Tag: #anupama magazine

  • ನಾಲ್ಕು ವರ್ಷದ ಬಾಲಕಿಯನ್ನು ಹಿಂಸಿಸಿ ಕೊಂದ ಚಿಕ್ಕಪ್ಪ-ಚಿಕ್ಕಮ್ಮ.! 
ವರ್ಷಗಳ ಬಳಿಕ ತಿಳಿದು ಬಂದದ್ದು ಹೇಗೆ..?

    ನಾಲ್ಕು ವರ್ಷದ ಬಾಲಕಿಯನ್ನು ಹಿಂಸಿಸಿ ಕೊಂದ ಚಿಕ್ಕಪ್ಪ-ಚಿಕ್ಕಮ್ಮ.! ವರ್ಷಗಳ ಬಳಿಕ ತಿಳಿದು ಬಂದದ್ದು ಹೇಗೆ..?

    ಕಾಣೆಯಾಗಿದ್ದ ನಾಲ್ಕು ವರ್ಷದ ಬಾಲಕಿಯನ್ನು ಸಂಬಂಧಿಗಳೇ ಕೊಲೆ ಮಾಡಿ ಮೃತದೇಹವನ್ನು ಹಾಸಿಗೆಯಲ್ಲಿ ಸುತ್ತಿ ನಿರ್ಜನ ಪ್ರದೇಶದಲ್ಲಿ ಎಸೆದ ಪ್ರಕರಣವನ್ನು ಮಹಾರಾಷ್ಟ್ರದ ರಾಯಗಢ ಪೊಲೀಸರು ಒಂದು ವರ್ಷಗಳ ಬಳಿಕ ಭೇದಿಸಿದ್ದಾರೆ.

    ಸದ್ಯ ಮೃತ ಬಾಲಕಿಯ ತಲೆಬುರುಡೆಯನ್ನು ಪತ್ತೆ ಮಾಡಿರುವ ಪೊಲೀಸರು ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಮೃತ ಬಾಲಕಿಯ ತಂದೆ ರಾಹುಲ್‌ ಘಡ್ಜೆ ಜೈಲು ಸೇರಿದ್ದರು. ಆ ಬಳಿಕ ಬಾಲಕಿಯನ್ನು ಪೋಷಣೆ ಮಾಡಲು ಯಾರೂ ಇಲ್ಲದ ಪರಿಸ್ಥಿತಿಯಲ್ಲಿ, ಚಿಂಚವಾಲಿ ಗ್ರಾಮದಲ್ಲಿದ್ದ ಬಾಲಕಿಯ ಚಿಕ್ಕಮ್ಮ ಅಪರ್ಣಾ ಅನಿಲ್‌ ಮಕ್ವಾನಾ ಅಲಿಯಾಸ್‌ ಅಪರ್ಣಾ ಪ್ರಥಮೇಶ್ ಕಂಬ್ರಿ ಮತ್ತು ಆಕೆಯ ಪತಿ ಪ್ರಥಮೇಶ್ ಪ್ರವೀಣ್ ಕಂಬ್ರಿ ನೋಡಿಕೊಳ್ಳುತ್ತಿದ್ದರು.

    ಬಾಲಕಿಯನ್ನು ಚೆನ್ನಾಗಿಯೇ ನೋಡಿಕೊಳ್ಳುತ್ತಿದ್ದೆವು ಎಂದು ದಂಪತಿ ಹೇಳಿದ್ದರು. ಆದರೆ ವಾಸ್ತವವಾಗಿ ಬಾಲಕಿಗೆ ಹಿಂಸೆ ಮಾಡುತ್ತಿದ್ದರು, ಆಕೆ ಮಾಡಿದ ಸಣ್ಣ ತಪ್ಪಿಗಾಗಿ ಚಿಕ್ಕಪ್ಪ ಥಳಿಸಿದ್ದ. ಇದರಿಂದಾಗಿ ಬಾಲಕಿ ಮೃತಪಟ್ಟಿದ್ದಳು.

    ಕಳೆದ ವರ್ಷ ಬಾಲಕಿಯ ಸಂಬಂಧಿ ಜ್ಯೋತಿ ಎನ್ನುವವರು ಬಾಲಕಿಯನ್ನು ಅಪರ್ಣಾ ದಂಪತಿ ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದರು ಎಂದು ಪೊಲೀಸರು ವಿವರಿಸಿದ್ದಾರೆ. 2024ರ ಅಕ್ಟೋಬರ್‌ 06ರಂದು ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದರು. ಅಪರ್ಣಾ ದಂಪತಿಯ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು, ಕಳೆದ ಸೋಮವಾರ ಚಿಂಚವಾಲಿಯಲ್ಲಿರುವ ಅವರ ಮನೆಗೆ ಭೇಟಿ ನೀಡಿ ಅವರನ್ನು ವಶಕ್ಕೆ ಪಡೆದಿದ್ದರು, ಬಳಿಕ ತೀವ್ರವಾದ ವಿಚಾರಣೆ ನಡೆಸಿದಾಗ ದಂಪತಿ ಬಾಲಕಿಯನ್ನು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.

    ಚಿಕ್ಕಪ್ಪ ಹೊಡೆದ ಪೆಟ್ಟಿನಿಂದಾಗಿ ಬಾಲಕಿ ಮೃತಪಟ್ಟಿದ್ದು, ಮೃತದೇಹವನ್ನು ಹಾಸಿಗೆಯಲ್ಲಿ ಸುತ್ತಿ ನಿರ್ಜನ ಪ್ರದೇಶದಲ್ಲಿ ಎಸೆದಿರುವುದಾಗಿ ಹೇಳಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಅತುಲ್‌ ಝೆಂಡೆ ತಿಳಿಸಿದ್ದಾರೆ. ಸದ್ಯ ಪತ್ತೆ ಮಾಡಿದ ತಲಬುರುಡೆಯನ್ನು ವಿಧಿವಿಜ್ಞಾನ ಕೇಂದ್ರಕ್ಕೆ ರವಾನಿಸಲಾಗಿದ್ದು, ದಂಪತಿಯನ್ನು ನ್ಯಾಯಾಲಯದ ಆದೇಶದಂತೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

  • “ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” 
‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?

    “ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” ‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?

    ‘ಮುಸ್ಲಿಂ ಹೆಣ್ಣು ಮಕ್ಕಳ ವಿವಾಹದ ಬಗ್ಗೆ ಅವರ ಅಪ್ಪ ಅಮ್ಮ, ಜಮಾತ್‌ನವರು ಚಿಂತಿಸುತ್ತಾರೆ. ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಈ ಚಿಂತೆ ಬೇಡ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ ತಿರುಗೇಟು ನೀಡಿದೆ.

    ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಅಶ್ರಫ್ ಕಲ್ಲೇಗ, ಮುಸ್ಲಿಂ ಯುವತಿಯನ್ನು ವಿವಾಹವಾದ ಹಿಂದೂ ಯುವಕನಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದು. ಮುಸ್ಲಿಂ ಸಮುದಾಯದ ಖಬರ್‌ಸ್ಥಾನಗಳ ಬಗ್ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಹೇಳಿಕೆ ನೀಡಿರುವುದು ಖಂಡನೀಯ ಎಂದು ಹೇಳಿದರು.

    ‘ಧರ್ಮಸ್ಥಳ ಪ್ರಕರಣದಲ್ಲಿ ದೂರು ನೀಡಿರುವ ಸಾಕ್ಷಿ ದೂರುದಾರ ಮುಸ್ಲಿಂ ಸಮಾಜಕ್ಕೆ ಸೇರಿದವನು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಸುಳ್ಳು ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಪಿಎಫ್ಐ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಷೇಧಿತ ಸಂಘಟನೆ ಪಿಎಫ್ಐ ಕೈವಾಡದ ಬಗ್ಗೆ ಮಾಹಿತಿ ಇದ್ದರೆ ಅವರದೇ ಕೇಂದ್ರ ಸರ್ಕಾರದ ಮೂಲಕ ತನಿಖೆ ಕೈಗೊಳ್ಳಲಿ’ ಎಂದು ಸವಾಲು ಹಾಕಿದರು.

    ‘ಧರ್ಮಸ್ಥಳ ವಿಚಾರವಾಗಿ ಮುಸ್ಲಿಂ ಸಮುದಾಯ ಯಾವೊಬ್ಬ ಪ್ರಮುಖರು ಮಾತನಾಡಿಲ್ಲ. ಮುಸ್ಲಿಂ ಸಮುದಾಯದ ಬಗ್ಗೆ ಹೆಗ್ಗಡೆಯವರಿಗೆ ಪ್ರೀತಿ ಇದೆ. ಅಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ. ಆದರೆ ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕು ಎಂದು ಈ ಹಿಂದೆ ಯತ್ನಿಸಿ ಅದಕ್ಕೆ ಪರ್ಯಾಯವಾಗಿ ಕನ್ಯಾಡಿ ಕ್ಷೇತ್ರದ ಆರಂಭಕ್ಕೆ ಕಾರಣರಾದ ಜನಾರ್ದನ ಪೂಜಾರಿ ಅವರಿಗೆ ಈಗ ಧರ್ಮಸ್ಥಳದ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ. ಅದಕ್ಕಾಗಿ ಅವರು ಈ ರೀತಿಯ ಹೇಳಿಕೆ ನೀಡಲು ಆರಂಭಿಸಿದ್ದಾರೆ’ ಎಂದು ಅವರು ದೂರಿದರು.

    ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಕೋಶಾಧಿಕಾರಿ ಅಶ್ರಫ್ ಬಾವು ಪಡೀಲ್, ಪ್ರಧಾನ ಕಾರ್ಯದರ್ಶಿ ನೌಷದ್ ಬೊಳುವಾರು, ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಮುಖಂಡ ಹಂಝ ಕಬಕ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

  • ಲಭ್ಯವಾಗದ ಕಲ್ಲು-ಮರಳು, ದುಡಿಮೆಯಿಲ್ಲದ ಮೇಸ್ತ್ರಿಗಳು: 
ಹೀಗಾಗಲು ಸರಕಾರದ ನಿರ್ಬಂಧವೇನು ಗೊತ್ತೇ?

    ಲಭ್ಯವಾಗದ ಕಲ್ಲು-ಮರಳು, ದುಡಿಮೆಯಿಲ್ಲದ ಮೇಸ್ತ್ರಿಗಳು: ಹೀಗಾಗಲು ಸರಕಾರದ ನಿರ್ಬಂಧವೇನು ಗೊತ್ತೇ?

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿಗೆ ಆಮೆ ನಡಿಗೆ ಗತಿ
    ಹಲವು ವಲಯಗಳಿಗೆ ಪೆಟ್ಟು
    ಊರುಗಳಿಗೆ ಮರಳಿರುವ ಕೂಲಿ ಕೆಲಸಗಾರರು

    ಕೆಂಪು ಕಲ್ಲು ಸಿಗದ ಕಾರಣ ಅರ್ಧಕ್ಕೆ ನಿಂತಿರುವ ಕೆಲಸ

    ಮಂಗಳೂರು: ನಗರ ಹೊರವಲಯದಲ್ಲಿ ವ್ಯಕ್ತಿಯೊಬ್ಬರು ಮನೆ ನಿರ್ಮಿಸಲು ಅಡಿಗಲ್ಲು ಹಾಕಿದ್ದು ಕಳೆದ ವರ್ಷ ಮಾರ್ಚ್‌ನಲ್ಲಿ. ಹಳೆಯ ಮನೆಯ ಸಮೀಪದಲ್ಲೇ ಹೊಸ ಮನೆ ನಿರ್ಮಿಸುವ ಉದ್ದೇಶ. ತುರ್ತು ಏನೂ ಇರಲಿಲ್ಲ. ಆದ್ದರಿಂದ ಅಳೆದು– ತೂಗಿ ಒಂದೊಂದೇ ಹಂತದ ಕೆಲಸಗಳನ್ನು ಮುಗಿಸುತ್ತಿದ್ದರು. ಮುಂದಿನ ವರ್ಷ ಜನವರಿಯಲ್ಲಿ ಗೃಹಪ್ರವೇಶ ಮಾಡಲು ದಿನವೂ ನಿಗದಿ ಆಗಿದೆ. ಜೂನ್ ಅರಂಭದ ವರೆಗೂ ಎಲ್ಲವೂ ಅಂದುಕೊಂಡಂತೆಯೇ ನಡೆದಿತ್ತು. ನಂತರ ಯೋಜನೆ ತಲೆಕಳೆಗಾಯಿತು. ಕಲ್ಲು ಮತ್ತು ಮರಳು ಸಾಕಷ್ಟು ಪ್ರಮಾಣದಲ್ಲಿ ಸಿಗದೇ ಇದ್ದ ಕಾರಣ ಕೆಲಸ ನಿಧಾನವಾಯಿತು. ಅಲ್ಲಿಲ್ಲಿ ಬಿದ್ದದ್ದ 20ರಷ್ಟು ಕಲ್ಲುಗಳನ್ನು ತಂದು ಅರ್ಧ ದಿನದ ಕೆಲಸ ಮಾಡಿಸಲಾಯಿತು. ನಂತರ ಕಲ್ಲುಗಳಿಗೆ ಕಾದಿದ್ದೇ ಬಂತು.

    ಉಳ್ಳಾಲ ತಾಲ್ಲೂಕಿನ ಕುಂಪಲದಲ್ಲಿ ಮನೆಯೊಂದರ ನಿರ್ಮಾಣ ಅರಂಭವಾಗಿತ್ತು. ಎರಡು ತಿಂಗಳಿಂದ ಕೆಲಸ ಸಂಪೂರ್ಣ ನಿಂತಿದೆ. ಬಂಟ್ವಾಳ ತಾಲ್ಲೂಕಿನ ಫರಿಂಗಿಪೇಟೆಯಲ್ಲಿ ಮೂರು ತಿಂಗಳ ಹಿಂದೆ ಕಾಮಗಾರಿ ಆರಂಭವಾದ ಎರಡು ಮಹಡಿಯ ಮನೆಯ ಕೆಲಸ ಒಂದೂವರೆ ತಿಂಗಳಿಂದ ಮುಂದುವರಿಯುತ್ತಿಲ್ಲ. ಉಳ್ಳಾಲ ತಾಲ್ಲೂಕಿನ ನಾಟೆಕಲ್ಲಿನಲ್ಲಿ 5 ಸಾವಿರ ಚದರ ಅಡಿಯ ಕಟ್ಟದ ನಿರ್ಮಾಣ ಆರಂಭಿಸುವಾಗಲೇ ಉದ್ಘಾಟನೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ನೆಲಮಹಡಿಯ ಸೆಂಟ್ರಿಂಗ್ ಕೆಲಸ ಮುಗಿದ ನಂತರ ಕಲ್ಲು– ಮರಳು ಸಿಗದ್ದರಿಂದ ಅದರ ಮಾಲೀಕರ ಯೋಜನೆಗಳೆಲ್ಲ ಉಲ್ಟಾ– ಪಲ್ಟ ಆಗಿವೆ.

    ಇವು ಕೆಲವೇ ಉದಾಹರಣೆಗಳು. ಕಲ್ಲು ಮತ್ತು ಮರಳು ಸಿಗದ ಕಾರಣ ಜಿಲ್ಲೆಯಲ್ಲಿ ನಿರ್ಮಾಣ ಕಾಮಗಾರಿಗಳು ಬಹುತೇಕ ನಿಂತೇ ಹೋಗಿವೆ. ಇದರ ಪ್ರತ್ಯಕ್ಷ ಮತ್ತು ಪರೋಕ್ಷ ಪರಿಣಾಮ ಎದುರಿಸುತ್ತಿರುವವರ ಸಂಖ್ಯೆ ಸಾವಿರಾರು. ಗುತ್ತಿಗೆದಾರರಿಂದ ಹಿಡಿದು ಕೆಲಸಗಾರರವರೆಗೆ, ನಿರ್ಮಾಣ ಸಾಮಗ್ರಿ ಮಾರಾಟಗಾರರಿಂದ ಹಿಡಿದು ಸಣ್ಣ ಹೋಟೆಲ್, ಬೀಡಿ ಅಂಗಡಿಯವರ ವರೆಗೆ, ಸಾಮಗ್ರಿಗಳನ್ನು ಸಾಗಿಸುವ ಟೆಂಪೊದವರಿಂದ ಹಿಡಿದು ಫರ್ನಿಚರ್ ಅಂಗಡಿಯವರ ವರೆಗೆ ವ್ಯವಹಾರ, ಕೆಲಸ, ವ್ಯಾಪಾರ ಇಲ್ಲದೆ ಸಮಸ್ಯೆ ಅನುಭವಿಸುತ್ತಿರುವವರು ಇಂದು– ನಾಳೆ ಎಂದು ಕಾಯುತ್ತ ದಿನದೂಡುತ್ತಿದ್ದಾರೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದ ಬಂದಿದ್ದ ಕೂಲಿಕಾರ್ಮಿಕರ ಪೈಕಿ ಬಹುತೇಕರು ಮಂಗಳೂರು ಬಿಟ್ಟು ಹೋಗಿದ್ದಾರೆ ಎಂದು ಗುತ್ತಿಗೆದಾರರನೇಕರು ತಿಳಿಸಿದರು.

