Tag: Congress party

  • ಅನುಪಮ 25ನೇ ವಾರ್ಷಿಕ ವಿಶೇಷಾಂಕ ಬಿಡುಗಡೆಗೊಳಿಸಿ 
ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    ಅನುಪಮ 25ನೇ ವಾರ್ಷಿಕ ವಿಶೇಷಾಂಕ ಬಿಡುಗಡೆಗೊಳಿಸಿ ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    ಮಹಿಳೆಯರೇ ನಡೆಸುತ್ತಿರುವ ರಾಜ್ಯದ ಏಕೈಕ ಮಹಿಳಾ ಮಾಸಿಕ ಅನುಪಮ ಮಾಸಿಕಕ್ಕೆ 25 ವರ್ಷಗಳು ತುಂಬಿದೆ. ಈ ಹಿನ್ನೆಲೆಯಲ್ಲಿ 25 ವರ್ಷಗಳ ಯಶಸ್ಸಿನ ಹಿನ್ನೋಟವಿರುವ ವಿಶೇಷ ಸಂಚಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಗುರುವಾರ ಬಿಡುಗಡೆ ಮಾಡಿದರು.

    ಬಿಡುಗಡೆಗೊಳಿಸಿ ಮಾತನಾಡಿದ ಅವರು, “ಪತ್ರಿಕೋದ್ಯಮದಲ್ಲಿ ಮುಸ್ಲಿಂ ಮಹಿಳೆಯರು ಬೆರಳೆಣಿಕೆಯಷ್ಟು ಮಾತ್ರ ಇದ್ದಾರೆ. ಈ ನಡುವೆ ಕೂಡ ಅಲ್ಪಸಂಖ್ಯಾತ ಸಮುದಾಯವಾದ ಮುಸ್ಲಿಂ ಸಮುದಾಯದ ಮಹಿಳೆಯರೇ ನಡೆಸುತ್ತಿರುವ ಅನುಪಮ ಮಹಿಳಾ ಮಾಸಿಕವು 25 ವರ್ಷಗಳನ್ನು ಪೂರೈಸಿರುವುದು ಶ್ಲಾಘನೀಯ”ಎಂದು ಅಭಿನಂದನೆ ಸಲ್ಲಿಸಿದರು.

    ಬಳಿಕ ಮಾತನಾಡಿದ ಅನುಪಮ ಸಂಪಾದಕಿ ಶಹನಾಝ್ ಎಂ, “ರಾಜ್ಯದಲ್ಲಿ ಮಹಿಳೆಯರಿಗೆ ಗ್ಯಾರಂಟಿಗಳನ್ನು ಘೋಷಿಸಿ, ಅದನ್ನು ಅನುಷ್ಠಾನಕ್ಕೆ ತಂದ ನಂತರ ಮಹಿಳೆಯರ ಬದುಕಿನಲ್ಲಿ ಹಲವಾರು ಬದಲಾವಣೆ ಆಗಲು ನೆರವಾಗಿದೆ. ಮಹಿಳೆಯರ ಅಭಿವೃದ್ಧಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಅನುಪಮ ಬಳಗ ಹಾಗೂ ಎಲ್ಲ ಮಹಿಳೆಯರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಬಿಎಂಟಿಸಿ ನಿಗಮದ ಉಪಾಧ್ಯಕ್ಷರಾದ ನಿಕೇತ್ ರಾಜ್ ಮೌರ್ಯ, ಅನುಪಮ ಮಹಿಳಾ ಮಾಸಿಕದ ಉಪಸಂಪಾದಕಿಯರಾದ ಸಮೀನಾ ಉಪ್ಪಿನಂಗಡಿ, ಸಾಜಿದಾ ಮೂಮಿನ್, ಕುಲ್ಸುಮ್ ಅಬೂಬಕ್ಕರ್, ಎಸ್.ಎಂ. ಮುತ್ತಲಿಬ್, ಫೈಝಲ್ ಇಸ್ಮಾಯೀಲ್, ಸಲೀಂ ಬೋಳಂಗಡಿ ಉಪಸ್ಥಿತರಿದ್ದರು.

    ಬಳಿಕ ಅನುಪಮ ಬಳಗವು ಈ ಸ್ಮರಣ ಸಂಚಿಕೆಯನ್ನು ಕರ್ನಾಟಕ ಸರಕಾರದಲ್ಲಿ ವಿವಿಧ ಸ್ಥಾನಗಳನ್ನುಅಲಂಕರಿಸಿರುವ ಹಾಗೂ ಸರಕಾರದ ಅಧಿಕಾರಿಗಳಾಗಿರುವ ಹೊಣೆಗಾರರನ್ನು ಭೇಟಿ ಮಾಡಿ ನೀಡಿತು.

    ಸನ್ಮಾನ್ಯ ನಿಕೇತ್ ರಾಜ್ ಮೌರ್ಯ [ಉಪಾಧ್ಯಕ್ಷರು, (BMTC) ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ (KPYCC) ರಾಜ್ಯ ಪ್ರಧಾನ ಕಾರ್ಯದರ್ಶಿ]

    ಸನ್ಮಾನ್ಯ ರಿಜ್ವಾನ್ ಅರ್ಷದ್ [ಸದಸ್ಯರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ಹಾಗೂ MLA ಶಿವಾಜಿ ನಗರ, ಬೆಂಗಳೂರು]

    ಸನ್ಮಾನ್ಯ ನಸೀರ್ ಅಹ್ಮದ್ [ವಿಧಾನ ಪರಿಷತ್ ಸದಸ್ಯ (MLC) ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ]

