು ಮುಂತಾದವುಗಳ ಸಾಧ್ಯತೆ ಹೆಚ್ಚುತ್ತದೆ.

    ಒಬ್ಬರಿಗೆ ಸೂಕ್ತವಾದ ಆಹಾರ ಪದ್ಧತಿ ಎಲ್ಲರಿಗೂ ಅನ್ವಯಿಸುವುದಿಲ್ಲ ಎಂಬ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಪ್ರತಿಯೊಬ್ಬರು ತಮ್ಮ ವೈಯಕ್ತಿಕ ದೇಹ ಪ್ರಕೃತಿ ಮತ್ತು ರೋಗಗಳಿಗೆ ಅನುಗುಣವಾಗಿ ಯಾವ ರೀತಿಯ ಆಹಾರವನ್ನು ತಿನ್ನಬೇಕೆಂದು ಡಯಟೀಶಿಯನ್‌ಗಳನ್ನು ಸಮೀಪಿಸಿ ಆಹಾರ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.

    ಸಸ್ಯಾಹಾರಿ ಮತ್ತು ಮಾಂಸಹಾರಿ ಡಯಟ್‌ಗಳು (ಪಥ್ಯ)

    ಶರೀರದ ತೂಕ ಕಡಿಮೆ ಮಾಡಲು ಏನು ಒಳ್ಳೆಯದು?

    ಸಸ್ಯಾಹಾರವಾದರೂ, ಮಾಂಸಾಹಾರವಾದರೂ ಎಲ್ಲರ ಮುಖ್ಯ ಉದ್ದೇಶ ದೇಹದ ತೂಕವನ್ನು ಕಡಿಮೆ ಮಾಡುವುದೇ ಆಗಿರುತ್ತದೆ. ಸಸ್ಯಾಹಾರ ಮಾಂಸಾಹಾರ ಮನುಷ್ಯನ ವೈಯಕ್ತಿಕ ಮತ್ತು ಸಾಂಸ್ಕೃತಿಕ ಹಿನ್ನಲೆಯಿಂದ ಬರುತ್ತದೆ. ಪೋಷಕಾಂಶ ಭರಿತ ಆಹಾರವನ್ನು ಸೇವಿಸುವುದು ಬಹಳ ಮುಖ್ಯ.

    ಸಸ್ಯಾಹಾರದ ಪ್ರಯೋಜನ ಮತ್ತು ಕೆಡುಕುಗಳು

    ಹೆಚ್ಚಿನ ಪ್ರಮಾಣದಲ್ಲಿ ನಾರಿನಾಂಶ ಲಭ್ಯವಾಗುವುದರಿಂದ ಸಸ್ಯಾಹಾರ ಸೇವಿಸುವುದರಿಂದ ಪೋಷಕಾಂಶಗಳು ಲಭಿಸಲು ಮತ್ತು ಹಸಿವು ನೀಗಲು, ಸಂತೃಪ್ತಿ ಸಿಗಲು ಕಾರಣವಾಗುತ್ತದೆ. ವಿಟಮಿನ್ ಸಿ. ವಿಟಮಿನ್ ಇ. ಫಾರಿಕ್ ಆಸಿಡ್, ಪೊಟಾಶಿಯಮ್, ಮೆಗ್ನೇಶಯಿಮ್, ಕಾರೇಡಿನೋಯ್ಡಾ, ಫ್ಲೋವನೋಯ್ಡ್ ಮುಂತಾದವುಗಳು ಸಸ್ಯಾಹಾರದಿಂದಲೇ ಲಭಿಸುತ್ತವೆ.

    ಬೇಳೆಕಾಳುಗಳು, ದಾನ್ಯಗಳು, ಕಡಲೆ ಅಪೂರ್ಣವಾದುದಾಗಿದೆ. ಇದರಲ್ಲಿ ಒಂದೋ ಅದಕ್ಕಿಂತ ಹೆಚ್ಚು ಅಮಿನೊ ಆ್ಯಸಿಡ್‌ಗಳು ಇರುವುದಿಲ್ಲ. ಧಾನ್ಯಗಳಲ್ಲಿ ಲೈಸಿನ್, ಪ್ರೆಯೋನಿಸ್, ಟ್ರಿಸ್ಟೋಪೆನ್ ಮುಂತಾದವುಗಳ ಕೊರತೆ ಇದೆ. ಬೇಳೆಕಾಳುಗಳಲ್ಲಿ ಮೆಥಿಯೋನಿಲ್, ಲೈಸಿಲ್ ಮುಂತಾದ ಅಮಿನೋ ಆಸಿಡ್‌ಗಳು ಇರುವುದಿಲ್ಲ. ಸಸ್ಯಾಹಾರಿಗಳಲ್ಲಿ ವಿಟಮಿನ್ ಬಿ12 ಕೊರತೆ ಮತ್ತು ಒಮೆಗಾ- 3ರ ಕೊರತೆಯು ಉಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

    ಮಾಂಸಾಹಾರದ ಪ್ರಯೋಜನಗಳು ಮತ್ತು ಅಡ್ಡಪರಿಣಾಮಗಳು

    ಬಿ12, ಕಬ್ಬಿಣ, ಸತು ಮತ್ತು ಒಮೆಗಾ- 3 ಕೊಲ್ಸಿನಾಮ್ಲಗಳಂತಹ ಜೈವಿಕ ಮೂಲಕ ಪ್ರೊಟೀನ್‌ಗಳು ಪ್ರಾಣಿ ಉತ್ಪನ್ನಗಳಲ್ಲಿ ಹೇರಳವಾಗಿ ಕಂಡು ಬರುತ್ತದೆ. ಈ ಪೋಷಕಾಂಶಗಳು ಸ್ನಾಯುಗಳ ಚಟುವಟಿಕೆ, ಕೆಂಪು ರಕ್ತ ಕಣಗಳ ಉತ್ಪಾದನೆ ಮತ್ತು ಒಟ್ಟು ಆರೋಗ್ಯವನ್ನು ಉತ್ತಮಪಡಿಸುತ್ತದೆ. ಜೊತೆಗೆ ಲೀನ್ ಮಾಂಸವನ್ನು ಸೇವಿಸುವುದರಿಂದ ಶರೀರ ಭಾರವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

    ಆದರೆ ಮಾಂಸಹಾರದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶ ದೇಹತೂಕವನ್ನು ಹೆಚ್ಚಿಸುತ್ತದೆ. ಹೃದ್ರೋಗ ಸಾಧ್ಯತೆಗಳು, ಬೊಜ್ಜು, ರಕ್ತದೊತ್ತಡ ಹೆಚ್ಚಲು, ಮಧುಮೇಹ ಉಂಟಾಗುವ ಸಾಧ್ಯತೆ ಹೆಚ್ಚುತ್ತದೆ. ಆರೋಗ್ಯವನ್ನು ಚೆನ್ನಾಗಿರಿಸಲು ಸಸ್ಯಾಹಾರಿಗಳಾದರೂ, ಮಾಂಸಾಹಾರಿಗಳಾದರೂ ನಿಯಂತ್ರಿತ ರೀತಿಯಲ್ಲಿ ಆಹಾರವನ್ನು ಕ್ರಮಬದ್ಧಗೊಳಿಸುವುದು ಬಹಳ ಮುಖ್ಯ.

    ಅತ್ಯುತ್ತಮ ಆಹಾರ ಯೋಜನೆಯನ್ನು ಆರಿಸುವುದು ಹೇಗೆ?

    ನಿಮ್ಮ ಆಹಾರದಲ್ಲಿ ಈ ಕೆಳಗಿನ ಆಹಾರಗಳು ಸೇರಿವೆಯೇ ಎಂದು ನಿರ್ಣಯಿಸಿ.

    ಸ್ಥಿರವಾಗಿ ಸೇವಿಸಲು ಮತ್ತು ರೂಢಿಗೊಳಿಸಲು ಸಾಧ್ಯವಾಗುವ ಆಹಾರ ಕ್ರಮ.

    ದೈಹಿಕ ಸ್ಥಿತಿ ಮತ್ತು ಆದ್ಯತೆಯ ಆಹಾರ ಪದಾರ್ಥಗಳನ್ನು ಪರಿಗಣಿಸಿ ಆಹಾರ ಪದ್ಧತಿ ರೂಪಿಸುವುದು.

    ಆಹಾರ ಗುಂಪುಗಳು (ತರಕಾರಿ, ಹಣ್ಣುಗಳು, ಧಾನ್ಯಗಳು, ಕಡಿಮೆ ಕೊಬ್ಬಿನ ಮಾಂಸ, ಮೀನು ಮತ್ತು ಡೈರಿ

    ಉತ್ಪನ್ನಗಳು ಮತ್ತು ಬೀಜಗಳು) ಸೇರಿದಂತೆ ಸಮತೋಲಿತ ಮತ್ತು ವೈವಿದ್ಯಮಯ ಆಹಾರ

    ಶರೀರಕ್ಕೆ ಅಗತ್ಯವಾದ ಶಕ್ತಿಗೆ ಬೇಕಾದ ಪ್ರೊಟೀನ್, ಪಿಷ್ಠ ಮತ್ತು ಉತ್ತಮ ಕೊಬ್ಬುಗಳು ಇರುವಂತಹ ಆಹಾರ.

    ಆರೋಗ್ಯಪೂರ್ಣವಾದ ಆಹಾರ ಕ್ರಮವನ್ನು ಕರಾರುವಾಕ್ಕಾಗಿ ಸೂಚಿಸುವ ಶಿಫಾರಸುಗಳನ್ನು ಆಧರಿಸಿದ ಆಹಾರ

    ಕ್ರಮ.

    ಶರೀರವನ್ನು ಆರೋಗ್ಯದಿಂದಿರಿಸಲು ಕೆಲವು ಸಲಹೆಗಳು

    ನೀವು ಸೇವಿಸುತ್ತಿರುವ ಆಹಾರದಲ್ಲಿ ಯಾವ ಪೋಷಕಾಂಶಗಳಿವೆ ಎಂಬುವುದರ ಬಗ್ಗೆ ಅರಿವಿರಲಿ.

    ಆಸ್ವಾದಿಸುತ್ತಾ ತಿನ್ನುವುದು ಮುಖ್ಯ. ಆಹಾರ ಪದ್ಧತಿ ಶಿಕ್ಷೆಯಂತೆ ಭಾಸವಾದರೆ ಅದನ್ನು ಹೆಚ್ಚು ಕಾಲ

    ಮುಂದುವರಿಸಿಕೊAಡು ಹೋಗಲು ಸಾಧ್ಯವಾಗುವುದಿಲ್ಲ.

    ಯಾವುದೇ ಆಹಾರವನ್ನು ಸಂಪೂರ್ಣವಾಗಿ ತ್ಯಜಿಸುವುದಕ್ಕಿಂತ ಮಿತವಾದ ಪ್ರಮಾಣದಲ್ಲಿ ಪೌಷ್ಠಿಕ ಆಹಾರವನ್ನು

    ಅನುಸರಿಸುವುದು ಉತ್ತಮ.

    ಉಗುರು ಬೆಚ್ಚಗಿನ ನೀರಿನಿಂದ ದಿನವನ್ನು ಆರಂಭಿಸುವುದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು.

    ಸಮಯಕ್ಕೆ ಸರಿಯಾಗಿ ಆಹಾರ ಸೇವಿಸಿ. ಬೆಳಿಗ್ಗೆ 9 ಗಂಟೆಯ ಮೊದಲು ಉಪಹಾರ. ಮಧ್ಯಾಹ್ನ 1.30ಕ್ಕೆ ಮೊದಲು

    ಮಧ್ಯಾಹ್ನದ ಊಟ ಮತ್ತು ರಾತ್ರಿ 8.30ಕ್ಕಿಂತ ಮೊದಲು ರಾತ್ರಿಯ ಊಟ ಮುಗಿಸಲು ಪ್ರಯತ್ನಿಸಿ.

    ಮಲಗುವುದಕ್ಕಿಂತ ಕನಿಷ್ಟ ಎರಡು ಗಂಟೆಗಳ ಮೊದಲು ಊಟ ಮುಗಿಸಿ.

    ಸಾಕಷ್ಟು ತರಕಾರಿ ಮತ್ತು ಹಣ್ಣುಗಳನ್ನು ತಿನ್ನಿರಿ.

    ವ್ಯಾಯಾಮ, ನಿದ್ರೆ ಮತ್ತು ನೀರಿನ ಸೇವನೆಯನ್ನು ಸರಿಯಾದ ಮಟ್ಟದಲ್ಲಿ ಕಾಪಾಡಿಕೊಳ್ಳಬೇಕು. ದಿನಕ್ಕೆ ಕನಿಷ್ಟ

    8-12 ಗ್ಲಾಸ್ ನೀರು ಕುಡಿಯಬೇಕು.

    ಹೊರಗಿನ ಆಹಾರವನ್ನು ಸಾಧ್ಯವಾದಷ್ಟು ತಪ್ಪಿಸಿ.

    ಆಹಾರವನ್ನು ನಿಧಾನವಾಗಿ ಸೇವಿಸಬೇಕು ಮತ್ತು ಚೆನ್ನಾಗಿ ಅಗಿಯಬೇಕು. ಇದು ಹೆಚ್ಚು ತಿನ್ನುವುದರಿಂದ

    ತಡೆಯುತ್ತದೆ ಮತ್ತು ದೇಹದ ತೂಕವನ್ನು ಇಳಿಸಲು ಸಹಾಯ ಮಾಡುತ್ತದೆ.

    ಟಿ.ವಿ. ಮೊಬೈಲ್ ನೋಡುತ್ತಾ ಊಟ ಮಾಡುವ ಅಭ್ಯಾಸವನ್ನು ತೊರೆಯಿರಿ.

    ಇಂದು ಪ್ರಚಾರದಲ್ಲಿರುವ ವಿವಿಧ ರೀತಿಯ ಡಯಟ್ ಪ್ಲಾನ್‌ಗಳು

    1. ಕಿಟೋ ಡಯಟ್‌

    ಇದು ಕಡಿಮೆ ಪ್ರಮಾಣದಲ್ಲಿ ಪಿಷ್ಟ ಸೇವಿಸುವ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಕೊಬ್ಬನ್ನು ಹೊಂದಿರುವ ಆಹಾರ ಕ್ರಮ.

    ಕೀಟೋ ಡಯಟ್‌ನ ಪ್ರಯೋಜನಗಳು:

    ಔಷಧಗಳಿಗೆ ಪ್ರತಿಕ್ರಿಯಿಸದ ಅಪಸ್ಮಾರ ರೋಗಿಗಳಿಗೆ ಅನುಕೂಲಕರ ಡಯಟ್.

    ಹಸಿವನ್ನು ನಿಯಂತ್ರಿಸುತ್ತದೆ.

    ಶೀಘ್ರವಾಗಿ ದೇಹತೂಕ ಕಡಿಮೆ ಮಾಡಲು ಸಹಾಯಕ.

    ಕಿಟೋ ಡಯಟ್‌ನ ದುಷ್ಪರಿಣಾಮಗಳು

    ಯೂರಿಕ್ ಆ್ಯಸಿಡ್, ಎಲ್.ಡಿ.ಎಲ್. ಕೊಲೆಸ್ಟಾçಲ್, ಹೃದ್ರೋಗದ ಹೆಚ್ಚಳಕ್ಕೆ ಕಾರಣವಾಗುತ್ತದೆ.

    ಆಸ್ಟಿಯೇ ಪೊರೋಸಿಸ್, ಮೂತ್ರಪಿಂಡದ ಕಾಯಿಲೆಗಳಂತಹ ರೋಗಗಳಿಗೆ ಕಾರಣವಾಗುತ್ತದೆ.

    ದೀರ್ಘಕಾಲ ಇದನ್ನು ಅನುಸರಿಸುವುದು ಒಳ್ಳೆಯದಲ್ಲ.

    2. ಮೆಡಿಟರೇನಿಯನ್ ಡಯಟ್:

    ನ್ಯಾಚುರೇಟೆಡ್ ಕೊಬ್ಬುಗಳ (ಕೆಂಪು ಮಾಂಸ, ಬೆಣ್ಣೆ) ಬದಲಾಗಿ ಅಪರ್ಯಾಪ್ತ ಕೊಬ್ಬುಗಳನ್ನು (ಆಲಿವ್ ಎಣ್ಣೆ, ಬೀಜಗಳು, ಮೀನುಗಳು) ಬಳಸಲಾಗುತ್ತದೆ. ಹಣ್ಣುಗಳು, ಹಸಿರು ತರಕಾರಿಗಳು, ದಾನ್ಯಗಳು, ಬೀಜಗಳು ಮುಂತಾದವುಗಳನ್ನು ಒಳಗೊಂಡ ಪೋಷಕಾಂಶಗಳಿರುವ ಆಹಾರ ಕ್ರಮ.