    ಅಕ್ರಮವಾಗಿ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ತಡೆಯಲು ಕೈಗೊಂಡಿರುವ ಕ್ರಮದ ಬಗ್ಗೆ ಎಲ್ಲರಿಗೂ ಸಹಮತವಿದೆ. ಆದರೆ ಅದರಿಂದಾಗುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿತ್ತು, ಬದಲಿ ವ್ಯವಸ್ಥೆ ಮಾಡಬೇಕಿತ್ತು ಎಂಬುದು ಬಹುತೇಕರ ಅನಿಸಿಕೆ. ಮರಳು ಗಣಿಗಾರಿಕೆಗೆ ನಿಷೇಧ ಇರುವುದು ನಿಜ. ಆದರೆ ಈಗಾಗಲೇ ಸಂಗ್ರಹಿಸಿರುವ ಮರಳನ್ನು ವ್ಯವಸ್ಥಿತವಾಗಿ ವಿತರಿಸಬೇಕೆಂದೂ ಪರವಾನಗಿ ಪಡೆದುಕೊಂಡು ಕಲ್ಲು ಗಣಿಗಾರಿಕೆ ನಡೆಸುವವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದೂ ಅಭಿಪ್ರಾಯಪಡುತ್ತಾರೆ ಹೆಚ್ಚಿನವರು. ಎಂ– ಸ್ಯಾಂಡ್‌ ಇಲ್ಲಿನ ಹವಾಮಾನಕ್ಕೆ ಸೂಕ್ತವಲ್ಲ ಎಂಬ ಅನಿಸಿಕೆಯಿಂದಾಗಿ ಯಾರೂ ಅದನ್ನು ಬಳಸಲು ಮುಂದಾಗುತ್ತಿಲ್ಲ. ಕಲ್ಲಿಗೆ ಬದಲಾಗಿ ಇಟ್ಟಿಗೆ, ಬ್ಲಾಕ್‌ಗಳನ್ನು ಬಳಸುವ ಪದ್ಧತಿ ಇನ್ನೂ ಇಲ್ಲಿ ಶುರುವಾಗಲಿಲ್ಲ. ಹೀಗಿರುವಾಗ ಮರಳಿಗೆ ಮರಳೇ ಬೇಕು, ಕೆಂಪುಕಲ್ಲಿಗೆ ಬದಲು ಕೆಂಪುಕಲ್ಲೇ ಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

    ‘ಎರಡು ತಿಂಗಳಿಂದ ಕೆಲಸ ಇಲ್ಲ. ನನ್ನ ಕೈಕೆಳಗೆ ಏಳೆಂಟು ಜನರು ಕೆಲಸ ಮಾಡುತ್ತಿದ್ದರು. ಕೆಲವರು ಊರಿಗೆ ಹೋದರು. ಇನ್ನು ಕೆಲವರು ಬೇರೆ ಯಾವುದೋ ಕೆಲಸ ಹುಡುಕಿಕೊಂಡು ಹೋಗಿದ್ದಾರೆ. ಕಲ್ಲು ಸಿಗುತ್ತಿದ್ದಾಗ ಕೆಲಸ ಇತ್ತು. ಜೀವನ ಸರಿಯಾಗಿ ನಡೀತಿತ್ತು. ಒಂದಿಷ್ಟು ಉಳಿತಾಯವೂ ಆಗುತ್ತಿತ್ತು. ಹಾಗೆ ಉಳಿಸಿದ ಹಣದಲ್ಲಿ ಈಗ ಜೀವನ ಸಾಗುತ್ತಿದೆ. ಅದು ಮುಗಿದ ನಂತರ ರಾಜಕಾರಣಿಗಳ ಮನೆ ಮುಂದೆ ಹೋಗಿ ಕುಳಿತುಕೊಳ್ಳಬೇಕಾದೀತೇನೋ…’ ಎಂದರು ದಾವಣಗೆರೆಯಿಂದ ಬಂದು ಮಂಗಳೂರಿನಲ್ಲಿ ಗುತ್ತಿಗೆದಾರರಾಗಿರುವ ದುರ್ಗೇಶ್.

    ‘ಅಕ್ರಮ ತಡೆಯಲೇಬೇಕು. ಅದರಿಂದ ಎಲ್ಲರಿಗೂ ಒಳಿತು. ಆದರೆ ನಿಯಮಗಳನ್ನು ಪಾಲಿಸಿಕೊಂಡು ಮಾಡುವವರಿಗೆ ಪರವಾನಗಿ ಕೊಡಬೇಕು. ಸಮಸ್ಯೆಗೆ ಪರಿಹಾರ ಹುಡುಕುವುದು ಬಿಟ್ಟು ಎಲ್ಲವನ್ನೂ ಒಮ್ಮೆಲೇ ನಿಲ್ಲಿಸಿಬಿಟ್ಟರೆ ಹೇಗೆ’ ಎಂದು ಪ್ರಶ್ನಿಸುವ ದುರ್ಗೇಶ್‌ ‘ಎಂ–ಸ್ಯಾಂಡ್ ಬಳಸಲು 10 ಶೇಕಡ ಮಂದಿ ಒಪ್ಪಬಹುದು, ಅದು ಕೂಡ ಒಲ್ಲದ ಮನಸ್ಸಿನಿಂದ. ಮರಳು ಸಂಗ್ರಹ ಮಾಡಿಟ್ಟುಕೊಳ್ಳಲು ಆಗುವುದರಿಂದ ಸ್ವಲ್ಪ ಹೆಚ್ಚು ಹಣ ಕೊಟ್ಟರೂ ಸಿಗಬಹುದು. ಆದರೆ ಕಲ್ಲು ಸಂಗ್ರಹ ಮಾಡಿ ಇಡಲು ಆಗುವುದಿಲ್ಲ. ಅದಕ್ಕೆ ಜಾಗ ತುಂಬ ಬೇಕು. ಆದ್ದರಿಂದ ಒಂದೆರಡು ಲೋಡ್ ಕಲ್ಲು ತಂದು ಅಷ್ಟು ಕೆಲಸ ಮುಗಿದ ನಂತರವೇ ಮತ್ತೊಮ್ಮೆ ತರುವುದು. ಹೀಗಾಗಿ ಕಲ್ಲು ಇಲ್ಲದೆ ಈಗ ಎಲ್ಲ ಕೆಲಸವೂ ನಿಂತಿದೆ’ ಎನ್ನುತ್ತಾರೆ.

    ‘ಎಂ–ಸ್ಯಾಂಡ್‌, ಬ್ಲಾಕ್‌, ಇಟ್ಟಿಗೆ ಇತ್ಯಾದಿಗಳನ್ನು ಬಳಸಲು ಇಲ್ಲಿ ಯಾರೂ ಒಪ್ಪುವುದಿಲ್ಲ. ಬ್ಲಾಕ್‌ಗಳನ್ನು ಬಳಸಿ ನಿರ್ಮಿಸಿದ ನಗರದ ಪ್ರಮುಖ ಅಪಾರ್ಟ್‌ಮೆಂಟ್ ಒಂದರಲ್ಲಿ ನೀರು ಜಿನುಗುತ್ತಿರುವುದರಿಂದ ಐದನೇ ಮಹಡಿಯಿಂದ ವಾಟರ್ ಪ್ರೂಫ್ ಹಾಕುತ್ತಿದ್ದಾರೆ. ಇಲ್ಲಿ ಕಟ್ಟಡಗಳಿಗೆ ಕೆಂಪು ಕಲ್ಲು ಬಳಸುವುದೇ ಸಂಪ್ರದಾಯವಾಗಿ ಮುಂದುವರಿದಿದೆ. ಅದು ಬೇಸಿಗೆಗೂ ಮಳೆಗಾಲಕ್ಕೂ ಸೂಕ್ತ ಎಂಬ ಭಾವನೆ ಎಲ್ಲರಲ್ಲೂ ಇದೆ. ಎಷ್ಟು ಭಾರವನ್ನಾದರೂ ತಡೆದುಕೊಳ್ಳುವ ಸಾಮರ್ಥ್ಯ ಇರುವುದರಿಂದ ಗುತ್ತಿಗೆದಾರರು ಕೂಡ ಅದಕ್ಕೇ ಮೊರೆ ಹೋಗುತ್ತಾರೆ. ಕಲ್ಲನ್ನು ಅಕ್ರಮವಾಗಿ ತಂದು ಕಟ್ಟಡ ನಿರ್ಮಿಸಿ ಕೊಡು ಎಂದು ಯಾರೂ ಹೇಳುವುದಿಲ್ಲ. ನಿಯಮಗಳನ್ನು ಪಾಲಿಸಿಕೊಂಡೇ ಗಣಿಗಾರಿಕೆ ಮಾಡಿ ಕಲ್ಲು ಸಿಗುವಂತೆ ಮಾಡಲಿ. ಅದಕ್ಕೆ ವೆಚ್ಚ ಸ್ವಲ್ಪ ಹೆಚ್ಚಾದರೂ ಕೊಡಲು ಜನರು ಹಿಂಜರಿಯುವುದಿಲ್ಲ’ ಎಂಬುದು ಗುತ್ತಿಗೆದಾರ ದಯಾನಂದ ಅವರ ಅಭಿಪ್ರಾಯ.ಅನೇಕ ಮೇಸ್ತ್ರಿಗಳು ಸೆಂಟ್ರಿಂಗ್‌ ಮತ್ತು ಇತರ ಕೆಲಸದ ಸಾಮಗ್ರಿಗಳನ್ನು ನನ್ನ ವಾಹನದಲ್ಲೇ ಸಾಗಿಸುತ್ತಿದ್ದರು. ಈಗ ಬಾಡಿಗೆಗೆ ಕರೆಯುವುದು ಕಡಿಮೆಯಾಗಿದೆ. ಆದ್ದರಿಂದ ಕೆಲಸವೇ ಇಲ್ಲ. ಬೇರೆ ಕೆಲಸ ಗೊತ್ತೂ ಇಲ್ಲ. ಸಚಿನ್ ಟೆಂಪೊ ಚಾಲಕ ಪಾಣೆಮಂಗಳೂರುಸ್ಯಾಂಡ್ ಬಜಾರ್ ಅ್ಯಾಪ್‌ ಮೂಲಕ ತರಿಸಿದ ಮರಳನ್ನು ಗಾಳಿಸಿಯೇ ಬಳಸಬೇಕಾದ ಪರಿಸ್ಥಿತಿ ಎಂದು ದೂರಲಾಗಿದೆ