    ಸನ್ಮಾನ್ಯ ಅಬ್ದುಲ್ ಅಹದ್ [DIG, ಪೊಲೀಸ್ ಉಪ ಮಹಾನಿರೀಕ್ಷಕರು, ಕರ್ನಾಟಕ ಸರಕಾರ]

  • ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ವೈದ್ಯೆಯ ನಕಾಬ್ ಎಳೆದಿರುವ ಘಟನೆ ಅತ್ಯಂತ ಖಂಡನೀಯ: 
ಫಾರ್ವರ್ಡ್ ಟ್ರಸ್ಟ್

    ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ವೈದ್ಯೆಯ ನಕಾಬ್ ಎಳೆದಿರುವ ಘಟನೆ ಅತ್ಯಂತ ಖಂಡನೀಯ: ಫಾರ್ವರ್ಡ್ ಟ್ರಸ್ಟ್

    ಬೆಂಗಳೂರು: ಪಟ್ನಾದಲ್ಲಿ ಡಿಸೆಂಬರ್ 15, 2025ರಂದು ನಡೆದ ಆಯುಷ್ ವೈದ್ಯರ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ಮಹಿಳಾ ವೈದ್ಯರೊಬ್ಬರ ನಿಖಾಬ್ ಅನ್ನು ಎಳೆದ ಘಟನೆಯು ಅತ್ಯಂತ ಖಂಡನೀಯವಾಗಿದೆ.

    ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ಧಾರ್ಮಿಕ ಸ್ವಾತಂತ್ರ್ಯ, ವೈಯಕ್ತಿಕ ಘನತೆ ಮತ್ತು ಗೌರವವನ್ನು ಖಾತರಿಪಡಿಸಿದೆ. ಸಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಮಹಿಳೆಯ ಧಾರ್ಮಿಕ ಆಚರಣೆ ಅಥವಾ ವೈಯಕ್ತಿಕ ಆಯ್ಕೆಯನ್ನು ಸಾರ್ವಜನಿಕವಾಗಿ ಉಲ್ಲಂಘಿಸುವುದು ಸಂವಿಧಾನದ ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. ಮಾತ್ರವಲ್ಲ ಈ ಕೃತ್ಯವು ಮಹಿಳೆಯರ ಘನತೆ, ಸುರಕ್ಷತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ.

    ಈ ದೇಶದ ಸಂವಿಧಾನವು ಎಲ್ಲ ನಾಗರಿಕರಿಗೂ ಗೌರವಯುತ, ಘನತೆಯುತ ಮತ್ತು ಸಮಾನ ಜೀವನವನ್ನು ಭರವಸೆ ನೀಡುತ್ತದೆ. ಒಂದು ಕಡೆ ದೇಶವನ್ನು ತಾಯಿಯೆಂದು ಪೂಜಿಸುತ್ತೇವೆ ಮತ್ತೊಂದು ಕಡೆ ಈ ದೇಶದ ಮಹಿಳೆಯರ ಮೇಲೆ ಈ ರೀತಿಯ ದಾಳಿಗಳು ನಿರಂತರವಾಗಿ ನಡೆಯುತ್ತಿರುವುದು ದುರಾದೃಷ್ಟಕರ.

    ಈ ಕೃತ್ಯವನ್ನು ಫಾರ್ವರ್ಡ್ ಟ್ರಸ್ಟ್ ತೀವ್ರವಾಗಿ ಖಂಡಿಸುತ್ತದೆ ಮತ್ತು ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸುತ್ತದೆ ಹಾಗೂ ಎಲ್ಲ ಮಹಿಳೆಯರ ಧಾರ್ಮಿಕ ಸ್ವಾತಂತ್ರ್ಯ ಹಾಗೂ ವೈಯಕ್ತಿಕ ಆಯ್ಕೆಯನ್ನು ರಕ್ಷಿಸಲು ಸೂಕ್ತ ಕಾನೂನುಗಳು ಮತ್ತು ನೀತಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಒತ್ತಾಯಿಸುತ್ತದೆ.

    ಫಾರ್ವರ್ಡ್ ಟ್ರಸ್ಟ್

  • “ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” 
ರಾಹುಲ್ ಗಾಂಧಿ Press Meet

    “ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

    ‘ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗಿದ್ದು, ಮತಗಳ್ಳರು ಮತ್ತು ಪ್ರಜಾಪ್ರಭುತ್ವ ನಾಶಪಡಿಸುವವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

    ಇಂದಿರಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಚುನಾವಣಾ ಆಯೋಗವು ಇದನ್ನು ಮೊದಲು ನಿಲ್ಲಿಸಬೇಕು. ಮತದಾರರ ಹೆಸರು ಅಳಿಸಿಹಾಕಿದ್ದರ ಕುರಿತು ಕರ್ನಾಟಕ ಸಿಐಡಿ ಕೇಳಿರುವ ಮಾಹಿತಿಯನ್ನು ಚುನಾವಣಾ ಆಯೋಗವು ತಕ್ಷಣ ಒದಗಿಸಬೇಕು’ ಎಂದು ಆಗ್ರಹಿಸಿದರು.