    ಮೆಡಿಟರೇನಿಯನ್ ಡಯಟ್‌ನ ಪ್ರಯೋಜನಗಳು:

    ಎದೆಯುರಿ ಕಡಿಮೆ ಮಾಡುತ್ತದೆ.

    ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

    ಹೃದ್ರೋಗ, ಪಾರ್ಶ್ವವಾಯು ಮುಂತಾದವುಗಳನ್ನು ತಡೆಯುತ್ತದೆ.

    ಬೊಜ್ಜು, ಮಧುಮೇಹ, ಕೊಲೆಸ್ಟಾçಲ್ ಹೆಚ್ಚುವುದು, ರಕ್ತದೊತ್ತಡ ಹೆಚ್ಚುವುದು ಮುಂತಾದವುಗಳ ಸಾಧ್ಯತೆಯನ್ನು

    ಕಡಿಮೆ ಮಾಡುತ್ತದೆ.

    ಇದರ ದುಷ್ಪರಿಣಾಮಗಳು

    ಪ್ಯಾಂಕ್ರಿಯಾಟೈಸಿಸ್, ಗ್ಯಾಸ್ಟೊçÃ, ಈಸೋ ಫೇಜಿಯಲ್ ರಿಫ್ಲೆಕ್ಟ್ ಡಿಸೀಸ್ ಮುಂತಾದ ಕಾಯಿಲೆಗಳು ಇರುವವರಿಗೆ ಸೂಕ್ತವಲ್ಲ.

    3. ವೀಗನ್ ಡಯಟ್: ಮಾಂಸದ

    ಜೊತೆಗೆ ಡೈರಿ ಉತ್ಪನ್ನಗಳು, ಮೊಟ್ಟೆಗಳು, ಜಿಲಾಟಿನ್ ಮತ್ತು ಜೇನು ತುಪ್ಪಂದAತಹ ಪ್ರಾಣಿ ಉತ್ಪನ್ನಗಳನ್ನು ಸಂಪೂರ್ಣ ತ್ಯಜಿಸಲಾಗುತ್ತದೆ. ಇದಕ್ಕೆ ಬದಲಾಗಿ ಸೋಯಾ ಉತ್ಪನ್ನಗಳು, ಬೀಜಗಳು, ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳು, ಹಣ್ಣುಗಳನ್ನು ಈ ಆಹಾರದಲ್ಲಿ ಸೇರಿಸಲಾಗುತ್ತದೆ.

    ವೀಗನ್ ಡಯಟ್‌ನ ಪ್ರಯೋಜನಗಳು:

    ಸಸ್ಯಾಹಾರಿ ಆಹಾರ ಕ್ರಮವು ಹೃದ್ರೋಗ ಮತ್ತು ಮಧುಮೇಹದ ಟೈಪ್ 2 ಅಪಾಯವನ್ನು ಕಡಿಮೆ ಮಾಡುತ್ತದೆ.

    ವೀಗನ್ ಡಯಟ್‌ನ ದುಷ್ಪರಿಣಾಮಗಳು

    ವಿಟಮಿನ್ ಬಿ12 ಮತ್ತು ಕಬ್ಬಿಣಾಂಶದAತಹ ಪೋಷಕಾಂಶಗಳ ಕೊರತೆ ಸಂಭವಿಸಬಹುದು.

    4. ಮಧ್ಯಂತರ ಉಪವಾಸ (ಇಂಟರ್ ಮೀಡಿಯೇಟ್ ಫಾಸ್ಟಿಂಗ್).

    ಇದು ನಿರ್ದಿಷ್ಟ ಸಮಯದಲ್ಲಿ ಊಟ ಮಾಡಿ ಉಳಿದ ಸಮಯವನ್ನು ಉಪವಾಸದಲ್ಲಿ ಕಳೆಯುವ ವಿಧಾನವಾಗಿದೆ. ಇದನ್ನು ಎರಡು ರೀತಿಯಲ್ಲಿ ಮಾಡಬಹುದು. ಪ್ರತಿದಿನ ಸಮಯ ನಿರ್ಬಂಧಿತ ಆಹಾರ ಸೇವನೆ. ನಿದ್ರೆ ಸೇರಿದಂತೆ ದಿನಕ್ಕೆ 16-18 ಗಂಟೆಗಳ ಕಾಲ ಉಪವಾಸ. ಉಳಿದ 6-8 ಗಂಟೆಗಳ ಕಾಲ ಧಾನ್ಯಗಳು, ತರಕಾರಿಗಳು, ಹಣ್ಣುಗಳು, ಪ್ರೋಟೀನ್ ಒಳಗೊಂಡ ಆಹಾರವನ್ನು ಸೇವಿಸಲಾಗುತ್ತದೆ. ವಾರದಲ್ಲಿ ಕೆಲವು ದಿನ ಉಪವಾಸ. ವಾರದಲ್ಲಿ ಎರಡು ದಿನ ಉಪವಾಸ. ಉಳಿದ 5 ದಿನ ಸಾಮಾನ್ಯ ಆಹಾರ ಸೇವನೆ.

    ಇದರ ಪ್ರಯೋಜನಗಳು:

    ದೇಹದ ತೂಕ ಕಡಿಮೆ ಮಾಡಲು ಸಹಾಯಕ

    ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಿಸುತ್ತದೆ.

    ಉರಿಯೂತವನ್ನು ಕಡಿಮೆ ಮಾಡುತ್ತದೆ.

    ಇನ್ಸುಲಿನ್, ಸಂವೇದನಾಶೀಲತೆ, ಜೀರ್ಣಕ್ರಿಯೆ ಮತ್ತು ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ.

    ಇದರ ದುಷ್ಪರಿಣಾಮಗಳು:

    ಇದು ಉತ್ತಮ ಪೋಷಣೆ ಮತ್ತು ಆರೋಗ್ಯವಂತ ಜನರಿಗೆ ಸುರಕ್ಷಿತವಾಗಿದ್ದರೂ ಎಲ್ಲರಿಗೂ ಸೂಕ್ತವಲ್ಲ. ಇದು ತಲೆನೋವು ಮತ್ತು ಆಯಾಸ ನಿದ್ರಾಹೀನತೆಗೆ ಕಾರಣವಾಗಬಲ್ಲದು.

  • “ಅಪ್ಪಾ ನನ್ನನ್ನು ಕ್ಷಮಿಸಿ” 
Whatsapp Voice ಮಾಡಿ ಆತ್ಮಹತ್ಯೆಗೈದ ಮಗಳು…

    “ಅಪ್ಪಾ ನನ್ನನ್ನು ಕ್ಷಮಿಸಿ” Whatsapp Voice ಮಾಡಿ ಆತ್ಮಹತ್ಯೆಗೈದ ಮಗಳು…

    “ಅಪ್ಪಾ, ನನ್ನನ್ನು ಕ್ಷಮಿಸಿ. ನಾನೀ ಚಿತ್ರಹಿಂಸೆಯನ್ನು ಸಹಿಸಬಹುದು ಎಂದು ಭಾವಿಸಿದ್ದೆ. ಆದರೆ ಅವರು ಮನುಷ್ಯರಲ್ಲ, ಕ್ರೂರಿಗಳು. ನನಗೆ ಹೀಗೆಯೇ ಬದುಕು ಮುಂದುವರಿಸಲು ಸಾಧ್ಯವಿಲ್ಲ” ಇದು ನವ ವಿವಾಹಿತೆ ರಿಧನ್ಯಾ ತನ್ನ ಸಾವಿನ ಮೊದಲು ತಂದೆಗೆ ಕಳಿಸಿದ ಧ್ವನಿ ಸಂದೇಶದ ಚುಟುಕು.

    ತಮಿಳುನಾಡಿನ ತಿರುಪುರ ಜಿಲ್ಲೆಯ 27 ವರ್ಷದ ನವವಿವಾಹಿತೆ ರಿಧನ್ಯಾ ಜೂನ್ 28 ರಂದು ದಾಂಪತ್ಯದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ತಮಿಳುನಾಡಿನೆಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಿಶೇಷವಾಗಿ ಅವಳು ತನ್ನ ಸಾವಿಗೆ ಮೊದಲು ತಂದೆಗೆ ಕಳಿಸಿದ್ದ ಹೃದಯವೇ ಒಡೆಯುವಂತಹ ಧ್ವನಿ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ಮೃತರಾದ ರಿಧನ್ಯಾ, 2025ರ ಏಪ್ರಿಲ್ 11ರಂದು ಕವಿನ್ ಕುಮಾರ್ (28) ಎಂಬವರೊಂದಿಗೆ ವಿವಾಹವಾಗಿದ್ದರು. ವಿವಾಹಕ್ಕಾಗಿ ಅವರ ಕುಟುಂಬವು ಸುಮಾರು 100 ಪವನ್ ಚಿನ್ನ (800 ಗ್ರಾಂ) ಹಾಗೂ 70 ಲಕ್ಷ ಮೌಲ್ಯದ ವೋಲ್ವೋ ಕಾರ್ ವರದಕ್ಷಿಣೆ ರೂಪದಲ್ಲಿ ನೀಡಿದ್ದರೂ, ಪುನಹ 500 ಪವನ್ ವರದಕ್ಷಿಣೆ ಹೆಚ್ಚು ನೀಡಬೇಕೆಂದು ಅವರ ಪತಿಯ ಕುಟುಂಬದವರು ನಿರಂತರ ಕಿರುಕುಳಗಳು ನೀಡುತ್ತಿದ್ದರೆಂದು ಕುಟುಂಬದವರು ಆರೋಪಿಸಿದ್ದಾರೆ.

    “ಅವಳನ್ನು ಗಂಟೆಗಟ್ಟಲೇ ನಿಲ್ಲಿಸಿಟ್ಟು, ಊಟ ಕೊಡದೆ ಕೋಣೆಯಲ್ಲಿ ಕೂಡಿ ಹಾಕಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.” “ವಿವಾಹವು ಅವಳಿಗೆ ಸಂತೋಷ ನೀಡುತ್ತದೆ ಎಂದು ನಾವು ಭಾವಿಸಿದ್ದೆವು. ಆದರೆ ಅದು ಅವಳಿಗೆ ಹಿಂಸೆಯೊಂದಿಗೆ ಅಂತ್ಯಕ್ಕೆ ಕಾರಣವಾಯಿತು” ಎಂದು ಆಕೆಯ ತಂದೆ ದಿ ಇಂಡಿಯನ್ ಎಕ್ಸ್ಪ್ರೆಸ್‌ಗೆ ತಿಳಿಸಿದ್ದಾರೆ.
    ಜೂನ್ 28ರಂದು ರಿಧನ್ಯಾ ದೇವಸ್ಥಾನಕ್ಕೆ ಹೋಗುತ್ತಿದ್ದೇನೆಂದು ಹೇಳಿ ಹೊರಟು, ಕಾರನ್ನು ಮಂಡಿಪಾಳ್ಯಮ್ನಲ್ಲಿ ನಿಲ್ಲಿಸಿ ಸಾಮಾನ್ಯವಾಗಿ ಗ್ರಾಮೀಣ ಜನರು ಆತ್ಮಹತ್ಯೆಗೆ ಬಳಸುವ ವಿಷ ಪದಾರ್ಥವನ್ನು ಖರೀದಿಸಿದಳು ಎಂದು
    ದಿ ನ್ಯೂಸ್ ಮಿನಿಟ್‌ನಲ್ಲಿ ವರದಿಯಾಗಿದೆ.

    ವಿಷ ಸೇವಿಸಿ ಅರೆ ಅರೆ ಪ್ರಜ್ಞಾವಸ್ಥೆಯಲ್ಲಿ ಇದ್ದ ಆಕೆಯನ್ನು ದಾರಿಹೋಕರು ಅವಿನಾಶಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಆಕೆ ಮೃತಪಟ್ಟಿದ್ದಳು.
    ಸಾವಿಗೆ ಮುನ್ನ ಆ ಹೆಣ್ಣು ಮಗಳು ತಂದೆಗೆ ವಾಟ್ಸಾಪ್ ಮೂಲಕ ಏಳು ಧ್ವನಿಸಂದೇಶಗಳನ್ನು ಕಳಿಸಿದ್ದಳು.. ಅವುಗಳಲ್ಲಿ ಒಂದು
    “ಅಪ್ಪಾ, ನನ್ನನ್ನು ಕ್ಷಮಿಸಿ. ನಾನೀ ಚಿತ್ರಹಿಂಸೆಯನ್ನು ಸಹಿಸಬಹುದು ಎಂದು ಭಾವಿಸಿದ್ದೆ. ಆದರೆ ಅವರು ಮನುಷ್ಯರಲ್ಲ, ಕ್ರೂರಿಗಳು. ನನಗೆ ಹೀಗೆಯೇ ಮುಂದುವರಿಸಿ ಬದುಕುವುದು ಸಾಧ್ಯವಿಲ್ಲ” ಎಂದು ರಿಧನ್ಯಾಳ ರೋದನ.”

    ಸಾರ್ವಜನಿಕರ ಪ್ರತಿಭಟನೆ ಹಾಗೂ ಮಾಧ್ಯಮದ ಒತ್ತಡದಿಂದಾಗಿ, ಸೇವೂರು ಪೊಲೀಸರು ಆಕೆಯ ಪತಿ ಕವಿನ್ ಕುಮಾರ್, ಮಾವ ಈಶ್ವರಮೂರ್ತಿ ಮತ್ತು ಅತ್ತೆ ಚಿತ್ರಾದೇವಿ ಅವರ ಮೇಲೆ IPಅ ಸೆಕ್ಷನ್ 498 A, 304 B ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ, 1961ರ ಅನ್ವಯ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ (ಹಿಂದುಸ್ತಾನ್ ಟೈಮ್ಸ್).ವಿವಾಹದ ಸಮಯದಲ್ಲಿ ನಡೆದ ಹಣಕಾಸು ಮತ್ತು ವಸ್ತು ವಿನಿಮಯಗಳ ಕುರಿತು ಆದಾಯ ವಿಭಾಗ ಅಧಿಕಾರಿ ತನಿಖೆ ನಡೆಸುತ್ತಿದ್ದಾರೆ.

    ವರದಕ್ಷಿಣೆ ನಿಷೇಧ ಕಾನೂನು 1961ರಲ್ಲಿ ಜಾರಿಗೆ ಬಂದರೂ ಭಾರತದಲ್ಲಿ ಪ್ರತಿ ವರ್ಷ ಸರಾಸರಿ 6,500 ವರದಕ್ಷಿಣೆ ಸಂಬಂಧಿತ ಸಾವುಗಳ ವರದಿಯಾಗುತ್ತಿವೆ. (ದಿ ನ್ಯೂಸ್ ಮಿನಿಟ್). 2022ರಲ್ಲಿ ಕೇವಲ ತಮಿಳುನಾಡಿನಲ್ಲಿ ಮಾತ್ರ 29 ಪ್ರಕರಣಗಳು ದಾಖಲಾಗಿವೆ (The CSR Journal)

    “ಇದು ಬರೇ ಚಿನ್ನ ಅಥವಾ ಐಶಾರಾಮಿ ಕಾರಿನ ವಿಷಯವಲ್ಲ” ಎನ್ನುತ್ತಾರೆ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಪ್ರಿಯಾ ರಾಜನ್. “ಎಷ್ಟೇ ಶ್ರೀಮಂತ ಕುಟುಂಬದ ಹೆಣ್ಣುಮಕ್ಕಳಿಗಾದರೂ ಶೋಷಣೆಯಿಂದ ರಕ್ಷಣೆ ಸಿಗುವುದಿಲ್ಲ. ರಿಧನ್ಯಾಳ ಅಂತಿಮ ಧ್ವನಿ ಸಂದೇಶಗಳು- ಕ್ಷಮಾಪಣೆಯ ನೋವಿನ ಧ್ವನಿ- ಈ ರಾಷ್ಟ್ರವನ್ನು ಎಚ್ಚರಿಸಬೇಕು” (ದಿ ಇಂಡಿಯನ್ ಎಕ್ಸ್ಪ್ರೆಸ್).

    ಮಹಿಳಾ ಹಕ್ಕು ಹೋರಾಟಗಾರರು ಅಧಿಕಾರಿಗಳ ಮೇಲೆ ಹೆಚ್ಚಿನ ಹೊಣೆಗಾರಿಕೆಯನ್ನು ವಿಧಿಸಬೇಕೆಂದು ಹಾಗೂ ಮಹಿಳೆಯರಿಗಾಗಿ ಜಿಲ್ಲಾಮಟ್ಟದ ದೂರು ಸ್ವೀಕಾರ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಆಗ್ರಹಿಸುತ್ತಿದ್ದಾರೆ..
    ಈ ಘಟನೆ ಭಾರತದೆಲ್ಲೆಡೆ ಭಾವನಾತ್ಮಕ, ನೋವಿನ ಹಾಗೂ ಚೀತ್ಕಾರದ ಪ್ರತಿಧ್ವನಿಯನ್ನು ಉಂಟುಮಾಡಿದೆ. ಹಣವಿರುವ ಕುಟುಂಬದಿಂದ ಬಂದಿದ್ದರೂ ರಿಧನ್ಯಾಳಿಗೆ ವರದಕ್ಷಿಣೆಯ ಶಾಪದಿಂದ ಪಾರಾಗಲು ಸಾಧ್ಯವಾಗಲಿಲ್ಲ. ಈ ಪ್ರಕರಣವು ಎಲ್ಲ ವರ್ಗಗಳಲ್ಲಿಯೂ ಶೋಷಣೆಯ ಆಳವನ್ನು ತೋರಿಸುವ ಸಂಕೇತವಾಗಿದೆ.