    ಎಲ್ಲವನ್ನೂ ಕಾನೂನುಬದ್ಧಗೊಳಿಸಲು ಪ್ರಯತ್ನ ನಡೆಯುತ್ತಿದೆ. ಸರ್ಕಾರದ ಮಟ್ಟದಲ್ಲೇ ಇದು ಆಗಬೇಕು. ಹೀಗಾಗಿ ಇನ್ನೂ ಸುಮಾರು ಒಂದು ತಿಂಗಳ ವರೆಗೆ ಪರಿಸ್ಥಿತಿ ಹೀಗೆಯೇ ಮುಂದುವರಿಯುವ ಸಾಧ್ಯತೆ ಇದೆ.
    ರಾಜು ಹೆಚ್ಚುವರಿ ಜಿಲ್ಲಾಧಿಕಾರಿ

    ಸ್ಯಾಂಡ್ ಬಜಾರ್‌ನಲ್ಲಿ ಸಿಗುವ ಮರಳಿನ ಗುಣಮಟ್ಟ ಚೆನ್ನಾಗಿಲ್ಲ. ಆದ್ದರಿಂದ ಗಾಳಿಸಿದ ನಂತರ ಸಿಗುವುದು ಅಲ್ಪಪ್ರಮಾಣ. ಗಾಳಿಸಲು ಎರಡು ದಿನ ಇಬ್ಬರಿಗೆ ಕೂಲಿ ಕೊಡಬೇಕು. ನಾವು ಹೇಳಿದ ಸಮಯದಲ್ಲಿ ತಂದು ಹಾಕುವುದೂ ಇಲ್ಲ.
    ಲತೀಫ್‌ ಗುತ್ತಿಗೆದಾರ ತುಂಬೆ

    ಅನೇಕ ಮೇಸ್ತ್ರಿಗಳು ಸೆಂಟ್ರಿಂಗ್‌ ಮತ್ತು ಇತರ ಕೆಲಸದ ಸಾಮಗ್ರಿಗಳನ್ನು ನನ್ನ ವಾಹನದಲ್ಲೇ ಸಾಗಿಸುತ್ತಿದ್ದರು. ಈಗ ಬಾಡಿಗೆಗೆ ಕರೆಯುವುದು ಕಡಿಮೆಯಾಗಿದೆ. ಆದ್ದರಿಂದ ಕೆಲಸವೇ ಇಲ್ಲ. ಬೇರೆ ಕೆಲಸ ಗೊತ್ತೂ ಇಲ್ಲ.
    ಸಚಿನ್ ಟೆಂಪೊ ಚಾಲಕ, ಪಾಣೆಮಂಗಳೂರು

    ವಾಸ್ತವದಲ್ಲಿ ಹಣ ಮಾಡಿಕೊಂಡರು ಈಗ ಖುಷಿಯಲ್ಲಿದ್ದಾರೆ. ಹಲವರು ಈಗಾಗಲೇ ಕುಟುಂಬ ಸಮೇತರಾಗಿ ಪ್ರವಾಸಕ್ಕೆ ಹೋಗಿದ್ದಾರೆ. ನಿತ್ಯ ದುಡಿದು ತಿನ್ನುವವರಿಗೆ ಮತ್ತು ಸಣ್ಣ ಗುತ್ತಿಗೆದಾರರಿಗೆ ಸಮಸ್ಯೆಯಾಗಿದೆ.
    ದಯಾನಂದ ಗುತ್ತಿಗೆದಾರ ಮಂಗಳೂರು

    ಒಂದೆಡೆ ನಿರ್ಬಂಧ ಮತ್ತೊಂದೆಡೆ ನಿಷೇಧ

    ಕರಾವಳಿ ನಿರ್ಬಂಧಿತ ಪ್ರದೇಶದಲ್ಲಿ (ಸಿಆರ್‌ಝಡ್‌) 2022ರಿಂದ ಮರಳು ಗಣಿಗಾರಿಕೆಗೆ ನಿಷೇಧವಿದೆ. ನಾನ್‌ ಸಿಆರ್‌ಝಡ್‌ನಲ್ಲಿ ಜೂನ್ 5ರಿಂದ ಅಕ್ಟೋಬರ್‌ 15ರ ವರೆಗೆ ಮರಳು ಗಣಿಗಾರಿಕೆಗೆ ನಿಷೇಧವಿದೆ. ಆದ್ದರಿಂದ ಈಗ ಸಂಗ್ರಹ ಮಾಡಿಟ್ಟಿರುವ ಮರಳನ್ನೇ ಆಶ್ರಯಿಸಬೇಕಾಗಿದೆ. ಅಂಥ ಮರಳು ಪ್ರತಿ ವರ್ಷ ಸಾಕಷ್ಟು ಸಿಗುತ್ತದೆ. ಇದಲ್ಲದೆ ಜಿಲ್ಲಾಡಳಿತದ ಬ್ಲಾಕ್‌ಗಳಲ್ಲಿ ಇರುವ ಮರಳು ಸ್ಯಾಂಡ್ ಬಜಾರ್ ಆ್ಯಪ್‌ನಲ್ಲಿ ಲಭ್ಯವಿದೆ. ಅಕ್ರಮವಾಗಿ ಬ್ಲ್ಯಾಕ್‌ಮಾರ್ಕೆಟ್‌ನಲ್ಲೂ ಮರಳು ಸಿಗತ್ತಿದೆ. ಆದ್ದರಿಂದ ಸಮಸ್ಯೆ ಇರುವುದು ಕಲ್ಲಿನದೇ. ಸಿಆರ್‌ಝಡ್‌ನಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ಇಲ್ಲ. ಸಾಂಪ್ರದಾಯಿಕ ಸಮುದಾಯಗಳಿಗೆ ಇದರಿಂದ ದೋಣಿ ನಡೆಸಲು ಸಮಸ್ಯೆಯಾಗುತ್ತದೆ ಎಂಬ ದೂರಿನ ನಂತರ 2011ರಲ್ಲಿ ಈ ನಿಷೇಧವನ್ನು ತೆಗೆದು ಹಾಕಲಾಗಿತ್ತು. ಆದರೆ 2022ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಲಯ ನೀಡಿದ ಆದೇಶದಂತೆ ಈಗ ಮೂರು ಜಿಲ್ಲೆಗಳ ಸಿಆರ್‌ಝಡ್‌ನಲ್ಲಿ ಮರಳು ಗಣಿಗಾರಿಕೆಗೆ ನಿಷೇಧವಿದೆ. ಇದರ ವಿರುದ್ಧ ಹೋರಾಟಗಳು ನಡೆಯುತ್ತಿವೆ’ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಸಂದೀಪ್ತಿ ತಿಳಿಸಿದರು.