    ‘ದೇಶದಲ್ಲಿ ಹೇಗೆ ಚುನಾವಣಾ ಅಕ್ರಮಗಳು ನಡೆಯುತ್ತವೆ ಎಂಬುದನ್ನು ಅರಿಯಲು ಇಂದಿನ ಯುವ ಸಮುದಾಯಕ್ಕೆ ಇದೊಂದು ಮಹತ್ವದ ಉದಾಹರಣೆಯಾಗಿದೆ. ನಾನು ಈ ಹಿಂದೆ ಭರವಸೆ ನೀಡಿದ ‘ಹೈಡ್ರೊಜೆನ್ ಬಾಂಬ್’ ಇದಲ್ಲ. ಅದು ಅತಿ ಶೀಘ್ರದಲ್ಲಿ ಬರಲಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ‘ಕರ್ನಾಟಕದ ಅಳಂದದಲ್ಲಿ 2023ರ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಅಳಿಸಿಹಾಕುವ ಯತ್ನ ನಡೆದಿದೆ. ಮತ್ತೊಂದೆಡೆ ಮಹಾರಾಷ್ಟ್ರದ ರಾಜುರಾ ಕ್ಷೇತ್ರದಲ್ಲಿ ಸ್ವಯಂಚಾಲಿತ ತಂತ್ರಾಂಶ ಬಳಸಿ ಕುತಂತ್ರದಿಂದ ಮತಗಳನ್ನು ಸೇರಿಸುವ ಪ್ರಯತ್ನ ನಡೆದಿದೆ. ಈ ಎಲ್ಲಾ ಕೃತ್ಯಗಳಿಗೂ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಾನು ಗಂಭೀರ ಆರೋಪ ಮಾಡುತ್ತಿದ್ದೇನೆ. ಇದನ್ನು ಹಗುರವಾಗಿ ಪರಿಗಣಿಸಬೇಡಿ. ಚುನಾವಣಾ ಆಯೋಗವು ಮತಗಳ್ಳರನ್ನು ರಕ್ಷಿಸುತ್ತಿದೆ. ಈ ಕಳ್ಳರೇ ಭಾರತದ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ’ ಎಂದು ರಾಹುಲ್ ಆರೋಪಿಸಿದ್ದಾರೆ.

    CID 18 ಬಾರಿ ಕೇಳಿದ ಐಪಿ ವಿಳಾಸ, ಒಟಿಪಿ ಏಕೆ ನೀಡಿಲ್ಲ…?: ರಾಹುಲ್‘

    ಭಾರತದಲ್ಲಿ ಲಕ್ಷಾಂತರ ಮತದಾರರನ್ನು ಮತಪಟ್ಟಿಯಿಂದ ಅಳಿಸಿಹಾಕಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕನಾಗಿರುವ ನಾನು ಶೇ 100ರಷ್ಟು ಪುರಾವೆಗಳಿಲ್ಲದೆ ಏನನ್ನೂ ಹೇಳುವುದಿಲ್ಲ. ಅಳಂದದಲ್ಲಿ 6,018 ಮತಗಳನ್ನು ಅಳಿಸಿಹಾಕಲು ಯಾರೋ ಪ್ರಯತ್ನಿಸಿದ್ದರು. ಆದರೆ ಕಾಕತಾಳೀಯ ಎಂಬಂತೆ ಸಿಕ್ಕಿಬಿದ್ದರು. ತಮ್ಮ ಚಿಕ್ಕಪ್ಪನ ಹೆಸರೇ ಪಟ್ಟಿಯಲ್ಲಿ ಇಲ್ಲದಿರುವುದನ್ನು ಬೂತ್ ಮಟ್ಟದ ಅಧಿಕಾರಿ ಗಮನಿಸಿದ್ದಾರೆ. ಆದರೆ ಇದರ ಹಿಂದೆ ಬೇರೆ ಯಾವುದೋ ‘ಶಕ್ತಿ’ ಇದೆ’ ಎಂದಿದ್ದಾರೆ.

    ‘ಮತದಾರರಂತೆ ನಟಿಸಿ 6,018 ಅರ್ಜಿಗಳನ್ನು ಸಲ್ಲಿಸಲಾಗಿದೆ. ಕರ್ನಾಟಕಕ್ಕೆ ಸೇರದ ಮೊಬೈಲ್ ಸಂಖ್ಯೆಗಳನ್ನು ಬಳಸಿಕೊಂಡು ಈ ಅರ್ಜಿಗಳು ಸ್ವಯಂಚಾಲಿತ ತಂತ್ರಾಂಶದ ಮೂಲಕ ದಾಖಲಿಸಿಕೊಳ್ಳಲಾಗಿದೆ’ ಎಂದ ರಾಹುಲ್ ಗಾಂಧಿ, ಮತಪಟ್ಟಿಯಿಂದ ಹೆಸರು ಕೈಬಿಟ್ಟವರನ್ನು ವೇದಿಕೆಗೆ ಕರೆದರು.