    ಸಾಮಾಜಿಕ ಮಾಧ್ಯಮಗಳಲ್ಲಿ Justice For Ridhanya ಮತ್ತು End Dowry Deaths ಎಂಬ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆಗುತ್ತಿವೆ. ನಟರು, ಹಕ್ಕು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಎಲ್ಲರೂ ನ್ಯಾಯ ಮತ್ತು ಸಕಾರಾತ್ಮಕ ಬದಲಾವಣೆಗೆ ಬೊಬ್ಬಿಡುತ್ತಿದ್ದಾರೆ.

    ವರದಕ್ಷಿಣೆ ಸಂಬಂಧಿಸಿದ ಸಾವುಗಳು ಭಾರತದಲ್ಲಿ ಬೃಹತ್ ಸಮಸ್ಯೆಯಾಗಿ ಉಳಿದಿವೆ. ಪಿತೃಪ್ರಧಾನ ರೂಢಿಗಳು, ಕಳಪೆ ಕಾನೂನು ಜಾರಿ ಮತ್ತು ಆಳವಾಗಿ ಬೇರೂರಿರುವ ದುರಾಸೆಯಿಂದಾಗಿ ಇದಕ್ಕೆ ಕಾರಣವಾಗಿವೆ
    ಅವಿನಾಶಿಯಲ್ಲಿ ರಿಧನ್ಯಾಳ ಅಂತ್ಯಕ್ರಿಯೆಯ ವೇಳೆ ತಂದೆ ಕಣ್ಣೀರಿಡುತ್ತಾ ಹೇಳಿದರು: “ನಮಗೆ ಅವಳ ಸಂತೋಷ ಬೇಕಿತ್ತು. ಆದರೆ ನಮ್ಮ ಹೃದಯದಲ್ಲಿ ಉತ್ತರವಿಲ್ಲದ ಅದೆಷ್ಟೋ ಪ್ರಶ್ನೆಗಳೊಂದಿಗೆ ಸಹಿಸಲಾಗದ ನೋವಿನೊಂದಿಗೆ ಈಗ ಅವಳ ಸಮಾಧಿಯ ಮುಂದೆ ನಿಂತಿದ್ದೇವೆ.”

    ಭವಿಷ್ಯದಲ್ಲಿ ಆಶೆ ಮತ್ತು ಆಕಾಂಕ್ಷೆಗಳೊಂದಿಗೆ ಪತಿಯ ಮನೆಯಲ್ಲಿ ಬದುಕಬೇಕು ಎಂಬ ಮಗಳ ಕನಸುಗಳು ಬಾಲ್ಯದಿಂದ ಯೌವನದವರೆಗೆ ಯಾವುದೆ ನೋವೂ ಸಂಕಷ್ಟವೂ ಆಗದಂತೆ ತೊಟ್ಟಿಲಿನಿಂದ ಜೀವರಕ್ಷೆ ಮಾಡಿದ ತಂದೆ-ತಾಯಿಯ ಮಮತೆಯನ್ನೂ ಕೊನೆಗೆ ಬೆಂಕಿಗೆ ಆಹುತಿಯಾಗುತ್ತವೆಂದರೆ, ಅದನ್ನು ಹೇಗೆ ಸಹಿಸಬೇಕು?
    ನಮ್ಮ ಕಾನೂನು ವ್ಯವಸ್ಥೆ ಎಲ್ಲಿ ತಪ್ಪುತ್ತಿದೆ? ಮಾನವೀಯ ಮೌಲ್ಯಗಳು ಎಲ್ಲಿ ಕುಸಿದುಹೋಗಿವೆ? ಇವು ಚಿಂತನೆಗೆ ಗಂಭೀರ ಕಾರಣಗಳಾಗಿವೆ.

    ಉತ್ತಮ ನಾಗರಿಕರೆಂಬ ನಿಟ್ಟಿನಲ್ಲಿ, ಗೃಹಹಿಂಸೆ ಅಥವಾ ಮಾನಸಿಕ ಒತ್ತಡಕ್ಕೆ ಒಳಗಾಗಿರುವ ಯಾರಾದರೂ ಕಂಡಾಗ, ತಕ್ಷಣವೇ ಸಂಬAಧಿತ ಸಹಾಯವಾಣಿಗೆ ಕರೆಮಾಡುವುದು ಅಥವಾ ಸ್ಥಳೀಯ ಮಾನಸಿಕ ಆರೋಗ್ಯ ತಜ್ಞರ ಬಳಿ ಮಾಹಿತಿ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ.
    ಕುಲ್ಸೂಮ್ ಅಬೂಬಕರ್

  • ಗಾಝಾ ಮಕ್ಕಳ ಬಾಲ್ಯ ಭೀಕರ: 
ಗುಟುಕು ನೀರಿಗೂ ಹಾಹಾಕಾರ

    ಗಾಝಾ ಮಕ್ಕಳ ಬಾಲ್ಯ ಭೀಕರ: ಗುಟುಕು ನೀರಿಗೂ ಹಾಹಾಕಾರ

    ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷದಿಂದ ಗಾಜಾ ಪಟ್ಟಿಯ ಲಕ್ಷಾಂತರ ಮಕ್ಕಳ ಬದುಕು ಜರ್ಜರಿತವಾಗಿದೆ; ಸ್ವಲ್ಪ ಆಹಾರ, ಗುಟುಕು ನೀರಿಗಾಗಿ ಹಾಹಾಕಾರ ನಡೆಯುತ್ತಿದೆ. ಅನೇಕ ಮಕ್ಕಳಿಗೆ ಅವರ ಪೋಷಕರೇ ಉಳಿದಿಲ್ಲ. ಕಣ್ಣ ಮುಂದೆ ಪ್ರೀತಿಪಾತ್ರರ ಸಾವು, ಹಿಂಸಾಚಾರ, ಬಾಂಬ್, ಕ್ಷಿಪಣಿಗಳ ನಿರಂತರ ದಾಳಿ, ಯಾವ ಕ್ಷಣ ಏನಾಗುವುದೋ ಎನ್ನುವ ಭಯ, ಶಿಬಿರದಿಂದ ಶಿಬಿರಕ್ಕೆ ಅಲೆಯುವ ಬದುಕು; ಭೂಮಿಯ ಮೇಲೆ ಮನುಷ್ಯನಿಗೆ ಎದುರಾಗಬಹುದಾದ ಸಕಲ ಸವಾಲುಗಳನ್ನೂ, ಸಂಕಷ್ಟಗಳನ್ನೂ ಬಾಲ್ಯದಲ್ಲೇ ಅನುಭವಿಸುತ್ತಿರುವ, ಯುದ್ಧದ ಆತ್ಯಂತಿಕ ಪರಿಣಾಮಗಳಿಗೆ ಒಳಗಾಗಿರುವ ಗಾಜಾ ‍ಪಟ್ಟಿಯ ಮಕ್ಕಳ ದುರ್ಭರ ಪರಿಸ್ಥಿತಿಯನ್ನು ವಿವರಿಸಲು ಪದಗಳೇ ಲಭ್ಯವಿಲ್ಲ.

    ನಿನಗೆ ಕ್ರೆಯಾನ್‌ಗಳು ಬೇಕೋ, ಬ್ರೆಡ್ ಬೇಕೋ ಎಂದು ಕೇಳಿದರೆ, ನನ್ನ ಆಯ್ಕೆ ಬ್ರೆಡ್’ –

    ಇದು ಗಾಜಾ ಪಟ್ಟಿಯ 12 ವರ್ಷದ ರಹ್ಮಾ ಅಬು ಅಬೆದ್‌ಳ ಮಾತು. ಆಟ ಎಂದರೆ ಊಟ, ನಿದ್ದೆ ಎಲ್ಲವನ್ನೂ ಮರೆಯುವ ಮಕ್ಕಳ ನಡುವೆ ರಹ್ಮಾಳ ಉತ್ತರ ವಿಚಿತ್ರ ಅನ್ನಿಸಬಹುದು. ಆದರೆ, ರಹ್ಮಾಳ ಮಾತಿನಲ್ಲಿ ಗಾಜಾ ಪಟ್ಟಿಯ ಮಕ್ಕಳ ಭೀಕರ ಚಿತ್ರಣವಿದೆ.

    ಇಸ್ರೇಲ್–ಪ್ಯಾಲೆಸ್ಟೀನ್ ನಡುವಿನ ಸಂಘರ್ಷದಲ್ಲಿ ದಕ್ಷಿಣ ಗಾಜಾದಲ್ಲಿದ್ದ ರಹ್ಮಾಳ ಮನೆ ನೆಲಕಚ್ಚಿದೆ. ತನ್ನ ಐವರು ಒಡಹುಟ್ಟಿದವರು ಮತ್ತು ಪೋಷಕರೊಂದಿಗೆ ಆಕೆ ಮೀನುಗಾರಿಕಾ ಉಪಕರಣಗಳ ಶೆಡ್‌ನಲ್ಲಿ ವಾಸವಾಗಿದ್ದಾಳೆ. ರಹ್ಮಾ ಅವರಂತೆಯೇ ಅನೇಕ ನಿರಾಶ್ರಿತ ಕುಟುಂಬಗಳೂ ಅಲ್ಲಿ ಆಶ್ರಯ ಪಡೆದಿವೆ. ದಿನಕ್ಕೆ ಒಂದು ಹೊತ್ತು ಮಾತ್ರ ಊಟ ಮಾಡುವ ರಹ್ಮಾ, ದಿನದ ಬಹುಸಮಯವನ್ನು ಹತ್ತಿರದ ಸಮುದ್ರತೀರದಲ್ಲಿ ಕಳೆಯುತ್ತಾಳೆ. ಒಳ್ಳೆಯ ಬಟ್ಟೆ, ಒಳ್ಳೆಯ ಊಟ ಎಂದರೆ ಹೇಗಿರುತ್ತವೆ ಎನ್ನುವುದರ ನೆನಪೂ ಆಕೆಗೆ ಉಳಿದಿಲ್ಲ. ಮಾಂಸ ತಿನ್ನುವುದು ಅವಳಿಗೀಗ ಒಂದು ಕನಸು.

    ಇದು ರಹ್ಮಾ ಒಬ್ಬಳ ಸ್ಥಿತಿ ಅಲ್ಲ; ಗಾಜಾ ಪಟ್ಟಿಯಲ್ಲಿರುವ 11 ಲಕ್ಷ ಮಕ್ಕಳ ದಾರುಣ ಪರಿಸ್ಥಿತಿ. 22 ತಿಂಗಳುಗಳಿಂದ ನಡೆಯುತ್ತಿರುವ ಸಂಘರ್ಷದಿಂದ ಗಾಜಾದಲ್ಲಿ ಬಾಲ್ಯ ಎನ್ನುವ ಪದಕ್ಕೆ ಅರ್ಥವೇ ಇಲ್ಲದಂತಾಗಿದೆ. ಇಲ್ಲಿನ ಬಹುತೇಕ ಮಕ್ಕಳು ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಂಡಿಲ್ಲ. ಈ ಭಾಗದ ಶೇ 90ರಷ್ಟು ಶಾಲೆಗಳು ನೆಲಕ್ಕುರುಳಿದ್ದರೆ, ಅಳಿದುಳಿದ ಶಾಲೆಗಳು ನಿರಾಶ್ರಿತ ಶಿಬಿರಗಳಾಗಿ ಮಾರ್ಪಟ್ಟಿವೆ.

    ಮಕ್ಕಳಿಗೆ ಹೊಟ್ಟೆತುಂಬ ಊಟ, ಮೈಮುಚ್ಚುವಷ್ಟು ಬಟ್ಟೆ, ದಾಹ ತೀರುವಷ್ಟು ಕುಡಿಯುವ ನೀರು ಕೂಡ ದುರ್ಲಭವಾಗಿವೆ; ಹಸಿವು, ಪದೇ ಪದೇ ಆಶ್ರಯ ಶಿಬಿರಗಳ ಬದಲಾವಣೆ, ಬಾಂಬ್, ಕ್ಷಿಪಣಿ ದಾಳಿಗಳಿಂದ ಅವರು ತೀವ್ರ ದೈಹಿಕ ಮತ್ತು ಮಾನಸಿಕ ಕ್ಷೋಭೆಗೆ ಒಳಗಾಗಿದ್ದು, ಅವರಿಗೆ ತಕ್ಷಣ ವೈದ್ಯಕೀಯ ನೆರವು ಬೇಕಾಗಿದೆ. ಯುದ್ಧದ ಭೀಕರತೆ, ‌ಹಿಂಸಾಚಾರ, ಪ್ರೀತಿಪಾತ್ರರ ಸಾವು, ಭಯ ಮತ್ತು ಮೂಲಸೌಕರ್ಯಗಳ ಕೊರತೆಯಿಂದ ಇಲ್ಲಿನ ಮಕ್ಕಳು ಜೀವಚ್ಛವಗಳಾಗಿದ್ದಾರೆ.

    ಮಹಿಳೆಯರು, ಅದರಲ್ಲೂ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಗಾಜಾ ಪಟ್ಟಿಯಲ್ಲಿ ನಿರ್ಮಾಣವಾಗಿರುವ ಮಾನವೀಯ ಬಿಕ್ಕಟ್ಟಿನ ಮೊದಲ ಬಲಿಪಶುಗಳಾಗಿದ್ದಾರೆ. ಈಗಾಗಲೇ ಸಾವಿರಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ಅದಕ್ಕಿಂತ ಹೆಚ್ಚು ಮಂದಿ ಗಾಯಾಳುಗಳಾಗಿ ಸರಿಯಾದ ಚಿಕಿತ್ಸೆಯೂ ಸಿಗದೇ ನರಳುತ್ತಿದ್ದಾರೆ. ಯುದ್ಧದಿಂದ ನೇರವಾಗಿ ಸತ್ತವರಂತೆಯೇ ಊಟ ಸಿಗದೇ ಸತ್ತವರು, ಕಾಯಿಲೆಗಳಿಂದ ಸತ್ತ ಮಕ್ಕಳ ಸಂಖ್ಯೆಯೂ ಗಣನೀಯವಾಗಿದೆ. ಏರುತ್ತಿರುವ ಉಷ್ಣಾಂಶ ಕೂಡ ಅವರಿಗೆ ಶಾ‍ಪವಾಗಿ ಪರಿಣಮಿಸಿದೆ. ಸುಮಾರು 17 ಸಾವಿರ ಮಕ್ಕಳು ತಮ್ಮ ಪೋಷಕರಿಂದ ದೂರವಾಗಿದ್ದಾರೆ. ಇಸ್ರೇಲ್ 11 ತಿಂಗಳು ಆಹಾರ ಪದಾರ್ಥಗಳ ಸಾಗಣೆಯನ್ನು ನಿರ್ಬಂಧಿಸಿದ್ದರಿಂದ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತೀವ್ರ ಅಪೌಷ್ಟಿಕತೆಯ ಅಪಾಯ ಎದುರಿಸುತ್ತಿದ್ದಾರೆ.

    ಆಹಾರ ಪದಾರ್ಥಗಳ ಲಭ್ಯತೆಯೇ ದೊಡ್ಡ ಸಮಸ್ಯೆಯಾಗಿದೆ. ಬೇಕರಿಗಳನ್ನು ಮುಚ್ಚಲಾಗಿದೆ. ಆಹಾರ ಧಾನ್ಯಗಳ ಬೆಲೆ ಶೇ 700ರಷ್ಟು ಹೆಚ್ಚಾಗಿದ್ದು, ಹಸಿವಿನ ವಿರಾಟ್ ಸ್ವರೂಪವು ಇಲ್ಲಿ ಕಂಡುಬರುತ್ತಿದೆ. ದಿನಕ್ಕೆ ಒಂದು ಹೊತ್ತು ಕೂಡ ಊಟ ಸಿಗದವರ ಸಂಖ್ಯೆ ದೊಡ್ಡದಿದೆ. ಹಸಿವು ತಾಳಲಾಗದೇ ಮಕ್ಕಳು ಆಕ್ರಂದನ ಮಾಡುವುದು, ‍ಪೋಷಕರು ತಮ್ಮ ಮಕ್ಕಳಿಗಾಗಿ ಹಿಡಿ ಅನ್ನ ನೀಡುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುವುದು ಇಲ್ಲಿ ಸಾಮಾನ್ಯ ದೃಶ್ಯಗಳಾಗಿವೆ.