    ಮರಳು ಸಾಕಷ್ಟು ಇದೆ

    ನಾನ್ ಸಿಆರ್‌ಝಡ್‌ನಲ್ಲಿ ಸಾಕಷ್ಟು ಮರಳು ಸಂಗ್ರಹ ಇದೆ. ಒಟ್ಟು 29 ಬ್ಲಾಕ್‌ಗಳ ಪೈಕಿ 16 ಕಾರ್ಯನಿರ್ವಹಿಸುತ್ತಿದ್ದು 3 ಲಕ್ಷ 34 ಸಾವಿರ ಟನ್ ಮರಳು ಇದೆ. ಮೀನುಗಳ ವಂಶಾಭಿವೃದ್ಧಿಗಾಗಿ ಈಗ ಮರಳು ಗಣಿಗಾರಿಕೆ ಮೇಲೆ ನಿಷೇಧವಿದೆ. ಮಳೆಗಾಲದಲ್ಲಿ ಹೆಚ್ಚು ನೀರು ಇರುವಾಗ ಮರಳು ತೆಗೆಯಬಾರದು ಎಂಬ ನಿಯಮವೂ ಜಾರಿಯಲ್ಲಿದೆ. ಆದರೆ 11 ಸಾವಿರ ಟನ್ ಮರಳು ದಾಸ್ತಾನು ಇದೆ. ಅದನ್ನು ಸ್ಯಾಂಡ್ ಬಜಾರ್‌ ಮೂಲಕ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ವಿವಿಧ ಸಂದರ್ಭಗಳಲ್ಲಿ ವಶಪಡಿಸಿಕೊಂಡ ಮರಳೂ ಇದೆ. ಅದನ್ನು ಹರಾಜು ಹಾಕಬೇಕಾದರೆ ತುಂಬ ಸಮಯ ಕಾಯಬೇಕು. ಆದ್ದರಿಂದ ಸುಲಭವಾಗಿ ಜನರಿಗೆ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲು ಮರಳು ನಿರ್ವಹಣಾ ಸಮಿತಿಯ ನಿರ್ಧಾರಕ್ಕೆ ಬಿಡಲಾಗಿದೆ.

    ಸಂದೀಪ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ

  • ಭೂಮಿಯಂತಹ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! 
ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

    ಭೂಮಿಯಂತಹ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

    ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಇರಬಹುದಾದ ಗ್ರಹವನ್ನು ನಾಸಾದ ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕ (JWST) ಇತ್ತೀಚೆಗೆ ಪತ್ತೆ ಹಚ್ಚಿದೆ.

    ಈ ವಿಷಯವನ್ನು ನಾಸಾದ ವೆಬ್‌ಸೈಟ್‌ science.nasa.gov ದಲ್ಲಿ ಪ್ರಕಟಿಸಲಾಗಿದೆ.
    ಭೂಮಿಯಿಂದ ಕೇವಲ 4 ಜ್ಯೋತಿರ್ವಷ್ರಗಳ (light-years) ಅಂತರದಲ್ಲಿರುವ ‘ಆಲ್ಫಾ ಸೆಂಟೌರಿ’ ಎಂಬ ನಕ್ಷತ್ರ ಸಮೂಹದಲ್ಲಿನ ಸೂರ್ಯನಂತ ನಕ್ಷತ್ರವೊಂದನ್ನು ಭೂಮಿಯಂಥಹ ಗ್ರಹವೊಂದು ಸುತ್ತುತ್ತಿದೆ ಎಂದು ದೂರದರ್ಶಕ ಕಂಡುಕೊಂಡಿದೆ.

    ಆಲ್ಫಾ ಸೆಂಟೌರಿ ನಕ್ಷತ್ರ ಸಮೂಹದಲ್ಲಿ ಕೇವಲ ಮೂರು ನಕ್ಷತ್ರಗಳಿವೆ. ಆ ಸಮೂದಲ್ಲಿ ‘ಆಲ್ಫಾ ಸೆಂಟೌರಿ-ಎ’, ‘ಆಲ್ಫಾ ಸೆಂಟೌರಿ– ಬಿ’ ಮತ್ತು ‘ಪ್ರಾಕ್ಸಿಮಾ ಸೆಂಟೌರಿ’ ಎಂಬ ಮೂರು ನಕ್ಷತ್ರಗಳಿವೆ. ಸದ್ಯ ಸೂರ್ಯನಿಗೆ ಅತಿ ಹತ್ತಿರದ ನಕ್ಷತ್ರ ಎಂದು ‘ಪ್ರಾಕ್ಸಿಮಾ ಸೆಂಟೌರಿ’ಯನ್ನು ಗುರುತಿಸಲಾಗುತ್ತದೆ. ಇದು ಒಂದು ಕೆಂಪು ಕುಬ್ಬ ನಕ್ಷತ್ರವಾಗಿದ್ದು ಇಷ್ಟು ದಿನ ನಡೆದ ಸಂಶೋಧನೆಗಳು ಈ ನಕ್ಷತ್ರಕ್ಕೆ ಸಂಬಂಧಿಸಿದಂತೆ ಮೂರು ಗ್ರಹಗಳು ಇರಬಹುದು ಎಂಬುದನ್ನು ಕಂಡುಕೊಂಡಿವೆಯಾದರೂ ಅವು ವಾಸಯೋಗ್ಯ ಎಂಬುದನ್ನು ಪತ್ತೆಹಚ್ಚಲಾಗಿಲ್ಲ.

    ಆದರೆ, ವಿಜ್ಞಾನಿಗಳಿಗೆ ಅಭೂತಪೂರ್ವ ಯಶಸ್ಸು ಎಂಬಂತೆ JWST ಈಗ ಫಲಿತಾಂಶ ನೀಡಿದೆ. ದೂರದರ್ಶಕದ ಇತ್ತೀಚಿನ ಫಲಿತಾಂಶಗಳ ಪ್ರಕಾರ, ‘ಆಲ್ಫಾ ಸೆಂಟೌರಿ-ಎ’ ನಕ್ಷತ್ರದ ಗ್ರಹವಾಗಿ ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಗ್ರಹ ಕಂಡು ಬಂದಿದೆ. ಸದ್ಯ ಆ ಗ್ರಹಕ್ಕೆ ‘ಎಸ್ 1’ ಎಂದು ಹೆಸರಿಡಲಾಗಿದೆ. ಅದು ಒಂದು ಅನಿಲ ದೈತ್ಯ ಎಂದು ತಿಳಿದು ಬಂದಿದೆ. JWST ಮಿಡ್-ಇನ್ಸಾರೆಡ್ ಇಸ್ಟ್ಯುಮೆಂಟ್ (MIRI) ನಿಂದ ತಿಳಿದು ಬಂದಿರುವ ಸಂಗತಿ ಏನೆಂದರೆ, ಎಸ್1 ಗ್ರಹದಲ್ಲಿ ಸದ್ಯ ಜೀವಿಗಳು ಇರಬಹುದಾದ ಅನುಮಾನಗಳು ಮೂಡಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

    ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕವನ್ನು ಅತ್ಯಾಧುನಿಕವಾದ ಹಾಗೂ ವಿಶ್ವದ ಶಕ್ತಿಶಾಲಿ ದೂರದರ್ಶಕ ಎಂದು ಕರೆಯಲಾಗುತ್ತದೆ. ಗ್ಯಾಲಕ್ಸಿ, ನಕ್ಷತ್ರಗಳು ಹಾಗೂ ಹೊಸ ವಾಸಯೋಗ್ಯ ಗ್ರಹಗಳು ಇರಬಹುದಾದ ಅವಕಾಶಗಳನ್ನು ಪರಿಶೀಲಿಸಲು ಈ ದೊಡ್ಡ ದೂರದರ್ಶಕ ಬಳಕೆಯಾಗುತ್ತಿದೆ. JWST ಅನ್ನು 2021 ರಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ. ಇನ್ನೂ 15 ವರ್ಷ ಅಧ್ಯಯನ ಮಾಡಲಿದೆ.

  • ಭೂಮಿಯಂತೆ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! 
ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

    ಭೂಮಿಯಂತೆ ವಾಸಯೋಗ್ಯ ಗ್ರಹ ಪತ್ತೆ ಹಚ್ಚಿದ ನಾಸಾ..! ನಮ್ಮಿಂದ ಎಷ್ಟು ದೂರದಲ್ಲಿದೆ ಗೊತ್ತೇ..?

    ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಇರಬಹುದಾದ ಗ್ರಹವನ್ನು ನಾಸಾದ ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕ (JWST) ಇತ್ತೀಚೆಗೆ ಪತ್ತೆ ಹಚ್ಚಿದೆ.

    ಈ ವಿಷಯವನ್ನು ನಾಸಾದ ವೆಬ್‌ಸೈಟ್‌ science.nasa.gov ದಲ್ಲಿ ಪ್ರಕಟಿಸಲಾಗಿದೆ.
    ಭೂಮಿಯಿಂದ ಕೇವಲ 4 ಜ್ಯೋತಿರ್ವಷ್ರಗಳ (light-years) ಅಂತರದಲ್ಲಿರುವ ‘ಆಲ್ಫಾ ಸೆಂಟೌರಿ’ ಎಂಬ ನಕ್ಷತ್ರ ಸಮೂಹದಲ್ಲಿನ ಸೂರ್ಯನಂತ ನಕ್ಷತ್ರವೊಂದನ್ನು ಭೂಮಿಯಂಥಹ ಗ್ರಹವೊಂದು ಸುತ್ತುತ್ತಿದೆ ಎಂದು ದೂರದರ್ಶಕ ಕಂಡುಕೊಂಡಿದೆ.