    ‘ಕಳೆದ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ ಸಿಐಡಿಯು 18 ಪತ್ರಗಳನ್ನು ಕಳುಹಿಸಿದೆ. ಯಾವ ಪ್ರದೇಶದಿಂದ ಈ ಮತದಾರರ ಹೆಸರು ನೋಂದಣಿಯಾಗಿದೆ ಎಂಬುದಕ್ಕೆ ಪೂರಕವಾದ ಐಪಿ ವಿಳಾಸ ಹಾಗೂ ಅದಕ್ಕೆ ಬಳಸಿದ ಒಟಿಪಿ ಮಾಹಿತಿ ನೀಡುವಂತೆ ಸಿಐಡಿ ಆಯೋಗವನ್ನು ಕೇಳಿದೆ. ಆದರೆ ಆಯೋಗವು ಅದನ್ನು ಏಕೆ ನೀಡುತ್ತಿಲ್ಲ. ಏಕೆಂದರೆ ಒಂದೊಮ್ಮೆ ಆಯೋಗ ಅದನ್ನು ನೀಡಿದರೆ, ಈ ಕೃತ್ಯದ ಹಿಂದಿರುವ ವ್ಯಕ್ತಿಯ ಮನೆಬಾಗಿಲಿಗೆ ಪೊಲೀಸರನ್ನು ಕರೆದೊಯ್ದು ನಿಲ್ಲಿಸುತ್ತದೆ ಎಂಬುದು ಅವರಿಗೂ ಗೊತ್ತು’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ‘ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರು ಅಳಿಸುವುದು ಹಾಗೂ ಸೇರಿಸುವುದನ್ನು ಯಾರು ಮಾಡುತ್ತಿದ್ದಾರೆ ಎಂದು ಆಯೋಗಕ್ಕೆ ಗೊತ್ತಿದೆ. ಭಾರತದ ಪ್ರತಿಯೊಬ್ಬ ಯುವಕರೂ ಇದನ್ನು ತಿಳಿಯಬೇಕು ಎಂದು ನಾನು ಬಯಸುತ್ತೇನೆ. ಕೇಳಿದ ಮಾಹಿತಿಯನ್ನು ಅವರು ನೀಡುತ್ತಿಲ್ಲವೆಂದರೆ ಅವರು ಪ್ರಜಾಪ್ರಭುತ್ವದ ಕೊಲೆಗಾರರನ್ನು ರಕ್ಷಿಸುತ್ತಿದ್ದಾರೆ ಎಂದೇ ಅರ್ಥ’ ಎಂದು ಆರೋಪಿಸಿದ್ದಾರೆ.

  • “ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” 
ರಾಹುಲ್ ಗಾಂಧಿ Press Meet

    “ಪ್ರಜಾತಂತ್ರವನ್ನು ಸಾಂವಿಧಾನಿಕ ಸಂಸ್ಥೆಗಳು ರಕ್ಷಿಸದ್ದರಿಂದ ನಾನು ಮುಂದೆ ಬಂದಿದ್ದೇನೆ” ರಾಹುಲ್ ಗಾಂಧಿ Press Meet

    ‘ಚುನಾವಣೆಗೂ ಮುನ್ನ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕಲಾಗಿದ್ದು, ಮತಗಳ್ಳರು ಮತ್ತು ಪ್ರಜಾಪ್ರಭುತ್ವ ನಾಶಪಡಿಸುವವರನ್ನು ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಕ್ಷಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.

    ಇಂದಿರಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಚುನಾವಣಾ ಆಯೋಗವು ಇದನ್ನು ಮೊದಲು ನಿಲ್ಲಿಸಬೇಕು. ಮತದಾರರ ಹೆಸರು ಅಳಿಸಿಹಾಕಿದ್ದರ ಕುರಿತು ಕರ್ನಾಟಕ ಸಿಐಡಿ ಕೇಳಿರುವ ಮಾಹಿತಿಯನ್ನು ಚುನಾವಣಾ ಆಯೋಗವು ತಕ್ಷಣ ಒದಗಿಸಬೇಕು’ ಎಂದು ಆಗ್ರಹಿಸಿದರು.

    ‘ದೇಶದಲ್ಲಿ ಹೇಗೆ ಚುನಾವಣಾ ಅಕ್ರಮಗಳು ನಡೆಯುತ್ತವೆ ಎಂಬುದನ್ನು ಅರಿಯಲು ಇಂದಿನ ಯುವ ಸಮುದಾಯಕ್ಕೆ ಇದೊಂದು ಮಹತ್ವದ ಉದಾಹರಣೆಯಾಗಿದೆ. ನಾನು ಈ ಹಿಂದೆ ಭರವಸೆ ನೀಡಿದ ‘ಹೈಡ್ರೊಜೆನ್ ಬಾಂಬ್’ ಇದಲ್ಲ. ಅದು ಅತಿ ಶೀಘ್ರದಲ್ಲಿ ಬರಲಿದೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ‘ಕರ್ನಾಟಕದ ಅಳಂದದಲ್ಲಿ 2023ರ ಚುನಾವಣೆ ಸಂದರ್ಭದಲ್ಲಿ ಮತಗಳನ್ನು ಅಳಿಸಿಹಾಕುವ ಯತ್ನ ನಡೆದಿದೆ. ಮತ್ತೊಂದೆಡೆ ಮಹಾರಾಷ್ಟ್ರದ ರಾಜುರಾ ಕ್ಷೇತ್ರದಲ್ಲಿ ಸ್ವಯಂಚಾಲಿತ ತಂತ್ರಾಂಶ ಬಳಸಿ ಕುತಂತ್ರದಿಂದ ಮತಗಳನ್ನು ಸೇರಿಸುವ ಪ್ರಯತ್ನ ನಡೆದಿದೆ. ಈ ಎಲ್ಲಾ ಕೃತ್ಯಗಳಿಗೂ ಜ್ಞಾನೇಶ್ ಕುಮಾರ್ ಅವರ ವಿರುದ್ಧ ನಾನು ಗಂಭೀರ ಆರೋಪ ಮಾಡುತ್ತಿದ್ದೇನೆ. ಇದನ್ನು ಹಗುರವಾಗಿ ಪರಿಗಣಿಸಬೇಡಿ. ಚುನಾವಣಾ ಆಯೋಗವು ಮತಗಳ್ಳರನ್ನು ರಕ್ಷಿಸುತ್ತಿದೆ. ಈ ಕಳ್ಳರೇ ಭಾರತದ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ’ ಎಂದು ರಾಹುಲ್ ಆರೋಪಿಸಿದ್ದಾರೆ.