    ಕೆಲವು ಸ್ವಯಂ ಸೇವಾ ಸಂಸ್ಥೆಗಳು, ಅಂತರರಾಷ್ಟ್ರೀಯ ಸಂಘ ಸಂಸ್ಥೆಗಳು ಇಲ್ಲಿ ಉದ್ಭವಿಸಿರುವ ಮಾನವೀಯ ಬಿಕ್ಕಟ್ಟನ್ನು ಶಮನ ಮಾಡಲು ಒಂದಿಷ್ಟು ಪ್ರಯತ್ನ ನಡೆಸುತ್ತಿವೆ. ಅದಕ್ಕಾಗಿ ಹಲವು ದೇಶಗಳು ಧನಸಹಾಯ ಮಾಡುತ್ತಿವೆ. ಆದರೆ, ಇಲ್ಲಿನ ಪರಿಸ್ಥಿತಿಯ ತೀವ್ರತೆಗೆ ತಕ್ಕಂತೆ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ರಕ್ಷಣಾ ಕಾರ್ಯದಲ್ಲಿ, ಆರೋಗ್ಯ ಸೇವೆಗಳಲ್ಲಿ ತೊಡಗಿರುವ ಸಿಬ್ಬಂದಿಯೂ ಹಸಿದ ಹೊಟ್ಟೆಯಲ್ಲಿಯೇ ಕೆಲಸ ಮಾಡಬೇಕಾದ ಸ್ಥಿತಿ ಇದೆ. ಆಹಾರ ಪದಾರ್ಥ, ಪರಿಹಾರ ಸಾಮಗ್ರಿಯನ್ನು ಹೊತ್ತ ಟ್ರಕ್‌ಗಳು ಆಗಮಿಸುತ್ತಿದ್ದಂತೆಯೇ ಜನ ಅವುಗಳನ್ನು ಮುತ್ತಿಕೊಳ್ಳುವ, ನಿರಾಶ್ರಿತರಿಗೆ ಪೂರೈಸಲಾಗುವ ಆಹಾರಕ್ಕಾಗಿ ಪೈಪೋಟಿ ನಡೆಸುವ ಚಿತ್ರಗಳು, ವಿಡಿಯೊಗಳು ಅಲ್ಲಿನ ಪರಿಸ್ಥಿತಿಯ ತೀವ್ರತೆಯನ್ನು ಹೇಳುತ್ತಿವೆ.

    ಆಹಾರಕ್ಕಾಗಿ, ಜೀವ ಉಳಿಸುವಂಥ ಮಾನವೀಯ ನೆರವಿಗಾಗಿ ಆಸೆಯಿಂದ ಎದುರುನೋಡುತ್ತಿರುವ, ಎಲುಬಿನ ಹಂದರವಾಗಿರುವ ಮಕ್ಕಳ ದೈನ್ಯ, ನೋವು ತುಂಬಿದ ಕಣ್ಣುಗಳು ಗಾಜಾ ಪಟ್ಟಿಯ ಪರಿಸ್ಥಿತಿಗೆ, ಮನುಷ್ಯ ನಿರ್ಮಿತ ಬಿಕ್ಕಟ್ಟಿನ ತೀವ್ರತೆಗೆ, ದೇಶ–ದೇಶಗಳ ನಡುವಿನ ಯುದ್ಧ, ಅಸಹನೆ, ಆಕ್ರಮಣಗಳಿಂದ ಉಂಟಾಗುವ ಪರಿಣಾಮಗಳಿಗೆ ಸಂಕೇತದಂತಿವೆ.

    ನೆರವು ತಡೆಯುತ್ತಿರುವ ಇಸ್ರೇಲ್‌

    ಗಾಜಾ ಪಟ್ಟಿಯ ಶೇ 86ರಷ್ಟು ಭೂಭಾಗದ ಮೇಲೆ ನಿಯಂತ್ರಣ ಹೊಂದಿರುವ ಇಸ್ರೇಲ್‌, ಹಸಿವಿನಿಂದ ಬಳಲುತ್ತಿರುವ ನಿರಾಶ್ರಿತ ಪ್ಯಾಲೆಸ್ಟೀನಿಯನ್ನರಿಗೆ ಆಹಾರ ವಸ್ತುಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ಪೂರೈಸುವುದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘಟಕ ಆರೋಪಿಸಿದೆ. ಕಳೆದ ಕೆಲವು ವಾರಗಳಿಂದ ಗಾಜಾ ಪಟ್ಟಿಗೆ ಸ್ವಲ್ಪ ಪ್ರಮಾಣದಲ್ಲಿ ನೆರವು ತಲುಪುವುದಕ್ಕೆ ಮಾತ್ರ ಇಸ್ರೇಲ್‌ ಅವಕಾಶ ನೀಡಿದೆ. ಆದರೆ, ಅಲ್ಲಿ ಹೆಚ್ಚುತ್ತಿರುವ ಹಸಿವನ್ನು ತಡೆಯಲು ಇದು ಸಾಕಾಗುತ್ತಿಲ್ಲ ಎಂದು ಅದು ಹೇಳಿದೆ. ಯುದ್ಧ ಆರಂಭವಾದ, 2023ರ ಅಕ್ಟೋಬರ್‌ 7ಕ್ಕೂ ಮೊದಲು ಪ್ರತಿ ದಿನ 500 ಟ್ರಕ್‌ಗಳು ಗಾಜಾವನ್ನು ಪ್ರವೇಶಿಸುತ್ತಿದ್ದವು. ಅಂದರೆ ಪ್ರತಿ ತಿಂಗಳು 15 ಸಾವಿರದಷ್ಟು ಟ್ರಕ್‌ಗಳು ನೆರವಿನ ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿದ್ದವು. ಯುದ್ಧದ ನಂತರ ಇದಕ್ಕೆ ಇಸ್ರೇಲ್‌ ತಡೆಯೊಡ್ಡಿತ್ತು. ಕಡಿಮೆ ಸಂಖ್ಯೆಯ ಟ್ರಕ್‌ಗಳಿಗಷ್ಟೇ ಅವಕಾಶ ನೀಡುತ್ತಿತ್ತು.

    ಈಗ ಅಂತರರಾಷ್ಟ್ರೀಯ ಒತ್ತಡದ ಬಳಿಕ ಆಹಾರ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳಿಗೆ ಗಾಜಾದತ್ತ ತೆರಳಲು ಮತ್ತು ವಿಮಾನ, ಹೆಲಿಕಾಪ್ಟರ್‌ಗಳ ಮೂಲಕ ಅಗತ್ಯ ವಸ್ತುಗಳನ್ನು ನಿರಾಶ್ರಿತ ಶಿಬಿರಗಳ ವ್ಯಾಪ್ತಿಯಲ್ಲಿ ಹಾಕಲು ಇಸ್ರೇಲ್‌ ಅವಕಾಶ ನೀಡಿದೆ ಎಂದು ವರದಿಯಾಗಿದೆ.

    ಚಿಕಿತ್ಸೆಗಾಗಿ ಬ್ರಿಟನ್‌ಗೆ

    ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿರುವ ಮತ್ತು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 30ರಿಂದ 50 ಮಕ್ಕಳನ್ನು ಮುಂದಿನ ವಾರಗಳಲ್ಲಿ ಗಾಜಾದಿಂದ ಬ್ರಿಟನ್‌ಗೆ ಕರೆದುಕೊಂಡು ಬಂದು ಸರ್ಕಾರ ಚಿಕಿತ್ಸೆ ನೀಡಲಿದೆ ಎಂದು ಬಿಬಿಸಿ ವರದಿ ಮಾಡಿದೆ.

    ಹಮಾಸ್‌ ನೇತೃತ್ವದ ಆರೋಗ್ಯ ಸಚಿವಾಲಯದ ವೈದ್ಯರು ಆಯ್ಕೆ ಮಾಡಿದ ಮಕ್ಕಳನ್ನು ಕರೆದುಕೊಂಡು ಬಂದು ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಮಕ್ಕಳ ಪ್ರಯಾಣದ ಸಮನ್ವಯವನ್ನು ವಿಶ್ವ ಆರೋಗ್ಯ ಸಂಸ್ಥೆ ಮಾಡಲಿದೆ. 

    ಅಮೆರಿಕದ ಮೌನಕ್ಕೆ ಅತೃಪ್ತಿ

    ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಉಕ್ರೇನ್‌ ಸೈನಿಕರು ಹಾಗೂ ಜನರು ಸಾಯುತ್ತಿರುವುದರ ಬಗ್ಗೆ ಮಾತನಾಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಗಾಜಾದಲ್ಲಿನ ಮಾನವೀಯ ಬಿಕ್ಕಟ್ಟಿನ ಬಗ್ಗೆ ಮೌನ ತಾಳಿದ್ದಾರೆ. ಬದಲಿಗೆ, ಅಮೆರಿಕ ಸರ್ಕಾರ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವುದು ಪ್ಯಾಲೆಸ್ಟೀನ್‌ನ ಬೆಂಬಲಕ್ಕೆ ನಿಂತಿರುವ ರಾಷ್ಟ್ರಗಳು ಹಾಗೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

    ಆಧಾರ: ಇಂಟರ್‌ನ್ಯಾಷನಲ್ ರೆಸ್ಕ್ಯೂಕಮಿಟಿ, ಬಿಬಿಸಿ, ರಾಯಿಟರ್ಸ್‌, ವಿಶ್ವಸಂಸ್ಥೆಯ ವರದಿಗಳು, ದಿ ನ್ಯೂಯಾರ್ಕ್‌ ಟೈಮ್ಸ್‌

  • ಗಾಝಾ ಮಕ್ಕಳ ಬಾಲ್ಯ ಭೀಕರ: 
ಗುಟುಕು ನೀರಿಗೂ ಹಾಹಾಕಾರ

    ಗಾಝಾ ಮಕ್ಕಳ ಬಾಲ್ಯ ಭೀಕರ: ಗುಟುಕು ನೀರಿಗೂ ಹಾಹಾಕಾರ

    ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಇಸ್ರೇಲ್–ಪ್ಯಾಲೆಸ್ಟೀನ್ ಸಂಘರ್ಷದಿಂದ ಗಾಜಾ ಪಟ್ಟಿಯ ಲಕ್ಷಾಂತರ ಮಕ್ಕಳ ಬದುಕು ಜರ್ಜರಿತವಾಗಿದೆ; ಸ್ವಲ್ಪ ಆಹಾರ, ಗುಟುಕು ನೀರಿಗಾಗಿ ಹಾಹಾಕಾರ ನಡೆಯುತ್ತಿದೆ. ಅನೇಕ ಮಕ್ಕಳಿಗೆ ಅವರ ಪೋಷಕರೇ ಉಳಿದಿಲ್ಲ. ಕಣ್ಣ ಮುಂದೆ ಪ್ರೀತಿಪಾತ್ರರ ಸಾವು, ಹಿಂಸಾಚಾರ, ಬಾಂಬ್, ಕ್ಷಿಪಣಿಗಳ ನಿರಂತರ ದಾಳಿ, ಯಾವ ಕ್ಷಣ ಏನಾಗುವುದೋ ಎನ್ನುವ ಭಯ, ಶಿಬಿರದಿಂದ ಶಿಬಿರಕ್ಕೆ ಅಲೆಯುವ ಬದುಕು; ಭೂಮಿಯ ಮೇಲೆ ಮನುಷ್ಯನಿಗೆ ಎದುರಾಗಬಹುದಾದ ಸಕಲ ಸವಾಲುಗಳನ್ನೂ, ಸಂಕಷ್ಟಗಳನ್ನೂ ಬಾಲ್ಯದಲ್ಲೇ ಅನುಭವಿಸುತ್ತಿರುವ, ಯುದ್ಧದ ಆತ್ಯಂತಿಕ ಪರಿಣಾಮಗಳಿಗೆ ಒಳಗಾಗಿರುವ ಗಾಜಾ ‍ಪಟ್ಟಿಯ ಮಕ್ಕಳ ದುರ್ಭರ ಪರಿಸ್ಥಿತಿಯನ್ನು ವಿವರಿಸಲು ಪದಗಳೇ ಲಭ್ಯವಿಲ್ಲ.

    ನಿನಗೆ ಕ್ರೆಯಾನ್‌ಗಳು ಬೇಕೋ, ಬ್ರೆಡ್ ಬೇಕೋ ಎಂದು ಕೇಳಿದರೆ, ನನ್ನ ಆಯ್ಕೆ ಬ್ರೆಡ್’ –

    ಇದು ಗಾಜಾ ಪಟ್ಟಿಯ 12 ವರ್ಷದ ರಹ್ಮಾ ಅಬು ಅಬೆದ್‌ಳ ಮಾತು. ಆಟ ಎಂದರೆ ಊಟ, ನಿದ್ದೆ ಎಲ್ಲವನ್ನೂ ಮರೆಯುವ ಮಕ್ಕಳ ನಡುವೆ ರಹ್ಮಾಳ ಉತ್ತರ ವಿಚಿತ್ರ ಅನ್ನಿಸಬಹುದು. ಆದರೆ, ರಹ್ಮಾಳ ಮಾತಿನಲ್ಲಿ ಗಾಜಾ ಪಟ್ಟಿಯ ಮಕ್ಕಳ ಭೀಕರ ಚಿತ್ರಣವಿದೆ.

    ಇಸ್ರೇಲ್–ಪ್ಯಾಲೆಸ್ಟೀನ್ ನಡುವಿನ ಸಂಘರ್ಷದಲ್ಲಿ ದಕ್ಷಿಣ ಗಾಜಾದಲ್ಲಿದ್ದ ರಹ್ಮಾಳ ಮನೆ ನೆಲಕಚ್ಚಿದೆ. ತನ್ನ ಐವರು ಒಡಹುಟ್ಟಿದವರು ಮತ್ತು ಪೋಷಕರೊಂದಿಗೆ ಆಕೆ ಮೀನುಗಾರಿಕಾ ಉಪಕರಣಗಳ ಶೆಡ್‌ನಲ್ಲಿ ವಾಸವಾಗಿದ್ದಾಳೆ. ರಹ್ಮಾ ಅವರಂತೆಯೇ ಅನೇಕ ನಿರಾಶ್ರಿತ ಕುಟುಂಬಗಳೂ ಅಲ್ಲಿ ಆಶ್ರಯ ಪಡೆದಿವೆ. ದಿನಕ್ಕೆ ಒಂದು ಹೊತ್ತು ಮಾತ್ರ ಊಟ ಮಾಡುವ ರಹ್ಮಾ, ದಿನದ ಬಹುಸಮಯವನ್ನು ಹತ್ತಿರದ ಸಮುದ್ರತೀರದಲ್ಲಿ ಕಳೆಯುತ್ತಾಳೆ. ಒಳ್ಳೆಯ ಬಟ್ಟೆ, ಒಳ್ಳೆಯ ಊಟ ಎಂದರೆ ಹೇಗಿರುತ್ತವೆ ಎನ್ನುವುದರ ನೆನಪೂ ಆಕೆಗೆ ಉಳಿದಿಲ್ಲ. ಮಾಂಸ ತಿನ್ನುವುದು ಅವಳಿಗೀಗ ಒಂದು ಕನಸು.

    ಇದು ರಹ್ಮಾ ಒಬ್ಬಳ ಸ್ಥಿತಿ ಅಲ್ಲ; ಗಾಜಾ ಪಟ್ಟಿಯಲ್ಲಿರುವ 11 ಲಕ್ಷ ಮಕ್ಕಳ ದಾರುಣ ಪರಿಸ್ಥಿತಿ. 22 ತಿಂಗಳುಗಳಿಂದ ನಡೆಯುತ್ತಿರುವ ಸಂಘರ್ಷದಿಂದ ಗಾಜಾದಲ್ಲಿ ಬಾಲ್ಯ ಎನ್ನುವ ಪದಕ್ಕೆ ಅರ್ಥವೇ ಇಲ್ಲದಂತಾಗಿದೆ. ಇಲ್ಲಿನ ಬಹುತೇಕ ಮಕ್ಕಳು ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಂಡಿಲ್ಲ. ಈ ಭಾಗದ ಶೇ 90ರಷ್ಟು ಶಾಲೆಗಳು ನೆಲಕ್ಕುರುಳಿದ್ದರೆ, ಅಳಿದುಳಿದ ಶಾಲೆಗಳು ನಿರಾಶ್ರಿತ ಶಿಬಿರಗಳಾಗಿ ಮಾರ್ಪಟ್ಟಿವೆ.