    ಆಲ್ಫಾ ಸೆಂಟೌರಿ ನಕ್ಷತ್ರ ಸಮೂಹದಲ್ಲಿ ಕೇವಲ ಮೂರು ನಕ್ಷತ್ರಗಳಿವೆ. ಆ ಸಮೂದಲ್ಲಿ ‘ಆಲ್ಫಾ ಸೆಂಟೌರಿ-ಎ’, ‘ಆಲ್ಫಾ ಸೆಂಟೌರಿ– ಬಿ’ ಮತ್ತು ‘ಪ್ರಾಕ್ಸಿಮಾ ಸೆಂಟೌರಿ’ ಎಂಬ ಮೂರು ನಕ್ಷತ್ರಗಳಿವೆ.

    ಸದ್ಯ ಸೂರ್ಯನಿಗೆ ಅತಿ ಹತ್ತಿರದ ನಕ್ಷತ್ರ ಎಂದು ‘ಪ್ರಾಕ್ಸಿಮಾ ಸೆಂಟೌರಿ’ಯನ್ನು ಗುರುತಿಸಲಾಗುತ್ತದೆ. ಇದು ಒಂದು ಕೆಂಪು ಕುಬ್ಬ ನಕ್ಷತ್ರವಾಗಿದ್ದು ಇಷ್ಟು ದಿನ ನಡೆದ ಸಂಶೋಧನೆಗಳು ಈ ನಕ್ಷತ್ರಕ್ಕೆ ಸಂಬಂಧಿಸಿದಂತೆ ಮೂರು ಗ್ರಹಗಳು ಇರಬಹುದು ಎಂಬುದನ್ನು ಕಂಡುಕೊಂಡಿವೆಯಾದರೂ ಅವು ವಾಸಯೋಗ್ಯ ಎಂಬುದನ್ನು ಪತ್ತೆಹಚ್ಚಲಾಗಿಲ್ಲ.
    ಆದರೆ, ವಿಜ್ಞಾನಿಗಳಿಗೆ ಅಭೂತಪೂರ್ವ ಯಶಸ್ಸು ಎಂಬಂತೆ JWST ಈಗ ಫಲಿತಾಂಶ ನೀಡಿದೆ.

    ದೂರದರ್ಶಕದ ಇತ್ತೀಚಿನ ಫಲಿತಾಂಶಗಳ ಪ್ರಕಾರ, ‘ಆಲ್ಫಾ ಸೆಂಟೌರಿ-ಎ’ ನಕ್ಷತ್ರದ ಗ್ರಹವಾಗಿ ಭೂಮಿಯನ್ನು ಹೋಲುವ ಹಾಗೂ ವಾಸಯೋಗ್ಯ ಗ್ರಹ ಕಂಡು ಬಂದಿದೆ. ಸದ್ಯ ಆ ಗ್ರಹಕ್ಕೆ ‘ಎಸ್ 1’ ಎಂದು ಹೆಸರಿಡಲಾಗಿದೆ. ಅದು ಒಂದು ಅನಿಲ ದೈತ್ಯ ಎಂದು ತಿಳಿದು ಬಂದಿದೆ.

    JWST ಮಿಡ್-ಇನ್ಸಾರೆಡ್ ಇಸ್ಟ್ಯುಮೆಂಟ್ (MIRI) ನಿಂದ ತಿಳಿದು ಬಂದಿರುವ ಸಂಗತಿ ಏನೆಂದರೆ, ಎಸ್1 ಗ್ರಹದಲ್ಲಿ ಸದ್ಯ ಜೀವಿಗಳು ಇರಬಹುದಾದ ಅನುಮಾನಗಳು ಮೂಡಿಲ್ಲ ಎಂದು ವಿಜ್ಞಾನಿಗಳು ಹೇಳಿದ್ದಾರೆ.

    ಜೇಮ್ಸ್ ವೆಬ್ ಬಾಹ್ಯಾಕಾಶ ದೂರದರ್ಶಕವನ್ನು ಅತ್ಯಾಧುನಿಕವಾದ ಹಾಗೂ ವಿಶ್ವದ ಶಕ್ತಿಶಾಲಿ ದೂರದರ್ಶಕ ಎಂದು ಕರೆಯಲಾಗುತ್ತದೆ. ಗ್ಯಾಲಕ್ಸಿ, ನಕ್ಷತ್ರಗಳು ಹಾಗೂ ಹೊಸ ವಾಸಯೋಗ್ಯ ಗ್ರಹಗಳು ಇರಬಹುದಾದ ಅವಕಾಶಗಳನ್ನು ಪರಿಶೀಲಿಸಲು ಈ ದೊಡ್ಡ ದೂರದರ್ಶಕ ಬಳಕೆಯಾಗುತ್ತಿದೆ.

    JWST ಅನ್ನು 2021 ರಲ್ಲಿ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ.
    ಇನ್ನೂ 15 ವರ್ಷ ಅಧ್ಯಯನ ಮಾಡಲಿದೆ.

  • “School Fees ನಿಯಂತ್ರಣಕ್ಕೆ ಪ್ರತ್ಯೇಕ ಸಂಸ್ಥೆ ರಚಿಸಿ” 
ಸಿದ್ದರಾಮಯ್ಯ ಸರಕಾರಕ್ಕೆ, ಶಿಕ್ಷಣ ನೀತಿ ಆಯೋಗ ಶಿಫಾರಸು

    “School Fees ನಿಯಂತ್ರಣಕ್ಕೆ ಪ್ರತ್ಯೇಕ ಸಂಸ್ಥೆ ರಚಿಸಿ” ಸಿದ್ದರಾಮಯ್ಯ ಸರಕಾರಕ್ಕೆ, ಶಿಕ್ಷಣ ನೀತಿ ಆಯೋಗ ಶಿಫಾರಸು

    ಬೆಂಗಳೂರು: ಖಾಸಗಿ ಶಾಲೆಗಳಲ್ಲಿನ ಶುಲ್ಕ ನಿಯಂತ್ರಿಸಲು ಸರ್ಕಾರ ಪ್ರತ್ಯೇಕ ಶುಲ್ಕ ನಿಯಂತ್ರಣ ಸಂಸ್ಥೆಯನ್ನು ಸ್ಥಾಪಿಸಬೇಕು ಎಂದು ಪ್ರೊ. ಸುಖದೇವ್‌ ಥೋರಟ್‌ ಅಧ್ಯಕ್ಷತೆಯ ರಾಜ್ಯ ಶಿಕ್ಷಣ ನೀತಿ ಆಯೋಗ ಶಿಫಾರಸು ಮಾಡಿದೆ.

    ಖಾಸಗಿ ಶಾಲೆಗಳ ಜತೆಗೆ, ಖಾಸಗಿ ಪೂರ್ವ ಪ್ರಾಥಮಿಕ ಶಾಲೆಗಳನ್ನೂ ನಿಯಂತ್ರಿಸಬೇಕು. ಅದಕ್ಕಾಗಿ ಪ್ರತ್ಯೇಕ ನಿಯಂತ್ರಣ ಚೌಕಟ್ಟು ರೂಪಿಸಬೇಕು. ಮಾಧ್ಯಮಿಕ ಶಿಕ್ಷಣವನ್ನು ಸಾರ್ವತ್ರಿಕಗೊಳಿಸಬೇಕು. ಶಿಕ್ಷಣದ ಖಾಸಗೀಕರಣವನ್ನು ತಡೆಯಬೇಕು. ಪಠ್ಯಪುಸ್ತಕಗಳಿಗಾಗಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ (ಎನ್‌ಸಿಇಆರ್‌ಟಿ) ಮೇಲಿನ ಅವಲಂಬನೆ ಕಡಿಮೆ ಮಾಡಬೇಕು. ಪಠ್ಯ ವಿಷಯಗಳನ್ನು ಸ್ಥಳೀಯವಾಗಿಸಬೇಕು. ಶಾಲಾ ಶಿಕ್ಷಣಕ್ಕೆ ಪ್ರತ್ಯೇಕವಾದ ಸಮಗ್ರ ಪಠ್ಯಪುಸ್ತಕಗಳನ್ನು ರಚಿಸಬೇಕು ಎಂದು ಹೇಳಿದೆ.