    ಸಿಐಡಿ 18 ಬಾರಿ ಕೇಳಿದ ಐಪಿ ವಿಳಾಸ, ಒಟಿಪಿ ಏಕೆ ನೀಡಿಲ್ಲ…?: ರಾಹುಲ್‘

    ಭಾರತದಲ್ಲಿ ಲಕ್ಷಾಂತರ ಮತದಾರರನ್ನು ಮತಪಟ್ಟಿಯಿಂದ ಅಳಿಸಿಹಾಕಲು ವ್ಯವಸ್ಥಿತವಾದ ಷಡ್ಯಂತ್ರ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕನಾಗಿರುವ ನಾನು ಶೇ 100ರಷ್ಟು ಪುರಾವೆಗಳಿಲ್ಲದೆ ಏನನ್ನೂ ಹೇಳುವುದಿಲ್ಲ. ಅಳಂದದಲ್ಲಿ 6,018 ಮತಗಳನ್ನು ಅಳಿಸಿಹಾಕಲು ಯಾರೋ ಪ್ರಯತ್ನಿಸಿದ್ದರು. ಆದರೆ ಕಾಕತಾಳೀಯ ಎಂಬಂತೆ ಸಿಕ್ಕಿಬಿದ್ದರು. ತಮ್ಮ ಚಿಕ್ಕಪ್ಪನ ಹೆಸರೇ ಪಟ್ಟಿಯಲ್ಲಿ ಇಲ್ಲದಿರುವುದನ್ನು ಬೂತ್ ಮಟ್ಟದ ಅಧಿಕಾರಿ ಗಮನಿಸಿದ್ದಾರೆ. ಆದರೆ ಇದರ ಹಿಂದೆ ಬೇರೆ ಯಾವುದೋ ‘ಶಕ್ತಿ’ ಇದೆ’ ಎಂದಿದ್ದಾರೆ.

    ‘ಮತದಾರರಂತೆ ನಟಿಸಿ 6,018 ಅರ್ಜಿಗಳನ್ನು ಸಲ್ಲಿಸಲಾಗಿದೆ. ಕರ್ನಾಟಕಕ್ಕೆ ಸೇರದ ಮೊಬೈಲ್ ಸಂಖ್ಯೆಗಳನ್ನು ಬಳಸಿಕೊಂಡು ಈ ಅರ್ಜಿಗಳು ಸ್ವಯಂಚಾಲಿತ ತಂತ್ರಾಂಶದ ಮೂಲಕ ದಾಖಲಿಸಿಕೊಳ್ಳಲಾಗಿದೆ’ ಎಂದ ರಾಹುಲ್ ಗಾಂಧಿ, ಮತಪಟ್ಟಿಯಿಂದ ಹೆಸರು ಕೈಬಿಟ್ಟವರನ್ನು ವೇದಿಕೆಗೆ ಕರೆದರು.

    ‘ಕಳೆದ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ ಸಿಐಡಿಯು 18 ಪತ್ರಗಳನ್ನು ಕಳುಹಿಸಿದೆ. ಯಾವ ಪ್ರದೇಶದಿಂದ ಈ ಮತದಾರರ ಹೆಸರು ನೋಂದಣಿಯಾಗಿದೆ ಎಂಬುದಕ್ಕೆ ಪೂರಕವಾದ ಐಪಿ ವಿಳಾಸ ಹಾಗೂ ಅದಕ್ಕೆ ಬಳಸಿದ ಒಟಿಪಿ ಮಾಹಿತಿ ನೀಡುವಂತೆ ಸಿಐಡಿ ಆಯೋಗವನ್ನು ಕೇಳಿದೆ. ಆದರೆ ಆಯೋಗವು ಅದನ್ನು ಏಕೆ ನೀಡುತ್ತಿಲ್ಲ. ಏಕೆಂದರೆ ಒಂದೊಮ್ಮೆ ಆಯೋಗ ಅದನ್ನು ನೀಡಿದರೆ, ಈ ಕೃತ್ಯದ ಹಿಂದಿರುವ ವ್ಯಕ್ತಿಯ ಮನೆಬಾಗಿಲಿಗೆ ಪೊಲೀಸರನ್ನು ಕರೆದೊಯ್ದು ನಿಲ್ಲಿಸುತ್ತದೆ ಎಂಬುದು ಅವರಿಗೂ ಗೊತ್ತು’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ‘ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರು ಅಳಿಸುವುದು ಹಾಗೂ ಸೇರಿಸುವುದನ್ನು ಯಾರು ಮಾಡುತ್ತಿದ್ದಾರೆ ಎಂದು ಆಯೋಗಕ್ಕೆ ಗೊತ್ತಿದೆ. ಭಾರತದ ಪ್ರತಿಯೊಬ್ಬ ಯುವಕರೂ ಇದನ್ನು ತಿಳಿಯಬೇಕು ಎಂದು ನಾನು ಬಯಸುತ್ತೇನೆ. ಕೇಳಿದ ಮಾಹಿತಿಯನ್ನು ಅವರು ನೀಡುತ್ತಿಲ್ಲವೆಂದರೆ ಅವರು ಪ್ರಜಾಪ್ರಭುತ್ವದ ಕೊಲೆಗಾರರನ್ನು ರಕ್ಷಿಸುತ್ತಿದ್ದಾರೆ ಎಂದೇ ಅರ್ಥ’ ಎಂದು ಆರೋಪಿಸಿದ್ದಾರೆ.

  • ಸೋಲಿನ ಭಯಂಕರ ಭೀತಿಯಲ್ಲಿ ಮೋದಿ: 
6 ಕಾರಣಗಳೇನು?