    ಮಕ್ಕಳಿಗೆ ಹೊಟ್ಟೆತುಂಬ ಊಟ, ಮೈಮುಚ್ಚುವಷ್ಟು ಬಟ್ಟೆ, ದಾಹ ತೀರುವಷ್ಟು ಕುಡಿಯುವ ನೀರು ಕೂಡ ದುರ್ಲಭವಾಗಿವೆ; ಹಸಿವು, ಪದೇ ಪದೇ ಆಶ್ರಯ ಶಿಬಿರಗಳ ಬದಲಾವಣೆ, ಬಾಂಬ್, ಕ್ಷಿಪಣಿ ದಾಳಿಗಳಿಂದ ಅವರು ತೀವ್ರ ದೈಹಿಕ ಮತ್ತು ಮಾನಸಿಕ ಕ್ಷೋಭೆಗೆ ಒಳಗಾಗಿದ್ದು, ಅವರಿಗೆ ತಕ್ಷಣ ವೈದ್ಯಕೀಯ ನೆರವು ಬೇಕಾಗಿದೆ. ಯುದ್ಧದ ಭೀಕರತೆ, ‌ಹಿಂಸಾಚಾರ, ಪ್ರೀತಿಪಾತ್ರರ ಸಾವು, ಭಯ ಮತ್ತು ಮೂಲಸೌಕರ್ಯಗಳ ಕೊರತೆಯಿಂದ ಇಲ್ಲಿನ ಮಕ್ಕಳು ಜೀವಚ್ಛವಗಳಾಗಿದ್ದಾರೆ.

    ಮಹಿಳೆಯರು, ಅದರಲ್ಲೂ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಗಾಜಾ ಪಟ್ಟಿಯಲ್ಲಿ ನಿರ್ಮಾಣವಾಗಿರುವ ಮಾನವೀಯ ಬಿಕ್ಕಟ್ಟಿನ ಮೊದಲ ಬಲಿಪಶುಗಳಾಗಿದ್ದಾರೆ. ಈಗಾಗಲೇ ಸಾವಿರಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದು, ಅದಕ್ಕಿಂತ ಹೆಚ್ಚು ಮಂದಿ ಗಾಯಾಳುಗಳಾಗಿ ಸರಿಯಾದ ಚಿಕಿತ್ಸೆಯೂ ಸಿಗದೇ ನರಳುತ್ತಿದ್ದಾರೆ. ಯುದ್ಧದಿಂದ ನೇರವಾಗಿ ಸತ್ತವರಂತೆಯೇ ಊಟ ಸಿಗದೇ ಸತ್ತವರು, ಕಾಯಿಲೆಗಳಿಂದ ಸತ್ತ ಮಕ್ಕಳ ಸಂಖ್ಯೆಯೂ ಗಣನೀಯವಾಗಿದೆ. ಏರುತ್ತಿರುವ ಉಷ್ಣಾಂಶ ಕೂಡ ಅವರಿಗೆ ಶಾ‍ಪವಾಗಿ ಪರಿಣಮಿಸಿದೆ. ಸುಮಾರು 17 ಸಾವಿರ ಮಕ್ಕಳು ತಮ್ಮ ಪೋಷಕರಿಂದ ದೂರವಾಗಿದ್ದಾರೆ. ಇಸ್ರೇಲ್ 11 ತಿಂಗಳು ಆಹಾರ ಪದಾರ್ಥಗಳ ಸಾಗಣೆಯನ್ನು ನಿರ್ಬಂಧಿಸಿದ್ದರಿಂದ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ತೀವ್ರ ಅಪೌಷ್ಟಿಕತೆಯ ಅಪಾಯ ಎದುರಿಸುತ್ತಿದ್ದಾರೆ.

    ಆಹಾರ ಪದಾರ್ಥಗಳ ಲಭ್ಯತೆಯೇ ದೊಡ್ಡ ಸಮಸ್ಯೆಯಾಗಿದೆ. ಬೇಕರಿಗಳನ್ನು ಮುಚ್ಚಲಾಗಿದೆ. ಆಹಾರ ಧಾನ್ಯಗಳ ಬೆಲೆ ಶೇ 700ರಷ್ಟು ಹೆಚ್ಚಾಗಿದ್ದು, ಹಸಿವಿನ ವಿರಾಟ್ ಸ್ವರೂಪವು ಇಲ್ಲಿ ಕಂಡುಬರುತ್ತಿದೆ. ದಿನಕ್ಕೆ ಒಂದು ಹೊತ್ತು ಕೂಡ ಊಟ ಸಿಗದವರ ಸಂಖ್ಯೆ ದೊಡ್ಡದಿದೆ. ಹಸಿವು ತಾಳಲಾಗದೇ ಮಕ್ಕಳು ಆಕ್ರಂದನ ಮಾಡುವುದು, ‍ಪೋಷಕರು ತಮ್ಮ ಮಕ್ಕಳಿಗಾಗಿ ಹಿಡಿ ಅನ್ನ ನೀಡುವಂತೆ ಅಧಿಕಾರಿಗಳನ್ನು ಬೇಡಿಕೊಳ್ಳುವುದು ಇಲ್ಲಿ ಸಾಮಾನ್ಯ ದೃಶ್ಯಗಳಾಗಿವೆ.

    ಕೆಲವು ಸ್ವಯಂ ಸೇವಾ ಸಂಸ್ಥೆಗಳು, ಅಂತರರಾಷ್ಟ್ರೀಯ ಸಂಘ ಸಂಸ್ಥೆಗಳು ಇಲ್ಲಿ ಉದ್ಭವಿಸಿರುವ ಮಾನವೀಯ ಬಿಕ್ಕಟ್ಟನ್ನು ಶಮನ ಮಾಡಲು ಒಂದಿಷ್ಟು ಪ್ರಯತ್ನ ನಡೆಸುತ್ತಿವೆ. ಅದಕ್ಕಾಗಿ ಹಲವು ದೇಶಗಳು ಧನಸಹಾಯ ಮಾಡುತ್ತಿವೆ. ಆದರೆ, ಇಲ್ಲಿನ ಪರಿಸ್ಥಿತಿಯ ತೀವ್ರತೆಗೆ ತಕ್ಕಂತೆ ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ರಕ್ಷಣಾ ಕಾರ್ಯದಲ್ಲಿ, ಆರೋಗ್ಯ ಸೇವೆಗಳಲ್ಲಿ ತೊಡಗಿರುವ ಸಿಬ್ಬಂದಿಯೂ ಹಸಿದ ಹೊಟ್ಟೆಯಲ್ಲಿಯೇ ಕೆಲಸ ಮಾಡಬೇಕಾದ ಸ್ಥಿತಿ ಇದೆ. ಆಹಾರ ಪದಾರ್ಥ, ಪರಿಹಾರ ಸಾಮಗ್ರಿಯನ್ನು ಹೊತ್ತ ಟ್ರಕ್‌ಗಳು ಆಗಮಿಸುತ್ತಿದ್ದಂತೆಯೇ ಜನ ಅವುಗಳನ್ನು ಮುತ್ತಿಕೊಳ್ಳುವ, ನಿರಾಶ್ರಿತರಿಗೆ ಪೂರೈಸಲಾಗುವ ಆಹಾರಕ್ಕಾಗಿ ಪೈಪೋಟಿ ನಡೆಸುವ ಚಿತ್ರಗಳು, ವಿಡಿಯೊಗಳು ಅಲ್ಲಿನ ಪರಿಸ್ಥಿತಿಯ ತೀವ್ರತೆಯನ್ನು ಹೇಳುತ್ತಿವೆ.

    ಆಹಾರಕ್ಕಾಗಿ, ಜೀವ ಉಳಿಸುವಂಥ ಮಾನವೀಯ ನೆರವಿಗಾಗಿ ಆಸೆಯಿಂದ ಎದುರುನೋಡುತ್ತಿರುವ, ಎಲುಬಿನ ಹಂದರವಾಗಿರುವ ಮಕ್ಕಳ ದೈನ್ಯ, ನೋವು ತುಂಬಿದ ಕಣ್ಣುಗಳು ಗಾಜಾ ಪಟ್ಟಿಯ ಪರಿಸ್ಥಿತಿಗೆ, ಮನುಷ್ಯ ನಿರ್ಮಿತ ಬಿಕ್ಕಟ್ಟಿನ ತೀವ್ರತೆಗೆ, ದೇಶ–ದೇಶಗಳ ನಡುವಿನ ಯುದ್ಧ, ಅಸಹನೆ, ಆಕ್ರಮಣಗಳಿಂದ ಉಂಟಾಗುವ ಪರಿಣಾಮಗಳಿಗೆ ಸಂಕೇತದಂತಿವೆ.

    ನೆರವು ತಡೆಯುತ್ತಿರುವ ಇಸ್ರೇಲ್‌

    ಗಾಜಾ ಪಟ್ಟಿಯ ಶೇ 86ರಷ್ಟು ಭೂಭಾಗದ ಮೇಲೆ ನಿಯಂತ್ರಣ ಹೊಂದಿರುವ ಇಸ್ರೇಲ್‌, ಹಸಿವಿನಿಂದ ಬಳಲುತ್ತಿರುವ ನಿರಾಶ್ರಿತ ಪ್ಯಾಲೆಸ್ಟೀನಿಯನ್ನರಿಗೆ ಆಹಾರ ವಸ್ತುಗಳು ಹಾಗೂ ಇನ್ನಿತರ ಅಗತ್ಯ ಸಾಮಗ್ರಿಗಳನ್ನು ಪೂರೈಸುವುದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಘಟಕ ಆರೋಪಿಸಿದೆ. ಕಳೆದ ಕೆಲವು ವಾರಗಳಿಂದ ಗಾಜಾ ಪಟ್ಟಿಗೆ ಸ್ವಲ್ಪ ಪ್ರಮಾಣದಲ್ಲಿ ನೆರವು ತಲುಪುವುದಕ್ಕೆ ಮಾತ್ರ ಇಸ್ರೇಲ್‌ ಅವಕಾಶ ನೀಡಿದೆ. ಆದರೆ, ಅಲ್ಲಿ ಹೆಚ್ಚುತ್ತಿರುವ ಹಸಿವನ್ನು ತಡೆಯಲು ಇದು ಸಾಕಾಗುತ್ತಿಲ್ಲ ಎಂದು ಅದು ಹೇಳಿದೆ. ಯುದ್ಧ ಆರಂಭವಾದ, 2023ರ ಅಕ್ಟೋಬರ್‌ 7ಕ್ಕೂ ಮೊದಲು ಪ್ರತಿ ದಿನ 500 ಟ್ರಕ್‌ಗಳು ಗಾಜಾವನ್ನು ಪ್ರವೇಶಿಸುತ್ತಿದ್ದವು. ಅಂದರೆ ಪ್ರತಿ ತಿಂಗಳು 15 ಸಾವಿರದಷ್ಟು ಟ್ರಕ್‌ಗಳು ನೆರವಿನ ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿದ್ದವು. ಯುದ್ಧದ ನಂತರ ಇದಕ್ಕೆ ಇಸ್ರೇಲ್‌ ತಡೆಯೊಡ್ಡಿತ್ತು. ಕಡಿಮೆ ಸಂಖ್ಯೆಯ ಟ್ರಕ್‌ಗಳಿಗಷ್ಟೇ ಅವಕಾಶ ನೀಡುತ್ತಿತ್ತು.

    ಈಗ ಅಂತರರಾಷ್ಟ್ರೀಯ ಒತ್ತಡದ ಬಳಿಕ ಆಹಾರ ಸಾಮಗ್ರಿಗಳನ್ನು ಹೊತ್ತ ಟ್ರಕ್‌ಗಳಿಗೆ ಗಾಜಾದತ್ತ ತೆರಳಲು ಮತ್ತು ವಿಮಾನ, ಹೆಲಿಕಾಪ್ಟರ್‌ಗಳ ಮೂಲಕ ಅಗತ್ಯ ವಸ್ತುಗಳನ್ನು ನಿರಾಶ್ರಿತ ಶಿಬಿರಗಳ ವ್ಯಾಪ್ತಿಯಲ್ಲಿ ಹಾಕಲು ಇಸ್ರೇಲ್‌ ಅವಕಾಶ ನೀಡಿದೆ ಎಂದು ವರದಿಯಾಗಿದೆ.

    ಚಿಕಿತ್ಸೆಗಾಗಿ ಬ್ರಿಟನ್‌ಗೆ

    ತೀವ್ರವಾಗಿ ಅನಾರೋಗ್ಯಕ್ಕೆ ತುತ್ತಾಗಿರುವ ಮತ್ತು ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 30ರಿಂದ 50 ಮಕ್ಕಳನ್ನು ಮುಂದಿನ ವಾರಗಳಲ್ಲಿ ಗಾಜಾದಿಂದ ಬ್ರಿಟನ್‌ಗೆ ಕರೆದುಕೊಂಡು ಬಂದು ಸರ್ಕಾರ ಚಿಕಿತ್ಸೆ ನೀಡಲಿದೆ ಎಂದು ಬಿಬಿಸಿ ವರದಿ ಮಾಡಿದೆ.

    ಹಮಾಸ್‌ ನೇತೃತ್ವದ ಆರೋಗ್ಯ ಸಚಿವಾಲಯದ ವೈದ್ಯರು ಆಯ್ಕೆ ಮಾಡಿದ ಮಕ್ಕಳನ್ನು ಕರೆದುಕೊಂಡು ಬಂದು ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಮಕ್ಕಳ ಪ್ರಯಾಣದ ಸಮನ್ವಯವನ್ನು ವಿಶ್ವ ಆರೋಗ್ಯ ಸಂಸ್ಥೆ ಮಾಡಲಿದೆ. 

    ಅಮೆರಿಕದ ಮೌನಕ್ಕೆ ಅತೃಪ್ತಿ

    ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಉಕ್ರೇನ್‌ ಸೈನಿಕರು ಹಾಗೂ ಜನರು ಸಾಯುತ್ತಿರುವುದರ ಬಗ್ಗೆ ಮಾತನಾಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಗಾಜಾದಲ್ಲಿನ ಮಾನವೀಯ ಬಿಕ್ಕಟ್ಟಿನ ಬಗ್ಗೆ ಮೌನ ತಾಳಿದ್ದಾರೆ. ಬದಲಿಗೆ, ಅಮೆರಿಕ ಸರ್ಕಾರ ಇಸ್ರೇಲ್‌ ಅನ್ನು ಬೆಂಬಲಿಸುತ್ತಿರುವುದು ಪ್ಯಾಲೆಸ್ಟೀನ್‌ನ ಬೆಂಬಲಕ್ಕೆ ನಿಂತಿರುವ ರಾಷ್ಟ್ರಗಳು ಹಾಗೂ ಜನರ ಅಸಮಾಧಾನಕ್ಕೆ ಕಾರಣವಾಗಿದೆ.

    ಆಧಾರ: ಇಂಟರ್‌ನ್ಯಾಷನಲ್ ರೆಸ್ಕ್ಯೂಕಮಿಟಿ, ಬಿಬಿಸಿ, ರಾಯಿಟರ್ಸ್‌, ವಿಶ್ವಸಂಸ್ಥೆಯ ವರದಿಗಳು, ದಿ ನ್ಯೂಯಾರ್ಕ್‌ ಟೈಮ್ಸ್‌

  • ಒಂದೇ ಮನೆಯಲ್ಲಿ ವಾಸಿಸುವ ಕ್ರಿಶ್ಚಿಯನ್-ಮುಸ್ಲಿಮ್ ಮಾದರೀ ಕುಟುಂಬ: 
ಇವರ ಮಧ್ಯವಿರುವ ಸಂಬಂಧವೇನು..?

    ಒಂದೇ ಮನೆಯಲ್ಲಿ ವಾಸಿಸುವ ಕ್ರಿಶ್ಚಿಯನ್-ಮುಸ್ಲಿಮ್ ಮಾದರೀ ಕುಟುಂಬ: ಇವರ ಮಧ್ಯವಿರುವ ಸಂಬಂಧವೇನು..?

    ಓದುಗರೇ! ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಧರ್ಮ ಧರ್ಮ ಎಂದು ಕಚ್ಚಾಡುತ್ತಿರುವ ಈ ಸಮಾಜದಲ್ಲಿ ಎರಡು ಬೇರೆ ಧರ್ಮಗಳಿಗೆ ಸೇರಿದ ಕುಟುಂಬಗಳು ಅನ್ಯೋನ್ಯವಾಗಿ ಬಾಳುತ್ತಿರುವ ಸಂತೋಷವನ್ನು ನಿಮ್ಮೊಂದಿಗೆ ಹಂಚುತ್ತಿದ್ದೇನೆ. ಬಳಗವು ಜಸಿಂತ ಮತ್ತು ನಸೀಮ್ ಎಂಬ ಇಬ್ಬರು ಮಹಿಳೆಯರಿಗೆ ಭೇಟಿ ಮಾಡಿತು.

    ಬಳಗ : ಜಸಿಂತ, ನೀವು ಮತ್ತು ನಸೀಮ್ ಬೇರೆ ಧರ್ಮಕ್ಕೆ ಸೇರಿದವರಾಗಿ ಇಷ್ಟು ಪ್ರೀತಿ ಮತ್ತು ಅನ್ಯೋನ್ಯವಾಗಿ ಬಾಳಲು ಹೇಗೆ ಸಾಧ್ಯ?