    ಎನ್‌ಇಪಿಯಲ್ಲಿ ತರಗತಿಗಳನ್ನು ಪೂರ್ವಪ್ರಾಥಮಿಕ ಒಳಗೊಂಡು 5ರವರೆಗೆ, 6ರಿಂದ 8, 9ರಿಂದ 12ನೇ ತರಗತಿ ಎಂದು ಮೂರು ಹಂತದ ವಿಂಗಡಣೆ ಮಾಡಲಾಗಿತ್ತು. ಎಸ್‌ಇಪಿ ಅದನ್ನು ಮಾರ್ಪಡಿಸಿ, ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪ್ರತ್ಯೇಕಗೊಳಿಸಿದೆ. 1ರಿಂದ 8ನೇ ತರಗತಿ ಹಾಗೂ 9ರಿಂದ 12ನೇ ತರಗತಿಯನ್ನು ಎರಡು ಗುಂಪುಗಳಾಗಿ ವಿಂಗಡಿಸಿದೆ.

    ಪರಿಣಾಮಕಾರಿ ಶಿಕ್ಷಣದ ಅನುಷ್ಠಾನಕ್ಕೆ ಕ್ಷೇತ್ರ ಶಿಕ್ಷಣ ವಲಯಕ್ಕೆ ಹೆಚ್ಚು ಅಧಿಕಾರ ನೀಡಬೇಕು. ಸಮಾನಾಂತರ ವಿಭಾಗಗಳನ್ನು ಆಯುಕ್ತಾಲಯದಲ್ಲಿ ವಿಲೀನಗೊಳಿಸಬೇಕು. ಭಾರತೀಯ ಜ್ಞಾನ ವ್ಯವಸ್ಥೆ ಕೋರ್ಸ್‌ಗಾಗಿ ಸಮಿತಿ ರಚಿಸಬೇಕು. ಜೀವಮಾನ ಕಲಿಕೆ ನಿರ್ದೇಶನಾಲಯ ಸ್ಥಾಪಿಸಬೇಕು. ರಾಜ್ಯ ಬಜೆಟ್‌ನ ಒಟ್ಟು ವೆಚ್ಚದಲ್ಲಿ ಶಿಕ್ಷಣಕ್ಕೆ ಶೇ 30ರಷ್ಟು ಮೀಸಲಿಡಬೇಕು. ಸಮಾನತೆ, ಗುಣಮಟ್ಟ ಮತ್ತು ತರಬೇತಿಗಾಗಿ ಹಣ ಮೀಸಲಿಡಬೇಕು. ಸಂವಿಧಾನ ಮೌಲ್ಯ ಶಿಕ್ಷಣವನ್ನು ಕಡ್ಡಾಯಗೊಳಿಸಬೇಕು. ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಎಲ್ಲ ಸರ್ಕಾರಿ ಶಾಲೆಗಳಲ್ಲೂ ಆರಂಭಿಸಬೇಕು ಎಂದು ಆಯೋಗ ಶಿಫಾರಸು ಮಾಡಿದೆ.

  • ಚಿನ್ನ ಖರೀದಿಸುವ ಭರದಲ್ಲಿ, ಮಗುವನ್ನೇ ಕಳೆದುಕೊಂಡ ತಾಯಿ..! 
Complaint ಕೊಟ್ಟಾಗ ತಿಳಿದು ಬಂದದ್ದೇನು?

    ಚಿನ್ನ ಖರೀದಿಸುವ ಭರದಲ್ಲಿ, ಮಗುವನ್ನೇ ಕಳೆದುಕೊಂಡ ತಾಯಿ..! Complaint ಕೊಟ್ಟಾಗ ತಿಳಿದು ಬಂದದ್ದೇನು?

    ವರಮಹಾಲಕ್ಷ್ಮಿ ಹಬ್ಬದ ಮುನ್ನಾ ದಿನವಾದ ಗುರುವಾರ ನಗರದಲ್ಲಿ ಚಿನ್ನಾಭರಣ ಖರೀದಿಸುವ ಭರದಲ್ಲಿ ಉಷಾ ಎಂಬುವವರು ಅಂಗಡಿಯಲ್ಲೇ ಬಿಟ್ಟು ಹೋಗಿದ್ದ ಮಗುವನ್ನು ಸಿದ್ದಯ್ಯ ನಗರದ ಭವಾನಿ ಎಂಬುವವರು ರಕ್ಷಿಸಿ ಪೊಲೀಸ್‌ ಠಾಣೆಯಲ್ಲಿ ಮತ್ತೆ ಹಸ್ತಾಂತರಿಸಿದರು.

    ನಗರದ ಗಾಂಧಿ ಬಜಾರ್‌ನ ಮಳಿಗೆಗೆ ಬಂದಿದ್ದ ಉಷಾ, ಎರಡೂವರೆ ವರ್ಷದ ಮಗಳು ಸುಪ್ರಿಯಾಳನ್ನು ತಮ್ಮೊಂದಿಗೆ ಕರೆದೊಯ್ಯುವುದನ್ನು ಮರೆತು ನಿರ್ಗಮಿಸಿದ್ದರು. ಮಗುವು ಅಳುತ್ತಿರುವುದನ್ನು ಕಂಡ ಭವಾನಿ ಸಂತೈಸಿದರು. ಪೋಷಕರು ಪತ್ತೆಯಾಗದ್ದರಿಂದ ತಮ್ಮೊಂದಿಗೆ ಕರೆದೊಯ್ದಿದ್ದರು.

    ಮಗುವನ್ನು ಮಳಿಗೆಯಲ್ಲಿ ಮರೆತು ಬಂದಿರುವ ಸಂಗತಿಯನ್ನು ಮುಚ್ಚಿಟ್ಟ ತಾಯಿಯು, ಮಗು ಕಳುವಾಗಿದೆ ಎಂದು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಹುಡುಕಾಡಿದಾಗ, ಮಗುವನ್ನು ಭವಾನಿ ಅವರು ಕರೆದೊಯ್ದಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ಗೊತ್ತಾಗಿತ್ತು. ಆಕೆಯೇ ಮಗುವನ್ನು ಅಪಹರಿಸಿದ್ದಾರೆಂದು ಭಾವಿಸಲಾಗಿತ್ತು.

    ಆದರೆ, ಅವರು ಮಗುವಿಗೆ ಊಟ ಮಾಡಿಸಿ, ನಂತರ ಪೊಲೀಸರಿಗೆ ಒಪ್ಪಿಸಲು ಠಾಣೆಗೆ ಬಂದರು. ಆಗ, ‘ಮಗು ಅಪಹರಣವಾಗಿಲ್ಲ. ಬದಲಿಗೆ ತಾಯಿಯೇ ಮರೆತು ಬಂದಿದ್ದಾರೆ’ ಎಂಬುದು ದೃಢವಾಯಿತು. ವಿಷಯ ಮನವರಿಕೆಯಾದ ಪೊಲೀಸರು ಮಗುವನ್ನು ತಾಯಿಯ ಸುಪರ್ದಿಗೆ ನೀಡಿದರು.

  • “ಕರ್ನಾಟಕದ 1 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಚುನಾವಣಾ ಆಯೋಗ ನೇರ ಕೈ ಜೋಡಿಸಿದೆ” 
ದಾಖಲೆ ಹಂಚಿಕೊಂಡ ರಾಹುಲ್ ಗಾಂಧಿ

    “ಕರ್ನಾಟಕದ 1 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಚುನಾವಣಾ ಆಯೋಗ ನೇರ ಕೈ ಜೋಡಿಸಿದೆ” ದಾಖಲೆ ಹಂಚಿಕೊಂಡ ರಾಹುಲ್ ಗಾಂಧಿ

    ನವದೆಹಲಿ: ಶುಕ್ರವಾರ ಬೆಂಗಳೂರಿಗೆ (Bengaluru) ಬರುವ ಮುನ್ನ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಹಾದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಆನ್‌ಲೈನ್ ಮೂಲಕ ದಾಖಲೆಗಳನ್ನು ಪ್ರಕಟಿಸಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಗೂ ಅದರ ವ್ಯಾಪ್ತಿಯ ಮಹದೇವಪುರ ವಿಧಾನಸಭೆ ಕ್ಷೇತ್ರದ ದತ್ತಾಂಶಗಳನ್ನು ವಿಶ್ಲೇಷಿಸಿರುವುದಾಗಿ ಹೇಳಿದ್ದಾರೆ. ಹಾಗೆಯೇ, ಅಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಅಚ್ಚರಿಯಾಗಿ ಸೋಲನ್ನು ಅನುಭವಿಸಿತು. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಮಹಾದೇವಪುರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಸ್ಫೋಟಕ ಆರೋಪ ಮಾಡಿದರು.

    ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವೆಡೆ ಮತಗಳ್ಳತನ ಆಗಿದೆ. ಇನ್ನೂ ಕಳೆದ ಐದು ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ಸಂಜೆ ಐದು ಗಂಟೆಯ ಬಳಿಕ ಅತಿ ಹೆಚ್ಚು ಮತದಾನವಾಗುತ್ತದೆ ಎಂದು ಆರೋಪಿಸಿದ್ದಾರೆ.