    ಸೋಲಿನ ಭಯಂಕರ ಭೀತಿಯಲ್ಲಿ ಮೋದಿ: 6 ಕಾರಣಗಳೇನು?

    ನೀವು ಕೇಳ್ತಾ ಇರೋದು ಸರಿಯಾಗಿಯೇ ಇದೆ. ಬಹುಮತ ಇರುವ ಹೊರತಾಗಿಯೂ ಈ ಬಾರಿಯ ಉಪರಾಷ್ಟ್ರಪತಿ ಚುನಾವಣೆ ಮೋದಿಗೆ ಅಮಿತ್ ಶಾ ಗೆ ಉಲ್ಟಾ ಹೊಡೆಯುವ ಸಾಧ್ಯತೆಯ ವರದಿಗಳು ಬರ್ತಾ ಇವೆ. ಇದು ಇವರ ನಿದ್ದೆಗೆಡಿಸಿರುವ ಲಕ್ಷಣಗಳು ಕಾಣುತ್ತಿವೆ. ಇಂಡಿಯಾ ಮೈತ್ರಿಕೂಟ ಇವರ ಮೇಲೆ ಎಗರಿ ಬೀಳುವ ಚರ್ಚೆಗಳೂ ರಾಜಕೀಯ ವಲಯದಲ್ಲಿ ನಡೆಯುತ್ತಿವೆ.

    ಮಿತ್ರೋ, ಉಪರಾಷ್ಟ್ರಪತಿಯ ಚುನಾವಣೆ ತಮ್ಮಜೋಳಿಯಲ್ಲಿ ಇದೆ ಎಂದು ಮೋದಿಗೆ ಅನಿಸಿತ್ತು. ಹೀಗಿರುವಾಗಲೇ ಇಂಡಿಯಾ ಮೈತ್ರಿಕೂಟ ಆಡಿದ ಆಟ ಇಡೀ ಸಿಚುವೇಶನನ್ನೇ ಬದಲಿಸಿದಂತೆ ತೋರುತ್ತಿದೆ. ಮೋದಿ ಮತ್ತು ಅಮಿತ್ ಶಾ ರವರ ತಾಳ ಮಳ ಸ್ಪಷ್ಟವಾಗಿ ಗೋಚರಿಸುತ್ತಿದೆ.

    ಈ ತಳಮಳಕ್ಕೆ ಆರು ಕಾರಣಗಳಿವೆ, ಈ ಕಾರಣಗಳು ಈಗ ದೇಶದ ರಾಜಕೀಯದ ಪ್ರತಿ ಗಲ್ಲಿಯಲ್ಲೂ ಪ್ರತಿಧನಿಸುತ್ತಿದೆ. ಮೊದಲಕರಣ ಆಂಧ್ರಪ್ರದೇಶ. ಹೌದು ಈ ಆಂಧ್ರಪ್ರದೇಶದಲ್ಲಿ ಬಿಜೆಪಿಯೂ ಗಟ್ಟಿಯಾಗಿಲ್ಲ, ಕಾಂಗ್ರೆಸಿನ ನೆಲೆಯೂ ಇಲ್ಲ. ಇಲ್ಲಿಯ ಅಸಲಿ ತಾಕತ್ತು ಜಗನ್ ಮೋಹನ್ ರೆಡ್ಡಿ ಮತ್ತು ಚಂದ್ರ ಬಾಬು ನಾಯ್ಡು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ, ಮೋದಿಗೆ, ಅಮಿತ್ ಶಾರಿಗೆ ಶಾಕ್ ನೀಡಬಹುದಾದವರು ಇವ್ರೇ. ಚಂದ್ರ ಬಾಬು ನಾಯ್ಡು ಎನ್ಡಿಎ ಪರವಾಗಿ ನಿಂತರೆ ಜಗನ್ಮೋಹನ್ ರೆಡ್ಡಿ ಅದರ ಎದುರು ಅಭ್ಯರ್ಥಿಗೆ ಬೆಂಬಲಿಸುತ್ತಾರೆ. ಒಂದು ವೇಳೆ ಜಗನ್ ಬಿಜೆಪಿಗೆ ಸಪೋರ್ಟ್ ಮಾಡಿದರೆ ಚಂದ್ರು ಬಾಬು ನಾಯ್ಡು ಖಂಡಿತವಾಗಿಯೂ ಮುನಿಸಿಕೊಳ್ಳುತ್ತಾರೆ. ಮತ್ತು ಉಲ್ಟಾ ಹೊಡೆಯುತ್ತಾರೆ. ಉಪರಾಷ್ಟ್ರಪತಿಯ ಚುನಾವಣೆಯ ಆಟ ಸಿಲುಕಿರುವದೇ ಇಲ್ಲಿ.

    ಮೋದಿ ಮತ್ತು ಅಮಿತ್ ಶಾ ರವರ ತಳಮಳದ ಎರಡನೆಯ ಕಾರಣ ಉಪರಾಷ್ಟ್ರಪತಿ ಚುನಾವಣೆಯ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ. ರೆಡ್ಡಿ ಎಂಬ ತೆಲುಗು ಮೂಲದ ಅಡ್ಡ ಹೆಸರು ಹೈದರಾಬಾದ್ ಮತ್ತು ತೆಲಂಗಾಣ ಮಾತ್ರವಲ್ಲ ಲೋಕಸಭೆಯಲ್ಲಿ ಇರುವ 11 ಸಂಸದರನ್ನೂ ಸೆಳೆಯುತ್ತಿದೆ. ಭಾಷೆ ಮತ್ತು ಪ್ರಾದೇಶಿಕತೆ ಮತಗಳನ್ನು ಇಂಡಿಯಾ ಮೈತ್ರಿಕೂಟದತ್ತ ಜಾರಿಸುವ ಭಯ ಮೋಶಾರಿಗೆ ಕಾಡುತ್ತಿದೆ.