    ಜಸಿಂತ : ನನ್ನ ಅತ್ತಿಗೆ ನಸೀಮ ತುಂಬ ಒಳ್ಳೆಯವರು. ಅವರು ಅತ್ತಿಗೆ ಮಾತ್ರವಾಗಿರದೆ ನನ್ನ ತಂಗಿಯೂ ಆಗಿದ್ದಾರೆ. ತಂಗಿಗಿಂತಲೂ ಆಪ್ತಳು ಎಂದು ಹೇಳಿದರೆ ತಪ್ಪಾಗಲಾರದು. ಅವಳ ಒಳ್ಳೆಯತನ ನಮಗೆ ಪ್ರೀತಿ ಮತ್ತು ಅನ್ಯೋನ್ಯವಾಗಿರಲು ಸಹಕರಿಸುತ್ತದೆ.

    ಬಳಗ : ನಿಮ್ಮ ಅಣ್ಣ ಬೇರೆ ಧರ್ಮದ ಹುಡುಗಿಯನ್ನು ವಿವಾಹ ಆದಾಗ ಮನೆಯಲ್ಲಿ ಸಮಸ್ಯೆ ಆಗಲಿಲ್ಲವೇ?

    ಜಸಿಂತ : ಅಪ್ಪ-ಅಮ್ಮ ಮತ್ತು ನಮಗೆಲ್ಲರಿಗೂ ವಿರೋಧವಿತ್ತು. ಇಂತಹ ವಿವಾಹಕ್ಕೆ ಯಾರು ಒಪ್ಪುತ್ತಾರೆ? ಆದರೆ ಅಣ್ಣ ತನ್ನಿಷ್ಟದಿಂದ ತನ್ನ ಧರ್ಮವನ್ನು ಬದಲಿಸಿರುವುದರಿಂದ ನಾವು ಏನು ಮಾಡಲು ಸಾಧ್ಯ? ಈ ಬಗ್ಗೆ ಮಾತನಾಡಿದರೆ ಎಲ್ಲರೂ ಬೇಸರ ಪಡುತ್ತಾರೆ ಎಂದು ಅಮ್ಮ ವಿರೋಧಿಸಿದಾಗ, ನಾವು ಯಾರು ವಿರೋಧಿಸಲಿಲ್ಲ. ಆದರೆ ಅಪ್ಪನಿಗೆ ಬಹಳ ಸಮಯದ ತನಕ ಬೇಸರವಿತ್ತು.

    ಬಳಗ : ಅಣ್ಣ ತನ್ನ ಧರ್ಮ ಬದಲಾಯಿಸಿದ ನಂತರ ಮೊದಲಿನಂತೆಯೇ ಇದ್ದಾರೆಯೆ? ಅಥವಾ ಬದಲಾಗಿದ್ದಾರೆಯೇ?

    ಜಸಿಂತ : ಇಲ್ಲಿ ಅಣ್ಣನು ಸ್ವಲ್ಪವೂ ಬದಲಾಗಲಿಲ್ಲ. ಮೊದಲಿಗಿಂತಲೂ ಹೆಚ್ಚು ನಿಕಟವಾದರು. ಅಪ್ಪ-ಅಮ್ಮನನ್ನು ನೋಡುವುದರಲ್ಲಿರಲಿ ಅಥವಾ ನಮ್ಮೊಂದಿಗಿನ ಸಂಬಂಧವು ಮೊದಲಿಗಿಂತ ಗಟ್ಟಿಯಾಯಿತು.

    ಬಳಗ : ನಸೀಮ, ನೀವು ಮತ್ತು ಬಿಲಾಲ್ ಪ್ರೀತಿಸಿ ಮದುವೆಯಾದದ್ದೇ?

    ನಸೀಮ : ಇಲ್ಲ. ನಮ್ಮದು ಅರೆಂಜ್ ಮ್ಯಾರೇಜ್. ನನ್ನ ಸಂಬಂಧಿಕರೊಬ್ಬರು ಬಿಲಾಲ್‌ರ ಸ್ನೇಹಿತರಾಗಿದ್ದರು. ಅವರು ಈ ಸಂಬಂಧವನ್ನು ಮಾಡಿಸಿದರು. ಅಮ್ಮ ಹುಡುಗಿಯನ್ನು ನೋಡಿ ಒಪ್ಪಿದರೆ, ನಾನು ವಿವಾಹ ಆಗುವುದು ಎಂದು ಬಿಲಾಲ್ ಹೇಳಿದರಿಂದ, ಅಮ್ಮ ನನ್ನನ್ನು ನೋಡಲು ಬಂದಿದ್ದರು.

    ಬಳಗ : ವಿವಾಹದ ನಂತರ ಅತ್ತೆ ಮನೆಗೆ ಹೋಗಿದ್ದೀರಾ?

    ನಸೀಮ : ಹೌದು, ಅಪ್ಪ-ಅಮ್ಮ ಮತ್ತು ಮನೆವರೆಲ್ಲರು ಬಹಳ ಸಂತೋಷದಿಂದ ಬರಮಾಡಿಕೊಂಡರು. ನಾನು ಅಮ್ಮನಿಲ್ಲದ ಹೆಣ್ಣು ಎಂದು ಅತ್ತೆ ನನ್ನನ್ನು, ನನ್ನ ಸಹೋದರ, ಸಹೋದರಿಯರನ್ನೂ ಪ್ರೀತಿಸುತ್ತಿದ್ದರು.

    ಬಳಗ: ನಿಮ್ಮ ಮತ್ತು ನಿಮ್ಮ ಅತ್ತೆ ಮನೆಯವರ ಸಂಬಂಧ ಹೇಗಿದೆ?

    ನಸೀಮ : ಅಲ್‌ಹಮ್ದುಲಿಲ್ಲಾಹ್ (ದೇವನಿಗೆ ಸ್ತುತಿಗಳು) ಬಹಳ ಉತ್ತಮ ಸಂಬಂಧ. ನಾದಿನಿ ಮೈದುನನವರೊಂದಿಗೂ ಉತ್ತಮ ಸಂಬಂಧindu ವಿದೆ. ನನ್ನ ಮನೆಯವರೊಂದಿಗೂ ಅವರ ಸಂಬಂಧ ಒಳ್ಳೆದಿದೆ. ನಮ್ಮ ಧರ್ಮ ಯಾವುತ್ತೂ ನಮ್ಮ ಅನ್ಯೋನ್ಯತೆಗೆ ಅಡ್ಡಿ ಬರಲಿಲ್ಲ.

    ಬಳಗ : ಜಸಿಂತ, ನಿಮ್ಮ ಅಣ್ಣ ಹಾಗೂ ಅತ್ತಿಗೆಯ ಸಂಬಂಧ ನಿಮ್ಮೊಂದಿಗೆ ಹೇಗಿದೆ?

    ಜಸಿಂತ : ಪ್ರೀತಿಯ ಸಂಬಂಧ. ಅಮ್ಮ ಜೀವಂತವಾಗಿರುವ ವರೆಗೆ ಅಮ್ಮನಿಗೆ ಎಲ್ಲ ರೀತಿಯಲ್ಲಿ ಸಹಕರಿಸಿದ್ದಾರೆ. ಅಮ್ಮನ ಯಾವುದೇ ಅಗತ್ಯದ ವಿಷಯದಲ್ಲಿ ಬೇಸರ ಪಡಿಸಲಿಲ್ಲ. ಮಾತ್ರವಲ್ಲದೇ ನಮ್ಮೆಲ್ಲರ ಅಗತ್ಯವನ್ನು ಕೇಳುವ ಮೊದಲೇ ಪೂರೈಸುತ್ತಾರೆ. ನನ್ನ ಆರೋಗ್ಯ ಸರಿ ಇಲ್ಲದಾಗಲೂ ಅಣ್ಣ ಅತ್ತಿಗೆ ನನ್ನನ್ನು ಬಿಡಲಿಲ್ಲ. ಈ ವಿಷಯದಲ್ಲಿ ನಸೀಮ ಎತ್ತಿದ ಕೈ. ನಸೀಮ ನಮಗೆ ಯಾರಿಗೂ ದೂರ ಮಾಡಲಿಲ್ಲ. ನಾವು, ಅವರು ಪರಸ್ಪರ ನಮ್ಮ ಮನೆಗಳಿಗೆ ಭೇಟಿ ಕೊಡುತ್ತೇವೆ.

    ಬಳಗ : ನಸೀಮ, ಬಿಲಾಲ್‌ರ ಸಹೋದರ ಸಹೋದರಿಯರೊಂದಿಗೆ ನಿಮ್ಮ ಸಂಬಂಧ ಹೇಗಿದೆ?

    ನಸೀಮ : ಒಂದು ಕುಟುಂಬ ಹೇಗಿರಬೇಕೋ ಹಾಗೆಯೇ ಇದೆ. ಕೆಲವು ತಿಂಗಳ ಹಿಂದೆ, ಅವರ ಓರ್ವ ಹಿರಿಯ ಸಹೋದರಿ ಗಲ್ಫ್ನಲ್ಲಿ 15 ದಿನ ನಮ್ಮೊಂದಿಗೆ ನಿಲ್ಲಲು ಬಂದವರು ಒಂದೂವರೆ ತಿಂಗಳು ನಮ್ಮೊಂದಿಗೆ ಇದ್ದು ಹೋದರು. ನಮ್ಮ ಮಕ್ಕಳು ಮತ್ತು ಅವರೆಲ್ಲರ ಮಕ್ಕಳೊಂದಿಗೆ ಉತ್ತಮ ಸಂಬಂಧ ಇದೆ. ಸುಖ-ದುಃಖಗಳಲ್ಲೆಲ್ಲ ಇಡೀ ಕುಟುಂಬ ಸೇರುತ್ತೇವೆ. ಪರಸ್ಪರ ಉಡುಗೊರೆ ಹಂಚುತ್ತೇವೆ ಮತ್ತು ಪರಸ್ಪರ ಸಹಕರಿಸುತ್ತೇವೆ ಕೂಡ.

    ಬಳಗ :ವಿವಾಹದ ಮೊದ ಮೊದಲು ಬಿಲಾಲ್ ತನ್ನ ಮನೆಯವರಿಗೆ ಸಹಕರಿಸುವಾಗ ನಿಮಗೆ ಬೇಸರ ಆಗುತ್ತಿತ್ತೇ

    ನಸೀಮ : ಇಲ್ಲ. ಸ್ವಲ್ಪನೂ ಇಲ್ಲ. ಕೆಲಸದ ನಿಬಿಢತೆಯಿಂದ ಬಿಲಾಲ್‌ಗೆ ಕೆಲವೊಮ್ಮೆ ಅಮ್ಮನಿಗೆ ಫೋನಾಯಿಸಲು ಅಥವಾ ಹಣ ಕಳುಹಿಸಲು ನೆನಪಿಲ್ಲದಾಗ, ನಾನು ಅವರಿಗೆ ನೆನಪಿಸುತ್ತೇನೆ. ಬಿಲಾಲ್ ಫೋನಾಯಿಸದಿದ್ದರೂ ನಾನು ಫೋನಾಯಿಸುತ್ತಾ ಇರುತ್ತೇನೆ. ಹಣ ಕಳುಹಿಸಲು ಬಿಲಾಲ್‌ಗೆ ಸಮಯ ಇರುವುದಿಲ್ಲವೆಂದು ನಾನೇ ಕಳುಹಿಸಲು ಆರಂಭಿಸಿದೆ. ಕ್ರಮೇಣ ಆ ಜವಾಬ್ದಾರಿಯನ್ನು ಬಿಲಾಲ್ ನನಗೆನೇ ವಹಿಸಿಕೊಟ್ಟರು. ಅವರ ಸಹೋದರ ಸಹೋದರಿಯರಿಗೆ ಹಣದ ಅಗತ್ಯ ಇದ್ದರೆ, ಅವರ ಮೊಬೈಲ್ ನೋಡಿ ನಾನೇ ಕಳುಹಿಸಿಕೊಡುತ್ತೇನೆ. ಅಮ್ಮನಿಗೆ ಕಳುಹಿಸುವ ಹಣ ನಾನು ವಹಿಸಿಕೊಂಡ ನಂತರ ಒಂದು ದಿನ ಕೂಡ ಲೇಟ್ ಮಾಡಲಿಲ್ಲ.

    ಬಳಗ : ಅಮ್ಮನ ನಿಧನದ ಸಮಯ ಅಣ್ಣ ಅತ್ತಿಗೆ ಬಂದಿದ್ದರೆ?

    ಜಸಿಂತ : ಅಮ್ಮ ಅನಾರೋಗ್ಯಗೊಂಡಾಗ ಅಣ್ಣ ಮತ್ತು ಅತ್ತಿಗೆಯನ್ನೇ ನೆನೆಯುತ್ತಿದ್ದರು. ಅಣ್ಣನಿಗೆ ಕೆಲಸದ ನಿಬಿಢತೆಯಿಂದ ಬರಲು ಆಗುತ್ತಿರದಿದ್ದರೂ ಅತ್ತಿಗೆ ಬರುತ್ತಿದ್ದರು. ನಿಧನದ ಸಮಯ ಕೂಡ ಅಮ್ಮ ಇವರಿಬ್ಬರನ್ನು ಕಾಯುತ್ತಿದ್ದರು. ನಸೀಮ- ಅಮ್ಮನ ಆರೋಗ್ಯ ಸರಿಯಿಲ್ಲ ಎಂದು ಕೇಳಿದ ತಕ್ಷಣ ನಾವು ಹೊರಟೆವು. ಆದರೆ… ಪ್ರಯಾಣ… ನಾವು ಮುಟ್ಟುವಷ್ಟರಲ್ಲಿ ಅಮ್ಮ ನಿಧನ ಹೊಂದಿದ್ದರು. ಬಿಲಾಲ್ ಹೆಚ್ಚಾಗಿ ಗಲ್ಫ್ನಲ್ಲಿರುವುದರಿಂದ ಇಲ್ಲಿಯ ವಿಷಯ ಅವರಿಗೆ ಗೊತ್ತಿಲ್ಲ. ಆದ್ದರಿಂದ ಅಮ್ಮನ ದೇಹವನ್ನು ಶವಾಗಾರದಲ್ಲಿಡುವ ವ್ಯವಸ್ಥೆ, ಅವರಿಗೆ ಉಡಿಸಲು ಸೀರೆ ಮತ್ತು ಹೂವು ಎಲ್ಲದರ ವ್ಯವಸ್ಥೆ ನಾನು ಮಾಡಿಕೊಂಡು ಮರುದಿನ ಮರಣವನ್ನು ಊರಿಗೆ ಕಳುಹಿಸಿದೆ. ಮತ್ತು ಹಿಂದಿನಿಂದ ನಾವು ಕೂಡ ಹೋದೆವು. ಜಸಿಂತ- ಅಮ್ಮ ಮರಣದ ತನಕ ನಮ್ಮೆಲ್ಲರೊಂದಿಗೆ ಹೇಳುತ್ತಿದ್ದರು ಏನೆಂದರೆ ನೀವೆಲ್ಲ ಸಹೋದರ-ಸಹೋದರಿಯರು ಒಂದಾಗಿ ಇರಬೇಕು. ಬೇರೆ ಬೇರೆ ಆಗಬಾರದು. ಈ ಅಣ್ಣ ಅತ್ತಿಗೆಯನ್ನು ದೂರ ಮಾಡಬಾರದು. ನಸೀಮ- ಬಿಲಾಲ್‌ರ ತಮ್ಮ ಜೋಸೆಫ್ ಅಂದರೆ ನಮ್ಮ ಮಕ್ಕಳಿಗೆ ಪಂಚ ಪ್ರಾಣ. ಅವರಿಗೂ ನಮ್ಮ ಮಕ್ಕಳೊಂದಿಗೆ ತುಂಬಾ ಪ್ರೀತಿ. ನಮ್ಮ ಊರಿಗೆ ಬಂದಾಗ, ನಮ್ಮ ಹೆಚ್ಚಿನ ಕೆಲಸ ಕಾರ್ಯಗಳಿಗೆ ಅವರು ನಮಗೆ ಸಹಕರಿಸುತ್ತಾರೆ. ಬಿಲಾಲ್ ನಮ್ಮೊಂದಿಗೆ ಬಾರದಿದ್ದರೂ ಅವರು ನಮ್ಮೊಂದಿಗೆ ಇರುತ್ತಾರೆ.

    ಬಳಗ : ಬಿಲಾಲ್‌ರೊಂದಿಗೆ ವಿವಾಹದ ನಂತರ ನಿಮ್ಮ ಜೀವನ ಹೇಗೆ ಸಾಗುತ್ತಿದೆ?