    ಈ ಕುರಿತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಿದರೆ ನಮಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಆಯೋಗ ನಮಗೆ ಮತದಾರರ ಪಟ್ಟಿ ನೀಡಲು ನಿರಾಕರಿಸಿದೆ. ಅದಲ್ಲದೇ ರಾಜಕೀಯ ಪಕ್ಷಗಳಿಗೂ ಕೂಡ ಮತದಾರರ ಪಟ್ಟಿ ನೀಡಿಲ್ಲ. ಜೊತೆಗೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆಗ್ರಹಿಸಿದ್ದಾರೆ.

    ದೇಶದಾದ್ಯಂತ ಇದೇ ರೀತಿಯ ಅಕ್ರಮಗಳು ನಡೆದಿವೆ ಎಂದು ಪ್ರತಿಪಾದಿಸಿರುವ ರಾಹುಲ್, ಇದು ಸಂವಿಧಾನ ಹಾಗೂ ರಾಷ್ಟ್ರದ ಸಮಗ್ರತೆಯ ವಿರುದ್ಧದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಕ್ರಿಯೆಯನ್ನು ರಕ್ಷಿಸುವ ಕೆಲಸ ಮಾಡುತ್ತದೆ ಎಂಬುದನ್ನು ಆಯೋಗಕ್ಕೆ ನೆನಪಿಸಲು ಬಯಸುವುದಾಗಿಯೂ ಹೇಳಿದ್ದಾರೆ.

  • ಬರೋಬ್ಬರಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ: 
ತಾಯಿಗೆ ಸಿಕ್ಕ ಸರ್ಟಿಫಿಕೇಟ್ ಏನು ಗೊತ್ತೇ..?

    ಬರೋಬ್ಬರಿ 300 ಲೀ. ಎದೆಹಾಲು ದಾನ ಮಾಡಿದ ಮಹಾತಾಯಿ: ತಾಯಿಗೆ ಸಿಕ್ಕ ಸರ್ಟಿಫಿಕೇಟ್ ಏನು ಗೊತ್ತೇ..?

    ತಮಿಳುನಾಡಿನ ಮಹಿಳೆಯೊಬ್ಬರು ಸುಮಾರು 300 ಲೀಟರ್‌ ಎದೆಹಾಲನ್ನು ದಾನ ಮಾಡುವ ಮೂಲಕ ‘ಏಷ್ಯಾ ಬುಕ್ ಆಫ್ ರೆಕಾರ್ಡ್‌’ ಮತ್ತು ‘ಇಂಡಿಯಾ ಬುಕ್ ಆಫ್ ರೆಕಾರ್ಡ್‌’ ಎರಡರಲ್ಲೂ ಸ್ಥಾನ ಪಡೆದಿದ್ದಾರೆ.

    ಎರಡು ಮಕ್ಕಳ ತಾಯಿಯಾದ ಸೆಲ್ವಾ ಬೃಂದಾ, 2023ರ ಏಪ್ರಿಲ್‌ನಿಂದ 2025ರ ಫೆಬ್ರುವರಿಯವರೆಗೆ 22 ತಿಂಗಳುಗಳಲ್ಲಿ ಒಟ್ಟು 300.17 ಲೀಟರ್‌ ಎದೆಹಾಲನ್ನು ಚಿರುಚಿರಾಪಳ್ಳಿ ಜಿಲ್ಲೆಯ ಮಹಾತ್ಮಾ ಗಾಂಧಿ ಸ್ಮಾರಕ ಸರ್ಕಾರಿ ಆಸ್ಪತ್ರೆಯ (ಎಂಜಿಎಂಜಿಎಚ್‌) ಎದೆಹಾಲಿನ ಬ್ಯಾಂಕ್‌ಗೆ ದಾನ ಮಾಡಿದ್ದಾರೆ.

    ಈ ಮೂಲಕ ಅವರು ಸಾವಿರಾರು ಅಕಾಲಿಕ ಸಾವು ಮತ್ತು ಅಸ್ವಸ್ಥ ಶಿಶುಗಳ ಜೀವ ಉಳಿಸಲು ಸಹಾಯ ಮಾಡಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    2023-24ರ ಅವಧಿಯಲ್ಲಿ ಆಸ್ಪತ್ರೆಯ ಎದೆಹಾಲಿನ ಬ್ಯಾಂಕ್‌ನಲ್ಲಿ ಸಂಗ್ರಹಿಸಿದ್ದ ಒಟ್ಟಾರೆ ಎದೆ ಹಾಲಿನಲ್ಲಿ ಪ್ರಮಾಣದಲ್ಲಿ ಬೃಂದಾ ಅವರ ಕೊಡುಗೆ ಅರ್ಧದಷ್ಟು ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬೃಂದಾ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ಆಸ್ಪತ್ರೆಯ ಅಧಿಕಾರಿಗಳು ‘ವಿಶ್ವ ಸ್ತನ್ಯಪಾನ ಸಪ್ತಾಹ’ದ ಸಮಾರೋಪ ಸಮಾರಂಭದಲ್ಲಿ ಅವರನ್ನು ಸನ್ಮಾನಿಸಿಲಿದ್ದಾರೆ.

  • ಮಗಳ ಕಣ್ಣೆದುರೇ ಗಂಡನನ್ನು ಕೊಂದ ತಂದೆ! 
ಕಾರಣವೇನು ಗೊತ್ತೇ?

    ಮಗಳ ಕಣ್ಣೆದುರೇ ಗಂಡನನ್ನು ಕೊಂದ ತಂದೆ! ಕಾರಣವೇನು ಗೊತ್ತೇ?

    ಬಿಹಾರದ ದರ್ಭಾಂಗಾದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ 25 ವರ್ಷದ ವ್ಯಕ್ತಿಯೊಬ್ಬನನ್ನು ಆತನ ಮಾವನೇ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ರಾಹುಲ್ ಕುಮಾರ್ ಹತ್ಯೆಯಾದ ವ್ಯಕ್ತಿ. ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇವರು ವ್ಯಾಸಂಗ ಮಾಡುತ್ತಿದ್ದರು. ನಾಲ್ಕು ತಿಂಗಳ ಹಿಂದಷ್ಟೇ ಅದೇ ಕಾಲೇಜಿನ ವಿದ್ಯಾರ್ಥಿನಿ ತನ್ನು ಪ್ರಿಯಾ ಅವರನ್ನು ಆಕೆಯ ಕುಟುಂಬದ ವಿರೋಧದ ನಡುವೆಯೇ ರಾಹುಲ್‌ ವಿವಾಹವಾಗಿದ್ದರು.

    ಹತ್ಯೆಯ ಬೆನ್ನಲ್ಲೇ ರಾಹುಲ್‌ನ ಸಹಪಾಠಿಗಳು ತನ್ನುವಿನ ತಂದೆ ಆರೋಪಿ ಪ್ರೇಮ್‌ಶಂಕರ್ ಝಾ ಅವರನ್ನು ಥಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ‘ನಿನ್ನೆ ಸಂಜೆ ಹೂಡಿ ಧರಿಸಿದ್ದ ವ್ಯಕ್ತಿಯೊಬ್ಬ ರಾಹುಲ್‌ ಬಳಿಗೆ ಬಂದಿದ್ದರು. ಹತ್ತಿರ ಬಂದಾಗ ಅದು ನನ್ನ ತಂದೆ ಎಂದು ತಿಳಿಯಿತು. ಅವರು ಬಂದೂಕು ಹಿಡಿದುಕೊಂಡಿದ್ದರು. ನನ್ನ ಕಣ್ಣೆದುರೇ ನನ್ನ ಗಂಡನ ಎದೆಗೆ ಗುಂಡು ಹಾರಿಸಿದರು. ನನ್ನ ಗಂಡ ನನ್ನ ಮಡಿಲಲ್ಲಿ ಪ್ರಾಣ ಬಿಟ್ಟರು’ ಎಂದು ತನ್ನು ಪ್ರಿಯಾ ಕಣ್ಣೀರು ಸುರಿಸಿದ್ದಾರೆ.

    ‘ನನ್ನ ಇಡೀ ಕುಟುಂಬ ಈ ಪಿತೂರಿಯಲ್ಲಿ ಭಾಗಿಯಾಗಿದೆ. ನನ್ನ ಸಹೋದರ ಮತ್ತು ತಂದೆಯಿಂದ ನಮ್ಮ ಜೀವಕ್ಕೆ ಬೆದರಿಕೆಯಿದೆ ಎಂದು ದೂರು ನೀಡಿ ನ್ಯಾಯಾಲಯಕ್ಕೂ ಹೋಗಿದ್ದೆವು’ ಎಂದು ತಿಳಿಸಿದ್ದಾರೆ.

    ಮೇಲ್ನೋಟಕ್ಕೆ ಇದು ಮರ್ಯಾದೆಗೇಡು ಹತ್ಯೆ ಎಂದು ತಿಳಿದುಬಂದಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.