    ಮೂರನೆಯ ಕಾರಣ ಬಿಜೆಪಿಯ ಅಭ್ಯರ್ಥಿ ತಮಿಳುನಾಡು ಮೂಲದವರಾದರೆ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಆಂಧ್ರಪ್ರದೇಶದವರು. ಇಲ್ಲಿಯೂ ಕೆಲಸ ಮಾಡುವುದು ಭಾಷೆ ಮತ್ತು ಪ್ರಾದೇಶಿಕತೆ ತೆಲುಗು ಪ್ರದೇಶದವರು ಬಿಜೆಪಿಯ ತಮಿಳುನಾಡಿನ ಅಭ್ಯರ್ಥಿಗೆ ಮತ ಕೊಡುವರೇ ಎಂಬುದೊಂದು ಪ್ರಶ್ನೆ. ಇದರೊಂದಿಗೆ ಸಿಗುವ ಮತ್ತೊಂದು ಉತ್ತರ ತಮಿಳಿಗನಾಗಿದ್ದರೂ ಬಿಜೆಪಿಯ ಅಭ್ಯರ್ಥಿಗೆ ತಮಿಳಿಗರು ಮತ ಹಾಕಲ್ಲ.

    ನಾಲ್ಕನೆಯ ಕಾರಣ ಮಲ್ಲಿಕಾರ್ಜುನ ಖರ್ಗೆ. ಹೌದು, ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿರುವುದು ಮಾತ್ರವಲ್ಲ ಅವರು ದಕ್ಷಿಣ ಭಾರತೀಯರು. ಗುಲ್ಬರ್ಗ ದವರಾಗಿರುವುದರಿಂದ ತೆಲುಗು ಕೂಡ ಬಲ್ಲವರಾಗಿದ್ದಾರೆ. ಇದರ ಬರ್ಪೂರ ಪ್ರಯೋಜನ ಪಡೆಯಲು ಅವರಿಗಾಗಲೇ ತೆಲುಗು ಮೂಲದ ಸಂಸದರನ್ನ ಭೇಟಿಯಾಗುತ್ತಿದ್ದಾರೆ. ಮೋದಿ ಮತ್ತು ಅಮಿತ್ ಶಾ ರ ಬಲೆಯಲ್ಲಿರುವ ವೈಎಸ್ಆರ್‌ಸಿಪಿ ಯ ಸಂಸದ ಮೇಘ ರಘುನಾಥ್ ರೆಡ್ಡಿ ಇವರನ್ನು ಕೂಡ ಭೇಟಿಯಾಗಿದ್ದಾರೆ. ಈ ಭೇಟಿ ಮತ್ತು ಮಾತುಕತೆ ಬಿಜೆಪಿಯವರ ಪಾಲಿಗೆ ಅಪಾಯದ ಕರೆಗಂಟೆ ಅಂತಿದೆ.

    ಐದನೆಯ ಕಾರಣ ಇಂಡಿಯಾ ಮೈತ್ರಿಕೂಟದ ರಣನೀತಿ, 2004ರಲ್ಲಿ ಎಪಿಜೆ ಅಬ್ದುಲ್ ಕಲಾಂ ರನ್ನು ಕಣಕ್ಕಿಳಿಸುವಾಗ ಯಾವ ರಣ ನೀತಿಯನ್ನ ಅನುಸರಿಸಲಾಗಿತ್ತೋ, ಅದನ್ನೇ ಇಲ್ಲಿಯೂ ಅನುಸರಿಸಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾವು ಬಿಜೆಪಿ ಅಭ್ಯರ್ಥಿಗೆ ಮತ ಹಾಕಲ್ಲ ಆದರೆ ಇಂಡಿಯಾ ಮೈತ್ರಿಕೂಟದಿಂದ ಯಾವುದೇ ಪಕ್ಷದೊಂದಿಗೆ ಇರದ ಅಭ್ಯರ್ಥಿ ಕಣಕ್ಕಿಳಿಯಲಿ ಎಂದು ಸಂದೇಶ ನೀಡಿದ್ದರು. ಯಾವುದೇ ಪಕ್ಷದಲ್ಲಿ ಇರದ ಸುದರ್ಶನ ರೆಡ್ಡಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.

    ಆರನೆಯ ಕಾರಣ ಮತಗಳ ಲೆಕ್ಕಾಚಾರ. ಏನ್ ಡಿ ಎ ಬಳಿ 422 ಮತಗಳು ಇವೆ, ಅಭ್ಯರ್ಥಿಗೆ ಗೆಲುವಿಗೆ ಬೇಕಾಗಿರುವುದು 392 ಮತಗಳು. ಇಂಡಿಯಾ ಮೈತ್ರಿಕೂಟದಲ್ಲಿ 360 ಸಂಸದರು ಇದ್ದಾರೆ. ಒಂದು ವೇಳೆ ನಾಯ್ಡು ಅವರ 18 ಮತ್ತು ಜಗನ್ ಮೋಹನ್ ರೆಡ್ಡಿ ಅವರ 11 ಸಂಸದರು ಬಿಜೆಪಿಯ ಸಕ್ಯ ತೊರೆದರೆ ಎನ್‌ಡಿಎ ಯ ಲೆಕ್ಕ ಉಲ್ಟಾಪಲ್ಟಾ ಆಗಲಿದೆ.