    ನಸೀಮ : ಅಲ್‌ಹಮ್ದುಲಿಲ್ಲಾಹ್ (ದೇವನಿಗೆ ಸ್ತುತಿ) ತುಂಬ ಒಳ್ಳೆಯ ಜೀವನ ಸಾಗಿಸುತ್ತಿದ್ದೇವೆ. ಅವರು ತುಂಬ ಶ್ರಮ ಜೀವಿ. ವಿವಾಹದ ಮೊದಲು ಇದ್ದ ಜೀವನ, ವಿವಾಹದ ನಂತರ ಸಂಪೂರ್ಣ ಬದಲಾಗಿದೆ. ನಾವು ಮಾತ್ರವಲ್ಲಿ ನಮ್ಮೊಂದಿಗೆ ನನ್ನ ಕುಟುಂಬ ಹಾಗೂ ಬಿಲಾಲ್‌ರ ಕುಟುಂಬವು ಉತ್ತಮ ಜೀವನ ಜೀವಿಸುತ್ತಿದ್ದೇವೆ.ind

  • ಕೈಬರಹದ ಕುರ್‌ಆನ್ ಅನಾವರಣಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ: 
ಪೂರ್ಣಗೊಳಿಸಲು ತೆಗೆದುಕೊಂಡ ವರ್ಷಗಳೆಷ್ಟು..?

    ಕೈಬರಹದ ಕುರ್‌ಆನ್ ಅನಾವರಣಗೊಳಿಸಿದ ಪುತ್ತೂರಿನ ವಿದ್ಯಾರ್ಥಿನಿ: ಪೂರ್ಣಗೊಳಿಸಲು ತೆಗೆದುಕೊಂಡ ವರ್ಷಗಳೆಷ್ಟು..?

    ಪುತ್ತೂರು (ದಕ್ಷಿಣ ಕನ್ನಡ): ಶಾಯಿಯಲ್ಲಿ ಅದ್ದುವ ಪೆನ್ ಬಳಸಿ, ಕುರ್‌ ಆನ್‌ ಬರೆದು ತಾಲ್ಲೂಕಿನ ಕುಂಬ್ರದ ಮರ್ಕಝುಲ್ ಹುದಾ ಮಹಿಳಾ ಕಾಲೇಜು ವಿದ್ಯಾರ್ಥಿನಿ ಗಮನ ಸೆಳೆದಿದ್ದಾರೆ.

    ಕುಂಬ್ರ ಮರ್ಕಝುಲ್‌ ಹುದಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಸಜ್‌ಲ ಇಸ್ಮಾಯಿಲ್‌ ಅವರು ಪವಿತ್ರ ಕುರ್‌ಆನ್‌ನ 30 ಕಾಂಡಗಳನ್ನು ಕೈಯಲ್ಲಿ ಬರೆಯುವ ಮೂಲಕ ಸಾಧನೆ ಮಾಡಿದ್ದಾರೆ.

    ಈ ಸಾಧನೆಯ ಹಿಂದೆ ಸುಮಾರು 5 ವರ್ಷಗಳ ನಿರಂತರ ಪರಿಶ್ರಮವಿದೆ. ಪುತ್ತೂರು ತಾಲೂಕಿನ ಬೈತಡ್ಕದ ಇಸ್ಮಾಯಿಲ್‌ ಹಾಜಿ ಮತ್ತು ಝಹ್‌ರಾ ಜಾಸ್ಮಿನ್‌ ದಂಪತಿಯ ಪುತ್ರಿಯಾಗಿರುವ ಸಜ್‌ಲ ಅವರು ಕುರ್‌ಆನ್‌ ಬರವಣಿಗೆಯನ್ನು 2021ರ ಜನವರಿಯಲ್ಲಿ ಆರಂಭಿಸಿದ್ದರು. ಆಗ ಅವರು ಇದೇ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. ಪ್ರಸ್ತುತ ಹಳೆವಿದ್ಯಾರ್ಥಿಯಾಗಿದ್ದು, 2025ರ ಆಗಸ್ಟ್‌ನಲ್ಲಿ ಬರವಣಿಗೆ ಪೂರ್ಣಗೊಂಡಿದೆ.

    ಪ್ರವಾದಿ ಕಾಲದಲ್ಲಿ ಅವತೀರ್ಣಗೊಂಡ ಕುರ್‌ಆನ್‌ ಅನ್ನು ಆ ಕಾಲದ ಪಂಡಿತ ಶಿರೋಮಣಿಗಳು ಕೈ ಬರಹದ ಮೂಲಕ ಬರೆದು ಪರಸ್ಪರ ಹಂಚಿಕೊಳ್ಳುತ್ತಿದ್ದರು. ಪ್ರಸ್ತುತ ಮುದ್ರಣ ಸೌಲಭ್ಯ ಇದ್ದರೂ ಸಜ್‌ಲ ಅವರು ಕೈಯಲ್ಲಿ ಸ್ಫುಟವಾಗಿ ಬರೆದಿರುವುದು ಸಾಧನೆ ಎನಿಸಿದೆ. ಈ ಕೃತಿಯನ್ನು ಶನಿವಾರ ಕುಂಬ್ರದ ಮರ್ಕಝುಲ್‌ ಹುದಾ ಮಹಿಳಾ ಕಾಲೇಜಿನಲ್ಲಿ ಕೇರಳದ ಮರ್ಕಝ್ ನಾಲೇಜ್‌ ಸಿಟಿಯ ಮುರ್‌ ರಿಸ್‌ ಯಾಸೀನ್‌ ಸಖಾಫಿ ಅಲ್‌ ಅಝ್ಹರಿ ಅವರು ಲೋಕಾರ್ಪಣೆಗೊಳಿಸಿದರು.

    ಮರ್ಕಝುಲ್‌ ಹುದಾ ಮಹಿಳಾ ಕಾಲೇಜು ಅಧ್ಯಕ್ಷ ಅರಿಯಡ್ಕ ಅಬ್ದುಲ್‌ ರಹಿಮಾನ್‌ ಹಾಜಿ, ಷರೀಅತ್‌ ವಿಭಾಗದ ಪ್ರಾಂಶುಪಾಲ ವಳವೂರು ಮುಹಮ್ಮದ್‌ ಸಅದಿ, ಪದವಿ ವಿಭಾಗದ ಪ್ರಾಂಶುಪಾಲ ಮಹಮ್ಮದ್‌ ಮನ್ಸೂರ್‌ ಕಡಬ, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

    ಒಟ್ಟು 604 ಪುಟಗಳ ಈ ಕೃತಿಗೆ ಬಿಳಿ, ತಿಳಿನೀಲಿ, ತಿಳಿ ಹಸುರು ಬಣ್ಣದ ಕಾಗದವನ್ನು ಬಳಸಿಕೊಳ್ಳಲಾಗಿದೆ. ಅಕರ್ಷಕವಾದ ಕೆಂಪು ಮತ್ತು ಸ್ವರ್ಣ ವರ್ಣದ ಹೊರ ಕವಚವನ್ನು ಹೊದೆ ಸಲಾಗಿದೆ. ಬರೆದು ಮುಗಿಸಲು ಅವರು ಒಟ್ಟು 303 ದಿನಗಳನ್ನು ತೆಗೆದುಕೊಂಡಿದ್ದಾರೆ. ಒಂದು ಪುಟ ಬರೆಯಲು 4 ಗಂಟೆ ಬೇಕಿತ್ತು. ಕೆಲವು ದಿನಗಳಲ್ಲಿ 8 ಗಂಟೆ ಬಳಸಿ 2 ಪುಟಗಳನ್ನು ಬರೆದಿದ್ದಾರೆ. ಒಟ್ಟಾರೆ ಬರೆದು ಮುಗಿಸಲು 2,416 ಗಂಟೆ ಬಳಕೆಯಾಗಿದೆ ಎಂದು ಸಜ್‌ಲ ತಿಳಿಸಿದ್ದಾರೆ.

  • “ಬ್ರಿಟಿಷರ ಆಮಿಷಕ್ಕೆ ಒಪ್ಪಿದರೆ ಮಕ್ಕಳ ಕತ್ತು ಹಿಸುಕಿ ಕೊಲ್ಲುವೆ” 
ಪುತ್ರರನ್ನು ದೇಶಕ್ಕಾಗಿ ಸಮರ್ಪಿಸಿದ ಬೀಅಮ್ಮರನ್ನು ನಾವು ಅರಿಯಲೇಬೇಕು

    “ಬ್ರಿಟಿಷರ ಆಮಿಷಕ್ಕೆ ಒಪ್ಪಿದರೆ ಮಕ್ಕಳ ಕತ್ತು ಹಿಸುಕಿ ಕೊಲ್ಲುವೆ” ಪುತ್ರರನ್ನು ದೇಶಕ್ಕಾಗಿ ಸಮರ್ಪಿಸಿದ ಬೀಅಮ್ಮರನ್ನು ನಾವು ಅರಿಯಲೇಬೇಕು

    ಬೀ ಅಮ್ಮ ಆಬಾದಿ ಬೇಗಮ್ (1852-1924)
    ಮೌಲಾನಾ ಮುಹಮ್ಮದ್ ಅಲಿ ಮತ್ತು ಶೌಕತ್ ಅಲಿಯವರ ತಾಯಿ .ಬೀಅಮ್ಮರ ನೈಜ ಹೆಸರು ಆಬಾದಿ ಬೇಗಮ್ ಆಗಿತ್ತು. ಅವರ ಮೊಮ್ಮಕ್ಕಳೂ ಸೇರಿದಂತೆ ಎಲ್ಲರೂ ಅವರನ್ನು ಬೀಅಮ್ಮ ಎಂದೇ ಕರೆಯುತ್ತಿದ್ದರು.

    ಬೀಅಮ್ಮರ ತಂದೆಯೂ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಬೀಅಮ್ಮರವರ 5ನೆಯ ವಯಸ್ಸಿನಲ್ಲಿ ಅವರ ತಂದೆ ನಿಧನ ಹೊಂದಿದರು. 28ನೆಯ ವಯಸ್ಸಿನಲ್ಲಿ, ಅವರ ಪತಿ ಅಬ್ದುಲ್ ಅಲಿ ಖಾನ್ ಪ್ಲೇಗ್ ರೋಗದಿಂದ ನಿಧನ ಹೊಂದಿದರು. ಚಿಕ್ಕ ವಯಸ್ಸಿ ನಲ್ಲಿಯೇ ಆಬಾದಿ ಬೇಗಮ್ ವಿಧವೆಯಾದರು. ಆರು ಗಂಡು ಮತ್ತು ಒಂದು ಹೆಣ್ಣು ಹೀಗೆ ಏಳು ಮಕ್ಕಳು ಇದ್ದರು.

    ಅವರು ಅಷ್ಟು ಸ್ಥಿತಿವಂತರೇನೂ ಆಗಿರಲಿಲ್ಲ. ಆದರೆ ಬೀ ಅಮ್ಮ ಧೃತಿಗೆಡಲಿಲ್ಲ. ಈ ಸಂಕಷ್ಟವನ್ನು ಧೈರ್ಯದಿಂದ ಎದುರಿಸಿದರು. ತಮ್ಮ ಸರ್ವಸ್ವವನ್ನೂ ಮಕ್ಕಳ ಪಾಲನೆ, ಪೋಷಣೆಗಾಗಿ ಧಾರೆ ಎರೆದರು. ಇದ್ದ ದುಡ್ಡಿನಲ್ಲಿಯೇ ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ನೀಡಿದರು. ಉನ್ನತ ಶಿಕ್ಷಣಕ್ಕಾಗಿ ಮುಹಮ್ಮದಲಿ ಮತ್ತು ಶೌಕತ್ ಅಲಿಯವರನ್ನು ಅಲೀಗಢದ ಎಮ್.ವಿ.ಓ. ಕಾಲೇಜಿಗೆ ಕಳುಹಿಸ ಬಯಸಿದಾಗ, ಸ್ವಲ್ಪ ಆರ್ಥಿಕ ಸಹಾಯ ನೀಡುತ್ತಿದ್ದ ಮಕ್ಕಳ ಚಿಕ್ಕಪ್ಪ, ಮಕ್ಕಳಿಗೆ “ಇಂಗ್ಲಿಷ್ ಶಿಕ್ಷಣ”ಕ್ಕಾಗಿ ಧನ ಸಹಾಯ ನೀಡಲು ನಿರಾಕರಿಸಿದರು. ಆದರೆ ಬೀ ಅಮ್ಮ ಇದಕ್ಕೆಲ್ಲಾ ಸೊಪ್ಪು ಹಾಕುವವರಾಗಿರಲಿಲ್ಲ. ತಮ್ಮ ಒಡವೆಗಳನ್ನು ಮಾರಿ ಮಕ್ಕಳ ಶಿಕ್ಷಣವನ್ನು ಮುಂದುವರಿಸಿದರು.

    1898ರಲ್ಲಿ ಮುಹಮ್ಮದಲಿ ಹೆಚ್ಚಿನ ವ್ಯಾಸಂಗಕ್ಕಾಗಿ ಇಂಗ್ಲೆಂಡ್‌ಗೆ ತೆರಳಿದರು. ಮುಹಮ್ಮದ್ ಅಲಿ ತಮ್ಮ ತಾಯಿಯವರ ಬಗ್ಗೆ ಈ ರೀತಿ ಹೇಳುತ್ತಿದ್ದರು: “ನನ್ನ ತಾಯಿ ವಿದ್ಯಾಭ್ಯಾಸ ಪಡೆದವರಾಗಿರಲಿಲ್ಲ. ಆದರೆ ಅವರಷ್ಟು ವ್ಯವಹಾರ ಚತುರೆಯನ್ನು ನಾನೆಲ್ಲೂ ಕಂಡಿಲ್ಲ.”

    ಒಂದು ಘಟನೆ ಇಲ್ಲಿ ಸ್ಮರಣೀಯವಾಗಿದೆ. ಗುಪ್ತಚರ ವಿಭಾಗದ ನಿರ್ದೇಶಕರಾಗಿದ್ದ ಸರ್ ಚಾರ್ಲ್ಸ್ ಕ್ಲೈವ್ ಲೆಂಡ್ (Sir Charles Clive Lend) ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಅಬ್ದುಲ್ ಮಜೀದ್‌ರ ಮುಖಾಂತರ ಅಲಿ ಸಹೋದರರಿಗೆ ಒಂದು ಪತ್ರವನ್ನು ರವಾನಿಸಿದರು. ಈ ಪತ್ರದಲ್ಲಿ ಬ್ರಿಟಿಷ್ ಸರಕಾರದ ಶರತ್ತುಗಳನ್ನು ಒಪ್ಪಿಕೊಂಡರೆ ಎರಡೂವರೆ ವರ್ಷಗಳ ಕಠಿಣ ಸೆರೆಮನೆಯ ಶಿಕ್ಷೆಯನ್ನು ಕೊನೆಗೊಳಿಸುವ ಪ್ರಸ್ತಾವನೆ ಇತ್ತು. ಮುಹಮ್ಮದಲಿ ಪತ್ರವನ್ನು ಓದಿದ ನಂತರ, ಕಾಗದದ ಮೇಲೆ ಏನೋ ಬರೆಯಲಾರಂಭಿಸಿದರು. ಅಲ್ಲಿಯೇ ಅಡ್ಡಾಡುತ್ತಿದ್ದ ಬೀಅಮ್ಮ ಡಿ.ಎಸ್.ಪಿ.ಯವರನ್ನು ಉದ್ದೇಶಿಸಿ ಹೇಳಿದರು: “ಸರಕಾರ ನನ್ನ ಮಕ್ಕಳನ್ನು ಬಿಡುಗಡೆಗೊಳಿಸಿ ಅವರಿಗೆ ನ್ಯಾಯ ಒದಗಿಸಲು ಮುಂದೆ ಬಂದಿರುವುದು ಸಂತೋಷದ ವಿಷಯ. ಕಳೆದ 30 ತಿಂಗಳಿನಿಂದ ಜೈಲಿನಲ್ಲಿ ಅವರು ಎಷ್ಟು ಸಂಕಷ್ಟಗಳಿಗೆ ಈಡಾಗಿದ್ದಾರೆ ಮತ್ತು ಎಷ್ಟು ಸಹನೆಯಿಂದ ಅವುಗಳನ್ನು ಎದುರಿಸಿದ್ದಾರೆಂಬುದನ್ನು ನಾನು ಚೆನ್ನಾಗಿ ಬಲ್ಲೆ. ಸರಕಾರ ಅವರೊಂದಿಗೆ ಕರಾರು ಮಾಡಿಕೊಳ್ಳ ಬಯಸಿದೆಯೆಂದು ನನ್ನ ಗಮನಕ್ಕೆ ಬಂದಿದೆ. ಮುಹಮ್ಮದಲಿ ಮತ್ತು ಶೌಕತ್‌ಅಲಿ ಇಸ್ಲಾಮಿನ ಸಿಪಾಯಿಗಳು, ಖಂಡಿತವಾಗಿ ಇಸ್ಲಾಮಿನ ಮತ್ತು ದೇಶದ ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕಾರ್ಯವನ್ನು ಅವರು ಮಾಡಲಾರರು ಎಂಬ ವಿಶ್ವಾಸ ನನಗಿದೆ. ಒಂದು ವೇಳೆ ಜೈಲಿನಿಂದ ಬಿಡುಗಡೆ ಹೊಂದಲಿಕ್ಕಾಗಿ ಇಂತಹ ಕಾರ್ಯ ಮಾಡಲು ಅವರು ಮುಂದಾಗಿರುವರು ಎಂದು ನನಗೆ ತಿಳಿದು ಬಂದಲ್ಲಿ, ಅವರ ಕತ್ತು ಹಿಸುಕಿ ಕೊಲ್ಲುವಷ್ಟು ಶಕ್ತಿ ನನ್ನ ರಟ್ಟೆಗಳಲ್ಲಿ ಇನ್ನೂ ಇದೆ.”

    ಸ್ವಾತಂತ್ರ್ಯವೆಂಬುದು ಅಮೂಲ್ಯ ಸಂಪತ್ತು. ಅದನ್ನು ಪಡೆಯಲು ಮನುಷ್ಯನು ಯಾವುದೇ ಮಟ್ಟಕ್ಕೆ ಇಳಿಯಬಲ್ಲನು. ಅತ್ಯಂತ ಧೈರ್ಯ ಶಾಲಿಗಳ ಕಾಲುಗಳು ಕೆಲವೊಮ್ಮೆ ನಡುಗಿ ಹೋಗುತ್ತವೆ. ಬ್ರಿಟಿಷ್ ಸರಕಾರದ ಉನ್ನತ ಅಧಿಕಾರಿಯ ಎದುರು ಮೇಲಿನ ಮಾತುಗಳನ್ನು ಹೇಳಿದ ಬೀಅಮ್ಮನವರ ನಿಸ್ವಾರ್ಥ ದೇಶಪ್ರೇಮ ಎಂತಹವರನ್ನೂ ನಾಚಿಸುವಂತಿದೆ!

    ಸ್ವಾತಂತ್ರ್ಯ ಸಂಗ್ರಾಮದ ಕಾರ್ಯಕರ್ತರ ಬಗ್ಗೆ ಅವರಿಗೆ ಅಪಾರ ಕಾಳಜಿ ಇತ್ತು. ಈ ಬಗ್ಗೆ ಅವರು ಬರೆದಿದ್ದ ಪತ್ರ, ಅವರ ಮಾನವ ಪ್ರೇಮವನ್ನು ಎತ್ತಿ ತೋರಿಸುತ್ತದೆ. “ನನ್ನ ಮನಸ್ಸು ಜೈಲಿನಲ್ಲಿ ಕೊಳೆಯುತ್ತಿರುವ ಸಹಸ್ರಾರು ನಿರಪರಾಧಿ ಯುವಕರ ಬಗ್ಗೆ ರೋಧಿಸುತ್ತದೆ. ಜೀವನದ ಅವಶ್ಯಕತೆಳಿಗಾಗಿ ಸಂಪಾದನೆ ಮಾಡುವ ಸ್ವಾತಂತ್ರ್ಯವನ್ನು ಅವರು ಕಳೆದುಕೊಂಡಿದ್ದಾರೆ. ಹೋಂ ರೂಲ್ ಲೀಗ್ ಸಂಘಟನೆಯು ಪ್ರಮುಖ ಕೈದಿಗಳಲ್ಲದೇ, ಇತರ ಸುಮಾನ್ಯ ಕೈದಿಗಳ ಬಗ್ಗೆಯೂ ಮಾಹಿತಿಯನ್ನು ಸಂಗ್ರಹಿಸಿದೆಯೇ? ಅವರು ಮತ್ತು ಅವರ ಸಂಬಂಧಿಕರು ಹಸಿವೆಯಿಂದ ಏಕೆ ನರಳಬೇಕು? ಅವರ ಸಹಾಯಾರ್ಥ ಮನವಿ ಮಾಡಿದಲ್ಲಿ, ಭಾರತದ ಪ್ರತಿಯೊಂದು ಮನೆಯಿಂದಲೂ ಏನಾದರೂ ಸಹಾಯ, ಖಂಡಿತ ಒದಗಿ ಬರುತ್ತದೆಂಬ ವಿಶ್ವಾಸ ನನಗಿದೆ.”

    1917 ಡಿಸೆಂಬರ್ 18ರಂದು ಮಾಂಟಿಗೋರನ್ನು ಭೇಟಿ ಮಾಡಲು ನಿಯುಕ್ತಗೊಂಡಿದ್ದ ಭಾರತೀಯ ಮಹಿಳಾ ತಂಡದ ಸದಸ್ಯರಾಗಿದ್ದರು. 1917 ಡಿಸೆಂಬರ್ 12ರಂದು ಕಲ್ಕತ್ತಾದಲ್ಲಿ ನಡೆದ ಕಾಂಗ್ರೆಸ್‌ ಎರಡನೆಯ ಸಮ್ಮೇಳನದಲ್ಲಿ ಬೀಅಮ್ಮ ಉಪಸ್ಥಿತರಿದ್ದರು. ಬಿಳಿಯ ಬುರ್ಖಾ ಧರಿಸಿ, ಕೋಲು ಹಿಡಿದು ಸಭಾಂಗಣಕ್ಕೆ ಬಂದಾಗ, ಅವರ ಸಹಾಯಕ್ಕೆ ಶ್ರೀಮತಿ ಅನ್ನಿ ಬೆಸೆಂಟ್ ಧಾವಿಸಿದರು.

    ಅನ್ನಿ ಬೆಸೆಂಟ್ ಭಾಷಣ ಮಾಡುತ್ತಾ ಹೇಳಿದರು: ” ಮುಹಮ್ಮದಲಿ ಮತ್ತು ಶೌಕತ್ ಅಲಿಯವರ ಮಾತೆ ನಮ್ಮೊಂದಿಗೆ ಇದ್ದಾರೆ. ಅವರು ನೈಜ ಮುಸ್ಲಿಮರೂ, ನಿಷ್ಟಾವಂತ ದೇಶಪ್ರೇಮಿಯೂ ಆಗಿರುವರು, ಅವರಲ್ಲಿ ಮಾತೃ ವಾತ್ಸಲ್ಯವಿದ್ದರೂ, ಅವರ ಹೃದಯ ಸಿಂಹದ ಹೃದಯ. ಅವರಿಗೆ ದುಃಖ ಮತ್ತು ಸಂಕಟ ಬಾಧಿಸುವುದಿಲ್ಲ, ಅವರ ಮಕ್ಕಳು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವುದು ಅವರಿಗೆ ಹರ್ಷವನ್ನೊದಗಿಸಿದೆ…”

    1921 ಡಿಸೆಂಬರ್ 30ರಂದು ಅಹ್ಮದಾಬಾದ್‌ನಲ್ಲಿ ನಡೆದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷತೆಯನ್ನು ಬೀಅಮ್ಮ ವಹಿಸಿದ್ದರು. ಈ ಸಮ್ಮೇಳನದಲ್ಲಿ ಶ್ರೀಮತಿ ಕಸ್ತೂರ್‌ಬಾ ಗಾಂಧಿ, ಸರೋಜಿನಿ ನಾಯ್ಡು, ಬೇಗಮ್ ಹಝ್ರತ್ ಮೋಹಾನಿ, ಅನುಸೂಯ ಬಾಯಿ, ಬೇಗಮ್ ಸೈಫುದ್ದೀನ್ ಕೀಚಲು, ಶ್ರೀಮತಿ ಸರಳಾದೇವಿ ಮೊದಲಾದವರು ಇದ್ದರು.

    ಖಿಲಾಫತ್ ಚಳವಳಿಯಲ್ಲಿ ಬೀಅಮ್ಮ ವಹಿಸಿದ ಪಾತ್ರದ ಕುರಿತು ಗಾಂಧೀಜಿಯವರು ಯಂಗ್ ಇಂಡಿಯಾ ಪತ್ರಿಕೆಯಲ್ಲಿ ಈ ರೀತಿ ಬರೆದಿದ್ದರು: “… ಅವರು ಇಳಿ ವಯಸ್ಸಿನಲ್ಲಿಯೂ ಯುವಕರಂತೆ ಶ್ರಮವಹಿಸುತ್ತಿದ್ದರು. ಖಿಲಾಫತ್ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ದೇಶದಾದ್ಯಂತ ಸಂಚರಿಸಿದರು. ಬೀ ಅಮ್ಮ ಇಸ್ಲಾಮಿನ ಕಟ್ಟಾ ಅನುಯಾಯಿಗಳಾಗಿದ್ದರು. ಹಿಂದೂ-ಮುಸ್ಲಿಮ್ ಐಕ್ಯತೆ ಅವರಿಲ್ಲದೇ ಸಾಧ್ಯವಿರಲಿಲ್ಲ. ಇದಕ್ಕಾಗಿ ಅವರು ಬಹಳಷ್ಟು ಪರಿಶ್ರಮ ಪಟ್ಟಿದ್ದಾರೆ…”
    1921ರಲ್ಲಿ ಅಲಿ ಸಹೋದರರ ವಿಚಾರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಒಬ್ಬರು ‘ಸದಾಯ ಖಾತೂನ್'(ಮಹಿಳೆಯ ಧ್ವನಿ) ಎಂಬ ಶೀರ್ಷಿಕೆಯಡಿಯಲ್ಲಿ ಕವನವನ್ನು ರಚಿಸಿದರು. ಕೆಲವೇ ದಿನಗಳಲ್ಲಿ ಈ ಕವನ ಎಲ್ಲಾ ಜನರಿಗೂ ಸುಪರಿಚಿತವಾಯಿತು. ಇಂದಿಗೂ ಈ ಕವನ ಉರ್ದುವಲಯದಲ್ಲಿ ಪ್ರಸಿದ್ಧವಾಗಿದೆ. ಕವನ ಹೀಗಿದೆ:
    ಬೋಲಿ ಅಮ್ಮ ಮುಹಮ್ಮದಲಿ ಕೀ
    ಸಾಥ್ ತೇರೇ ಹೈ ಶೌಕತ್ ಅಲಿ ಭೀ
    ಜಾನ್ ಬೇಟಾ ಖಿಲಾಫತ್ ಪೆ ದೇ ದೋ
    ಜಾನ್ ಬೇಟಾ ಖಿಲಾಫತ್ ಪೆ ದೇದೋ.
    ಸಬರ್‌ಸೆ ಜೈಲ್ ಖಾನೆಮೆ ರಹನಾ
    ಕುಚ್ ಯೂ ಅಪ್ನಿ ಅಮ್ಮಾ ಕಾ ಕಹನಾ
    ಜೋ ಮುಸೀಬತ್ ಪಡೇ ಉಸ್‌ಕೋ ಸಹನಾ
    ಜಾನ್ ಬೇಟಾ ಖಿಲಾಫತ್ ದೇದೋ
    ಫಾಂಸಿ ಆಯೆ ಅಗರ್ ತುಮ್ ಕೋ ಜಾನಿ
    ಕಲಿಮಾ ಪಡ್‌ಪಡ್‌ಕೆ ಫಾಂಸಿ ಪೆ ಚಡ್ ನಾ
    ಮಾಂಗನಾ ಮತ್ ಹುಕೂಮತ್ ಸೆ ಪಾನಿ
    ಜಾನ್ ಬೇಟಾ ಖಿಲಾಫತ್ ಪೆ ದೇ ದೋ

    ಆಬಾದಿ ಬೇಗಮ್‌ರವರು ನವೆಂಬರ್ 1924ರಲ್ಲಿ ನಿಧನ ಹೊಂದಿದರು. ಅವರ ನಿಧನದ ಕುರಿತು ಗಾಂಧೀಜಿ ‘ಯಂಗ್ ಇಂಡಿಯಾ’ದಲ್ಲಿ ಈ ರೀತಿ ಬರೆದರು: “ಬೀ ಅಮ್ಮ ಇನ್ನಿಲ್ಲವೆಂದು ನಂಬುವುದು ಕಷ್ಟಕರವಾಗಿದೆ. ಅವರ ವ್ಯಕ್ತಿತ್ವದಿಂದ ಮತ್ತು ಸಾರ್ವಜನಿಕ ಸಭೆಗಳಲ್ಲಿ ಅವರ ಪ್ರಭಾವ ಪೂರ್ಣ ಭಾಷಣಗಳಿಂದ ಪ್ರಭಾವಿತರಾಗದೇ ಉಳಿದವರಾರೂ ಇಲ್ಲ. ಅವರ ನಿಧನದ ವೇಳೆ ಅವರ ಸನಿಹವಿದ್ದುದು ನನ್ನ ಅದೃಷ್ಟವಾಗಿತ್ತು…”
    ಸ್ವಾಮಿ ಶ್ರದ್ಧಾನಂದ ಸರಸ್ವತಿಯವರು ದೆಹಲಿಯ ಪಟೌಡಿ ಹೌಸ್‌ನಲ್ಲಿ ಶ್ರದ್ಧಾಂಜಲಿ ಸಭೆಯೊಂದರಲ್ಲಿ ಪಾಲ್ಗೊಳ್ಳುತ್ತಾ ಈ ರೀತಿ ಹೇಳಿದ್ದರು.”… ಹಿಂದೂ-ಮುಸ್ಲಿಮ್ ಐಕ್ಯತೆಗಾಗಿ ಯಾರಲ್ಲಿಯಾದರೂ ಉತ್ಕಟ ಅಭಿಲಾಷೆ ಇದ್ದರೆ, ಅದು ಬೀ ಅಮ್ಮರವರಲ್ಲಿತ್ತು. ಸ್ವಾತಂತ್ರ್ಯಕ್ಕಾಗಿ ಅವರು ಮೆರೆದ ಸಾಹಸ ಮತ್ತು ಧೈರ್ಯಗಳನ್ನು ರಾಜಕೀಯ ಮುಖಂಡರೂ ಸಹ ತೋರಲು ಸಾಧ್ಯವಿರಲಿಲ್ಲ.”

    ಸ್ವಾತಂತ್ರ ಸಂಗ್ರಾಮದ ಚಳವಳಿಯಲ್ಲಿದ್ದ ಇನ್ನೊಂದು ಪ್ರಮುಖ ಹೆಸರು ‘ಅಮ್‌ಜದೀ ಬೇಗಮ್’- ಇವರು ಬೀಅಮ್ಮನ ಸೊಸೆ, ಮುಹಮ್ಮದಾಲೀ ಅವರ ಪತ್ನಿ.

    ಇನ್ನೊ ಬ್ಬರು, ‘ಬೇಗಮ್ ಹರ್ಝತ್ ಮಹಲ್’. ಇವರನ್ನು ಬ್ರಿಟಿಷರು ಝಾನ್ಸಿ ರಾಣಿಗೆ ಹೋಲಿಸಿದ್ದರು. ಅಷ್ಟು ಧೈರ್ಯಶಾಲಿ ಮಹಿಳೆಯಾಗಿದ್ದರು ಮಹಲ್ ಅವರು. ಅಸ್ಟರಿ ಬೇಗಮ್,

    ಮಾಜಿದಾ ಬಾನು, ಹಾಜಿರಾ ಬೇಗಮ್, ಹಮೀದಾ ತಯ್ಯಬ್‌ಜೀ, ಫಾತಿಮಾ, ಸಫೀಯಾ ಖಾನ್, ಮರ್ಯಮ್ ಸಾದತ್, ಬಾನು ಕಿಚಲು, ಖುರ್ಶಿದಾ ಬೇಗಮ್, ಸಯೀದಾ ಬೇಗಮ್, ರೆಹನಾ ತಯ್ಯಬ್‌ಜೀ, ಮೆಹ‌ರ್ ತಾಜ್… ಮುಂತಾದ ಮುಸ್ಲಿಮ್ ಮಹಿಳೆ ಯರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಸೇವೆ ಸಲ್ಲಿಸಿದವರು ಮತ್ತು ಹುತಾತ್ಮರಾದವರೂ ಇದ್ದಾರೆ. ಬಿಳಿಯರಿಂದ ಈ ದೇಶ ಸ್ವತಂತ್ರ ಪಡೆಯುವಲ್ಲಿ ಪುರುಷರೂ ಬಹಳ ಸಂಖ್ಯೆಯಲ್ಲಿ ತ್ಯಾಗ ಮಾಡಿದ್ದಾರೆ.

    ಇವರ ಸ್ಟೋರಿಯು ಶಾಂತಿ ಪ್ರಕಾಶನ ಪ್ರಕಟಿಸಿದ ‘ಭಾರತದ ಸ್ವಾತಂತ್ರ್ಯ ಚಳುವಳಿ ಮತ್ತು ಮುಸ್ಲಿಮರು” ಎಂಬ ಪುಸ್ತಕದಲ್ಲಿ ವಿವರಿಸಲಾಗಿದೆ.

    ಲೇಖಕ: ಆಸಿಫ್ ಅಲಿ

    ಕೃತಿ: ಭಾರತದ ಸ್ವಾತಂತ್ರ್ಯ ಚಳುವಳಿ ಮತ್ತು ಮುಸ್ಲಿಮರು