    ಇದು ಗೊತ್ತಾಗಿರುವುದರಿಂದಲೇ ಮೋದಿ ಮತ್ತು ಅಮಿತ್ ಶಾ ಬೇರೆಯದೇ ಆಟವನ್ನು ಆಡುತ್ತಿದ್ದಾರೆ. ಅದು ಚಂದ್ರ ಬಾಬು ನಾಯ್ಡು ರವರನ್ನು ಬೆದರಿಸುವುದು. ಈಗಾಗಲೇ ಜಾಮೀನಿನ ಮೇಲಿರುವ ಚಂದ್ರ ಬಾಬು ನಾಯ್ಡು ರವರ ಮೇಲೆ ಈಡಿ ಮತ್ತು ಸಿಬಿಐ ಅನ್ನುವ ಚೂ ಬಿಡುವ ಎಚ್ಚರಿಕೆ ನೀಡಿದ್ದಾರೆ. 30 ದಿನ ಜೈಲಿನಲ್ಲಿ ಇದ್ದರೆ ಮುಖ್ಯಮಂತ್ರಿಯ ಪಟ್ಟ ಕಿತ್ತುಕೊಳ್ಳುವ ಕಾನೂನಿನ ಕಡತಗಳನ್ನು ತೋರಿಸಿದ್ದಾರೆ. ಮುಂದೇನಾಗಲಿದೆ ಅದು ನಿಮಗೂ ಕಾಣಲಿದೆ.

    ಆರ್‌ ಎ ಲೋಹಾನಿ, ಮಳಗಿ
    ಸುದ್ದಿ ಸಂಪಾದಕ
    ಸನ್ಮಾರ್ಗ ನ್ಯೂಸ್‌ ಡಿಜಿಟಲ್‌ ಚಾನಲ್‌

  • “ಕರ್ನಾಟಕದ 1 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಚುನಾವಣಾ ಆಯೋಗ ನೇರ ಕೈ ಜೋಡಿಸಿದೆ” 
ದಾಖಲೆ ಹಂಚಿಕೊಂಡ ರಾಹುಲ್ ಗಾಂಧಿ

    “ಕರ್ನಾಟಕದ 1 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ಚುನಾವಣಾ ಆಯೋಗ ನೇರ ಕೈ ಜೋಡಿಸಿದೆ” ದಾಖಲೆ ಹಂಚಿಕೊಂಡ ರಾಹುಲ್ ಗಾಂಧಿ

    ನವದೆಹಲಿ: ಶುಕ್ರವಾರ ಬೆಂಗಳೂರಿಗೆ (Bengaluru) ಬರುವ ಮುನ್ನ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಹಾದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಆನ್‌ಲೈನ್ ಮೂಲಕ ದಾಖಲೆಗಳನ್ನು ಪ್ರಕಟಿಸಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರ ಹಾಗೂ ಅದರ ವ್ಯಾಪ್ತಿಯ ಮಹದೇವಪುರ ವಿಧಾನಸಭೆ ಕ್ಷೇತ್ರದ ದತ್ತಾಂಶಗಳನ್ನು ವಿಶ್ಲೇಷಿಸಿರುವುದಾಗಿ ಹೇಳಿದ್ದಾರೆ. ಹಾಗೆಯೇ, ಅಲ್ಲಿ ಭಾರಿ ಅಕ್ರಮಗಳು ನಡೆದಿವೆ ಎಂಬುದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಅಚ್ಚರಿಯಾಗಿ ಸೋಲನ್ನು ಅನುಭವಿಸಿತು. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಮಹಾದೇವಪುರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಸ್ಫೋಟಕ ಆರೋಪ ಮಾಡಿದರು.

    ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವೆಡೆ ಮತಗಳ್ಳತನ ಆಗಿದೆ. ಇನ್ನೂ ಕಳೆದ ಐದು ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ಸಂಜೆ ಐದು ಗಂಟೆಯ ಬಳಿಕ ಅತಿ ಹೆಚ್ಚು ಮತದಾನವಾಗುತ್ತದೆ ಎಂದು ಆರೋಪಿಸಿದ್ದಾರೆ.

    ಈ ಕುರಿತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಿದರೆ ನಮಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಆಯೋಗ ನಮಗೆ ಮತದಾರರ ಪಟ್ಟಿ ನೀಡಲು ನಿರಾಕರಿಸಿದೆ. ಅದಲ್ಲದೇ ರಾಜಕೀಯ ಪಕ್ಷಗಳಿಗೂ ಕೂಡ ಮತದಾರರ ಪಟ್ಟಿ ನೀಡಿಲ್ಲ. ಜೊತೆಗೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆಗ್ರಹಿಸಿದ್ದಾರೆ.

    ದೇಶದಾದ್ಯಂತ ಇದೇ ರೀತಿಯ ಅಕ್ರಮಗಳು ನಡೆದಿವೆ ಎಂದು ಪ್ರತಿಪಾದಿಸಿರುವ ರಾಹುಲ್, ಇದು ಸಂವಿಧಾನ ಹಾಗೂ ರಾಷ್ಟ್ರದ ಸಮಗ್ರತೆಯ ವಿರುದ್ಧದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್ ಪಕ್ಷವು ಚುನಾವಣಾ ಪ್ರಕ್ರಿಯೆಯನ್ನು ರಕ್ಷಿಸುವ ಕೆಲಸ ಮಾಡುತ್ತದೆ ಎಂಬುದನ್ನು ಆಯೋಗಕ್ಕೆ ನೆನಪಿಸಲು ಬಯಸುವುದಾಗಿಯೂ ಹೇಳಿದ್ದಾರೆ.